ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

ನ್ಯಾಯಾಲಯಗಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಿಯಾಂಕ್ ಮನವಿ; CSಗೆ ಪತ್ರ

ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಗೆ “ಆರ್ಟಿಕಲ್ 371ಜೆ“ ವರದಾನವಾಗಿದ್ದರೂ, ಸಮರ್ಪಕ ಅನುಷ್ಠಾನದಲ್ಲಿ ನಿಷ್ಠೆ ಇದ್ದರೆ ಮಾತ್ರ ವಿಶೇಷ ಸ್ಥಾನಮಾನದ ಆಶಯಗಳು ಈಡೇರಲಿದೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯದ ಮುಂದೆ ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 47 ಪ್ರಕರಣಗಳು ಬಾಕಿ ಇರುವುದರಿಂದ ಆರ್ಟಿಕಲ್ 371ಜೆ ಅಡಿಯಲ್ಲಿನ ನೇಮಕಾತಿ, ಮುಂಬಡ್ತಿ ವಿಷಯಗಳಲ್ಲಿ ಹಿನ್ನೆಡೆ ಉಂಟಾಗಿದೆ. ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಪಡಿಸಲು…

ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

ನವದೆಹಲಿ: ದಾವಣಗೆರೆ ಸೇರಿದಂತೆ ಕರ್ನಾಟಕದಲ್ಲಿ ಪ್ರತಿಷ್ಠಿತ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರದ ಗಮನಸೆಳೆದಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಸಮಸ್ಯೆಗಳನ್ನು ಎದುರಿಸುತ್ತಿ ದ್ದಾರೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. I would like to raise a matter related to the installation of BSNL mobile tower in my constituency, Davanagere. Bridging the digital divide and ensuring last-mile connectivity are core pillars of the Digital India Mission. Yet, people in many villages in my Davanagere… pic.twitter.com/dwz20InyvR — Congress (@INCIndia) December 3, 2025

ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯನ್ನು ಬೆಚ್ಚಿಬೀಳಿಸಿರುವ ಕ್ರೂರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯನ್ನು ಕಬ್ಬಿನ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬನು ನೇರವಾಗಿ ದೌರ್ಜನ್ಯಕ್ಕೆ ಮುಂದಾಗಿದ್ದರೆ, ಇನ್ನೊಬ್ಬನು ಕಾವಲು ಕಾಯುವ ಮೂಲಕ ಅಪರಾಧಕ್ಕೆ ಸಹಕಾರ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ಹಿಟ್ಟಿನ ಗಿರಣಿಯಿಂದ ಮನೆಗೆ ಹಿಂತಿರುಗುತ್ತಿದ್ದ ಏಳನೇ ತರಗತಿಯ ಬಾಲಕಿಯನ್ನು ಆರೋಪಿಗಳು ಮಧ್ಯದಲ್ಲಿ ತಡೆದು, ಕಬ್ಬಿನ ಹೊಲಕ್ಕೆ ಎಳೆದುಕೊಂಡು ಹೋಗಿ ಅಮಾನುಷ ಕೃತ್ಯ ಎಸಗಿದ್ದಾರೆ. ಬಾಲಕಿಯ ಮನೆಯಿಂದ ಕೇವಲ 300 ಮೀಟರ್ ದೂರದಲ್ಲೇ ಈ ಘಟನೆ ನಡೆದಿರುವುದು ಇನ್ನಷ್ಟು ಆತಂಕ ಹುಟ್ಟಿಸಿದೆ. ಕುಟುಂಬಕ್ಕೆ ಆರೋಪಿಗಳು ಜೀವ ಬೆದರಿಕೆ ಹಾಕಿರುವ ಕಾರಣದಿಂದ ದೂರು ತಡವಾಗಿ ದಾಖಲಾಗಿದೆ…

ಕದ್ದ, ಕಳೆದುಹೋದ 42 ಲಕ್ಷಕ್ಕೂ ಹೆಚ್ಚು ಮೊಬೈಲ್‌ಗಳು ಬ್ಲಾಕ್ ಮಾಡಿದ ‘ಸಂಚಾರ್ ಸಾಥಿ’

ನವದೆಹಲಿ: ಈ ವರ್ಷದ ಜನವರಿ 17ರಂದು ಬಿಡುಗಡೆಗೊಂಡ ನಂತರದಿಂದ ಸಂಚಾರ್ ಸಾಥಿ ಮೊಬೈಲ್ ಅಪ್ಲಿಕೇಶನ್ 1.4 ಕೋಟಿಗೂ ಹೆಚ್ಚು ಡೌನ್‌ಲೋಡ್‌ಗಳನ್ನು ದಾಖಲಿಸಿದ್ದು, 42 ಲಕ್ಷಕ್ಕೂ ಹೆಚ್ಚು ಕದ್ದ ಅಥವಾ ಕಳೆದುಹೋದ ಮೊಬೈಲ್ ಸಾಧನಗಳನ್ನು ನಿರ್ಬಂಧಿಸಲು ಯಶಸ್ವಿಯಾಗಿದೆ ಎಂದು ಮಂಗಳವಾರ ಹೊರಬಿದ್ದ ಅಧಿಕೃತ ದತ್ತಾಂಶಗಳು ತಿಳಿಸಿವೆ. ಇಲ್ಲಿಯವರೆಗೆ 26 ಲಕ್ಷ ಕಳೆದುಹೋದ/ಕಳುವಾದ ಫೋನ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳಲ್ಲಿ 7.23 ಲಕ್ಷ ಸಾಧನಗಳನ್ನು ಸಂಚಾರ್ ಸಾಥಿಯ ಮೂಲಕ ಹಿಂತಿರುಗಿಸಲಾಗಿದೆ. ಸಂಪೂರ್ಣವಾಗಿ ಸ್ವಯಂಪ್ರೇರಿತ ಮತ್ತು ಬಳಕೆದಾರರ ಒಪ್ಪಿಗೆಯಿಂದ ಮಾತ್ರ ಕಾರ್ಯನಿರ್ವಹಿಸುವ ಈ ವೇದಿಕೆ ಗೌಪ್ಯತೆ-ಪ್ರಥಮ ನೀತಿಯನ್ನು ಅನುಸರಿಸುತ್ತದೆ. ಅಪ್ಲಿಕೇಶನ್‌ ಸೇವೆಗಳನ್ನು ಬಳಕೆದಾರರು ನೋಂದಾಯಿಸಿದ ಬಳಿಕ ಮಾತ್ರ ಸಕ್ರಿಯಗೊಳ್ಳುತ್ತದೆ. ಯಾವುದೇ ಸಮಯದಲ್ಲಿಯೂ ಅದನ್ನು ಬಳಕೆದಾರರು ಸಕ್ರಿಯಗೊಳಿಸಬಹುದು, ನಿಷ್ಕ್ರಿಯಗೊಳಿಸಬಹುದು ಅಥವಾ ಅಳಿಸಬಹುದು. ಗೌಪ್ಯತೆ ಕದಲಾಗದಂತೆ ಭಾರತದೆಲ್ಲೆಡೆ ಸೈಬರ್ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಅಪ್ಲಿಕೇಶನ್ ವಿನ್ಯಾಸಗೊಳಿಸಲಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಬಳಕೆದಾರರ ಸುರಕ್ಷತೆ ರಾಷ್ಟ್ರದ…

ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಅವರ ಸಂಗಾತಿ ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲೇ ಬಂಧನದಲ್ಲಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲು, ನಿರ್ದೇಶಕ ಪ್ರಕಾಶ್ ವೀರ್ ಹಾಗೂ ಚಿತ್ರದ ತಂಡ ಮಂಗಳವಾರ ನಗರದೊಳಗೆ ಪತ್ರಿಕಾಗೋಷ್ಠಿ ನಡೆಸಿತು. ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದ ಅವಧಿಯಲ್ಲಿ ಚಿತ್ರೀಕರಣ ಹಾಗೂ ಡಬ್ಬಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದ್ದರು ಎಂದು ನಿರ್ದೇಶಕ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ವೀರ್, “ಚಿತ್ರದ ಶೀರ್ಷಿಕೆಗೆ ಕಥೆಯೇ ಆಧಾರ. ದರ್ಶನ್ ಶೇ.100 ವೃತ್ತಿಪರರು. ಜೈಲಿನಿಂದ ಹೊರಬಂದು ಚಿತ್ರೀಕರಣಕ್ಕೆ ಬಂದಾಗಲೂ ಅವರ ಅಭಿನಯದಲ್ಲಿ ಯಾವುದೇ ಅಸಮಾನ್ಯತೆ ಕಾಣಿಸಲಿಲ್ಲ” ಎಂದರು. ‘ದರ್ಶನ್ ಬಿಡುಗಡೆಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವು ಹಲವು ಬಾರಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ. ಆದರೆ, ದುರದೃಷ್ಟವಶಾತ್ ಅವರು ಇಂದು…

ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್‌.ವಿ. ದೇವರಾಜ್ (67) ಅವರು ವಿಧಿವಶರಾಗಿದ್ದಾರೆ. ಡಿಸೆಂಬರ್ 3ರಂದು ತಮ್ಮ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ದೇವರಾಜ್ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಆರ್‌.ವಿ. ದೇವರಾಜ್ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಿರಿಯ ನಾಯಕರು ಮಾಜಿ ಶಾಸಕ ಶ್ರೀ ಆರ್. ವಿ. ದೇವರಾಜ್ ನಿಧಾನ ಬಗ್ಗೆ ಕಾಂಗ್ರೆಸ್ ನಾಯಕ ಹೆಚ್.ಎಂ.ರೇವಣ್ಣ ದುಃಖ ವ್ಯಕ್ತಪಡಿಸಿದ್ದಾರೆ. ಪಕ್ಷದ ತತ್ವಗಳಿಗೆ ಅಚಲ ಬದ್ಧತೆ, ಜನಪರ ನಿಲುವು ಮತ್ತು ನೆಲಬದ್ಧ ರಾಜಕೀಯವೇ ಅವರ ಬದುಕಿನ ಗುರುತು ಎಂದು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿರುವ ರೇವಣ್ಣ, ಈ…

ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು…

ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ ಬಂಧನ; ಯತ್ನಾಳ್ ಆಕ್ರೋಶ

ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಕುರ್ಚಿ ಕುಸ್ತಿ’ ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರದಿಂದ ಪರೀಕ್ಷಾರ್ಥಿಗಳಿಗೆ ಯಾವುದೇ ಸ್ಪಷ್ಟ ಭರವಸೆ ಇಲ್ಲದೆ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ ಎಂದಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ. 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ… pic.twitter.com/4cGjlRPC1n — Basanagouda R Patil (Yatnal) (@BasanagoudaBJP)…

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ, ಸಾವು ಸಂಭವಿಸಿಲ್ಲ. ಇದು ನಿಜಕ್ಕೂ ಪರಿಣಾಮಕಾರಿ ಫಲಿತಾಂಶವಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ಮಾದರಿಯಲ್ಲಿ, ಕಂಡುಬರುತ್ತಿದ್ದ ಚಿಕನ್ ಗುನ್ಯಾ ಜ್ವರದ ಪ್ರಮಾಣವೂ ಶೇ.59ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 2024ರ ಸಾಲಿನಲ್ಲಿ 2,348 ಪ್ರಕರಣಗಳು ಕಂಡುಬಂದಿದ್ದರೆ 2025ರ ನವೆಂಬರ್ ಕೊನೆವಾರದ ತನಕ 974 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. 2024ರಲ್ಲಾದ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭಿರವಾಗಿ ಪರಿಗಣಿಸಿ ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಡೆಂಗ್ಯೂವನ್ನು ಸೇರಿಸಲಾಯಿತು. ನಿಯಂತ್ರಣಕ್ಕಾಗಿ ನಿರಂತರವಾಗಿ ಅರಿವು ಕಾರ್ಯಕ್ರಮ, ಸ್ವಚ್ಚತೆ, ಉಚಿತ ಔಷಧ ಚಿಕಿತ್ಸೆಗಳ ಜತೆಗೆ ಅದರ ನಿಯಮಾವಳಿ ಪ್ರಕಾರ ಲಾರ್ವಾ ನಿಯಂತ್ರಣ ಕ್ರಮಗಳನ್ನು ಅನುಸರಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ₹2000 ತನಕ ದಂಡ…