ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ; 10 ಕಡೆ ದಾಳಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್…

ಬಿಜೆಪಿಯಲ್ಲಿ ಸಿಎಂ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಹೇಳಿದ್ದರು; ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ?…

JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…

ಭೂಸ್ವಾಧೀನ ಲೋಪಗಳ ಬಗ್ಗೆ ತನಿಖೆ: ಸರ್ಕಾರದಿಂದ ಕಠಿಣ ಕ್ರಮದ ಸೂಚನೆ

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು. “ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ ವಿಶೇಷ ತನಿಖಾ…

“ಯಾವುದೇ ಆಪತ್ತು ಬಂದರೂ NDA ಮೈತ್ರಿ ಮುರಿಯದು”: ದೇವೇಗೌಡ

ಬೆಂಗಳೂರು: “ರಾಷ್ಟ್ರೀಯ ಜನತಾ ದಳ (ಎಸ್) ಪಕ್ಷ ಹಾಗೂ ಎನ್‌ಡಿಎ ಮೈತ್ರಿ ಅಟಲ್‌! ಯಾವುದೇ ಸಂದರ್ಭದಲ್ಲೂ ಮೈತ್ರಿಯನ್ನು ಮುರಿಯುವ ಪ್ರಶ್ನೆ ಬರುವುದಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ನಾಯಕತ್ವದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ನಮ್ಮ ಕಾರ್ಯಕರ್ತರು ಇದನ್ನು ಎಂದಿಗೂ ಮರೆಯಬಾರದು’ ಎಂದರು. ‘ಉತ್ತರದಲ್ಲಿ ಜೆಡಿ(ಯು), ದಕ್ಷಿಣದಲ್ಲಿ ಜೆಡಿ(ಎಸ್)’ ಎಂದು ಘೋಷಿಸಿದ ದೇವೇಗೌಡ, ‘ಅಲ್ಲಿ ನಿತೀಶ್‌ ಕುಮಾರ್ ಇದ್ದಾರೆ, ಇಲ್ಲಿ ಕುಮಾರಸ್ವಾಮಿ ಇದ್ದಾರೆ’ ಎಂದು ಪಕ್ಷದ ಬಲವನ್ನು ಹಿರಿಮೆಗೇರಿಸಿದರು. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಸಿದ್ದರಾಮಯ್ಯ ಅವರು “ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗಲಿಲ್ಲ” ಎಂಬ ಹೇಳಿಕೆಯನ್ನು ಕಟುವಾಗಿ ತಳ್ಳಿ ಹಾಕಿದ ಗೌಡರು, “ನಾನು ಸ್ವತಃ…

ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ; ಬಿಜೆಪಿ ಗರಂ

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ. ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ @siddaramaiah ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ… pic.twitter.com/HPsBKWbvFG — BJP Karnataka (@BJP4Karnataka) November 22, 2025 ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ…

ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

ಸಿಂದಿಗೇರಿ: ಕುರುಗೋಡು ತಾಲೂಕಿನ ಸಿಂದಿಗೇರಿ ಗ್ರಾಮದಲ್ಲಿ ದಾತ್ರಿ ರಂಗಸಂಸ್ಥೆ ಸಿರಿಗೇರಿ ವತಿಯಿಂದ ಆಯೋಜಿಸಿದ್ದ ಕಲಾ ತಂಡದಿಂದ ಶರಣ ಹರಳಯ್ಯ ಜೀವನ ಆಧಾರಿತ ನಾಟಕ ಪ್ರದರ್ಶನ, ಸಿಂದಿಗೇರಿ ಗ್ರಾಮದ ವಿದ್ಯಾರ್ಥಿನಿಯರಿಂದ ನೃತ್ಯ ಪ್ರದರ್ಶನದೊಂದಿಗೆ ಶ್ರೀ ಶಿವಶರಣ ಮಲ್ಲಪ್ಪತಾತನವರ ಚಲನಚಿತ್ರ ಉದ್ಘಾಟನೆ ಗಮನಸೆಳೆಯಿತು. ಸಿಂದಿಗೇರಿ ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಜೀವನದಲ್ಲಿ ಅಚ್ಚಳಿಯದ ಗುರುತು ಬರೆದಿದ್ದ, ಗುಳ್ಯo ಶ್ರೀ ಶಿವಶರಣ ಗಾದಿಲಿಂಗಪ್ಪ ತಾತ ನವರ ಪರಮ ಶಿಷ್ಯರಾದ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಮಹಿಮೆಯನ್ನು ಚಿತ್ರಿಸುವ ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತನವರ ಚರಿತ್ರೆ ಸಿಂದಿಗೇರಿ, ಬೈಲೂರು ಎಂಬ ಚಲನಚಿತ್ರದ ಚಿತ್ರಿಕರಣ ಉದ್ಘಾಟನಾ ಕಾರ್ಯಕ್ರಮದ ವೇಳೆ ಸಿಂದಿಗೇರಿ, ಬೈಲೂರು ಗ್ರಾಮಸ್ಥರು ಹಾಗೂ ಸರ್ವ ಭಕ್ತ ವೃಂದ ಸಹಾಯ, ಸಹಕಾರದಿಂದ ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಭಕ್ತರು, ಗಣ್ಯರು ಭಾಗವಹಿಸಿದರು. ಪೂಜಾ ವಿಧಿ, ದೀಪಪ್ರಜ್ವಲನ ಮತ್ತು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನಂತರ ಚಿತ್ರ…

ರಾಜ್ಯದ ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ: ಬಿಜೆಪಿ ಟೀಕೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.

ಪಾಕ್ ಪರ ಬೇಹುಗಾರಿಕೆ ಆರೋಪ: ಉಡುಪಿಯಲ್ಲಿ ಇಬ್ಬರು ಬಂಧನ

ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ ಮಲ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ 152 ಹಾಗೂ ಅಧಿಕೃತ ರಹಸ್ಯ ಕಾಯ್ದೆ (ಒಎಸ್‌ಎ) 3 ಮತ್ತು 5ನೇ ಕಲಮಗಳಡಿ ಕೇಸ್ ದಾಖಲಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರ ಮೂಲದ 20 ವರ್ಷದ ರೋಹಿತ್ ಮತ್ತು 37 ವರ್ಷದ ಸಾಂತ್ರಿ ಎಂದು ಗುರುತಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಆರೋಪಿಗಳಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್ “ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗೆ ಸಂಬಂಧಿಸಿದ ಗಂಭೀರ ಪ್ರಕರಣವಾದ್ದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ನವೆಂಬರ್ 22ರಂದು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು” ಎಂದರು. ಮಲ್ಪೆಯಲ್ಲಿದ್ದ ವಸತಿಗೃಹದ ಕೋಣೆಯಲ್ಲಿ ಸುಳಿವಿನ ಆಧಾರದ ಮೇಲೆ…