“ನಾನು ಸಂಘ, ನನಗೆ ಈ ಸ್ಥಾನ, ಚೈತನ್ಯ ಕೊಟ್ಟಿದ್ದೂ ಸಂಘ”: RSSಗೆ ಕೃತಜ್ಞತೆ ಸಲ್ಲಿಸಿದ ಮೋದಿ

ನವದೆಹಲಿ: ತನ್ನನ್ನು ಈ ಮಟ್ಟಕ್ಕೆ ಬೆಳೆಸಿರುವುದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಜೀವನದಲ್ಲಿದೇಶಭಕ್ತಿ ಬೆಳೆಸುವಂತಾಗಿ, ತಮ್ಮನ್ನು ಪೋಷಿಸಿದ್ದಕ್ಕಾಗಿ ಸಂಘಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ AI ಸಂಶೋಧಕ ಮತ್ತು ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಸಾಂಘಿಕ ಬದುಕಿನ ಬಗ್ಗೆ ಬೆಳಕುಚೆಲ್ಲಿದರು. ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ RSS ತಮ್ಮನ್ನು ಒಬ್ಬ ವ್ಯಕ್ತಿಯಾಗಿ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದರು. “RSS ಮೂಲಕ, ನಾನು ಉದ್ದೇಶಿತ ಜೀವನವನ್ನು ಕಂಡುಕೊಂಡೆ. ನಂತರ ಸಂತರ ನಡುವೆ ಸಮಯ ಕಳೆಯುವ ಅದೃಷ್ಟ ಸಿಕ್ಕಿತು, ಅದು ನನಗೆ ಬಲವಾದ ಆಧ್ಯಾತ್ಮಿಕ ಅಡಿಪಾಯವನ್ನು ನೀಡಿತು. ನಾನು ಶಿಸ್ತು ಮತ್ತು ಉದ್ದೇಶಿತ ಜೀವನವನ್ನು ಕಂಡುಕೊಂಡೆ” ಎಂದು ಮೋದಿ ಸಂಘದ ಜೊತೆ ಸಾಗಿಬಂದ ಅರ್ಥಪೂರ್ಣ ಬದುಕಿನ ಬಗ್ಗೆ ಬೆಳಕುಚೆಲ್ಲಿದರು. ಕಳೆದ 100 ವರ್ಷಗಳಲ್ಲಿ RSS…

ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

ನವದೆಹಲಿ: ಪಾಶ್ಚಿಮಾತ್ಯ ಆಹಾರ ಪದ್ಧತಿಯಲ್ಲಿ ಉಪ್ಪು, ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿದ್ದು, ಶ್ವಾಸಕೋಶದಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧ್ಯಯನವೊಂದು ಬಯಲುಮಾಡಿದೆ. ಈ ಸಂಶೋಧನೆಯು ಕಳಪೆ ಆಹಾರ ಪದ್ಧತಿ ಮತ್ತು ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯಂತಹ ಅಂಗಗಳ ಕ್ಯಾನ್ಸರ್ ನಡುವಿನ ಸಂಬಂಧವನ್ನು ತೋರಿಸಿದೆ. ಹೀಗಾಗಿ ಆಹಾರದ ದೀರ್ಘಕಾಲೀನ ಪರಿಣಾಮದತ್ತ ಅಧ್ಯಯನವು ಬೆಳಕುಚೆಲ್ಲಿದೆ. ‘ಶ್ವಾಸಕೋಶದ ಕ್ಯಾನ್ಸರ್ ಅನ್ನು ಸಾಂಪ್ರದಾಯಿಕವಾಗಿ ಆಹಾರ-ಸಂಬಂಧಿತ ಕಾಯಿಲೆ ಎಂದು ಭಾವಿಸಲಾಗಿಲ್ಲ’ ಎಂದು ಫ್ಲೋರಿಡಾ ವಿಶ್ವವಿದ್ಯಾಲಯದ ಸುಧಾರಿತ ಪ್ರಾದೇಶಿಕ ಜೈವಿಕ ಅಣು ಸಂಶೋಧನಾ ಕೇಂದ್ರದ ಅಸೋಸಿಯೇಟ್ ಪ್ರಾಧ್ಯಾಪಕ ಮತ್ತು ನಿರ್ದೇಶಕ ರಾಮನ್ ಸನ್ ಹೇಳಿದ್ದಾರೆ. . ‘ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಥವಾ ಯಕೃತ್ತಿನ ಕ್ಯಾನ್ಸರ್‌ನಂತಹ ರೋಗಗಳು, ಹೌದು. ಆದಾಗ್ಯೂ, ಶ್ವಾಸಕೋಶದ ಕ್ಯಾನ್ಸರ್‌ಗೆ ಬಂದಾಗ, ಆಹಾರವು ಒಂದು ಪಾತ್ರವನ್ನು ವಹಿಸುತ್ತದೆ ಎಂಬ ಕಲ್ಪನೆಯನ್ನು ವಿರಳವಾಗಿ ಚರ್ಚಿಸಲಾಗುತ್ತದೆ’ ಎಂಬುದು ಸನ್ ಅವರ ಅಭಿಪ್ರಾಯವಾಗಿದೆ. ನೇಚರ್ ಮೆಟಾಬಾಲಿಸಮ್…

ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ ‘ಶತ ಚಂಡಿಕಾಯಾಗ’ ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ ‘ಚೆಂಡಿನ ಉತ್ಸವ’ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ. ಪೊಳಲಿ ಸನ್ನಿಧಾನದಲ್ಲಿ ಮಾರ್ಚ್ 12ರಂದು ಬಿಡುಗಡೆಯಾಗಿರುವ ‘ಪುರಲ್ದ ಸಿರಿಯೇ..’ ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ. ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ ‘ಪುರಾಲ್’ ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು ‘ಪುರಲ್ದ ಉಳ್ಳಾಲ್ತಿ’ ಎಂದೇ ಆಸ್ತಿಕರು ಕರೆಯುತ್ತಾರೆ. ದುಃಖ ದುಮ್ಮಾನಗಳಿಗೆ ಸಾಂತ್ವಾನ…

ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ

ಭಾರತೀಯ ಅಥ್ಲೀಟ್ ವಿಸ್ಪಿ ಖರಡಿ ಅವರು ವಿಶ್ವದ ಅತೀ ದೊಡ್ಡ ‘ಹರ್ಕ್ಯುಲಸ್ ಪಿಲ್ಲರ್ ಹೋಲ್ಡ್’ ಅನ್ನು ಅತೀ ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. Longest duration holding Hercules pillars (male) 💪⏱️ 2 mins 10.75 seconds by @VispyKharadi 🇮🇳 pic.twitter.com/JxFFSU4xGv — Guinness World Records (@GWR) March 13, 2025    ಗುಜರಾತ್‌ನ ಸೂರತ್‌ನಲ್ಲಿ ಹೊಸ ದಾಖಲೆಯ ಸನ್ನಿವೇಶ ನಡೆದಿದೆ. ಖರಡಿ ಅವರು 2 ನಿಮಿಷ 10.75 ಸೆಕೆಂಡುಗಳ ಕಾಲ ಬೃಹತ್ ಕಂಬಗಳನ್ನು ಹಿಡಿದಿಟ್ಟುಕೊಳ್ಳುವ ಮೂಲಕ ತಮ್ಮ ಅಸಾಧಾರಣ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಗ್ರೀಕ್ ವಾಸ್ತುಶಿಲ್ಪದಿಂದ ಪ್ರೇರಿತವಾದ ಈ ಕಂಬಗಳು 123 ಇಂಚು ಎತ್ತರ ಮತ್ತು 20.5 ಇಂಚು ವ್ಯಾಸವನ್ನು ಹೊಂದಿವೆ. ಇದು ಸುಮಾರು166.7 – 168.9 ಕೆಜಿ ತೂಕವಿದ್ದು, ಅವು ಮಾನವ ಸಹಿಷ್ಣುತೆ…

ಮಕ್ಕಳಲ್ಲಿ ಕ್ಯಾನ್ಸರ್‌ ಆತಂಕಕಾರಿ: ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ

ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ…

KSRTC ಬಳಗದಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’: ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು. ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ…

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ ‘ಮಹಾಮಾಯ ರಥೋತ್ಸವ’ವು ಮಹಾ ವೈಭವವಾಗಿ ಗಮನಸೆಳೆಯಿತು. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ , ಕನಕಾಭಿಷೇಕ ಗಳು ನಡೆದವು. ಯಜ್ಞ ಮಂಟಪದಲ್ಲಿ ನಡೆದ ಮಹಾ ಪೂರ್ಣಾಹುತಿ ಸಂದರ್ಭದಲ್ಲಿ ಧರ್ಮಿಕ ಪ್ರಮುಖರು ಯತಿಗಳು ಭಾಗಿಯಾದರು. ಸಂಜೆ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣವು ಅನನ್ಯ ಮಹೋತ್ಸವವಾಗಿ ಆಸ್ತಿಕರ ಗಮನಕೇಂದ್ರೀಕರಿಸಿತು. ಭಕ್ತರು ರಥ ಎಳೆದು ಪುನೀತರಾದರು. ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ.ಶ್ರೀನಿವಾಸ್ ಕಾಮತ್, ಮಾರೂರ್ ಸುಧೀರ್ ಪೈ, ಪ್ರಕಾಶ್ ಕಾಮತ್, ಅನಂತ್ ಭಟ್, ಗಣೇಶ್ ಭಟ್, ದಕ್ಷಿಣ ಕನ್ನಡ…

ಹುಲಿ ಹಾಗೂ ಸಿಂಹದ ಮರಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025 ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ. ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ…

ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

ನವದೆಹಲಿ: ಟೈಪ್ 2 ಮಧುಮೇಹ ಮತ್ತು ಬೊಜ್ಜಿನ ಮೂಲದ ಬಗ್ಗೆ ಹಾಗೂ ನಿರ್ಣಾಯಕ ನಿಯಂತ್ರಣ ಕೇಂದ್ರವಾಗಿ ಮೆದುಳಿನ ಕಾರ್ಯದ ಬಗ್ಗೆ ಹೊಸ ಅಧ್ಯಯನವು ಕುತೂಹಲಕಾರಿ ಹೊಸ ಒಳನೋಟಗಳನ್ನು ನೀಡಿದೆ. ಬೊಜ್ಜಿನ ಬೆಳವಣಿಗೆಯಲ್ಲಿ ಇನ್ಸುಲಿನ್ ಎಂಬ ಹಾರ್ಮೋನ್ ಪ್ರಮುಖ ಪಾತ್ರ ವಹಿಸುತ್ತದೆ. ಇತ್ತೀಚಿನವರೆಗೂ, ಇನ್ಸುಲಿನ್ ನರಶೂಲೆ ಮತ್ತು ಚಯಾಪಚಯ ಅಸ್ವಸ್ಥತೆಗಳಿಗೆ ಕಾರಣವಾಗುತ್ತದೆ ಎಂದು ಸೂಚಿಸುವ ಹಲವಾರು ಚಿಹ್ನೆಗಳು ವಿಶೇಷವಾಗಿ ಮೆದುಳಿನಲ್ಲಿ ಕಂಡುಬಂದಿವೆ, ಯೂನಿವರ್ಸಿಟಿ ಹಾಸ್ಪಿಟಲ್ ಆಫ್ ಟ್ಯೂಬಿಂಗೆನ್, ಜರ್ಮನ್ ಸೆಂಟರ್ ಫಾರ್ ಡಯಾಬಿಟಿಸ್ ರಿಸರ್ಚ್ (DZD) ಮತ್ತು ಹೆಲ್ಮ್‌ಹೋಲ್ಟ್ಜ್ ಮ್ಯೂನಿಚ್‌ನ ಇತ್ತೀಚಿನ ಅಧ್ಯಯನವು ಈ ಹೊಸ ಒಳನೋಟಗಳನ್ನು ನೀಡಿದೆ. ಅನಾರೋಗ್ಯಕರ ದೇಹದ ಕೊಬ್ಬಿನ ವಿತರಣೆ ಮತ್ತು ದೀರ್ಘಕಾಲದ ತೂಕ ಹೆಚ್ಚಳವು ಇನ್ಸುಲಿನ್‌ಗೆ ಮೆದುಳಿನ ಸೂಕ್ಷ್ಮತೆಗೆ ಸಂಬಂಧಿಸಿದೆ. ಮೆದುಳಿನಲ್ಲಿ ಇನ್ಸುಲಿನ್ ಯಾವ ನಿರ್ದಿಷ್ಟ ಕಾರ್ಯಗಳನ್ನು ನಿರ್ವಹಿಸುತ್ತದೆ ಮತ್ತು ಅದು ಸಾಮಾನ್ಯ ತೂಕದ ವ್ಯಕ್ತಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ…

“ವಾಯು ಮಾಲಿನ್ಯವು ಆಲ್ಝೈಮರ್‌ನಲ್ಲಿ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು”

ನವದೆಹಲಿ: ವಾಯು ಮಾಲಿನ್ಯದಲ್ಲಿ ಕಂಡುಬರುವ ವಿಷಕಾರಿ ವಸ್ತುಗಳು ಮತ್ತು ಕಾಡ್ಗಿಚ್ಚಿನ ಹೊಗೆಯು ಮೆದುಳಿನಲ್ಲಿ ರಾಸಾಯನಿಕ ಬದಲಾವಣೆಯನ್ನು ಉಂಟುಮಾಡಬಹುದು. ಇದು ಆಲ್ಝೈಮರ್ ಕಾಯಿಲೆಯಲ್ಲಿ ಕಂಡುಬರುವಂತೆ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಯುಎಸ್‌ನ ಸ್ಕ್ರಿಪ್ಸ್ ರಿಸರ್ಚ್‌ನ ವಿಜ್ಞಾನಿಗಳು ಎಸ್-ನೈಟ್ರೋಸೈಲೇಷನ್ ಎಂದು ಕರೆಯಲ್ಪಡುವ ರಾಸಾಯನಿಕ ಬದಲಾವಣೆಯನ್ನು ಕಂಡುಹಿಡಿದರು. ಇದು ಮೆದುಳಿನ ಕೋಶಗಳು ಹೊಸ ಸಂಪರ್ಕಗಳನ್ನು ಮಾಡುವುದನ್ನು ತಡೆಯುತ್ತದೆ ಮತ್ತು ಅಂತಿಮವಾಗಿ ಜೀವಕೋಶದ ಸಾವಿಗೆ ಕಾರಣವಾಗುತ್ತದೆ. ಎಸ್-ನೈಟ್ರೋಸೈಲೇಷನ್ ಅನ್ನು ನಿರ್ಬಂಧಿಸುವುದರಿಂದ ಆಲ್ಝೈಮರ್‌ನ ಮೌಸ್ ಮಾದರಿಗಳು ಮತ್ತು ಮಾನವ ಕಾಂಡಕೋಶಗಳಿಂದ ಉತ್ಪತ್ತಿಯಾಗುವ ನರ ಕೋಶಗಳಲ್ಲಿ ಸ್ಮರಣಶಕ್ತಿ ನಷ್ಟದ ಚಿಹ್ನೆಗಳು ಭಾಗಶಃ ಹಿಮ್ಮೆಟ್ಟುತ್ತವೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ. “ಮಾಲಿನ್ಯಕಾರಕಗಳು ಸ್ಮರಣಶಕ್ತಿ ನಷ್ಟ ಮತ್ತು ನರಕ್ಷೀಣ ಕಾಯಿಲೆಗೆ ಹೇಗೆ ಕೊಡುಗೆ ನೀಡಬಹುದು ಎಂಬುದರ ಆಣ್ವಿಕ ವಿವರಗಳನ್ನು ನಾವು ಬಹಿರಂಗಪಡಿಸಿದ್ದೇವೆ” ಎಂದು ಸ್ಕ್ರಿಪ್ಸ್ ರಿಸರ್ಚ್‌ನ ಪ್ರಾಧ್ಯಾಪಕ ಸ್ಟುವರ್ಟ್ ಲಿಪ್ಟನ್ ವಿವರಿಸಿದ್ದಾರೆ. “ಇದು ಅಂತಿಮವಾಗಿ ಆಲ್ಝೈಮರ್ ಕಾಯಿಲೆಗೆ…