ಗುರುಪುರದಲ್ಲಿ ‘ಗುತ್ತುದ ವರ್ಸೋದ ಪರ್ಬೋ’; ಕೈಂಕರ್ಯದ ಸಿದ್ದತೆಗೆ ಅಂತಿಮ ಸ್ಪರ್ಶ

ಮಂಗಳೂರು: ತುಳನಾಡು ಪರಶುರಾಮನಿಂದ ಸೃಷ್ಟಿಯಾದ ತಪೋಭೂಮಿ ಎಂಬ ನಂಬಿಕೆ ಇದೆ. ಸಾಲು ಸಾಲು ದುರ್ಗಾ ದೇವಿಗಳ ತಾಣ ಎಂಬ ಪ್ರತೀತಿಗೆ ಪಾತ್ರವಾಗಿರುವ ಕರಾವಳಿಯಲ್ಲಿ ತುಳು ಪರಂಪರೆಯ ದೈವಾರಾಧನೆಗೂ ಮಹತ್ವವಿದೆ. ಸೀಮೆಗೊಂದು ದೈವಸ್ಥಾನ, ಕುಟುಂಬಕ್ಕೊಂದು ದೈವಸ್ಥಾನ ಹೀಗೆ ಭೂತಾರಾಧನೆಯ ಮಜಲುಗಳು ಅನೇಕ ಇವೆ. ಅದರಲ್ಲೂ ‘ಗುತ್ತು’ ಪರಂಪರೆಯಲ್ಲಿನ ಆಚರಣೆಯ ಗತ್ತು ಗಮ್ಮತ್ತು ತುಳುಪರಂಪರೆಗಷ್ಟೇ ಸೀಮಿತ ಎನ್ನಬಹುದು. ಅಂತಹಾ ಗುತ್ತುಗಳ ವರ್ಷದ ಪರ್ಬೋ ತನ್ಬದೇ ಅದ ಆಕರ್ಷಣೆಯಿಂದ ನಾಡಿನ ಗಮನ ಕೇಂದ್ರೀಕರಿಸುತ್ತದೆ. ಈ ಸೊಗಸು ಸೊಬಗಿಗೆ ಸಾಕ್ಷಿಯಾಗುತ್ತದೆ ಮಂಗಳೂರು ಹೊರವಲಯದ ಗುರುಪುರದ ಗೋಳಿದಡಿ ಗುತ್ತು. ಪ್ರತೀ ವರ್ಷದಂತೆ ಈ ಬಾರಿಯೂ ಇಲ್ಲಿ ‘ಗುತ್ತುದ ವರ್ಸೋದ ಪರ್ಬೋ’ ನಡೆಯಲಿದೆ. ಜನವರಿ 19 ಮತ್ತು 20ರಂದು ನಡೆಯುವ ಅನನ್ಯ ವೈಭವದ ಈ ಕೈಂಕರ್ಯದ ಸಿದ್ದತೆಗೆ ಅಂತಿಮ ಸ್ಪರ್ಷ ಸಿಕ್ಕಿದೆ. ದೇವಾಲಯಗಳಲ್ಲಿ ನೆರವೇರುವ ವರ್ದಂತ್ಯುತ್ಸವದ ರೀತಿಯಲ್ಲೇ ಈ ದೈವಾರಾಧನೆಯ, ನ್ಯಾಯದೇಗುಲ ಸ್ವರೂಪದ ಗದ್ದುಗೆಯಲ್ಲಿ ವಾರ್ಷಿಕ ಜಾತ್ರೆ…

ದರ್ಶನ್ ಸಂಕ್ರಾಂತಿ.. ರೋಮಾಂಚಕ ಸನಿವೇಶದ ಫೋಟೋಗಳು

ಸಿನಿಮಾ ತಾರೆಯರ ಅಂಗಳದಲ್ಲೂ ಮಕರ ಸಂಕ್ರಾಂತಿ ಸಡಗರ ಕಂಡುಬಂದಿದೆ. ತಾರೆಯ ತೋಟಗಳಲ್ಲಿ ನಡೆದ ಹಬ್ಬ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಕುದುರೆಯ ಜೊತೆ ಕಿಚ್ಚು ಹಾಯಿಸಿದ್ದಾರೆ. ಈ ಸಂಬಂಧದ ಫೋಟೋಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Darshan celebrates Sankranti in his farmhouse @smshashiprasad @sharanuhullur1 pic.twitter.com/P1BDvUoLEb — SSSMovieReviews (@sssmoviereviews) January 14, 2021

ಭಾರತದ ಮೊಟ್ಟ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ನಿರ್ಮಾಣಕ್ಕೆ ಅಡಿಗಲ್ಲು

ಕೊಪ್ಪಳ: ಆಟಿಕೆಗಳ ಕ್ಲಸ್ಟರ್‌ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಅರಣ್ಯ ಸಚಿವ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಏಕಸ್ ಕಂಪೆನಿಯ ಚೇರ್ಮನ್ ಅರವಿಂದ ಮೆಳ್ಳಿಗೆರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿ ಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂ ಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ. ಇದಕ್ಕೆ 5 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವನ್ನು ಆಕರ್ಷಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಭಾರತದ ಮೊಟ್ಟ ಮೊದಲ ಆಟಿಕೆ…

ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.

‘ಕಲಿಯುತ್ತಾ ನಲಿಯೋಣ’ ಶಾಲೆಗೇ ಹೋಗಲಾಗದ ಮಕ್ಕಳಿಗೆ ಆಕಾಶವಾಣಿ‌ಯಲ್ಲಿ ವಿನೂತನ ಕಾರ್ಯಕ್ರಮ

ಬೆಂಗಳೂರು: ಶಿಕ್ಷಣ ಇಲಾಖೆಯು ಆಕಾಶವಾಣಿ ಮೂಲಕ ಜನವರಿ 11 ರಿಂದ ‘ಕಲಿಯುತ್ತಾ ನಲಿಯೋಣ’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಶಾಲೆಗೆ ಹೋಗಲಾರದ ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ‘ಕಲಿನಲಿ ಕಾರ್ಯಕ್ರಮಗಳನ್ನು ಜನವರಿ 11ರಿಂದ ಏಪ್ರಿಲ್ 5 ರ ವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15ರವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿಗಳಿಗಾಗಿ ಹಾಡು,  ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ವಿವರಿಸಿದ್ದಾರೆ. ಈ ಕಾರ್ಯಕ್ರಮಗಳ ಮೂಲಕ ನಲಿ-ಕಲಿಯ ಆಶಯಗಳಾದ ಆಲಿಸುವಿಕೆ,…

ಹೆಲ್ಮೆಟ್ ವಿಷಯ.. ರಸ್ತೆಗಳಲ್ಲಿನ್ನು ಕಳ್ಳ-ಪೊಲೀಸ್ ಆಟವಿಲ್ಲ

ಬೆಂಗಳೂರು: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುವವರನ್ನು , ಸೀಟ್ ಬೆಲ್ಟ್ ಹಾಕದೆ ಕಾರು ಚಲಾಯಿಸುತ್ತಿರುವವರನ್ನು ಕಾಡುತ್ತಿರುವ ಪೊಲೀಸರಿಗೆ ಸದ್ಯಕ್ಕೆ ಬ್ರೇಕ್.. ಸಾರ್ವಜನಿಕರಿಗೂ ರಿಲೀಫ್.. ಆದರೆ ಕಾನೂನು ಉಲ್ಲಂಘಿಸಿದಲ್ಲಿ ನಿಲ್ಲದು ಫೈನ್. ಏನಿದು ಅಚ್ಚರಿ ಅಂತೀರಾ? ಈ ವರೆಗೂ ಬೆಂಗಳೂರಿನ ರಸ್ತೆಗಳು ವಾಹನ ಸವಾರರು ಮತ್ತು ಹಾಗೂ ಸಂಚಾರ ಪೊಲೀಸರ ನಡುವೆ ನಿತ್ಯವೂ ಕಳ್ಳ-ಪೊಲೀಸ್ ಆಟದ ರೀತಿ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದ್ದವು. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸವಾರಿ ಕೈಗೊಂಡರೆ ದಂಡ ಕಟ್ಟಿಟ್ಟ ಬುತ್ತಿ. ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದರೂ ಫೈನ್. ಸಿಗ್ನಲ್ ಜಂಪ್ ಮಾಡಿದರಂತೂ ಜೇಬಿಗೆ ಕತ್ತರಿ ಗ್ಯಾರಂಟಿ. ತಿರುವು ರಸ್ತೆಗಳಲ್ಲಿ, ಮರಗಳ ಮರೆಯಲ್ಲಿ ನಿಂತು ಪೊಲೀಸ್ ಸಿಬ್ಬಂದಿ ಈ ನಿಯಮ ಉಲ್ಲಂಘನೆ ಬಗ್ಗೆ ಹದ್ದಿನ ಕಣ್ಣಿಡುತ್ತಿದ್ದರು. ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದ ನೂರಾರು ಮಂದಿಯಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡುತ್ತಿದ್ದರು. ಆದರೆ ಈ…

2020ನೇ ಸಾಲಿನ ಪ್ರಶಸ್ತಿ ಘೋಷಣೆ; ಪುರಸ್ಕೃತರ ವಿವರ ಇಂತಿದೆ

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ ಅವರು ಚಾಮರಾಜನಗರಲ್ಲಿ ಸುದ್ದಿಗೋಷ್ಠಿ ನಡೆಸಿ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಿರುವ ಪಟ್ಟಿ ಪ್ರಕಟಿಸಿದರು. ವಾರ್ಷಿಕ ಗೌರವ ಜಾನಪದ ತಜ್ಞ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಗಾಯತ್ರಿ ನಾವಡ ಅವರು ಡಾ. ಜೀ.ಶಂ. ಪಶಸ್ತಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಬಸವರಾಜ ಸಬರದ ಅವರು ಡಾ. ಗದ್ದಗೀಮಠ ಆಯ್ಕೆಯಾಗಿದ್ದಾರೆ ಎಂದವರು ತಿಳಿಸಿದರು. ಪ್ರಶಸ್ತಿ ಪುರಸ್ಕೃತರ ವಿವರ ಇಂತಿದೆ: ಬೆಂಗಳೂರು ಜಿಲ್ಲೆ ಎಂ.ಕೆ.ಸಿದ್ದರಾಜು-ಜಾನಪದಗಾಯನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊನ್ನಗಂಗಮ್ಮ-…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ; ಶಿಕ್ಷಣ ಕ್ರಾಂತಿಯ ಸಂಕಲ್ಪ

ಮಂಗಳೂರು: ಭಾರತೀಯ ಸಂಸ್ಕೃತಿ, ಪರಂಪರೆಯ ರಾಯಭಾರಿಗಳನ್ನು ರೂಪಿಸುವ ಕಲ್ಲಡ್ಕದ ಈ ಗುರುಕುಲದಲ್ಲಿ ಇದು ಅನನ್ಯ ಕಾರ್ಯಕ್ರಮ. ದೇಶದ ಭವಿಷ್ಯದ ಮೇಧಾವಿಗಳನ್ನು ರೂಪಿಸುವ ದಕ್ಷಿಣಕನ್ನಡ ಜಿಲ್ಲೆ ಕಲ್ಲಡ್ಕ ಶ್ರೀರಾಮ ಶಿಕ್ಷಣ ಸಂಸ್ಥೆಗೆ ಇದೀಗ ಭೀಮಬಲ. ಆರೆಸ್ಸೆಸ್ ಹಿರಿಯ ನಾಯಕ ಡಾ.ಪ್ರಭಾಕರ ಭಟ್ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ವಾರಾಂತ್ಯ ದಿನವಾದ ಶನಿವಾರ ಅನನ್ಯ ಕಾರ್ಯಕ್ರಮ ಗಮನಸೆಳೆಯಿತು. ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸವಲತ್ತು ಕಲ್ಪಿಸುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈಭವ ಮೇಳೈಸಿತು. ವೈಧಿಕ ಸಂಪ್ರದಾಯ ನಿತ್ಯವೂ ಪ್ರತಿಬಿಂಭಿಸುತ್ತಿರುವ ಈ ಶ್ರೀರಾಮ ಹೈಸ್ಕೂಲ್ ಪರಿಪೂರ್ಣ ಡಿಜಿಟಲೀಕರಣಕ್ಕೆ ಮುನ್ನುಡಿ ಬರೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಸಹಿತ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ IFFCO ಮತ್ತು ಸದಾಸ್ಮಿತ ಫೌಂಡೇಶನ್ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿಧ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು. ಸುಮಾರು…

ವೈಕುಂಠ ಏಕಾದಶಿ.. ಎಲ್ಲೆಲ್ಲೂ ಗೋವಿಂದನ ಸ್ಮರಣೆ

ವೈಕುಂಠ ಏಕಾದಶಿ. ಬದುಕಿನ ಸಕಲ ಕಷ್ಟಗಳನ್ನೂ ತೊಲಗಿಸಿ ಬಾಳು ಬಂಗಾರವಾಗಿಸು ಎಂದು ದೇವರಲ್ಲಿ ಪ್ರಾರ್ಥಿಸುವ ಕ್ಷಣ. ವೈಕುಂಠದ ಬಾಗಿಲು ತೆರೆದಿದೆ ಎಂಬ ನಂಬಿಕೆಯೂ ಆಸ್ಥಿಕರದ್ದು. ಹಾಗಾಗಿಯೇ ನಾಡಿನ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಮಹೋತ್ಸವಗಳೇ ನೆರವೇರುತ್ತಿದೆ. ಬೆಂಗಳೂರಿನ ಇಸ್ಕಾನ್ ದೇಗುಲ, ವೈಯ್ಯಾಲಿಕಾಲ್ ಬಳಿಯ ತಿರುಮಲ ದೇವಾಲಯ ಸಹಿತ ಬಹುತೇಕ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಉತ್ಸವಗಳು ಭಕ್ತರ ಗಮನಸೆಳೆದಿದೆ. ವೈಕುಂಠ ಕಥಾಸಾರ ಹೀಗಿದೆ. ಪದ್ಮ ಪುರಾಣದಲ್ಲಿ ಹೇಳಲಾದ ಕಥೆಯಇಲ್ಲಿ ಗಮನಾರ್ಹ. ಮುರನೆಂಬ ರಾಕ್ಷಸನು ದೇವತೆಗಳಿಗೆ ತುಂಬಾ ಉಪಟಳ ಕೋಡುತ್ತಿದ್ದನಂತೆ. ಆಗ ವಿಷ್ಣುನೇ ಆ ರಾಕ್ಷಸನ ಸಂಹಾರಕ್ಕೆ ಮುಂದಾಗುತ್ತಾನಂತೆ.. ವಿಷ್ಣುವಿನ ಅಂಶದಿಂದ ಪ್ರಕಟಗೊಂಡ ‘ಹೈನಮತಿ’ ಎಂಬ ಸ್ತ್ರೀ ದೇವತೆ ಆ ರಾಕ್ಷಸನನ್ನು ಸಂಹರಿಸುತ್ತಾಳೆ. ಆಗ ವಿಷ್ಣುವು ಸಂಪ್ರಿತಗೊಂಡು ಏನಾದರೂ ವರವನ್ನು ಕೇಳು ಎಂದು ಆ ದೇವತೆಗೆ ಹೇಳುತ್ತಾನೆ. ಆಗ ಅವಳು ‘ಯಾರು ಈ ವೈಕುಂಠ ಏಕಾದಶಿ ದಿನದಂದು ವ್ರತವನ್ನು…

ಮೂರು ಕೋತಿ, ನೂರಾರು ಜನ’; ವಿಶಿಷ್ಟ ಜಾಗೃತಿ ಅಭಿಯಾನ

ಬೆಂಗಳೂರು: ಸಿಲಿಕಾನ್ ಸಿಟಿ ಇಡೀ ವಿಶ್ವದ ಗಮನಕೇಂದ್ರೀಕರಿಸಿರುವುದಂತೂ ಸತ್ಯ. ಭಾರತದಲ್ಲಿ ಐಟಿ-ಬಿಟಿ ಕ್ರಾಂತಿಗೆ ಮುನ್ನುಡಿ ಬರೆದಿರುವುದು ಇದೇ ಉದ್ಯಾನ ನಗರಿಯಿಂದ. ಆದರೆ ಪ್ರಸಕ್ತ ಪರಿಸ್ಥಿತಿ ನೋಡಿದರೆ ಅಧ್ವಾನದ ನಗರಿಯಾಗಿ ಪರಿವರ್ತಿತವಾಗಿದೆ. ಇದಕ್ಕೆ ಕಾರಣವೇನು? ಪರಿಸ್ಥಿತಿ ಹೀಗಾಗಲು ಜನಪ್ರತಿನಿಧಿಗಳು ಎಡವಿದ್ದೆಲ್ಲಿ ಎಂಬುದನ್ನು ಸಾರ್ವಜನಿಕರ ಗಮನೆಳೆಯಲು ಮೂರು ಗಾಂಧಿ ಕೋತಿಗಳು ಬೆಂಗಳೂರಿನ ಬೀದಿಗಳಲ್ಲಿ ಆಗಾಗ್ಗೆ ಗಮನಸೆಳೆಯುತ್ತಿವೆ. ಏನಿದು ಗಾಂಧಿ ಕೋತಿ? ರಾಜಧಾನಿ ಬೆಂಗಳೂರು ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಒಂದು. ಆದರೆ ಅಭಿವೃಧ್ದಿ ಕಾಮಗಾರಿಯ ಹೆಸರಲ್ಲಿ ಇಡೀ ವ್ಯವಸ್ಥೆಯು ಜನರ ಸಹನೆಯನ್ನು ಪ್ರಶ್ನಿಸುವಂತಿದೆ. ಜನರ ನಿದ್ದೆಗೆಡಿಸುವ ಈ ಪರಿಸ್ಥಿತಿಯನ್ನು ಅಣಕಿಸುವ ರೀತಿಯಲ್ಲಿತ್ತು ಗಾಂಧಿ ಕೋತಿಗಳ ಪ್ರದರ್ಶನ ವೈಖರಿ. ‘ಕೆಟ್ಟದ್ದನ್ನು ನೋಡಲಾರೆ, ಕೆಟ್ಟದ್ದನ್ನು ಹೇಳಲಾರೆ, ಕೆಟ್ಟದ್ದನ್ನು ಕೇಳಲಾರೆ’ ಎಂದು ಮೂರು ಕೋತಿಗಳ ಫಲಕದೊಂದಿಗೆ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಅಣಕು ಪ್ರದರ್ಶನ ಮೂಲಕ ಸಾರ್ವಜನಿರಲ್ಲಿ ಪರಿಸರ ಹಾಗೂ ವ್ಯವಸ್ಥೆಯ ಬಗ್ಗೆ ಜಾಗೃತಿ ಮೂಡಿಸುವ…