ಬೈಕ್ ಕಳ್ಳರ ಹಾವಳಿಗೆ ಬ್ರೇಕ್; ಖದೀಮರನ್ನು ಖೆಡ್ಡಾಕ್ಕೆ ಕೆಡವಿದ ಪೊಲೀಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿಗೆ ವೈಟ್’ಫೀಲ್ಡ್ ಉಪವಿಭಾಗ ಪೊಲೀಸರು ಅಂಕುಶ ಹಾಕಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಕಳ್ಳರನ್ನು ಜೈಲಿಗಟ್ಟಿದ್ದಾರೆ. ಸುಮಾರು 20 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಸಮೀಪದ ಗೋಪಾಲನ್ ಇಂಟರ್ ನ್ಯಾಷನ್ ಸ್ಕೂಲ್ ಬಳಿ ನಿಲ್ಲಿಸಲಾಗಿದ್ದ ಯಮಹ ಆರ್’ಎಕ್ಸ್ ಬೈಕ್ ಕಳೆದುಹೋಗಿರುವ ಬಗ್ಗೆ ನಾಗರಾಜು ಎಂಬವರು ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ರೀನಾ ಸುವರ್ಣ ಅವರು ಮಹದೇವಪುರ ಠಾಣೆಯ ಇನ್ಸ್‌ಪೆಕ್ಟರ್ ‌ ಜಿ.ಪ್ರವೀಣ್ ಬಾಬು, PSIಗಳಾದ ಮಹೇಶ್, ಪರಶುರಾಮ್ ಮತ್ತು ಸುನೀಲ್ ಕಡ್ಡಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆಗೆ ಮುನ್ನುಡಿ ಬರೆದರು. ಕಳ್ಳರಿಗಾಗಿ ಖೇಡಾ ತೋಡಿದ ಈ ಪೊಲೀಸರು ರಾಮಮೂರ್ತಿನಗರ ನಿವಾಸಿಗಳಾದ ಮನು ಬಿನ್ ದ್ಯಾವೇಗೌಡ ಮತ್ತು ಸಚ್ಚಿನ್ ಬಿನ್ ಬಾಲರಾಜು ಎಂಬಿಬ್ಬರನ್ನು…

ಕೆಎಸ್‌ಸಿಎ ಚುನಾವಣೆ ಮುಂದೂಡಿಕೆಗೆ ವೆಂಕಟೇಶ್ ಪ್ರಸಾದ್ ಆಕ್ಷೇಪ

ಬೆಂಗಳೂರು: ನವೆಂಬರ್‌ 30ಕ್ಕೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯನ್ನು ಮುಂದೂಡಿರುವುದಕ್ಕೆ ಸಂಸ್ಥೆಯ ಮಾಜಿ ವೇಗಗೋಲಂದಾಜು ವೆಂಕಟೇಶ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯನ್ನು ಡಿಸೆಂಬರ್‌ 30ಕ್ಕೆ ಮುಂದೂಡಿರುವುದು ಸರಿಯಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರಸಾದ್, “ಈ ನಿರ್ಧಾರ ನಮಗೆ ಸಂಪೂರ್ಣ ಆಘಾತಕರ. ಕೆಎಸ್‌ಸಿಎನಲ್ಲಿ ರಾಜಕೀಯಕ್ಕಲ್ಲ, ಕ್ರಿಕೆಟ್‌ಗೆ ಆದ್ಯತೆ ಸಿಗಬೇಕು. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಬಂದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉನ್ನತ ಮಟ್ಟದ ಕ್ರಿಕೆಟ್‌ಗೆ ಪುನರ್ಜೀವನ ನೀಡುವುದು, ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಐಪಿಎಲ್‌ ಮರಳಿ ಬರಲು ಸೂಕ್ತ ವಾತಾವರಣ ಸೃಷ್ಟಿಸುವುದು ನಮ್ಮ ಏಕೈಕ ಗುರಿ,” ಎಂದು ಹೇಳಿದ್ದಾರೆ. ಚುನಾವಣೆಯು ನಿಗದಿಪಡಿಸಿದ ದಿನಾಂಕದಲ್ಲಿ ನಡೆಯಲೇಬೇಕು. ಕೆಎಸ್‌ಸಿಎ ಈಗ ನಿರ್ಣಾಯಕ ಹಂತದಲ್ಲಿದೆ. ಬದಲಾವಣೆಯ ಅಗತ್ಯ ತೀವ್ರವಾಗಿದೆ. ಈಗಾಗಲೇ ನಡೆಯುತ್ತಿರುವ ಋತುವಿನಲ್ಲಿ ಕ್ರಿಕೆಟ್‌ ಸಂಕಷ್ಟಕ್ಕೆ ಸಿಲುಕಿದೆ. ಹೊಸ ಸಮಿತಿಯು ತನ್ನ ದೃಷ್ಟಿಕೋನವನ್ನು ಜಾರಿಗೆ ತರಲು ಚುನಾವಣೆ ಅತ್ಯಗತ್ಯ. ಚುನಾವಣಾ ಆಯೋಗದೊಂದಿಗೆ…

ಸಿಎಂ ಮೊದಲು ನೆರೆ ಪರಿಹಾರ ಕೊಡಬೇಕಿತ್ತು- ಸಿ.ಟಿ.ರವಿ

ಬೆಂಗಳೂರು: ರಾಜ್ಯ ಸರಕಾರವು ಮೊದಲು ನೆರೆ ಪರಿಹಾರ ನೀಡಿ ಬಳಿಕ ಕೇಂದ್ರದಿಂದ ಪರಿಹಾರ ಕೇಳಬೇಕಿತ್ತು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಿಯವರದು ಮತ್ತು ಮುಖ್ಯಮಂತ್ರಿಗಳದು ಸಾಂವಿಧಾನಿಕ ಹುದ್ದೆಗಳು. ಅವರ ಪರಸ್ಪರ ಭೇಟಿ, ಮಾತುಕತೆಯನ್ನು ರಾಜಕೀಯ ದೃಷ್ಟಿಯಿಂದ ನೋಡಲಾಗದು; ನೋಡಬಾರದು ಎಂದು ಪ್ರಶ್ನೆಗೆ ಉತ್ತರಿಸಿದರು. ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನೆರೆ ಪರಿಹಾರವಾಗಿ ರಾಜ್ಯದ ಬೊಕ್ಕಸದಿಂದ ಹಣ ನೀಡಿ ಬಳಿಕ ಕೇಂದ್ರದಿಂದ ಕೇಳುವ ವಾಡಿಕೆಯನ್ನು ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಮಾಡಿದ್ದಾರೆ. ಬೇರೆ ಬೇರೆ ಮುಖ್ಯಮಂತ್ರಿಗಳೂ ಇದನ್ನೇ ಮಾಡಿದ್ದರು. ಕೇಂದ್ರ ಎನ್‍ಡಿಆರ್‍ಎಫ್ ನಿಯಮದಡಿ ಸಮೀಕ್ಷೆ ಮಾಡಿ ಕೊಡಬೇಕಾದುದನ್ನು ಕೊಟ್ಟೇ ಕೊಡುತ್ತದೆ. ಅದಕ್ಕೂ ಮೊದಲು ರಾಜ್ಯದ ಬೊಕ್ಕಸದಿಂದ ಬಿಡುಗಡೆ ಮಾಡುವುದು ಎಲ್ಲ ಮುಖ್ಯಮಂತ್ರಿಗಳು, ಸರಕಾರಗಳು ಪಾಲಿಸಿಕೊಂಡು ಬಂದ ಪದ್ಧತಿ. ಅದನ್ನು ಮುಖ್ಯಮಂತ್ರಿಗಳು ಮಾಡಬೇಕಿತ್ತು ಎಂದು…

ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಉಪನ್ಯಾಸಕರ ವಿರುದ್ಧ ಎಫ್‌ಐಆರ್

ಮೈಸೂರು: ಪ್ರಮುಖ ಶಿಕ್ಷಣ ಸಂಸ್ಥೆಯ ಉಪನ್ಯಾಸಕರೊಬ್ಬರ ವಿರುದ್ಧ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯನ್ನು ಭರತ್ ಭಾರ್ಗವ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 126(2) (ತಪ್ಪಾದ ಸಂಯಮ), 75(2) (ಲೈಂಗಿಕ ಕಿರುಕುಳ) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಅಂಕಗಳ ಭರವಸೆಯ ಜೊತೆಗೆ ಉತ್ತಮ ಉದ್ಯೋಗ ದೊರಕಿಸಲು ಸಹಾಯ ಮಾಡುವ ನೆಪದಲ್ಲಿ ಉಪನ್ಯಾಸಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ತನ್ನ ಅನುಚಿತ ವರ್ತನೆಗೆ ಪ್ರಶ್ನೆ ಮಾಡಿದಾಗ, “ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಉಪನ್ಯಾಸಕರು ಬೆದರಿಕೆ ಹಾಕಿದರೆಂದು ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವ ಬೆದರಿಕೆ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ. ವಿದ್ಯಾರ್ಥಿನಿ ಆರೋಪಿಯ ವಿರುದ್ಧ ಕಠಿಣ…

2010ರ ಅಡ್ವಾಣಿ ನಾಯಕತ್ವಕ್ಕೆ ಸಿಕ್ಕಿದ ಪ್ರಾಮುಖ್ಯತೆ ಈಗ ಮೋದಿಗೆ ಸಿಕ್ಕಿಲ್ಲವೇ? ಏನಿದು ರಮೇಶ್ ಬಾಬು ವಿಶ್ಲೇಷಣೆ?

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಭಾರಿಸಿರಬಹುದು, ಆದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿರುವುದನ್ನು ಆ ಫಲಿತಾಂಶ ತೋರಿಸಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರೂ ಆದ, ಶಾಸಕ ರಮೇಶ್ ಬಾಬು ವಿಶ್ಲೇಷಿಸಿದ್ದಾರೆ. ಸಂಸದೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಅವರು, ಬಿಹಾರ ಫಲಿತಾಂಶ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿ ಪ್ರತಿಕ್ರಿಯೆ ನೀಡಿದ್ದಾರೆ. ‘ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ನಾವು ಒಪ್ಪಿಕೊಳ್ಳುತ್ತಿದ್ದೇವೆ. ಅದೇ ಸಮಯದಲ್ಲಿ ರಾಜಕೀಯ ಪಕ್ಷವಾಗಿ ಮತ್ತು ಪಕ್ಷವಾಗಿ ಗೌರವದಿಂದ ಹೇಳಿಕೊಳ್ಳುವುದರೊಂದಿಗೆ, ಬಿಜೆಪಿ ಹಲವಾರು ಅಂಶಗಳಿಗೆ ಜವಾಬ್ದಾರರಾಗಿರಬೇಕು’ ಎಂದು ಅವರು ಪ್ರತಿಪಾದಿಸಿದ್ದಾರೆ. ಬಿಹಾರದಲ್ಲಿ 2025 ರ ಎನ್‌ಡಿಎಯ ಗೆಲುವು ಪ್ರಭಾವಶಾಲಿಯಾಗಿದ್ದರೂ, ಫಲಿತಾಂಶವನ್ನು ಆಳವಾಗಿ ಗಮನಿಸಿದರೆ, ನರೇಂದ್ರ ಮೋದಿಗೆ ವೈಯಕ್ತಿಕವಾಗಿ ಹಿನ್ನಡೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ರಮೇಶ್ ಬಾಬು ಬೊಟ್ಟುಮಾಡಿದ್ದಾರೆ. 2010ರಲ್ಲಿ ಎಲ್.ಕೆ.ಅಡ್ವಾಣಿ ಇನ್ನೂ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದಾಗ ಬಿಹಾರದಲ್ಲಿ ಬಿಜೆಪಿ…

ಕೊಪ್ಪಳದ ಪತ್ರಕರ್ತರ ಕಮಾಲ್; ನ.18 ರಂದು “ಸಂಪತ್ತಿಗೆ ಸವಾಲ್” ನಾಟಕ ಪ್ರದರ್ಶನ

ಬೆಂಗಳೂರು, ನವೆಂಬರ್ 16: ಹೆಸರಾಂತ ನಾಟಕಕಾರ,ಕವಿ ದಿ‌.ಪಿ.ಬಿ.ಧುತ್ತರಗಿ ಅವರ ರಚನೆಯ “ಸಂಪತ್ತಿಗೆ ಸವಾಲ್” ನಾಟಕವನ್ನು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರದ ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘ ಮತ್ತು ಕೊಪ್ಪಳ ಪತ್ರಕರ್ತರ ಬಳಗದ ಹವ್ಯಾಸಿ ಕಲಾವಿದರು,ನವೆಂಬರ್ 18 ,ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶಿಸಲಿದ್ದಾರೆ. ಡಾ.ರಾಜಕುಮಾರ್ ಅಭಿನಯದಲ್ಲಿ ಸಿನೆಮಾ ಆಗಿ ಜನಪ್ರಿಯವಾಗಿದ್ದ ಈ ನಾಟಕದ ಮೂಲ ಕರ್ತೃ ಪಿ.ಬಿ.ಧುತ್ತರಗಿ ಅವರು.ದಿ.ಪಿ.ಬಿ.ಧುತ್ತರಗಿ ಮತ್ತು ಅವರ ಪತ್ನಿ ಹೆಸರಾಂತ ರಂಗನಟಿ ದಿ.ಸರೋಜಮ್ಮ‌ ಧುತ್ತರಗಿ ಅವರ ಸ್ಮರಣಾರ್ಥವಾಗಿ , ಅವರ ಮಕ್ಕಳಾದ ವಿರೂಪಾಕ್ಷಪ್ಪ ಧುತ್ತರಗಿ,ಶ್ರೀದೇವಿ ಮಲ್ಲಯ್ಯ ಕೋಮಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ . ನ.18,ಮಂಗಳವಾರ ಸಂಜೆ 4 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ನಾಟಕ ಪ್ರದರ್ಶನವನ್ನು ಕನ್ನಡ, ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುವರು,ಮಾಜಿಸಚಿವ…

ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರಿಸಿದೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಚರ್ಚಿಸಲು ಶನಿವಾರ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ನಡೆದ ಪ್ರಮುಖರ ಸಭೆ ಗಮನಸೆಳೆಯಿತು. ಅನ್ನದಾತರ ನೆರವಿಗೆ ಎಂದೂ ಬಾರದ ಈ ರಾಜ್ಯ ಸರ್ಕಾರ, ಅತಿವೃಷ್ಟಿ, ಅನಾವೃಷ್ಟಿ, ಬೆಳೆನಾಶ, ಸಾಲಬಾಧೆ, ಸೇರಿದಂತೆ ರೈತರ ಬಗ್ಗೆ ಕನಿಷ್ಠ ಕಾಳಜಿಯನ್ನೂ ತೋರಿಸಲಿಲ್ಲ. ಈಗ ತುಂಗಭದ್ರಾ ಪ್ರದೇಶದ ರೈತರ ಎರಡನೇ ಬೆಳೆಯ ಈ ಗಂಭೀರ ಸಮಸ್ಯೆಗೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ರೈತರ ಹಿತರಕ್ಷಣೆಗಾಗಿ ಹಾಗೂ ಅವರ ಧ್ವನಿಯಾಗಿ ಹೋರಾಟ ರೂಪಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಹೋರಾಟದ ಮುಂದಿನ ರೂಪರೇಷೆಗಳ ಕುರಿತು ಚರ್ಚಿಸಲಾಯಿತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು…

ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶ

ಬೆಂಗಳೂರು: ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಸಮೀಪ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಮಕ್ಕಳಿಲ್ಲದ ಅವರು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಬೆಳೆಸಿದ್ದರು. ಹಾಗಾಗಿ ಅವರು ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾದಾರು. ಅವರ ಈ ಸಾಧನೆಯನ್ನು ಗೌರವಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ನೀಡಿತ್ತು. ಸಂತಾಪ: ಗಿಡಮರಗಳ ಲಾಲನೆ-ಪಾಲನೆ ಪರಿಸರ ಸಂರಕ್ಷಣೆಗೆ ಟೊಂಕಕಟ್ಟಿ ನಿಂತಿರುವ ಸಾವಿರಾರು ಪರಿಸರ ಪ್ರೇಮಿಗಳಿಗೆ ಆದರ್ಶವಾಗಿರುವ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114 ವರ್ಷ) ಅವರು ಇಹಲೋಕ ತ್ಯಜಿಸಿದರು ಎನ್ನುವ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ…

ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ; 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಬಾಗಲಕೋಟೆ: ಬೆಳಗಾವಿಯ ಕಬ್ಬು ಹೋರಾಟ ಶಮನಗೊಳ್ಳುತ್ತಿದ್ದಂತೆ, ಅದರ ಜ್ವಾಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲೂ ಹೊತ್ತಿಕೊಂಡಿದೆ. ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿರುವ ರೈತರು ಶುಕ್ರವಾರ ತಮ್ಮ ಹೋರಾಟವನ್ನು ತೀವ್ರಗೊಳಿಸಿದರು. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿ ಬಳಿಯ ಗೋದಾವರಿ ಸಕ್ಕರೆ ಕಾರ್ಖಾನೆ ಎದುರು ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌-ಟ್ರಾಲಿಗಳಿಗೆ ಬೆಂಕಿಹಚ್ಚಿ ರೈತರು ಆಕ್ರೋಶ ಹೊರಹಾಕಿದರು. ಸರ್ಕಾರ ನಿಗದಿಪಡಿಸಿದ್ದ ₹3,300ರ ಬೆಲೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ರೈತರು ಕಳೆದ ವಾರದಿಂದಲೇ ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಮುಧೋಳ ಪಟ್ಟಣ ಬಂದ್ ಮಾಡಲಾಗಿತ್ತು. ಕಾರ್ಖಾನೆ ಮಾಲೀಕರು ಸಂಧಾನಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ರೈತರು ಸಿಟ್ಟುಗೊಂಡು, ಗೋದಾವರಿ ಕಾರ್ಖಾನೆ ಕಡೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ಬೆಂಕಿ ಹಚ್ಚಿದರುಎನ್ನಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ, ರೈತರು ಮತ್ತು ಕಾರ್ಖಾನೆಗಳ…

2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿ ಅನುಮೋದನೆಗೊಂಡಿದೆ. ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಧಾರ್ಮಿಕ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ರಜೆಗಳು ಈ ಪಟ್ಟಿ ಒಳಗೊಂಡಿವೆ. 2026ರ ಸಾರ್ವತ್ರಿಕ ರಜಾ ದಿನಗಳು: ಜನವರಿ 15 (ಗುರುವಾರ) – ಉತ್ತರಾಯಣ ಪುಣ್ಯಕಾಲ / ಮಕರ ಸಂಕ್ರಾಂತಿ ಜನವರಿ 26 (ಸೋಮವಾರ) – ಗಣರಾಜ್ಯೋತ್ಸವ ಮಾರ್ಚ್ 19 (ಗುರುವಾರ) – ಯುಗಾದಿ ಹಬ್ಬ ಮಾರ್ಚ್ 21 (ಶನಿವಾರ) – ಖುತುಬ್-ಎ-ರಂಜಾನ್ ಮಾರ್ಚ್ 31 (ಮಂಗಳವಾರ) – ಮಹಾವೀರ ಜಯಂತಿ ಏಪ್ರಿಲ್ 3 (ಶುಕ್ರವಾರ) – ಗುಡ್ ಫ್ರೈಡೇ ಏಪ್ರಿಲ್ 14 (ಮಂಗಳವಾರ) – ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 20 (ಸೋಮವಾರ) – ಬಸವ ಜಯಂತಿ / ಅಕ್ಷಯ ತೃತೀಯ…