‘ನೀರಿದ್ದರೆ ನಾಳೆ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ‘ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಗಮನಸೆಳೆದರು. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ…

RSS ಹಿರಿಯ ನಾಯಕ ಕೃ.ನರಹರಿ ವಿಧಿವಶ

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ ಅವರು ತಮ್ಮ 93 ವರ್ಷ ವಯಸ್ಸಿನಲ್ಲಿ ಗುರುವಾರ ಬೆಳಗ್ಗೆ 4.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ನರಹರಿ ಅವರ ನಿಧಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೂ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞರೂ ಆಗಿದ್ದ ಕೃ. ನರಹರಿ ವಿಧಿವಶರಾಗಿದ್ದಾರೆ. ನಿಧನದಿಂದಾಗಿ ಒಂದು ಸಮಾಜಸಮರ್ಪಿತ ಜೀವನ ಅಂತ್ಯಗೊಂಡಿದೆ ಎಂದವರು ಸಂತಾಪ ಸೂಚಿಸಿದ್ದಾರೆ.

‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ…

ಜಾತಿ ಗಣತಿ ದಿನೇ ದಿನೇ ಗೊಂದಲ; ವಿಜಯೇಂದ್ರ ಟೀಕೆ

ಮೈಸೂರು: “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೇ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲಾ ಸಮುದಾಯಗಳಲ್ಲಿಯೂ ಅಶಾಂತಿ ಉಂಟುಮಾಡಿದೆ,” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರವು ಯಾವುದೇ ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಈ ಸಮೀಕ್ಷೆ ಪ್ರಾರಂಭಿಸಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಜನರಲ್ಲಿ ಗೊಂದಲ ಹೆಚ್ಚಾಗಿದೆ,” ಎಂದರು. “ಕಾಂಗ್ರೆಸ್ ಪಕ್ಷದೊಳಗೆ ಅಕ್ಟೋಬರ್ ಅಥವಾ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಂಭವನೀಯ ರಾಜಕೀಯ ಕ್ರಾಂತಿ ಮತ್ತು ಈ ಜಾತಿ ಗಣತಿಯ ನಡುವೆ ಯಾವುದೇ ಸಂಬಂಧವಿದೆಯೇ ಎಂಬ ಪ್ರಶ್ನೆ ಈಗ ಎಲ್ಲೆಡೆ ಕೇಳಿಬರುತ್ತಿದೆ,” ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. ಗಣತಿ ಕಾರ್ಯದಲ್ಲಿ ವಿಕಲಚೇತನರನ್ನು ಸೇರಿಸಿರುವ ಬಗ್ಗೆ ಟೀಕೆ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಏಕೆ ಇಷ್ಟೊಂದು ಆತುರದಲ್ಲಿದ್ದಾರೆ ಎಂಬುದು…

EDಯಿಂದ ಓಜೋನ್ ಅರ್ಬಾನಾ ಕಂಪನಿಯ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ಅಡಿಯಲ್ಲಿ ತಾತ್ಕಾಲಿಕ ಜಪ್ತಿ ಆದೇಶ ಹೊರಡಿಸಿದ್ದು, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರ 423.38 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ. ಇಡಿ ಶನಿವಾರ ಅಧಿಕೃತ ಹೇಳಿಕೆಯ ಪ್ರಕಾರ, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧದ ಪ್ರಮುಖ ಆರೋಪವೆಂದರೆ ಅದು ಸಮಯಕ್ಕೆ ಸರಿಯಾಗಿ ಪ್ರೊಜೆಕ್ಷನ್ ನಿರ್ಮಾಣವನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ ಮತ್ತು ಗ್ರಾಹಕರಿಗೆ ಸ್ವಾಧೀನವನ್ನು ಹಸ್ತಾಂತರಿಸುವಲ್ಲಿ ವಿಫಲವಾಗಿದೆ. ಫ್ಲಾಟ್ ಅನ್ನು ಮನೆ ಖರೀದಿದಾರರಿಗೆ ಹಸ್ತಾಂತರಿಸುವವರೆಗೆ ನಿರ್ಮಾಣ ಪೂರ್ವ ಇಎಂಐಗಳನ್ನು ಪಾವತಿಸಲು ಆಫರ್ ನೀಡುವ ಮೂಲಕ ಕಂಪನಿಯು ವಂಚಿಸಿದೆ ಎಂದು ಆರೋಪಿಸಲಾಗಿದೆ ಎಂದು ಇಡಿ ತಿಳಿಸಿದೆ. ಆದಾಗ್ಯೂ, ಅದು ತನ್ನ ಬದ್ಧತೆಗಳನ್ನು ಪೂರೈಸಲು ವಿಫಲವಾಗಿದೆ ಮತ್ತು ಯೋಜನೆ/ಫ್ಲಾಟ್‌ಗಳನ್ನು ಪೂರ್ಣಗೊಳಿಸಲಿಲ್ಲ. ಬಿಲ್ಡರ್ ವಸತಿ…

ಉಚಿತ ವೇದಾಂತ ವಿದ್ಯಾರ್ಥಿವೇತನ ಪರೀಕ್ಷೆ; ಮಂಗಳೂರಿನಲ್ಲಿ ಪಿಯುಸಿ ಓದುವವರಿಗೆ ಸುವರ್ಣಾವಕಾಶ

ಮಂಗಳೂರಿನಲ್ಲಿ IITIANS ಮತ್ತು Doctors ನಡೆಸುತ್ತಿರುವ ಮೊದಲ ಪಿಯು ಕಾಲೇಜು ಎಂಬ ಖ್ಯಾತಿ ಪಡೆದ ವೇದಾಂತ ಪಿ ಯು ಕಾಲೇಜು ವತಿಯಿಂದ 5th ಅಕ್ಟೋಬರ್ 2025 ರಂದು (ಭಾನುವಾರ) ಬೆಳಿಗ್ಗೆ 10:00 ರಿಂದ ಉಚಿತ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಉಚಿತ ಪ್ರವೇಶ ಹಾಗೂ ವಿಶೇಷ ವಿದ್ಯಾರ್ಥಿವೇತನ ಮೂಲಕ ಪ್ರವೇಶ ಬಯಸುವ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಕೆಲವು ದಿನಗಳ ಹಿಂದೆ ಬೆಳಗಾವಿ ಜೆಲ್ಲೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಅಕ್ಟೋಬರ್ 2025 ರಂದು (ಭಾನುವಾರ) ಮಂಗಳೂರಿನ ಫ಼ೆರ್ಮಾಯಿ- ಕುಟಿನೋಪದವು ಬಳಿಯ ‘ವೇದಾಂತ ಪದವಿಪೂರ್ವ ಕಾಲೇಜ್’ನಲ್ಲಿ ಈ ಪ್ರವೇಶ ಪರೀಕ್ಷೆ ನಡೆಯಲಿದೆ. State/CBSE/ICSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇದೆ ಎಂದು ‘ವೇದಾಂತ ಪದವಿಪೂರ್ವ ಕಾಲೇಜ್’ ಪ್ರಕಟಣೆ ತಿಳಿಸಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಸೀಟು ವಿಜ್ಞಾನ ವಿಭಾಗಗಳಿಗೆ ಮಾತ್ರ…

24 ಗಂಟೆಗಳಲ್ಲಿ ಎಲಿಮಿನೇಟ್ ಆದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಗೆ ಮತ್ತೆ ಎಂಟ್ರಿ

ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಅಚ್ಚರಿಯ ತಿರುವು ಕಂಡಿದೆ. ಶೋ ಆರಂಭವಾದ ಮೊದಲ ದಿನವೇ ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿಯೇ ಇಷ್ಟು ಬೇಗ ಎಲಿಮಿನೇಟ್ ಆದ ಸ್ಪರ್ಧಿ ಅವರು. ಆದರೆ ಈಗ, ಪ್ರೇಕ್ಷಕರ ಬೇಡಿಕೆ ಮತ್ತು ಸಾಮಾಜಿಕ ಮಾಧ್ಯಮದ ಚರ್ಚೆಗಳ ಮಧ್ಯೆ, ರಕ್ಷಿತಾ ಶೆಟ್ಟಿ ಮತ್ತೆ ಬಿಗ್ಬಾಸ್ ಮನೆಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಮರಳಿಬಂದಳು ರಕ್ಷಿತಾ ವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/X6cFlWGWA2 — Colors Kannada (@ColorsKannada) October 4, 2025 ಕಳೆದ ಭಾನುವಾರ ಶೋ ಪ್ರಾರಂಭವಾದಾಗ 19 ಮಂದಿ ಸ್ಪರ್ಧಿಗಳು ಮನೆ ಸೇರಿದ್ದರು. ಆದರೆ ಕೇವಲ 24 ಗಂಟೆಗಳಲ್ಲೇ ರಕ್ಷಿತಾರ ಹೊರಹಾಕುವ ನಿರ್ಧಾರ ಪ್ರೇಕ್ಷಕರ…

ಪ್ರವಾಹ ಸ್ಥಳಗಳಿಗೆ ಬಿಜೆಪಿ ನಾಯಕರ ಭೇಟಿ; ಸರ್ಕಾರದ ನಿರ್ಲಕ್ಷ್ಯ ಬಗ್ಗೆ ಟೀಕೆ

ವಿಜಯಪುರ: ವಿಜಯಪುರದಲ್ಲಿ ಪ್ರವಾಹ ಮತ್ತು ಅತಿಯಾದ ಮಳೆಯ ಪರಿಣಾಮವಾಗಿ ಬೆಳೆ ಹಾನಿ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಶನಿವಾರ ರಾಜ್ಯ ಸರ್ಕಾರವನ್ನು ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲು ಒತ್ತಾಯಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳು ಹಾಗೂ ಕಡಲೆ, ಸೂರ್ಯಕಾಂತಿ ಮತ್ತು ಕಬ್ಬಿನ ಬೆಳೆ ಹಾನಿ ಸಂಭವಿಸಿರುವ ತೋಟಗಳಿಗೆ ಭೇಟಿ ನೀಡಿದ ನಂತರ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸರ್ಕಾರದ ಕಡೆಗೆ ಶಬ್ದ ಎತ್ತಿ, “ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು” ಎಂದು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದರು ರಮೇಶ್ ಜಿಗಜಿಣಗಿ, ಪಿ.ಸಿ. ಗದ್ದಿಗೌಡರ್ ಮತ್ತು ಇತರರು ಅಶೋಕ ಅವರ ನೇತೃತ್ವದಲ್ಲಿ ನಿಯೋಗ ರೂಪಿಸಿಕೊಂಡು…

“ನವೆಂಬರ್‌ನಲ್ಲಿ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು” — ಮಾಜಿ ಸಚಿವ ಕೆ.ಎನ್. ರಾಜಣ್ಣ

ತುಮಕೂರು: “ನವೆಂಬರ್‌ನಲ್ಲಿ ಕ್ರಾಂತಿ ಅಥವಾ ಸರ್ಕಾರ ಬದಲಾವಣೆ ಆಗುತ್ತದೆ ಎನ್ನುವುದು ಸಂಪೂರ್ಣ ಸುಳ್ಳು,” ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಬದಲಾವಣೆಯ ಯಾವುದೇ ಸಾಧ್ಯತೆ ಇಲ್ಲ,” ಎಂದರು. ಅವರು ಮುಂದುವರಿದು, “ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಪೊರೇಷನ್, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವ ಉದ್ದೇಶ ಹೊಂದಿದೆ,” ಎಂದರು. ನವೆಂಬರ್‌ನಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಆಗಲಿದೆ ಎಂಬ ಕೆಲವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇಂತಹ ಊಹಾಪೋಹಗಳಿಗೆ ಯಾವುದೇ ಆಧಾರವಿಲ್ಲ. ಜನರನ್ನು ತಪ್ಪು ದಾರಿಗೆಳೆವ ಪ್ರಯತ್ನ ಮಾತ್ರ ನಡೆಯುತ್ತಿದೆ,” ಎಂದು ಹೇಳಿದರು.

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದ ಗ್ಯಾರಂಟಿ: ಸುರ್ಜೆವಾಲಾ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ. ಗ್ಯಾರಂಟಿಗಳಿಂದ ಆದ ಪರಿವರ್ತನೆ: ಈ ಯೋಜನೆಗಳ…