ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ನೂತನ ಮನೆಯ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ‘ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರವು, ಈಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದೆ’ ಎಂದರು. ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ…
Category: ಜಿಲ್ಲೆ | ತಾಲೂಕು
ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ.
ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ ಸಂಬಂಧ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪರಿಶೀಲನೆ ನಡೆದಿದ್ದು, ಒಂದೊಮ್ಮೆ ಕನ್ನಡ ಸಂಬಂಧದ ಕಾನೂನು ಜಾರಿಗೆ ಬಂದರೆ, ಕೇರಳದ ಭಾಷಾ ಮಸೂದೆಗೆ ಪರ್ಯಾಯ ಕ್ರಮ ಎಂಬಂತಾಗಬಹುದು, ಜೊತೆಗೆ ಹಿಂದಿ ಏರಿಕೆಯ ವಿವಾದಕ್ಕೂ ತೆರೆ ಬೀಳುವ ಸಾಧ್ಯತೆಗಳಿವೆ. ಹಿಂದಿ ಭಾಷಾ ಏರಿಕೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ನಿಲುವು ಒಂದೇ ರೀತಿ ಇದ್ದು, ಎಲ್ಲಾ ರಾಜಕೀಯ ಪಕ್ಷಗಳೂ ಮಾತೃ ಭಾಷೆಯ ಬಗ್ಗೆ ಪ್ರತಿಪಾದಿಸುತ್ತಿವೆ. ಇದಕ್ಕೆ ಪರ್ಯಾಯ ಎಂಬಂತೆ ಮಾನವ ಹಕ್ಕುಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ಕಾರ್ಯದರ್ಶಿ ಜಯಪ್ರಕಾಶ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 2025ರ ಏಪ್ರಿಲ್ ಹಾಗೂ…
ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ
ಬೆಂಗಳೂರು: ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಮತ್ತು ವರ್ಕ್ ಇನಿಶಿಯೇಟಿವ್ಸ್ನ ಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಿಸ್ ಕಾರ್ಮನ್ ಗುರುವಾರ ವಿಕಾಸಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು. ಆಸ್ಟ್ರೇಲಿಯಾದಲ್ಲಿ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯನ್ನು ನೀಗಿಸಲು ಮತ್ತು ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಗೆ ಜಾಗತಿಕ ವೃತ್ತಿ ಮಾರ್ಗ ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ವೃತ್ತಿಪರರು, ವ್ಯಾಪಾರಿಗಳು ಮತ್ತು ಸಮುದಾಯ ಕಾರ್ಯಕರ್ತರನ್ನು ಆಸ್ಟ್ರೇಲಿಯಾದ ಉದ್ಯೋಗದಾತರು ಸಂಪರ್ಕಸಲಿದ್ದಾರೆ. ನಿರ್ಮಾಣ, ಆರೋಗ್ಯ ರಕ್ಷಣೆ, ಉತ್ಪಾದನೆ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿದೆ. ಈ ಪಾಲುದಾರಿಕೆಯಡಿ…
ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ
ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು ಈ ಮಹಾಕೈಂಕರ್ಯಕ್ಕೆ ಆಕರ್ಷಣೆ ತುಂಬಿತು. ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ತಂಡ ಆಯೋಜಿಸಿದ ವಿಶಿಷ್ಟ ಸಂಗೀತ ರಸಮಂಜರಿ ಕಾರ್ಯಕ್ರಮ ಪರ್ಯಾಯ ಇತಿಹಾಸದಲ್ಲೇ ವಿಶಿಷ್ಟ ಎನಿಸಿತು. ಉಡುಪಿ ಪರ್ಯಾಯದ ಇತಿಹಾಸದಲ್ಲೇ ಮೊದಲ ಬಾರಿಗೆ 40ಕ್ಕೂ ಹೆಚ್ಚು ಹವ್ಯಾಸಿ ಗಾಯಕರನ್ನು ಒಂದೇ ವೇದಿಕೆಯಲ್ಲಿ ಕರೆತರಲಾಗಿತ್ತು, 70ಕ್ಕೂ ಹೆಚ್ಚು ಹಾಡುಗಳು ಸಂಗೀತಾಸಕ್ತರ ಮನಸೂರೆಗೊಳಿಸಿತು. ಒಂದೇ ವೇದಿಕೆಯಲ್ಲಿ ಇಷ್ಟು ಸಂಖ್ಯೆಯ ಗಾಯಕರ ಸಮ್ಮಿಲನವು ಸಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಶ್ರೀಕೃಷ್ಣನ ನಾಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೊಸ ಪ್ರತಿಭೆಗಳು ತಮ್ಮ ಗಾಯನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು ವಿಶೇಷ. ಪ್ರಸಾದ್ ನೇತ್ರಾಲಯ, ಯುನೈಟೆಡ್ ರೆಡಿಮಿಕ್ಸ್ ಕಾಂಕ್ರೀಟ್ ಕಂಪನಿ ಹಾಗೂ ಯೋಶಿಕಾ ಕನ್ಸಕ್ಷನ್ ಮತ್ತು ಫ್ಯಾಬ್ರಿಕೇಶನ್ಸ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ನಡೆದ…
ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ
ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ,…
ರಾಯಚೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ
ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.
‘ನಾನು ಜೆಡಿಎಸ್ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ’: ಜಿ.ಟಿ. ದೇವೇಗೌಡ
ಮೈಸೂರು: ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಪಕ್ಷ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದು, “ನಾನು ಜೆಡಿಎಸ್ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಜೆಡಿಎಸ್ನಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಕ್ಷೇತ್ರದಿಂದ ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ ಎಂದು ಹೇಳಿದರು. ಯಾರನ್ನೂ ಟೀಕಿಸದೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿಯೇ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ನಾನು ವಹಿಸಿದ ಪಾತ್ರದ ಬಗ್ಗೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…
ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ
ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ…
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ
ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದು ನೆನಪಿಸಿದರು. ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ…
