ಮುಜರಾಯಿ ಅಧಿಕಾರಿಗಳ ಕಣ್ಣಿಗೆ ಕಾಣದ ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯ?

ದಾವಣಗೆರೆ: ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದ ಹೊರವಲಯದಲ್ಲಿ ಮಲ್ಪೆ ಟು ಮೊಳಕಾಲ್ಮೂರು ರಾಜ್ಯ ಹೆದ್ದಾರಿಯವ ಜಗಳೂರು ಮಾರ್ಗದ ಹಾಗೂ ಕೆರೆಯ ಪಕ್ಕದ ತಿರುವಿನಲ್ಲಿರುವ ವಿಘ್ನೇಶ್ವರನ ಮುಚ್ಚು ದೇಗುಲವಿದ್ದು ಇದು ಬಹಳ ಅಪರೂಪದ ದೇವಗುಲವಾಗಿದೆ ಇದು ದ್ವಾರ ರಹಿತ ದೇಗುಲ. ಸಾಮಾನ್ಯವಾಗಿ ಎಲ್ಲಾ ದೇವಾಲಯಗಳಿಗೆ ಬಾಗಿಲು ಇರುವುದು ಸಾಮಾನ್ಯ ಆದರೆ ಈ ದೇವಾಲಯಕ್ಕೆ ಬಾಗಿಲು ಇಲ್ಲದಿರುವುದೇ ವಿಶೇಷ. ದೇಗುಲದ ಗರ್ಭಗುಡಿಯಲ್ಲಿ ಎರಡು ಈಶ್ವರನ ಪಾಣಿ ಪೀಠಗಳಿದ್ದು ಒಂದು ಪಾಣಿ ಪೀಠದಲ್ಲಿ ಈಶ್ವರನ ಲಿಂಗ ಮತ್ತೊಂದು ಪಾಣಿ ಪೀಠದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಈ ದೇವಾಲಯವು ಚಿತ್ರದುರ್ಗ ಪಾಳೆಗಾರರ ಕಾಲದ ದಳವಾಯಿ ಮುದ್ದಣ್ಣನ ಕಾಲದಲ್ಲಿ ನಿರ್ಮಾಣಗೊಂಡಿದೆ ಎನ್ನಲಾಗುತ್ತಿದೆ. ಕೊಣಚಗಲ್ ಗುಡ್ಡದ ಕೆಳಗೆ ಮುಚ್ಚು ದೇಗುಲವಿದ್ದು ಇವರ ಕಾಲದಲ್ಲಿಯೇ ತಾಲೂಕಿನಲ್ಲಿ ಎರಡು ಮೂರು ಮುಚ್ಚು ದೇವಾಲಯಗಳು ನಿರ್ಮಾಣವಾಗಿವೆ. ಈ ಅನನ್ಯ ದೇಗುಲವು ಅಳಿವಿನಂಚಿನಲ್ಲಿದೆ. ಸಂಪೂರ್ಣ ನಾಶವಾಗುವ ಮುನ್ನ, ಪಾಳೇಗಾರರ ಕಾಲದ ಈ…

ಜಗಳೂರು: ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ; ಮುಕ್ತಿ ಬಾವುಟ 1.12 ಲಕ್ಷ ರೂಪಾಯಿಗೆ ಹಾರಜು

ಜಗಳೂರು : ಕಾರ್ತಿಕ ಮಾಸದ ಅಂಗವಾಗಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಜಗಳೂರು ತಾಲೂಕಿನ‌ ಗಡಿ ಗ್ರಾಮ ಖಾನಾಮಡುಗಿನ ದಾಸೋಹ ಮಠದ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ರಥೋತ್ಸವವು ಭಾನುವಾರ ಜರುಗಿತು. ಸ್ವಾಮಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ನಂತರ ಸಾವಿರಾರು ಭಕ್ತರು ತೇರಿನ ಗಾಲಿಗೆ ಕಾಯಿ ಹೊಡೆದು ಪೂಜೆ ಮಾಡಿ ಭಕ್ತಿ ಸಮರ್ಪಿಸಿದರು. ನಂತರ ರಥವನ್ನು ಎಳೆದು ಕೈಂಕರ್ಯ ನೆರವೇರಿಸಲಾಯಿತು. ಹಿರಿಯೂರು ತಾಲೂಕಿನ ಮೇಟಿ ಕುರ್ಕಿ ತಿಪ್ಪೇಸ್ವಾಮಿ ಎಂಬುವವರು ಸ್ವಾಮಿಯ ಮುಕ್ತಿ ಬಾವುಟವನ್ನು ಒಂದು ಲಕ್ಷದ ಹತ್ತು ಸಾವಿರದ ಹನ್ನೇರೆಡು ರೂಪಾಯಿಗಳಿಗೆ ಹಾರಜಿನಲ್ಲಿ ಪಡೆದುಕೊಂಡರು. ದಾಸೋಹ ಮಠದ ಐರ್ಮಡಿ ಶಿವರ್ಯರ ಮಾರ್ಗದರ್ಶನದಲ್ಲಿ ಜಾತ್ರಾ ವೈಭವದ ವಿಧಿವಿಧಾನಗಳು ನೆರವೇರಿದವು.

ದೊಣೆಹಳ್ಳಿ ಶರಣಬಸವೇಶ್ವರ ದಾಸೋಹಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ

ದಾವಣಗೆರೆ:  ಜಗಳೂರು ತಾಲ್ಲೂಕಿನ ದೊಣೆಹಳ್ಳಿಯ ಶರಣಬಸವೇಶ್ವರ ದಾಸೋಹ ಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ದೊಣೆಹಳ್ಳಿಯ ಶರಣಬಸವೇಶ್ವರ ದಾಸೋಹ ಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಸರ್ಪಭೂಷಣ ಶಿವಯೋಗಿ ಮಠದ ಪಟ್ಟಾಧ್ಯಕ್ಷರಾದ ಶ್ರೀ ಗುರು ಮಲ್ಲಿಕಾರ್ಜುನ ದೇವರು, ಚಿತ್ರದುರ್ಗ ಮುರುಘಾಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಇದೇ ವೇಳೆ ಚಿತ್ರದುರ್ಗ ಬೃಹನ್ಮಠದ ಕಲಾವೃಂದದ ಮುಖ್ಯಸ್ಥ ಉಮೇಶ್ ಪತ್ತಾರ್ ಅವರ ತಂಡದಿಂದ ವಚನಸಂಗೀತ ಕಾರ್ಯಕ್ರಮ ನಡೆದವು.ಭಕ್ತಸಮೂಹಕ್ಕೆ ದಾಸೋಹ ನಡೆಸಲಾಯಿತು.ಅಪಾರಸಂಖ್ಯೆಯಲ್ಲಿ ಭಕ್ತಸಮೂಹ ದೀಪಗಳೊಂದಿಗೆ ಕಾರ್ತಿಕ ದೀಪೋತ್ಸವದೊಂದಿಗೆ ಶರಣಬಸವೇಶ್ವರ ದಾಸೋಹ ಮಠದ ಭಕ್ತಿಪರ್ವ ಮೆರೆದರು. ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಬಿ.ದೇವೇಂದ್ರಪ್ಪ, ತ್ರಿವಿಧ ದಾಸೋಹದೊಂದಿಗೆ ಜಗತ್ತಿನಲ್ಲಿ ಅಮೂಲಾಗ್ರ ಬದಲಾವಣೆಗೆ ಪೂರಕವಾಗಿ ಸೇವೆಗೈಯುತ್ತಿರುವ ದೊಣೆಹಳ್ಳಿ ಶರಣಬಸವೇಶ್ವರ ದಾಸೋಹ ಮಠ ಉತ್ತುಂಗಕ್ಕೆ ಬೆಳೆಯಲಿ.ಕತ್ತಲೆಯಿಂದ ಬೆಳಕಿನಡೆಗೆ,ಅಜ್ಞಾನದಿಂದ ಜ್ಞಾನದೆಡೆಗೆ ಪ್ರತಿಯೊಬ್ಬರೂ ಸಾಗಬೇಕಿದೆ.ಧರ್ಮದ ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತಿದೆ.ಇಂದಿನ ವಚನಕಾರ್ತಿಕ…

ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ 1945ರ ಏಪ್ರಿಲ್ 22ರಂದು ಜನಿಸಿದ್ದ ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಉಮೇಶ್ ವಿಧಿವಶರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬೆಳಗಾವಿ ಅಧಿವೇಶನ: ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ…

ಡಿಕೆಶಿ-ಸಿದ್ದರಾಮಯ್ಯ ಜಟಾಪಟಿ ವಿಚಾರ: ಕಾಂಗ್ರೆಸ್ ಹೈಕಮಾಂಡ್ ದುರ್ಬಲ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಗ್ಗೆ ಅಶೋಕ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ‘ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

ಬ್ರೇಕ್ ಫಾಸ್ಟ್ ಹೆಸರಲ್ಲಿ ಒಗ್ಗಟ್ಟು ಪ್ರದರ್ಶನ; ಒಟ್ಟಾಗಿ ಆಡಳಿತ ನಡೆಸುತ್ತೇವೆ ಎಂದ ಸಿದ್ದು-ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು. #WATCH | Karnataka Chief Minister Siddaramaiah and Deputy CM DK Shivakumar hold a joint…

ಪ್ರವಾಹದಿಂದ ಬೆಳೆ ಹಾನಿ; ಕೇಂದ್ರದ ತಂಡದಿಂದ ಶೀಘ್ರವೇ ಪರಿಶೀಲನೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು ಅದಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರಾಜ್ಯದ ರೈತರ ಖಾತೆಗಳಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸಲಾಗುತ್ತಿದೆ ಎಂದರು. ‘ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ…

ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ ‘ಸಂವಿಧಾನ’ ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ ‘ಸಂವಿಧಾನ ಫಲಕ’ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ ‘ಸಂವಿಧಾನ ಓದು’ ಕಾರ್ಯಕ್ರಮದ ಜೊತೆಯಲ್ಲೇ…

‘ಧಾರ್ಮಿಕ ಕ್ಷೇತ್ರವಲ್ಲದೇ ಸಾಮಾಜಿಕ ಕ್ಷೇತ್ರದಲ್ಲಿಯೂ ವಿರೇಂದ್ರ ಹೆಗಡೆ ಮಾದರಿ’

ದಾವಣಗೆರೆ: ಧಾರ್ಮಿಕ ಸೇವೆಯಷ್ಟೇ ಸಾಮಾಜಿಕ ಕ್ಷೇತ್ರದಲ್ಲಿಯೂ ತನ್ನದೇ ಗುರುತು ಮೂಡಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿ. ವಿರೇಂದ್ರ ಹೆಗಡೆ ಅವರ ಸೇವೆ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿವೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪಿ.ಎಸ್. ಅರವಿಂದನ್ ಹೇಳಿದ್ದಾರೆ. ಜಗಳೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ–ಸಂಸ್ಥೆಗಳ ವತಿಯಿಂದ ವಿರೇಂದ್ರ ಹೆಗಡೆ ಅವರ ಜನ್ಮದಿನಾಚರಣೆಯ ಅಂಗವಾಗಿ ರೋಗಿಗಳಿಗೆ ಹಣ್ಣು, ಬ್ರೆಡ್ ಮತ್ತು ಬಿಸ್ಕೆಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅರವಿಂದನ್, “ವಿರೇಂದ್ರ ಹೆಗಡೆ ಅವರು ಪೂರ್ವಜರ ಮಂಜುನಾಥಸ್ವಾಮಿ ಆರಾಧನಾ ಪರಂಪರೆಯನ್ನು ಮುಂದುವರಿಸಿಕೊಂಡು, ಧಾರ್ಮಿಕ ಕ್ಷೇತ್ರಕ್ಕೆ ಕೊಡುಗೆ ನೀಡಿರುವುದರ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳ ಜಾಲವನ್ನು ವಿಸ್ತರಿಸಿದ್ದಾರೆ. ಸ್ವ–ಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸಿ ಆರ್ಥಿಕವಾಗಿ ಸಬಲಗೊಳಿಸಿದ್ದಾರೆ. ವಿದ್ಯಾರ್ಥಿವೇತನ, ನಿರ್ಗತಿಕರಿಗೆ ಸಹಾಯಧನ, ಶೌಚ–ಸೂರಿನ ಸೌಲಭ್ಯ, ಮದ್ಯವರ್ಜನ ಶಿಬಿರಗಳು ಸೇರಿದಂತೆ…