ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ ‘KSLU’ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್ ತಂಡ ‘ಎ’ ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್ ನಿಂದ ‘ಎ’ ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ ಕಾನೂನು ಕಾಲೇಜುಗಳನ್ನು ತನ್ನ ವ್ಯಾಪ್ತಿಯಲ್ಲಿ ಹೊಂದಿದೆ. ಈ ವಿಶ್ವವಿದ್ಯಾಲಯಕ್ಕೆ ಮೇ ತಿಂಗಳಲ್ಲಿ ನ್ಯಾಕ್ ಪೀರ್ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಅಧ್ಯಕ್ಷೆ ಡಾ. ನಿಶಿತಾ ಜಾಲ, ಡಾ.ಕೆ. ಜಯಚಂದ್ರ ರೆಡ್ಡಿ, ಡಾ. ಜಯಶಂಕರ ಕೆ. ಐ., ಡಾ. ಸುಭೀರ್ ಕುಮಾರ ರಾಯ್, ಡಾ. ಧರಮೇಂದ್ರ ಕುಮಾರ ಮಿಶ್ರಾ, ಡಾ.…
Category: ಜಿಲ್ಲೆ | ತಾಲೂಕು
ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ
ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಮಧ್ಯಪ್ರದೇಶ, ಛತ್ತೀಸ್ಗಢ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಾದ್ಯಂತ ಹಲವಾರು ಜಿಲ್ಲೆಗಳಿಗೆ ಮುಂದಿನ 2-3 ದಿನಗಳ ಕಾಲ ಭಾರೀಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಮತ್ತು ಗಂಟೆಗೆ 60 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮಧ್ಯಪ್ರದೇಶದ ಧಾರ್, ಬರ್ವಾನಿ, ಖಾರ್ಗೋನ್, ದಿಂಡೋರಿ, ಮಾಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಛತ್ತೀಸ್ಗಢದಲ್ಲಿಯೂ ಸಹ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ, ಮುಂಗೇಲಿ, ಕಬೀರ್ಧಾಮ್, ಬೆಮೆತಾರಾ, ರಾಯ್ಪುರ, ದುರ್ಗ್, ರಾಜನಂದಗಾಂವ್, ಬಲೋಡ್, ಕಾಂಕೇರ್ ಮತ್ತು ನಾರಾಯಣಪುರಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ಕೆಲವು ಭಾಗಗಳು, ವಿಶೇಷವಾಗಿ ಗೊಂಡಿಯಾ, ಭಂಡಾರ, ಚಂದ್ರಾಪುರ, ವಾರ್ಧಾ ಮತ್ತು ನಾಂದೇಡ್ಗಳು ಇದೇ ರೀತಿಯ ಎಚ್ಚರಿಕೆಗಳನ್ನು ನೀಡಿವೆ. ದಕ್ಷಿಣದಲ್ಲಿ, ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ…
ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ. ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ… https://t.co/ym4xJMrHB2 — Vijayendra Yediyurappa (@BYVijayendra) June 10, 2025 ಬೆಂಗಳೂರಿನ…
ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ
ಬೆಂಗಳೂರು: ಮರು ಜಾತಿಗಣತಿಯ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ. ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ. ಸರ್ವರಿಗೂ ನ್ಯಾಯ- ನಮ್ಮ ಧ್ಯೇಯ ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು… pic.twitter.com/FKODscfzOY — DK Shivakumar (@DKShivakumar) June 10,…
‘ಕಾಲ್ತುಳಿತ’ ಬೆನ್ನಲೇ ಎಚ್ಚೆತ್ತ ಸರ್ಕಾರ; ಕ್ರಿಕೆಟ್ ಕ್ರೀಡಾಂಗಣ ಸ್ಥಳಾಂತರಕ್ಕೆ ಚಿಂತನೆ
ಬೆಂಗಳೂರು: RCB ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡುಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಡಿಪಿಎಆರ್ ನಿಂದ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ…
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ
ಬೆಂಗಳೂರು: ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಕೊನೆಗೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವಹಿಸಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು ಎಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪಟ್ಟುಹಿಡಿದಿದ್ದವು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ಅವರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು NIAಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ಈದೀಗ ಈ ಪ್ರಕರಣದ ತನಿಖೆಯನ್ನು NIA) ಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಜಯೇಂದ್ರ ಸ್ವಾಗತ: ಕೇಂದ್ರ ಸರ್ಕಾರದ ಈ ನಡೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ. ಕರಾವಳಿ…
ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂ ಗೋಲ್ ಮಾಲ್; ಅಧಿಕಾರಿ ಅಮಾನತಿಗೆ ರಾಮಲಿಂಗಾ ರೆಡ್ಡಿ ಆದೇಶ
ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಟ್ರೆಜರಿಯಲ್ಲಿ ಜಮಾ ಆಗದಿರುವ ಪ್ರಕರಣದಲ್ಲಿ ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಸರ್ಕಾರದ ಖಜಾನೆಗೆ ಜಮಾ ಮಾಡಬೇಕಾಗಿದ್ದ ಲಕ್ಷಾಂತರ ಹಣ ಒಂದು ವಾರದಿಂದ ಜಮಾ ಮಾಡಿರುವುದಿಲ್ಲ. ರವಿ ತವರಕೆರೆ ಹಣಕಾಸಿನ ಸೆಕ್ಷನ್ ನಿರ್ವಹಣೆ ಮಾಡುತ್ತಿದ್ದು, ಇವರು ಹಣ ಸಂದಾಯ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ ಸಾರಿಗೆ ಅಧಿಕಾರಿಗಳ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಚಿವರು ಕೂಡಲೇ ಸದರಿ ಸಿಬ್ಬಂದಿಯನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ದೇಶನ ನೀಡಿದ್ದಾರೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಲು ಸಚಿವರು ಸಾರಿಗೆ ಆಯುಕ್ತರಿಗೆ ಸೂಚಿಸಿದ್ದಾರೆ.
ಬಿಜೆಪಿಯ ಗೆಲುವು ‘ಮ್ಯಾಚ್ ಫಿಕ್ಸಿಂಗ್’ ಗಿಂತಲೂ ಗಂಭೀರ, ಅದು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದ ಸಿದ್ದರಾಮಯ್ಯ
ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಹುಲ್ ಹೇಳಿಕೆಗೆ ಬಿಜೆಪಿ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮ್ಯಾಚ್ ಫಿಕ್ಸಿಂಗ್ ಹೇಳಿಕೆ ಮೂಲಕ ಕಾಂಗ್ರೆಸ್ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದು ಟೀಕಿಸಿದೆ. ಈ ನಡುವೆ ರಾಹುಲ್ ಗಾಂಧಿ ಹೇಳಿಕೆಯನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯು ಚುನಾವಣೆಗಳಲ್ಲಿ ಸ್ಪರ್ಧಿಸದೇ, ಏಜನ್ಸಿಗಳನ್ನು ದುರುಪಯೋಗಪಡಿಸಿಕೊಂಡು ಪ್ರಾಬಲ್ಯ ಮೆರೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ಕೇವಲ ಸ್ಪರ್ಧಿಸುತ್ತಿಲ್ಲ, ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿದೆ, ಏಜೆನ್ಸಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಮತ್ತು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲು ನಿಯಮಗಳನ್ನು ಬಗ್ಗಿಸುತ್ತಿದೆ ಎಂದು ದೂರಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದನ್ನು ‘ಮ್ಯಾಚ್ ಫಿಕ್ಸಿಂಗ್’…
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; ಪರಿಹಾರ 25 ಲಕ್ಷ ರೂ.ಗಳಿಗೆ ಹೆಚ್ಚಳ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಪರಿಹಾರವನ್ನು 25 ಲಕ್ಷ ರೂ.ಗಳಿಗೆ ರಾಜ್ಯ ಸರ್ಕಾರ ಹೆಚ್ಚಿಸಿದೆ. ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಆದೇಶಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಗಳಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದವರು ತಿಳಿಸಿದ್ದಾರೆ.
ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ
ಬೆಂಗಳೂರು: 11 ಜೀವಗಳನ್ನು ಬಲಿ ಪಡೆದ ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕತ್ವಕ್ಕೆ ಸವಾಲು ಹಾಕಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶೋಭಾ, ‘ಹೈಕಮಾಂಡ್ಗೆ ತಾಕತ್ತಿದ್ದರೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ನಾನು ಕೇಳಲು ಬಯಸುತ್ತೇನೆ, ನೀವು ದಿವಾಳಿಯಾಗಿದ್ದೀರಾ? ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶಿವಕುಮಾರ್ ಹೊರತುಪಡಿಸಿ ಬೇರೆ ನಾಯಕರು ಇಲ್ಲವೇ ಎಂದು ಪ್ರಶ್ನಿಸಿದರು. A sitting judge must investigate the #BengaluruStampede. This is not just negligence, it is criminal. Why is the Congress high command silent? Where are Rahul Gandhi, KC Venugopal and others who…