ಬೋರ್‌ವೆಲ್‌ನಲ್ಲಿ ಹಾಲು..! ಇದು ಕಲಿಯುಗದ ಪವಾಡ ಅಂತಿದ್ದಾರೆ ಜನ..!

ಕೊಳವೆ ಬಾವಿಯಲ್ಲಿ ನೀರು ಬುರುವುದು ಸಾಮಾನ್ಯ.. ಆದರೆ, ಬೋರ್‌ವೆಲ್‌ನಲ್ಲಿ ಹಾಲು ಬರಲು ಸಾಧ್ಯವೇ? ಕೊಳವೆ ಬಾವಿಯಲ್ಲಿ ನೀರಿನ ಬದಲು ಹಾಲು ಬರುತ್ತಿದೆ ಎಂಬ ಸುದ್ದಿ ಕುತೂಹಲದ ಕೇಂದ್ರ ಬಿಂದುವಾಗಿದೆ. ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಬೋರ್‌ವೆಲ್‌ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಇದನ್ನು ಕ್ಷೀರ ಕ್ರಾಂತಿ ಎನ್ನುತ್ತಿರುವ ಸ್ಥಳೀಯರು ‘ಕಲಿಯುಗದ ವಿಸ್ಮಯ’ ಎಂದು ಬಣ್ಣಿಸುತ್ತಿದ್ದಾರೆ. ಈ ಬೋರ್‌ವೆಲ್ ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಇದನ್ನು ನೋಡಲೆಂದು ಭಾರೀ ಸಂಖ್ಯೆಯಲ್ಲಿ ಜನ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ, ಬೋರ್‌ವೆಲ್‌ನಲ್ಲಿ ಹಾಲು ಬರುತ್ತಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳೀಯರು ಕ್ಯಾನ್, ಪಾತ್ರೆಗಳೊಂದಿಗೆ ಧಾವಿಸಿ ಹಾಲು ರೂಪದ ನೀರನ್ನು ಹೊತ್ತೊಯ್ಯುವ ಪ್ರಸಂಗವೂ ಅಚ್ಚರಿಗೆ ಕಾರಣವಾಗಿದೆ. जैसे हर चमकती चीज सोना नहीं होती, वैसे सफ़ेद रंग केवल दूध का ही नहीं होता। मगर लोगों…

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು

ಬೆಂಗಳೂರು: ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ. ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.‌ ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು…

ಸಿಲಿಕಾನ್ ಸಿಟಿಯಲ್ಲಿ ತುಳುನಾಡ ಐಸಿರಿ.. ಹೊಸ ಚರಿತ್ರೆ ಬರೆದ ‘ಬೆಂಗಳೂರು ಕಂಬಳ’

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡ ವೈಭವ ಗರಿಗೆದರಿದೆ. ಇತಿಹಾಸದಲ್ಲೇ ಮೊದಲೆಂಬಂತೆ ಬೆಂಗಳೂರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಅರಮನೆ ಮೈದಾನದಲ್ಲಿ ಈ ಮಹಾ ವೈಭವಕ್ಕೆ ಚಾಲನೆ ಸಿಕ್ಕಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ‘ನಮ್ಮ ಕಂಬಳ, ಬೆಂಗಳೂರು ಕಂಬಳ’ ಎಂಬ ಹೆಸರಿನಲ್ಲಿ ಕಂಬಳ ಆಯೋಜಿತವಾಗಿದೆ. ‘ನಮ್ಮ ಕಂಬಳ, ಬೆಂಗಳೂರು ಕಂಬಳ’ದ ವೈಶಿಷ್ಟ್ಯ ಹೀಗಿದೆ.. ಕಂಬಳದ ವೇದಿಕೆಗೆ ದಿವಂಗತ ನಟ ಪುನಿತ್ ರಾಜಕುಮಾರ್ ಹೆಸರಿಡಲಾಗಿದೆ. ಕಂಬಳದ ಕರೆಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಸುಮಾರು 200 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಬೆಂಗಳೂರು ಕಂಬಳವನ್ನು ಲಕ್ಷಾಂತರ ಜನರು ವೀಕ್ಷಿಸಲಿದ್ದು, ಸೂಕ್ತ ವ್ಯವಸ್ಥೆ ಮಾಡಲಾಗಿದೆ.…

‘ಪೂವರಿ’ ಸಾರಥ್ಯದಲ್ಲಿ ‘ತುಡರ ಪರ್ಬೊದ ಪೊಲಬು’ ವಿಶಿಷ್ಠ ಕಾರ್ಯಕ್ರಮ

ತುಳು ಅಪ್ಪೆ ಕೂಟ ಮತ್ತು ಪೂವರಿ ಪತ್ರಿಕೆಯಿಂದ ತುಡರ ಪರ್ಬದ ಪೊಲಬು, ತುಳು ತಾಳಮದ್ದಳೆ ಕಾರ್ಯಕ್ರಮ.. ಕೃಷಿ ಸಂಸ್ಕೃತಿ ನಶಿಸುತ್ತಿದ್ದಂತೆ ಹಬ್ಬಗಳ ಸೊಗಡು ಮರೆಯಾಯಿತು ಎಂದ ಗಣ್ಯರು.. ಸಮಾರಂಭಕ್ಕೆ ಆಕರ್ಷಣೆ ತುಂಬಿದ ತಾಳಮದ್ದಳೆ ವೈಭವ.. ಮಂಗಳೂರು: ತುಳು ಪರಂಪರೆ, ಸಂಸ್ಕೃತಿ ವಿಚಾರದಲ್ಲಿ ನಿರಂತರ ಕಾರ್ಯಕ್ರಮಗಳ ಮೂಲಕ ತುಳುನಾಡಿನ ಸೊಗಡಿಗೆ ಶ್ರೀಮಂತಿಕೆ ತುಂಬುತ್ತಿರುವ ಏಕೈಕ ತುಳು ಮಾಸಿಕ ‘ಪೂವರಿ’ ಆಯೋಜಿಸಿದ ‘ತುಳು ಪರ್ಬೋ’ (ತುಳು ಹಬ್ಬ) ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ನಾಡು-ನುಡಿ-ವೈಭವ ಕುರಿತು ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನಿಸಿ ಕುತೂಹಲದ ಕೇಂದ್ರಬಿಂದುವಾದರು. ತುಳುನಾಡಿನಲ್ಲಿ ಕೃಷಿ ಸಂಸ್ಕೃತಿಯ ಪ್ರತಿಫಲನ ಹಬ್ಬಗಳ ಆಚರಣೆಯಲ್ಲಿ ಪ್ರತಿಫಲಿಸುತ್ತಿತ್ತು. ಆದರೆ ಇಂದು ಕೃಷಿ ನಾಶವಾಗಿ ಸಿಮೆಂಟ್ ನೆಲದಲ್ಲಿ ಹಣತೆ ಹಚ್ಚುವ ಅನಿವಾರ್ಯತೆ ನಮ್ಮದಾಗಿದೆ. ಆದರೂ ಮುಂದಿನ ತಲೆಮಾರಿಗೆ ನಮ್ಮ ಆಚರಣೆಗಳನ್ನು ತಿಳಿಸಲು ಇದು ಅನಿವಾರ್ಯ ಎಂದು ವಕೀಲ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ…

72ನೇ ಮಿಸ್‌ ಯೂನಿವರ್ಸ್‌ ಆಗಿ ನಿಕರಾಗುವಾದ ‘ಶೆಯ್ನಿಸ್ ಪಲಾಸಿಯೋಸ್’

ಎಲ್‌. ಸಾಲ್ವಡಾರ್‌ನಲ್ಲಿ ನಡೆದ 72ನೇ ಮಿಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ನಿಕರಾಗುವಾದ ಸುಂದರಿ ಶೆಯ್ನಿಸ್ ಪಲಾಸಿಯೋಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 90 ಕ್ಕೂ ಹೆಚ್ಚು ದೇಶಗಳಿಂದ ಸ್ಪರ್ಧಿಗಳ ಪೈಕಿ  ವಿಶ್ವ ಸುಂದರಿ ಪಟ್ಟವನ್ನು ಶೆಯ್ನಿಸ್ ಪಲಾಸಿಯೋಸ್ ಪಡೆದುಕೊಂಡಿದ್ದಾರೆ‌  ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 6:30 ಕ್ಕೆ ಮಿಸ್ ಯೂನಿವರ್ಸ್ ವಿಜೇತರ ಹೆಸರನ್ನು ಘೋಷಿಸಲಾಯಿತು. 23 ವರ್ಷದ ಶೆಯ್ನಿಸ್ ಅಲೋಂಡ್ರಾ ಪಲಾಸಿಯೊಸ್ ಕಾರ್ನೆಜೊ ಅವರು ಕಳೆದ ವರ್ಷದ ವಿಜೇತ ಆರ್’ಬೊನಿ ಗೇಬ್ರಿಯಲ್ ಅವರಿಂದ 2023 ರ ವಿಶ್ವ ಸುಂದರಿ ಕಿರೀಟವನ್ನು ಹಸ್ತಾಂತರಿಸಿದರು. ಇದೇ ವೇಳೆ, ಥಾಯ್ಲೆಂಡ್‌ನ ಆಂಟೋನಿಯಾ ಪೋರ್ಸಿಲ್ಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡರು. ಆಸ್ಟ್ರೇಲಿಯಾದ ಮೊರಾಯಾ ವಿಲ್ಸನ್ ಎರಡನೇ ರನ್ನರ್ ಅಪ್ ಸ್ಥಾನಕ್ಕೆ ಗುರುತಾದರು. ಭಾರತದ ಸುಂದರಿ 23 ವರ್ಷದ ಶ್ವೇತಾ ಶಾರ್ದಾ ಅವರು ಸೆಮಿಫೈನಲ್‌‌ವರಗೆ ತಲುಪಿದ್ದರು. ಅಗ್ರ 20 ಫೈನಲಿಸ್ಟ್‌ಗಳಲ್ಲಿ ಅವರು ಸ್ಥಾನ ಪಡೆಕೊಂಡಿದ್ದಾರೆ. MISS UNIVERSE 2023…

ತುಳುನಾಡಿನ ‘ಸರೋವರ ಕ್ಷೇತ್ರ’ದಲ್ಲಿ ಮತ್ತೊಂದು ಪವಾಡ..! ಅನಂತಪುರ ಕ್ಷೇತ್ರದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ

ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿತ್ತು. ದೇವಾಲಯದ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ‘ಬಬಿಯಾ’ ಸಾವಿನ ನಂತರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ಬೇಸರ ಕಂಡುಬರುತ್ತಿತ್ತು. ಇದೀಗ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದೆ. ಈ ಹೊಸ ಮೊಸಳೆ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಸುಮಾರು ಒಂದು ವಾರದ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಭಕ್ತರೊಬ್ಬರು ಕಲ್ಯಾಣಿಯಲ್ಲಿ ‘ಮೊಸಳೆ ಕಂಡಂತೆ ಆಯಿತು’ ಎಂದು ಹೇಳಿಕೊಂಡಿದ್ದರು. ಆದರೆ ಯಾರೂ ಇದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಮೊಸಳೆ ಇರುವುದನ್ನು ದೇಗುಲದ ಆಡಳಿತ ಮಂಡಳಿಯೇ ಖಚಿತಪಡಿಸಿದೆ. ದೇವರ ಪ್ರತಿಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ಈ ಕುರಿತು ಸಂತಸ ಹಂಚಿಕೊಂಡಿರುವ ಮಾಜಿ ಸಚಿವ ಸಿ.ಟಿ.ರವಿ, ‘ಸರೋವರ…

ಕತಾರ್‌ನಲ್ಲಿ ‘ಕನ್ನಡ ರಾಜ್ಯೋತ್ಸವ’; ಹೀಗೊಂದು‌ ಆಕರ್ಷಣೆ.. ‘ಪ್ರೇಮಲೋಕ-2’ ಸುಳಿವು

ಕತಾರ್: ಕರ್ನಾಟಕ ಸಂಘ ಕತಾರ್, ೬೮ ನೇ ಕನ್ನಡ ರಾಜ್ಯೋತ್ಸವನ್ನು  ಅದ್ದೂರಿಯಾಗಿ ಆಚರಿಸಿತು. ದೋಹಾದ ಡಿ.ಪಿಎಸ್ ಶಾಲೆಯ 1500ಕ್ಕೂ ಹೆಚ್ಚು ಕನ್ನಡ ಅಭಿಮಾನಿಗಳಿಂದ ತುಂಬಿದ ಸಭಾಂಗಣದಲ್ಲಿ ಆಡಳಿತ ಮಂಡಳಿಯಿಂದ ಕನ್ನಡದ ದೀಪ ಹಚ್ಚುವ ಹಾಗೂ ಕೆ.ಎಸ್.ನಿಸಾರ್ ಅಹ್ಮದ್ ರಚಿತ ಜೋಗದ ಸಿರಿ ಬೆಳುಕಿನಲ್ಲಿ ಗಾನ ಮತ್ತು ಸಂಘದ ಅಧ್ಯಕ್ಷರಾದ ಮಹೇಶ್ ಗೌಡ ಅವರ ಸ್ವಾಗತ ಭಾಷಣದಿಂದ ಪ್ರಾರಂಭವಾದ ಕಾರ್ಯಕ್ರಮವು ಕರ್ನಾಟಕ ಸಂಘ ಹಾಗೂ ಅದರ ಸೋದರ ಸಂಸ್ಥೆಗಳಾದ ಬಂಟ್ಸ್ ಕತಾರ್, ಮಂಗಳೂರ ಕಲ್ಚರಲ್ ಅಸೋಸಿಯೇಷನ್ ಮಂಗಳೂರು ಕ್ರಿಕೆಟ್ ಕ್ಲಬ್ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆಕರ್ಷಣೆ ಪಡೆಯಿತು. ಸಭೆಯನ್ನು ಸ್ವಾಗತ ಮಾಡುತ್ತ ಮಹೇಶ್ ಗೌಡ ಅವರು ಹಿಂದಿನ ಹಾಗೂ ಈಗಿನ ಆಡಳಿತ ಮಂಡಳಿಗೆ ಧನ್ಯವಾದ ತಿಳಿಸಿದರು. ಮುಂದಿನ ವರ್ಷ ಕರ್ನಾಟಕ ಸಂಘಕ್ಕೆ ರಜತ ಮಹೋತ್ಸವದ ಸಂಭ್ರಮ, ಈ ಸಂಭ್ರಮವನ್ನು ವಿಜರುಮಬನೆಯಿಂದ ನಡೆಸಿಕೊಡುವುದಾಗಿ ಸಭೆಗೆ ತಿಳಿಸಿದರು. ಕತಾರ್ ನಲ್ಲಿನ…

ಬಡಪಾಯಿ ಮಹಿಳೆ ಬದುಕಲ್ಲಿ ‘ಸಂತೋಷ’ ಮೂಡಿಸಿದ ಸಚಿವ.. ಲಾಡ್ ನಡೆಗೆ ‘Hats Off’ ಎಂದ ಜನ

ಧಾರವಾಡ: ಸಚಿವ ಸಂತೋಷ್ ಲಾಡ್ ಒಂದಿಲ್ಲೊಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಗಣಿ ಧಣಿಯಾಗಿ ಸಾವಿರಾರು ಮಂದಿಯ ಪಾಲಿಗೆ ಉದ್ಯೋಗದಾತನಾಗಿ ಗಮನಸೆಳೆದಿರುವ ಸಂತೋಷ್ ಲಾಡ್, ಜನಾನುರಾಗಿ ಶಾಸಕರಾಗಿ ಉತ್ತರ ಕರ್ನಾಟಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದಾರೆ. ಇದೀಗ ಅವರು, ತಮ್ಮ ವಿಶೇಷ ನಡೆಯಿಂದಾಗಿ ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಲಾಡ್ ಅವರು ‘ನೊಂದವರ ಪಾಲಿಗೆ ಆಶಾಕಿರಣ’ ಎಂಬುದು ಅವರ ಕ್ಷೇತ್ರದ ಜನರ ಅಂಬೋಣ. ಇದೀಗ ಭಿಕ್ಷೆ ಬೇಡುತ್ತಿದ್ದ ಮಹಿಳೆಯ ಬದುಕಿಗೆ ಮಾರ್ಗದರ್ಶಿಯಾದ ಪರಿ ಶಹಬ್ಬಾಸ್‌ಗಿರಿ ಗಿಟ್ಟಿಸುವಂತೆ ಮಾಡಿದೆ. ಧಾರವಾಡ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಸಚಿವ ಲಾಡ್ ಅವರಿಗೆ ಶನಿವಾರ ಅಚ್ಚರಿಯ ಸನ್ನಿವೇಶವೊಂದು ಎದುರಾಗಿತ್ತು. ಪುಟ್ಟ ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡುತ್ತಿದ್ದ ಸ್ಥಿತಿಯನ್ನು ಕಂಡು ಅವರು ಮಮ್ಮಲ ಮರುಗಿದರು. ಮಹಿಳೆಯ ಬಳಿ ತೆರಳಿ ಕಷ್ಯಸುಖ ಆಲಿಸಿದರು. ಆಕೆಯ ಹಸಿವು ನೀಗಿಸಲು ಒಂದಷ್ಟು ಮೊತ್ತವನ್ನು ನೀಡಿದ ಲಾಡ್, ಆಕೆಗೆ ಸ್ವಾವಲಂಬಿ ಪಾಠ ಹೇಳಿದರು.…

ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

ಜನಪ್ರತಿನಿಧಿಗಳಿಗೆ ಜನಸಾಮಾನ್ಯರ ಬಗ್ಗೆ ಇಚ್ಚಾಶಕ್ತಿ ಇದ್ದರೆ ಅಭಿವೃದ್ಧಿಶೀಲ ಕ್ಷೇತ್ರ ನಿರ್ಮಾಣ ಅಸಾಧ್ಯವಲ್ಲ ಎಂಬುದಕ್ಕೆ ಈ ಸರ್ಕಾರಿ ಶಾಲೆಗಳು ಉದಾಹರಣೆಯಂತಿದೆ. ಖಾಸಗಿ‌ ಹೈಟೆಕ್ ಶಾಲೆಗಳನ್ನು ನಾಚಿಸುವಂತಿರುವ BTM ಲೇಔಟ್‌ನ ಸರ್ಕಾರಿ ಶಾಲೆಗಳು.. ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ… ರಾಜಧಾನಿ ಬೆಂಗಳೂರು ಸೆರಗಿನಲ್ಲಿರುವ BTM ಲೇಔಟ್’ನಲ್ಲಿರುವ ಸರ್ಕಾರಿ ಶಾಲೆಗಳು ಖಾಸಗಿ ಕಾರ್ಪೊರೇಟ್ ಹೈಟೆಕ್ ಶಾಲೆಗಳನ್ನು ನಾಚಿಸುವ ರೀತಿಯಲ್ಲಿ ಅಭಿವೃದ್ಧಿ ಕಂಡಿವೆ. ಪದಪುಂಜಗಳ ಆಕರ್ಷಣೆಗೆ ಸಾಕ್ಷಿಯಾಗುವ ‘ಶಿಕ್ಷಣ ಕಾಶಿ’ ಎಂದರೇನು? ಅದು ಎಲ್ಲಿದೆ ಎಂದು ಹೂಡುತ್ತಾ ಸಾಗಿದವರಿಗೆ ಈ ಶಾಲೆಗಳು ಸಿಗುತ್ತವೆ. ಇವು ‘ಕಾಶಿಗಿಂತಲೂ’ ಮೇಲ್ಪಂಕ್ತಿಯಲ್ಲಿದೆ ಎಂದು ಗೊತ್ತಾಗುತ್ತದೆ. ತಾವರೆಕೆರೆ, ಕುವೆಂಪುನಗರ ಸುತ್ತಮುತ್ತಲ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದರೆ ಸಾಕು, ಹೊಸ ಪ್ರಪಂಚ ತೆರೆದುಕೊಂಡಂತೆ ಭಾಸವಾಗುತ್ತದೆ. ಆಕರ್ಷಕ ಕಟ್ಟಡ.. ಅದರೊಳಗೆ ವ್ಯವಸ್ಥಿತ ತರಗತಿಗಳು. ಶಿಸ್ತುಬದ್ಧ ವಿದ್ಯಾರ್ಥಿ ಸಮೂಹಕ್ಕೆ ಎಲ್ಲಿಲ್ಲದ ಪಾಠ-ಪ್ರವಚನ. ಯಾವುದೇ…

68ನೇ ಕನ್ನಡ ರಾಜ್ಯೋತ್ಸವ; ಗರಿಗೆದರಿದ ಭುವನೇಶ್ವರಿ ಮಹಾವೈಭವ

ಬೆಂಗಳೂರು: ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ರಂಗು ಆವರಿಸಿದೆ. ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮೂಲಕ ಸಂಭ್ರಮಿಸುತ್ತಿದೆ. ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ, ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಸಾಂಸ್ಕೃತಿಕ ಮಹಾವೈಭವಕ್ಕೆ ಮುನ್ನುಡಿ ಬರೆಯಲಾಯಿತು. ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಮಾರಂಭಕ್ಕೆ ಆಕರ್ಷಣೆ ತುಂಬಿದವು. ವಿವಿಧ ಶಾಲೆಗಳ ಮಕ್ಕಳು ನೃತ್ಯ ರೂಪಕ ಮೂಲಕ ಗಮನ ಸೆಳೆದರು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್.ಚಲುವರಾಯಸ್ವಾಮಿ, ಹಾಗೂ ರಿಜ್ವಾನ್ ಅರ್ಷದ್ ಸೇರಿದಂತೆ ಶಾಸಕರು, ಗಣ್ಯಾತಿಗಣ್ಯರು ಸಮಾರಂಭದಲ್ಲಿ ಭಾಗವಹಿಸಿದರು. ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ…