ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ. ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಭರವಸೆಯನ್ನು ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್ (BAF) ಮುಕ್ತಕಂಠದಿಂದ ಸ್ವಾಗತಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬಹುನಿರೀಕ್ಷಿತ ಈ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕಾರಣೀಭೂತರಾಗಿರುವಂತಹ ಎಲ್ಲ ಪಕ್ಷದ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. “ಕರ್ನಾಟಕ ವಿಧಾನಸಭೆಯಲ್ಲಿ KAOMA ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಎಲ್ಲಾ ಪಕ್ಷಗಳ ನಾಯಕರಿಗೂ ನಾವು ಆಭಾರಿಯಾಗಿದ್ದೇವೆ. ಈ ಮಹತ್ವದ ಕಾಯ್ದೆಯನ್ನು ರೂಪಿಸುವಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೂ ನಾವು ನಮ್ಮ ಧನ್ಯವಾದಗಳನ್ನು ತಿಳಿಸಲು…

ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ; ಸಿದ್ದರಾಮಯ್ಯ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು. ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ…

1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಪೋಷಕರು ನಿರಾಳ

ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆರು ವರ್ಷಗಳ ವಯೋಮಿತಿಯಲ್ಲಿ ನಮ್ಯತೆ ಕೋರಿ ವಿಶೇಷವಾಗಿ ತಾಯಂದಿರಿಂದ ಅನೇಕ ಮನವಿಗಳು ಬಂದಿದ್ದವು ಎಂದು ಹೇಳಿದರು. ಕರ್ನಾಟಕ ಶಿಕ್ಷಣ ಕಾಯ್ದೆ, 1993ರ ಅಡಿಯಲ್ಲಿ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಸಡಿಲಿಕೆ 2026–27 ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ಅನ್ವಯವಾಗಲಿದ್ದು, ಜಾರಿಗೆ ತಾಂತ್ರಿಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಇನ್ನೊಂದೆಡೆ, ಎಲ್‌ಕೆಜಿ ಮತ್ತು ಯುಕೆಜಿ ಪ್ರವೇಶದ ಬಗ್ಗೆ ಗೊಂದಲ ಮುಂದುವರೆದಿರುವುದನ್ನು ಅವರು ಒಪ್ಪಿಕೊಂಡರು. ಈ ತರಗತಿಗಳಿಗೆ ಸ್ಪಷ್ಟ ಕಾನೂನು ಚೌಕಟ್ಟು ಇಲ್ಲದಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ಕಾನೂನು…

ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ವಿಧಾನಸಭೆಯಲ್ಲಿ ತೀವ್ರಗೊಂಡಿದ್ದ ವೇಳೆ, ಹೈಕಮಾಂಡ್ ತೀರ್ಮಾನಿಸಿದಾಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಚರ್ಚೆಯ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ಉದ್ದೇಶಿಸಿ, “ನಿಮಗೆ ಸಿಎಂ ಆಗುವ ಆಸೆ ಇಲ್ಲವಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದಕ್ಕೆ ಅಶೋಕ್ ನಕ್ಕು ಪ್ರತಿಕ್ರಿಯಿಸಿದ ಘಟನೆ ಸಭೆಯಲ್ಲಿ ಹಾಸ್ಯ ವಾತಾವರಣ ಮೂಡಿಸಿತು. ಇದನ್ನು ಮುಂದುವರೆಸಿದ ಸಿಎಂ, “ಅಶೋಕ್ ಆದರೂ ಸಿಎಂ ಆಗಲಿ, ಬೆಲ್ಲದ ಆದರೂ ಸಿಎಂ ಆಗಲಿ, ಅಶ್ವತ್ ನಾರಾಯಣ ಸಿಎಂ ಆದರೂ ಸಂತೋಷವೇ. ಆದರೆ ಬಿ.ವೈ. ವಿಜಯೇಂದ್ರ ನಿಮಗೆ ಅವಕಾಶ ಕೊಡಲ್ಲ” ಎಂದು ಬಿಜೆಪಿ ನಾಯಕರ ಕಾಲು ಎಳೆದರು. ಈ ವೇಳೆ ಶಾಸಕ ಸುನಿಲ್ ಕುಮಾರ್ “ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ನೀವು ನೇರವಾಗಿ ಹೇಳಲಿಲ್ಲ” ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,…

ಉಪಚುನಾವಣೆ; ಬಿಜೆಪಿಗೆ ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸ

ದಾವಣಗೆರೆ: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಅಂತರದಿಂದ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದು, ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಿದರು. “ಕಾಂಗ್ರೆಸ್‌ಗೆ ಅತಿರೇಕದ ಬಹುಮತವಿದೆ. ಜನರು ಈಗ ಸೂಕ್ತ ಪಾಠ ಕಲಿಸಲು ಸಿದ್ಧರಾಗಿದ್ದಾರೆ. ಎರಡೂ ಕ್ಷೇತ್ರಗಳ ಮತದಾರರು ಬಿಜೆಪಿಗೆ ಮತ ನೀಡಿ ಗೆಲುವು ಖಚಿತಪಡಿಸಬೇಕು” ಎಂದು ಮನವಿ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, “ಉಪಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣದಿಂದ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು. ರಾಜ್ಯದಲ್ಲಿ ರಾಜಕೀಯ ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ ಎಂದು ಹೇಳಿದ ಅವರು, “ನಮ್ಮ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲ್ಲುತ್ತಾರೆ” ಎಂದು…

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು…

ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ; ಸಿಎಂ–ಡಿಸಿಎಂ ಸಾಥ್

ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಭಾಗವಹಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನೂ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೇನೆ. ಬ್ಲಾಕ್ ಸಮಿತಿ ಅಧ್ಯಕ್ಷ ಅಯುಬ್ ಸಹ ಉಪಸ್ಥಿತರಿದ್ದರು”…

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ. ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ. ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು​​​ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್​ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್’ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ…