ಮಟ್ಕಾ ಅಡ್ಡೆ ಮೇಲೆ ದಾಳಿ; ಬುಕ್ಕಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಶಾಸಕ

ಹಾವೇರಿ: ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಯುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಶಾಸಕ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ (Rudrappa Lamani) ಸ್ವತಃ ದಾಳಿ ನಡೆಸಿ ಬುಕ್ಕಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆಯ ಸಮೀಪದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯಲಾಗುತ್ತಿದೆ. ಇದನ್ನು ಯಾರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಸೋಮವಾರ ಶಾಸಕರ ಗಮನಸೆಳೆದರು. ನಾಡ ಕಚೇರಿ ಉದ್ಘಾಟನೆ ಹಾಗೂ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವೇಳೆ, ಸ್ಥಳೀಯರು ಈ ಸಮಸ್ಯೆಯನ್ನು ಮತ್ತೊಮ್ಮೆ ಅವರ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ರುದ್ರಪ್ಪ ಲಮಾಣಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದಾಗ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಕೂಡಲೇ ಆತನನ್ನು ಗುತ್ತಲ ಪೊಲೀಸ್ ಠಾಣೆ (Guttal Police Station) ಸಿಬ್ಬಂದಿಗೆ ಒಪ್ಪಿಸಿದರು. ಈ ವೇಳೆ ಪಿಎಸ್‌ಐಗೆ ತರಾಟೆಗೆ…

ಅನುಚಿತ ಚಿತ್ರೀಕರಣಕ್ಕೆ ಖಂಡನೆ: ರುಕ್ಮಿಣಿ, ಆಶಿಕಾ, ಸಪ್ತಮಿ ಒಗ್ಗಟ್ಟಿನ ಸಂದೇಶ

ಬೆಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರನ್ನು ಅನುಚಿತ ಕೋನಗಳಿಂದ ಚಿತ್ರೀಕರಿಸಿ, ಉದ್ದೇಶಪೂರ್ವಕ ಜೂಮ್-ಇನ್‌ಗಳ ಮೂಲಕ ದೃಶ್ಯಗಳನ್ನು ಪ್ರಸಾರ ಮಾಡುವ ಪ್ರಕ್ರಿಯೆಯನ್ನು ನಟಿಯರಾದ ರುಕ್ಮಿಣಿ ವಸಂತ್ (Rukmini Vasanth), ಆಶಿಕಾ ರಂಗನಾಥ್ (Ashika Ranganath) ಮತ್ತು ಸಪ್ತಮಿ ಗೌಡ (Saptami Gowda) ತೀವ್ರವಾಗಿ ಖಂಡಿಸಿದ್ದಾರೆ. ಮಂಗಳವಾರ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ಒಗ್ಗಟ್ಟಿನ ಹೇಳಿಕೆಯಲ್ಲಿ ನಟಿಯರು, “ಚಲನಚಿತ್ರೋದ್ಯಮದ ಮಹಿಳೆಯರಾಗಿ ನಾವು ಪುನರಾವರ್ತಿತ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪದೇ ಪದೇ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಹಿಳಾ ನಟಿಯರನ್ನು ಸೂಕ್ತವಲ್ಲದ ಕೋನಗಳಿಂದ ಚಿತ್ರೀಕರಿಸಲಾಗುತ್ತದೆ. ಅನಗತ್ಯ ಜೂಮ್‌ಗಳು ನಮ್ಮ ಕೆಲಸದ ಬದಲು ನಮ್ಮ ದೇಹದ ಮೇಲೆ ಕೇಂದ್ರೀಕರಿಸುತ್ತವೆ,” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೆಲವು ವ್ಯಕ್ತಿಗಳ ಈ ನಡವಳಿಕೆ ಅಗೌರವಕಾರಿ ಹಾಗೂ ಸಂಪೂರ್ಣವಾಗಿ ಅಸ್ವೀಕಾರಾರ್ಹ. ನಾವು ನಮ್ಮ ಸಿನಿಮಾಗಾಗಿ ಇಲ್ಲಿದ್ದೇವೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಉದ್ದೇಶಪೂರ್ವಕ ಜೂಮ್-ಇನ್‌ಗಳು ಮತ್ತು ಅನುಚಿತ ಕೋನಗಳನ್ನು ಘನತೆಯ ಉಲ್ಲಂಘನೆ ಎಂದು ಕರೆಯಿರುವ ನಟಿಯರು,…

ಕಲಬುರಗಿ: ತರಬೇತಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿತ; ‘ಕಮಿಷನ್ ಕಾಂಗ್ರೆಸ್’ ಎಂದು JDS ಟೀಕೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಂದ ಉದ್ಘಾಟನೆಗೊಂಡು ತಿಂಗಳು ಕೂಡ ಪೂರೈಸದ ಕಲಬುರಗಿಯ ಪೂರ್ವ ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯಲ್ಲಿ ಅಚ್ಚರಿಯ ಘಟನೆ ನಡೆದಿದೆ. ಕಳಪೆ ಕಾಮಗಾರಿಯಿಂದ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆಯ ವೇಳೆ ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಒಂದು ಭಾಗ ಹಠಾತ್ ಕುಸಿದು ಬಿದ್ದಿದೆ ಎನ್ನಲಾಗಿದ್ದು, ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಮತ್ತು ಸಿಬ್ಬಂದಿ ನೆರವಿಗೆ ಧಾವಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಹೊಸದಾಗಿ ಆರಂಭಗೊಂಡ ಕೇಂದ್ರದಲ್ಲೇ ಇಂತಹ ಅವಘಡ ಸಂಭವಿಸಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಜನತಾ ದಳ (ಜೆಡಿಎಸ್) (Janata Dal (Secular)) ಪಕ್ಷ, ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಕಳಪೆ ಕಾಮಗಾರಿಗಳ ಮೂಲಕ ವ್ಯರ್ಥ…

ಇರಾನ್; ಭಾರತೀಯರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಡಿಕೆಶಿ ಆಗ್ರಹ

ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ನಡುವೆಯೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾರತೀಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. “ಈ ದೇಶದ ಎಲ್ಲಾ ಜನರಿಗೆ, ವಿಶೇಷವಾಗಿ ದಕ್ಷಿಣ ಭಾರತದವರಿಗೆ ನಾನು ಮನವಿ ಮಾಡುತ್ತೇನೆ. ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನಮ್ಮ ಜನರಿಗೆ ನಾವು ಧೈರ್ಯ ಮತ್ತು ಶಕ್ತಿ ನೀಡಲು ಪ್ರಯತ್ನಿಸಬೇಕು,” ಎಂದು ಅವರು ಹೇಳಿದ್ದಾರೆ. ವಿದೇಶಗಳಲ್ಲಿ ಇರುವ ಭಾರತೀಯರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಹೇಳಿದ ಅವರು, “ಭಾರತದ ಎಲ್ಲಾ ನಾಗರಿಕರನ್ನು ರಕ್ಷಿಸಬೇಕು. ಈ ಜಗತ್ತಿನಲ್ಲಿ ಯಾರನ್ನೂ, ವಿಶೇಷವಾಗಿ ಮಕ್ಕಳನ್ನು ಈ ರೀತಿ ನಿರ್ದಯವಾಗಿ ಕೊಲ್ಲಬಾರದು,” ಎಂದು ಅಭಿಪ್ರಾಯಪಟ್ಟರು. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಮತ್ತು ಇತರ ಭಾರತೀಯರ ಸುರಕ್ಷತೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಮನವಿಯಾಗಿದೆ. Bengaluru | On Israel-Iran Conflict, Karnataka Dy CM DK Shivakumar…

ಗರ್ಭಕಂಠ ಕ್ಯಾನ್ಸರ್‌ ತಡೆಗೆ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ

ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಕೇಂದ್ರ ಸರ್ಕಾರದ ಆಶಯದಂತೆ ರಾಜ್ಯದಲ್ಲಿಯೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ವೆಬ್‌ಕ್ಯಾಸ್ಟ್‌ ಮೂಲಕ ಕಾರ್ಯಕ್ರಮ ವೀಕ್ಷಿಸಲಾಯಿತು. ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈಧ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್‌ ವ್ಯವಸ್ಥಾಪಕ ನಿರ್ದೇಶಕರಾದ ಅವಿನಾಶ್‌ ಮೆನನ್‌, ಬೆಂಗಳೂರು ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್‌, ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು. 14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಸರ್ಕಾರಿ…

ರಾಯಚೂರಲ್ಲಿ ಬೈಕ್-ಟ್ರಕ್ ಡಿಕ್ಕಿ: ಮೂವರು ಸಾವು

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬೈಕ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೊಹಮ್ಮದ್ ಅಲಿ (24), ನೂರ್ ಮೊಹಮ್ಮದ್ (19) ಮತ್ತು ಫಯಾಜ್ (26) ಎಂದು ಗುರುತಿಸಲಾಗಿದೆ. ಇವರು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ಸಾಗುತ್ತಿದ್ದ ಬೈಕ್‌ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ತೆರಳುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರೂ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಅಧಿಕಾರದ ಹೋರಾಟದಲ್ಲಿ ಸಿಎಂ-ಡಿಸಿಎಂ ತೊಡಗಿದ್ದಾರೆ; ಯುವಕರ ಸಮಸ್ಯೆ ನಿರ್ಲಕ್ಷ್ಯ: ವಿಜಯೇಂದ್ರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ಯುವಜನರ ಬದುಕಿನ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಬಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಯುವಕರು ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು. “ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರ ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಳಗಾವಿ ವಿಧಾನಸಭಾ ಅಧಿವೇಶನದ ವೇಳೆ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಲಾಠಿ ಪ್ರಹಾರ ನಡೆಸಲಾಯಿತು. ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಲು ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು,” ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅಧಿಕಾರಕ್ಕಾಗಿ ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ,…

‘ಇಂದಿನ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ’; ಧಾರವಾಡ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ ಅತ್ಯಂತ ಮಹತ್ವದ್ದಾಗಿದೆ ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ…

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಈ ಸಂಬಂಧ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯ ನಡುವೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರೂ ಸೇರ್ಪಡೆಗೊಂಡು ಹೋರಾಟ ತೀವ್ರಗೊಳಿಸಿದರು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಪರಿಣಾಮ, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ–ನೂಕಾಟ ನಡೆಯಿತು. ರಾಜ್ಯ ಸರ್ಕಾರವು ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯುವಜನರ ಅಸಮಾಧಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. Massive protest in dharwad by job aspirants against the govt. The protestors took to the streets demanding that the…

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ…