ಮಾವು ಪ್ರಿಯರಿಗೆ ಸಿಹಿ ಸುದ್ದಿ; ಮತ್ತಷ್ಟು ಹಾಪ್’ಕಾಮ್ಸ್ ಮಳಿಗೆ ತೆರೆಯಲು ನಿರ್ಧಾರ

ಮಾವು ಸೀಸನ್ ಸಂದರ್ಭದಲ್ಲೂ ಜನರಿಗೆ ಈ ಹಣ್ಣು ಸಿಗುತ್ತಿಲ್ಲ. ಲಾಕ್’ಡೌನ್ ಕಾರಣಕ್ಕಾಗಿ ಹಣ್ಣು ಸಾಗಿಸಲು ಸಾಧ್ಯವಾಗುತ್ತಿಲ್ಲ. ಇದೀಗ ಈ ಸಮಸ್ಯೆ ಬಗೆಹರಿಸಲು ಸರ್ಕಾರ ಪ್ಲಾನ್ ಮಾಡಿದೆ. ಕೋಲಾರ: ಇದೀಗ ಬೇಸಿಗೆ. ಹೇರಳವಾಗಿ ಮಾವು ಬೆಳೆಯಲಾಗಿದ್ದರೂ ಜನರಿಗೆ ಸಿಗುತ್ತಿಲ್ಲ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮಾವು ಹಾಗೂ ಹಣ್ಣು-ತರಕಾರಿ ಸಾಗಿಸಲು ಅಡ್ಡಿಯಾಗುತ್ತಿವೆರ್. ಇದರಿಂದಾಗಿ ಹಣ್ಣು ಪ್ರಿಯರಿಗೆ ನಿರಾಸೆಯಾಗಿದ್ದರೆ ಬೆಳೆಗಾರವು ನಷ್ಟದಿಂದ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೆಚ್ಚುವರಿ ಹಾಪ್’ಕಾಮ್ಸ್ ಮಳಿಗೆಗಳನ್ನು ತೆರೆಯುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರಾಜ್ಯದ ಇತರೆಡೆಗೆ ಹೋಲಿಸಿದರೆ ಕೋಲಾರದಲ್ಲಿ ಗಣನೀಯ ಪ್ರಮಾಣದಲ್ಲಿ ತರಕಾರಿ, ಮಾವು ಬೆಳೆಯುತ್ತಾರೆ. ಈ ಬಾರಿ ಟೊಮ್ಯಾಟೊ, ಕ್ಯಾಪ್ಸಿಕಂ ಉತ್ತಮ‌ ಇಳುವರಿ ಬಂದಿದೆ. ಆದರೆ ಎಂದಿನಂತೆ ಮಾರುಕಟ್ಟೆ ಇಲ್ಲದಿರುವುದರಿಂದ ತೊಂದರೆಯಾಗಿದೆ. ಆದ್ದರಿಂದ ರಾಜ್ಯದ್ಯಂತ ಈಗ ಇರುವುದಕ್ಕಿಂತಲೂ‌‌ ದುಪ್ಪಟ್ಟು ಸಂಖ್ಯೆಯ ಹಾಪ್ ಕಾಮ್ಸ್ ಮಳಿಗೆ ತೆರೆಯುವ ನಿಟ್ಟಿನಲ್ಲಿ ಸರ್ಕಾರ…

ಪ್ರಜ್ವಲಿಸಿತು ದಿಗ್ವಿಜಯದ ಜ್ಯೋತಿ;  ದೀಪ ಯಜ್ಞ ಕಂಡು ಬಾವುಕರಾದ ಮೋದಿ

ಮತ್ತೆ ಒಗ್ಗಟ್ಟಿನ ಮಂತ್ರ.. ಪುಟ್ಟ ಪುಟ್ಟ ಹಣತೆಗಳಲ್ಲೇ ಭವ್ಯ ಭಾರತ… ಹೌದು.. ಕೊರೋನಾ ಹಾವಳಿಯಿಂದ ತತ್ತರಿಸಿರುವ ಭಾರತದಲ್ಲಿ ಆತಂಕದಲ್ಲಿರುವ ಜನತೆಗೆ ಆತ್ಮವಿಶ್ವಾಸ ತುಂಬಲು ಮೋದಿ ನೀಡಿದ ಟಾಸ್ಕನ್ನು ಇಡೀ ರಾಷ್ಟ್ರವೇ ಗೌರವದಿಂದ ಮಾಡಿ ತೋರಿಸಿದೆ. ದೇಶದ ಬೀದಿ ಬೀದಿಗಳಲ್ಲೂ ಪುಟ್ಟ ಹಣತೆಗಳಲ್ಲೂ ಜಗತ್ತನ್ನೇ ಬೆಳಗಿಸುವ ಜ್ಯೋತಿ ಪ್ರಜ್ವಲಿಸಿತು. ಕಾಯಾ ವಾಚಾ ಮನಸಾ.. ಜನತೆ ಏಕಕಾಲದಲ್ಲಿ  ಅತ್ಯಂತ ಶ್ರದ್ದೆಯಿಂದ ಈ ದೀಪೋತ್ಸವದಲ್ಲಿ ಪಾಲ್ಗೊಂಡು ಅಂಧಶ್ರದ್ದೆಯಲ್ಲಿದ್ದವರಲ್ಲಿ ಜ್ಞಾನ ತುಂಬುವ ಪ್ರಯತ್ನಕ್ಕೆ ಮುನ್ನುಡಿ ಬರೆದರು. ಅಂದು ಚಪ್ಪಾಳೆ, ಇಂದು ದೀಪ ಯಜ್ಞ ಕೊರೋನಾ ವೈರಾಣು ಭಾರತದಲ್ಲಿ ಹರಿದಾಡಲಾರಂಭಿಸಿದಾಗಲೇ ಪ್ರಧಾನಿ ಮೋದಿಯವರು ಜನತಾ ಕರ್ಫ್ಯೂ’ಗೆ ಕರೆ ನೀಡಿ ಚಪ್ಪಾಳೆ ಮೂಲಕ ಮಾರಕ ರೋಗದ ವಿರುದ್ಧ ಸೆಣಸಾಡುತ್ತಿರುವ ವೈದ್ಯರು ಹಾಗೂ ಸೇನಾನಿಗಳಿಗೆ ಧನ್ಯವಾದ ಹೇಳಲು ಮನವಿ ಮಾಡಿದ್ದರು. ಇದನ್ನು ಭಕ್ತಿಯ ಸಂಕೇತವಾಗಿ ಇಡೀ ದೇಶವೇ ಪಾಲಿಸಿತ್ತು. ಅನಂತರದ ಲಾಕ್ ಡೌನ್ ಆದೇಶವನ್ನೂ ಇಡೀ ದೇಶದ…

ಕೊರೋನಾ ವಿಚಾರ: ಚಪ್ಪಾಳೆ ನಂತರ ಇದೀಗ ‘ನವದೀಪ’ ಅಭಿಯಾನಕ್ಕೆ ಕರೆ

ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಜನರು ದೇವಾಲಯ, ಮಂದಿರಗಳಿಗೆ ಹೋಗುವಂತಿಲ್ಲ. ಇದೇ ಸಂದರ್ಭದಲ್ಲಿ ಹಿಂದೂ ಸಂಘಟನೆಗಳು ಹೊಸ ಅಭಿಯಾನಕ್ಕೆ ಮುನ್ನುಡಿ ಬರೆದಿವೆ. ಕೆಲ ದಿನಗಳ ಹಿಂದೆ ಕೊರೋನಾ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದರು. ಅಂದು ದಿನವಿಡೀ ಮನೆಯಲ್ಲೇ ಇದ್ದು, ಸಂಜೆ ಚಪ್ಪಾಳೆ ತಟ್ಟಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಸೇನಾನಿಗಳಿಗೆ ಧನ್ಯವಾದ ಹೇಳುವಂತೆ ಕರೆ ನೀಡಿದ್ದರು. ಅಂದು ದೇಶವ್ಯಾಪಿ ಚಪ್ಪಾಳೆಯ ಸದ್ದಷ್ಟೇ ಅಲ್ಲ, ಹಲವರು ಶಂಖನಾದ, ಘಂಟೆ-ಜಾಗಟೆಗಳನ್ನು ಭಾರಿಸಿ ಹೊಸದೊಂದು ತರಂಗ ಸೃಷ್ಟಿಸಿದ್ದರು. ಇದೀಗ ರಾಮನವಮಿ ಸರದಿ. ಈ ಬಾರಿಯ ರಾಮನವಮಿಯನ್ನು ಕೊರೋನಾ ಸಂಹಾರಕ್ಕೆ ಮೀಸಲಿಡಲು ಆಸ್ತಿಕ ಸಮುದಾಯ ಸಲಹೆ ಮಾಡಿದೆ. ಹಾಗಾಗಿ ಹಿಂದೂ ಸಂಘಟನೆಗಳು ರಾಮ ನವಮಿಯ ದಿನವಾದ ಗುರುವಾರ ಸಂಜೆ ‘ನವದೀಪ’ ಕೈಂಕರ್ಯ ನೆರವೇರಿಸುವಂತೆ ಕರೆ ನೀಡಿವೆ. ಶ್ರೀ ರಾಮ ಜಯಂತಿ…

ಕೊರೋನಾ ಓಡಿಸಲು ಅಂದು ‘ಚಪ್ಪಾಳೆ’, ಇದೀಗ ‘ನವದೀಪ’.. ಏನಿದು ವಿಶೇಷ ಗೊತ್ತಾ?

ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಜನರು ದೇವಾಲಯ, ಮಂದಿರಗಳಿಗೆ ಹೋಗುವಂತಿಲ್ಲ. ಇದೇ ಸಂದರ್ಭದಲ್ಲಿ ಹಿಂದೂ ಸಂಘಟನೆಗಳು ಹೊಸ ಅಭಿಯಾನಕ್ಕೆ ಮುನ್ನುಡಿ ಬರೆದಿವೆ. ಕೆಲ ದಿನಗಳ ಹಿಂದೆ ಕೊರೋನಾ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದರು. ಅಂದು ದಿನವಿಡೀ ಮನೆಯಲ್ಲೇ ಇದ್ದು, ಸಂಜೆ ಚಪ್ಪಾಳೆ ತಟ್ಟಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಸೇನಾನಿಗಳಿಗೆ ಧನ್ಯವಾದ ಹೇಳುವಂತೆ ಕರೆ ನೀಡಿದ್ದರು. ಅಂದು ದೇಶವ್ಯಾಪಿ ಚಪ್ಪಾಳೆಯ ಸದ್ದಷ್ಟೇ ಅಲ್ಲ, ಹಲವರು ಶಂಖನಾದ, ಘಂಟೆ-ಜಾಗಟೆಗಳನ್ನು ಭಾರಿಸಿ ಹೊಸದೊಂದು ತರಂಗ ಸೃಷ್ಟಿಸಿದ್ದರು. ಇದೀಗ ರಾಮನವಮಿ ಸರದಿ. ಈ ಬಾರಿಯ ರಾಮನವಮಿಯನ್ನು ಕೊರೋನಾ ಸಂಹಾರಕ್ಕೆ ಮೀಸಲಿಡಲು ಆಸ್ತಿಕ ಸಮುದಾಯ ಸಲಹೆ ಮಾಡಿದೆ. ಹಾಗಾಗಿ ಹಿಂದೂ ಸಂಘಟನೆಗಳು ರಾಮ ನವಮಿಯ ದಿನವಾದ ಗುರುವಾರ ಸಂಜೆ ‘ನವದೀಪ’ ಕೈಂಕರ್ಯ ನೆರವೇರಿಸುವಂತೆ ಕರೆ ನೀಡಿವೆ. ಇದನ್ನೂ ಓದಿ.. ಕೊರೋನಾ…

ಹೊಸ ನಿರೀಕ್ಷೆಯ ನಿರೀಕ್ಷೆಯ ‘ಚೌಕಿ’

ಕನ್ನಡ ಸಿನಿಮಾ ರಂಗದಲ್ಲಿ ‘ಚೌಕಿ’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ವರ್ಷಗಳ ಹಿಂದಿನ ರಂಗಿತರಂಗದ ಯಶಸ್ಸಿನ ಹಾದಿಯಲ್ಲಿ ಈ ಸಿನಿಮಾ ಕೂಡಾ ಸಾಗಲಿದೆ ಎಂಬ ವಿಶ್ವಾಸ ಚಿತ್ರತಂಡದ್ದು. ಅಮಿಶ್ ಕುಮಾರ್, ವಚನಾ ಶೆಟ್ಟಿ ಮತ್ತಿತರರು ನಟಿಸಿದ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಡ್ಡು ಮಾಡುತ್ತಿದೆ. ಶಕೀಲ್ ಅಹಮದ್ ನಿರ್ಮಾಣದ ‘ಚೌಕಿ’ ಚಿತ್ರವನ್ನು ಸಿಎಸ್ ಜಯಪ್ರಕಾಶ್ ನಿರ್ದೇಶಿಸಿದ್ದಾರೆ.

ಬರಲಿದೆ ಹೊಸ 100 ರೂ ನೋಟು.. ವಿಶೇಷತೆ ಏನು ಗೊತ್ತಾ?

ದೆಹಲಿ: ಎಲ್ಲೆಲ್ಲೂ 2000 ರೂಪಾಯಿ ನೋಟ್ ಬ್ಯಾನ್ ವದಂತಿ ಹಬ್ಬಿದೆ. ಆದರೆ ಇಂತಹಾ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸರ್ಕಾರ ಕೂಡಾ ಹೇಳಿದೆ. ಆದರೆ ಶೀಘ್ರವೇ 100 ರೂಪಾಯಿಯ ಹೊಸ ನೋಟು ಚಾಲ್ತಿಗೆ ಬರಲಿದೆ. ಹಲವು ವೈಶಿಷ್ಟ್ಯಗಳ ಹೊಸ ನೋಟು ಇದೀಗ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. 100 ರೂಪಾಯಿ ಮುಖಬೆಲೆಯ ಈ ಹೊಸ ನೋಟಿನ ವಿಶೇಷತೆ ಎಂದರೆ ಇದು ಸುಲಭದಲ್ಲಿ ಹರಿದುಹೋಗಲ್ಲ. ವಾರ್ನಿಸ್‌ ಪೇಂಟ್‌ ಬಳಸಿ ಮುದ್ರಿಸಲಾಗಿರುವ ಈ ಹೊಸ ನೋಟನ್ನು ನೀರಿನಲ್ಲಿ ನೆನೆದರೂ ಯಾವುದೇ ಸಮಸ್ಯೆಯಾಗುವುದಿಲ್ಲ. ಸದ್ಯ ಚಾಲ್ತಿಯಲ್ಲಿರುವ ನೋಟುಗಳಿಗಿಂತ ದುಪ್ಪಟ್ಟು ಬಾಳಿಕೆ ಬರಲಿವೆ. ಈಗಿರುವ 100 ರೂಪಾಯಿ ನೋಟನ್ನು ಹೋಲುವ ಹೊಸ 100 ರೂಪಾಯಿ ನೋಟು ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ದೇಗುಲಗಳ ಮೂಲಕ ಗೋವುಗಳ ಪಾಲನೆ, ಆರಾಧನೆ; ಸಚಿವ ಪೂಜಾರಿ ಕೈಂಕರ್ಯಕ್ಕೆ ಪ್ರಶಂಶೆ

              (ಜಯ ಪ್ರಕಾಶ್) ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಪೂಜೆ ಪುನಸ್ಕಾರ, ವೈದಿಕ ವಿಧಿ ವಿಧಾನಗಳಿಗಷ್ಟೇ ದೇವಾಲಯಗಳು ಸೀಮಿತವಾಗಿಲ್ಲ. ಹಿಂದೂ ಸಂಸ್ಕೃತಿ-ಪರಂಪರೆ ಉಳಿಸುವಲ್ಲೂ ಪ್ರಮುಖ ಪಾತ್ರ ವಹಿಸಲು ಈ ಧಾರ್ಮಿಕ ಕೇಂದ್ರ ಸಜ್ಜಾಗುತ್ತಿವೆ. ಸಾಮಾನ್ಯವಾಗಿ ದೇವಾಲಯ ಬೆರಳೆಣಿಕೆಯ ದೇವರ ಮೂರ್ತಿ ಪೂಜೆಗೆ ಸೀಮಿತವಾಗುವುದುಂಟು. ಇದೀಗ ಆ ದೇವಾಲಯಗಳು ಮುಕ್ಕೋಟಿ ದೇವರನ್ನು ಹೊತ್ತುಕೊಂಡಿರುವ ಗೋವುಗಳ ಆರಾಧನೆಯ ತಾಣವಾಗಲಿದೆ. ಇದಕ್ಕೆಂದು ವೇದಿಕೆ ಕಲ್ಪಿಸಿದ್ದಾರೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ. ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕ್ರಮ ಆರಂಭಿಸಿದ್ದಾರೆ. ಪ್ರಕೃತಿಯನ್ನು ಆರಾಧಿಸುವುದು ಹಿಂದೂ ಸಂಸ್ಕೃತಿಯ ಒಂದು ಭಾಗ. ಅದರಲ್ಲೂ ಹಾಲು ನೀಡುವ ಹಸುಗಳು ಹಿಂದೂಗಳ ಪಾಲಿಗೆ ಜೀವಂತ ದೈವ. ಆದರೆ ಇದೇ ಗೋವುಗಳು ಕಟುಕರ…

ಆರೋಗ್ಯ ಕಾಪಾಡಲು ಮತ್ಸ್ಯಾಹಾರ

ಸಮುದ್ರ ಆಹಾರದಲ್ಲಿ ಅಧಿಕ ಪೋಷಕಾಂಶಗಳಿರುತ್ತದೆ. ಇದರಲ್ಲಿ ಕಬ್ಬಿಣದಂಶ ಹಾಗೂ ಸತುವಿನ ಅಂಶ ಹೆಚ್ಚಾಗಿರುತ್ತದೆ. ಅಷ್ಟೇ ಅಲ್ಲದೆ ದೇಹಕ್ಕೆ ಅವಶ್ಯಕವಿರುವ ಒಮೆಗಾ-3 ಕೊಬ್ಬಿನಂಶವರುತ್ತದೆ. ನಿತ್ಯ ಜೀವನದ ಆನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದ್ರಾಹಾರಗಳು ರಾಮಬಾಣದಂತೆ. ಆರೋಗ್ಯವಂತ ಹೃದಯ ಮೀನು ಸೇವನೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ ಸಮುದ್ರಾಹಾರಗಳಲ್ಲಿ ಕೊಬ್ಬಿನಾಸಂ ಕಡಿಮೆ ಇದ್ದು, ಓಮೆಗಾ-3 ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಅಲ್ಲದೆ ಹೃದಯವನ್ನು ಆರೋಗ್ಯವನ್ನಾಗಿಸುತ್ತದೆ. ವಾರಕ್ಕೆ ಒಂದು ಬಾರಿಯಾದರೂ ಮೀನು ಸೇವನೆ ಉತ್ತಮ ರಕ್ತನಾಳಗಳ ಶುದ್ದೀಕರಣ ರಕ್ತನಾಳಗಳ ಶುದ್ಧಿಕಾರ್ಯದಲ್ಲೂ ಮೀನಿನ ಮಾಂಸ ಸೇವನೆ ಪ್ರಮುಖ ಪಾತ್ರವಹಿಸುತ್ತದೆ. ಖಿಊಖಔಒಃಔSIS ಖISಏ ಕೂಡ ಕಡಿಮೆಯಾಗುತ್ತದೆ. ಸಮುದ್ರಾಹಾರದಲ್ಲಿರುವುದು ಇಪಿಎ ಮತ್ತು ಡಿಹೆಚ್ ಎ, ಒಮೆಗಾ-3 ಕೊಬ್ಬಿನಾಂಶವು, ದೇಹದಲ್ಲಿ ಉತ್ಪತ್ತಿಯಾಗುವ ಇIಅಔSಂಓಔIಆS, ಅಂದರೆ ರಕ್ತನಾಳಗಳಲ್ಲಿ ರಕ್ತೆ ಹೆಪ್ಪುಗಟ್ಟಲು ಕಾರಣವಾಗುವ ಒಂದು ರೀತಿಯ ಹಾರ್ಮೋನುಗಳನ್ನು ನಿಯಂತ್ರಿಸುತ್ತದೆ. ಸಂದಿನೋವುಗಳ ಸಮಸ್ಯೆ ಇತ್ತೀಚಿನ…

ಮಹಾಶಿವರಾತ್ರಿ ವೈಭವ; ಎಲ್ಲೆಲ್ಲೂ ವೃತ ಜಾಗರಣೆಯ ಕೈಂಕರ್ಯ

ಮಂಗಳೂರು: ನಾಡಿನೆಲ್ಲೆಡೆ ಶಿವರಾತ್ರಿ ಸಂಭ್ರಮ ಗರಿಗೆದರಿದೆ. ಆಸ್ತಿಕ ಬಂಧುಗಳು ಪರಮೇಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಕಂಡುಬಂತು. ಮಹಾ ಶಿವರಾತ್ರಿಯ ಹಿನ್ನೆಲೆಯಲ್ಲಿ ಭಕ್ತರು ವ್ರತಾಚರಣೆ, ಜಾಗರಣೆಯ ಜತೆಗೆ ಶಿವ ದೇವಾಲಯಗಳಲ್ಲಿನ ಉತ್ಸವಗಳಲ್ಲಿ ಪಾಲ್ಗೊಂಡರು. ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಮಂಜುನಾಥನಿಗೆ ಶಿವರಾತ್ರಿ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಸಾಗರವು ಈ ವಿಶೇಷ ಕೈಂಕರ್ಯವನ್ನು ಸಾಕ್ಷೀಕರಿಸಿತು. ಮಂಗಳೂರಿನ ಪುರಾಣ ಪ್ರಸಿದ್ಧ ಕದ್ರಿ ಮಂಜುನಾಥನ ದೇಗುಲ, ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿ, ಕರಾವಳಿ ದಸರಾದ ಕೇಂದ್ರಸ್ಥಾನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಗಳಲ್ಲೂ ವಿಶೇಷ ಪೂಜೆ, ಉತ್ಸವಗಳು ಗಮನ ಸೆಳೆದವು. ಉತ್ತರಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಪ್ರವಾಸಿಗರ ದಂಡೇ ಜಮಾಯಿಸಿತ್ತು. ಮುರುಡೇಶ್ವರದಲ್ಲೂ ಶಿವನಿಗಾಗಿ ವಿಶೇಷ ಉತ್ಸವ ನೆರವೇರಿತು. ಕಡಲ ಮಧ್ಯದ ಈ ದೇಗುಲ ಶಿವರಾತ್ರಿ ವೈಭವದಿಂದಾಗಿ ಭಕ್ತಸಮೂಹದ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಶಿವರಾತ್ರಿಯ ಉಪವಾಸ ವ್ರತಾಚರಣೆ ಪಾಲನೆ ಮಾಡಿದ ಭಕ್ತರು ಬೆಳಗ್ಗಿನಿಂದಲೇ ದೇವಾಲಯಗಳಿಗೆ ತೆರಳಿ ಭಕ್ತಿ…

ಏಕಾಏಕಿ ಕಿಸ್ಸಿಂಗ್ ನಿರ್ಬಂಧ ; ಮಮಕಾರಕ್ಕೆ ಅಂಕುಶ

ಬೀಜಿಂಗ್: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್‍ಗೆ ಈ ವರೆಗೂ ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆನ್ನಲಾಗಿದೆ. 30 ಸಾವಿರಕ್ಕೂ ಹೆಚ್ಚು ಮಂದಿಗೆ ಈ ಸೋಂಕು ತಗುಲಿದ್ದು ಮಾರುಕಟ್ಟೆ ವ್ಯವಸ್ಥೆ ಕೂಡಾ ಏರುಪೇರಾಗಿದೆ. ಚೀನಾದ ವುಹಾನ್‍ನಿಂದ ವ್ಯಾಪಿಸಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ವ್ಯಾಪಿಸುತ್ತಿದೆ. ಚೀನಾದಲ್ಲಿ ಕರೋನ ವೈರಸ್ ಮರಣ ಮೃದಂಗ ಬಾರಿಸುತ್ತಲೇ ಇದ್ದು ಜನರನ್ನು ಮನೆಯಿಂದ ಹೊರಬಾರದಂತೆ ದಿಗ್ಬಂಧನ ವಿಧಿಸಿದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕೊರೊನಾ ವೈರಸ್ ಕಿಸ್ ಪ್ರಕ್ರಿಯೆಗೂ ಲಗಾಮು ಹಾಕಿದೆ.  ವೈರಸ್ ಭೀತಿ ಹಿನ್ನೆಲೆಯಲ್ಲಿ ಯಾರೂ ಕೂಡಾ ಕಿಸ್ ಕೊಟ್ಟು ಪರಸ್ಪರ ಮುದ್ದಿಸೋಲ್ಲ. ಮಮತೆಗೂ ಈ ವೈರಸ್ ಅಂಕುಶ ಹಾಕಿದೆ. ಅಷ್ಟೇ ಅಲ್ಲ ಇದು ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿಗಳ ಪಾಲಿಗೂ ಸಂದಿಗ್ಧತೆ ಎದುರಾಗುವಂತೆ ಮಾಡಿದೆ. ತೈವಾನ್ ಹಾಗೂ ಚೀನಾದ ಬಹುತೇಕ ಕಡೆ ಸಿನಿಮಾ, ಸೀರಿಯಲ್ ಚಿತ್ರೀಕರಣವನ್ನು ಸ್ಥಗಿತಗೊಳಿಸಿದೆ. ಇದೆ ವೇಳೆ ತೈವಾನ್‍ನಲ್ಲಿ ಸರ್ಕಾರ…