ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ಕಿರುಕುಳ ನಿಲ್ಲಬೇಕು’; ರಮ್ಯಾ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ನಟಿ ರಮ್ಯಾ (Ramya Divya Spandana) ಅವರು, ಆರೋಪಿಗಳನ್ನು ನೋಡಿದಾಗ ಕೆಲವೊಮ್ಮೆ ಬೇಸರವಾಗುತ್ತದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಹೆಚ್ಚುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದಲೇ ಈ ಪ್ರಕರಣವನ್ನು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ತಮ್ಮ ದೂರಿನ ಸಂಬಂಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಸಾಕ್ಷಿ ಹೇಳಿಕೆಗಾಗಿ ಮಂಗಳವಾರ ರಮ್ಯಾ ನ್ಯಾಯಾಲಯಕ್ಕೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳನ್ನು ನೋಡಿದರೆ ಪಾಪ ಅನ್ಸುತ್ತೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಅದಕ್ಕಾಗಿ ಈ ಕೇಸ್ ಹಾಕಿದ್ದೇನೆ,” ಎಂದು ಹೇಳಿದರು. ಈ ಪ್ರಕರಣದಲ್ಲಿ ಮಂಗಳವಾರ ಅವರು ಸಾಕ್ಷಿ ನೀಡಿದ್ದಾರೆ. ಮುಂದಿನ ದಿನಾಂಕದಲ್ಲಿ…

‘ಗರ್ಭಕಂಠ ಕ್ಯಾನ್ಸರ್’ಗೆ ರಾಮಬಾಣ: ಡಾ.ಪದ್ಮಿನಿ ಪ್ರಸಾದ್ ಸಾರಥ್ಯದಲ್ಲಿ ಉಚಿತ HPV ಲಸಿಕೆ ಶಿಬಿರ

ಬೆಂಗಳೂರು: ಜಗತ್ತಿನಾದ್ಯಂತ ಈಗ ‘ಗರ್ಭಕಂಠ ಕ್ಯಾನ್ಸರ್’ ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ ‘ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ’ ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞರೂ ಆಗಿರುವ ಡಾ.ಪದ್ಮಿನಿ ಪ್ರಸಾದ್, ಕಳೆದ ಹಲವು ದಶಕಗಳಿಂದ ಮಹಿಳೆಯರ ಅರೋಗ್ಯ ಕುರಿತಂತೆ ಜನಪ್ರಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಅದರ ಜೊತೆಯಲ್ಲೇ ಇದೀಗ ‘ಗರ್ಭಕಂಠ ಕ್ಯಾನ್ಸರ್’ ವಿಚಾರದಲ್ಲಿ ಕೈಗೊಂಡಿರುವ ಅಭಿಯಾನ ಗಮನಸೆಳೆದಿದೆ. ತಮ್ಮ ನೇತೃತ್ವದ ‘ಭರವಾಸೆ ಚಾರಿಟೇಬಲ್ ಫೌಂಡೇಶನ್’ ವತಿಯಿಂದ ಈ ಅಭಿಯಾನವನ್ನು ಡಾ.ಪದ್ಮಿನಿ ಪ್ರಸಾದ್ ನಡೆಸುತ್ತಿದ್ದಾರೆ. ಪ್ರತಿಷ್ಠಿತ ಜೀವಿಕಾ ಹೆಲ್ತ್‌ಕೇರ್ ಸಹಯೋಗದೊಂದಿಗೆ ಈ ಅಭಿಯಾನ ನಡೆಸಲಾಗುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಮಹಿಳೆಯರ ಪಾಲಿಗೆ ಈ ಕಾರ್ಯಕ್ರಮವು ಸಂಜೀವಿನಿಯಂತಾಗಿದೆ. 12 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಮಹಿಳೆಯರ ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಕ್ಯಾನ್ಸರ್ ಶೋಧ ಸಂಬಂಧಿಸಿದಂತೆ…

ಸರ್ಕಾರಿ ವೈದ್ಯರ ಮುಷ್ಕರ; ಮಾ.11ರಿಂದ ಓಪಿಡಿ ಸೇವೆ ಸ್ಥಗಿತ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (Government Medical Officers Association) ಹಲವು ವರ್ಷಗಳಿಂದ ಬಾಕಿಯಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠಾತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಹೋರಾಟಕ್ಕೆ ಮುಂದಾಗಿದ್ದು, ಮುಷ್ಕರದಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ದೊಡ್ಡ ತೊಂದರೆ ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು…

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಬಿದ್ದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ, ನಂತರ ಮತ್ತೆ ಬೆಲೆ ಏರಿಕೆ ಮಾಡುವುದು ಪ್ರಧಾನಿ ನರೇಂದ್ರ…

ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾ ಬಂದಿರುವುದನ್ನೇ ಉಲ್ಲೇಖಿಸಿ, ಈ ಬಾರಿ ಮಂಡಿಸಲಾದ ಬಜೆಟ್ ಅನ್ನು ‘ಬ್ರದರ್ಸ್ ಬಜೆಟ್’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಅನೇಕ ಯೋಜನೆಗಳನ್ನು ಘೋಷಿಸಿರುವುದನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ಮಾಡಿ, ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್ (KPS) ಮಾದರಿಯಲ್ಲಿ ಉನ್ನತೀಕರಣಗೊಳಿಸಲು ₹1000 ಕೋಟಿ ಮೀಸಲು, ಅಲ್ಪಸಂಖ್ಯಾತ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಮೀಸಲು, ನಿರ್ಗತಿಕರಿಗೆ ಎರಡು ವೃದ್ಧಾಶ್ರಮಗಳ ಆರಂಭ, ನಿರುದ್ಯೋಗಿಗಳಿಗೆ…

‘ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯತೆ, ಉದ್ಯೋಗ ಅವಕಾಶ ಹೆಚ್ಚಿಸಲು ಸರ್ಕಾರ ಬದ್ಧ’: ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್‌ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿದ ನಂತರ ಪ್ರತಿಕ್ರಿಯೆ ನೀಡಿರುವ ಡಾ. ಪಾಟೀಲ್‌, ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ “K-QUEST” (KARNATAKA – Quality Upgradation for Employment and Skills Transformation) ಯೋಜನೆಯನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ…

ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಬಸವರಾಜ್ ಬೊಮ್ಮಾಯಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಸುಮಾರು ₹1.32 ಲಕ್ಷ ಕೋಟಿ ಸಾಲ ಮಾಡಿ, ಮತ್ತೊಂದೆಡೆ ಸುಮಾರು ₹25 ಸಾವಿರ ಕೋಟಿ ಹೊಸ ತೆರಿಗೆ ವಿಧಿಸಿ, ₹32 ಸಾವಿರ ಕೋಟಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು-ದೆಸೆ ಇಲ್ಲದ ಈ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೆ ತೆಗೆದುಕೊಂಡು ಹೋಗುವಂತಾಗಿದೆ. ಇದರ ಪರಿಣಾಮ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ರಾಜ್ಯವನ್ನು ಕನಿಷ್ಠ 10 ರಿಂದ 15 ವರ್ಷ ಹಿಂದೆ ತಳ್ಳುವಂತಾಗಬಹುದು. 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಂದ ಇಂತಹ ಬಜೆಟ್ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ, ಆದ್ದರಿಂದ ನಿರಾಸೆಯಾಗಿದೆ ಎಂದವರು ಹೇಳಿದ್ದಾರೆ. ನೀರಾವರಿಗೆ ಕೇವಲ ₹22 ಸಾವಿರ ಕೋಟಿ…

ಆಲಮಟ್ಟಿ ವಿವಾದ: ಕೇಂದ್ರದ ಮಧ್ಯಸ್ಥಿಕೆ ತುರ್ತು ಅಗತ್ಯ

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ (D.K. Shivakumar) ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಆಂಧ್ರಪ್ರದೇಶ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಹಾಗೂ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ ಎಂದು ಅವರು ತಿಳಿಸಿದರು. “ನ್ಯಾಯಮಂಡಳಿಯ ಆದೇಶದಂತೆ ಕೇಂದ್ರವು ಮಧ್ಯಪ್ರವೇಶಿಸಿ ಯೋಜನೆ ಮುಂದುವರಿಯಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದರು. ಸೆಪ್ಟೆಂಬರ್ 16, 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗಾಗಿ 1.33 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮೂರು ಹಂತಗಳಲ್ಲಿ 70,000 ಕೋಟಿ ರೂಪಾಯಿ ಬಿಡುಗಡೆ ಮಾಡುವ ಯೋಜನೆಯೂ ಇದೆ ಎಂದು ಅವರು ವಿವರಿಸಿದರು. 2010ರಲ್ಲಿ ನ್ಯಾಯಮಂಡಳಿಯು ನೀರಿನ ಬಳಕೆಯನ್ನು 177 ಟಿಎಂಸಿಯಿಂದ 330 ಟಿಎಂಸಿಗೆ ಹೆಚ್ಚಿಸಲು…

ಅನುಚಿತ ಚಿತ್ರೀಕರಣಕ್ಕೆ ಖಂಡನೆ: ರುಕ್ಮಿಣಿ, ಆಶಿಕಾ, ಸಪ್ತಮಿ ಒಗ್ಗಟ್ಟಿನ ಸಂದೇಶ

ಬೆಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರನ್ನು ಅನುಚಿತ ಕೋನಗಳಿಂದ ಚಿತ್ರೀಕರಿಸಿ, ಉದ್ದೇಶಪೂರ್ವಕ ಜೂಮ್-ಇನ್‌ಗಳ ಮೂಲಕ ದೃಶ್ಯಗಳನ್ನು ಪ್ರಸಾರ ಮಾಡುವ ಪ್ರಕ್ರಿಯೆಯನ್ನು ನಟಿಯರಾದ ರುಕ್ಮಿಣಿ ವಸಂತ್ (Rukmini Vasanth), ಆಶಿಕಾ ರಂಗನಾಥ್ (Ashika Ranganath) ಮತ್ತು ಸಪ್ತಮಿ ಗೌಡ (Saptami Gowda) ತೀವ್ರವಾಗಿ ಖಂಡಿಸಿದ್ದಾರೆ. ಮಂಗಳವಾರ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ಒಗ್ಗಟ್ಟಿನ ಹೇಳಿಕೆಯಲ್ಲಿ ನಟಿಯರು, “ಚಲನಚಿತ್ರೋದ್ಯಮದ ಮಹಿಳೆಯರಾಗಿ ನಾವು ಪುನರಾವರ್ತಿತ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪದೇ ಪದೇ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಹಿಳಾ ನಟಿಯರನ್ನು ಸೂಕ್ತವಲ್ಲದ ಕೋನಗಳಿಂದ ಚಿತ್ರೀಕರಿಸಲಾಗುತ್ತದೆ. ಅನಗತ್ಯ ಜೂಮ್‌ಗಳು ನಮ್ಮ ಕೆಲಸದ ಬದಲು ನಮ್ಮ ದೇಹದ ಮೇಲೆ ಕೇಂದ್ರೀಕರಿಸುತ್ತವೆ,” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕೆಲವು ವ್ಯಕ್ತಿಗಳ ಈ ನಡವಳಿಕೆ ಅಗೌರವಕಾರಿ ಹಾಗೂ ಸಂಪೂರ್ಣವಾಗಿ ಅಸ್ವೀಕಾರಾರ್ಹ. ನಾವು ನಮ್ಮ ಸಿನಿಮಾಗಾಗಿ ಇಲ್ಲಿದ್ದೇವೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಉದ್ದೇಶಪೂರ್ವಕ ಜೂಮ್-ಇನ್‌ಗಳು ಮತ್ತು ಅನುಚಿತ ಕೋನಗಳನ್ನು ಘನತೆಯ ಉಲ್ಲಂಘನೆ ಎಂದು ಕರೆಯಿರುವ ನಟಿಯರು,…

ಇರಾನ್; ಭಾರತೀಯರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಡಿಕೆಶಿ ಆಗ್ರಹ

ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ನಡುವೆಯೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾರತೀಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. “ಈ ದೇಶದ ಎಲ್ಲಾ ಜನರಿಗೆ, ವಿಶೇಷವಾಗಿ ದಕ್ಷಿಣ ಭಾರತದವರಿಗೆ ನಾನು ಮನವಿ ಮಾಡುತ್ತೇನೆ. ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನಮ್ಮ ಜನರಿಗೆ ನಾವು ಧೈರ್ಯ ಮತ್ತು ಶಕ್ತಿ ನೀಡಲು ಪ್ರಯತ್ನಿಸಬೇಕು,” ಎಂದು ಅವರು ಹೇಳಿದ್ದಾರೆ. ವಿದೇಶಗಳಲ್ಲಿ ಇರುವ ಭಾರತೀಯರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಹೇಳಿದ ಅವರು, “ಭಾರತದ ಎಲ್ಲಾ ನಾಗರಿಕರನ್ನು ರಕ್ಷಿಸಬೇಕು. ಈ ಜಗತ್ತಿನಲ್ಲಿ ಯಾರನ್ನೂ, ವಿಶೇಷವಾಗಿ ಮಕ್ಕಳನ್ನು ಈ ರೀತಿ ನಿರ್ದಯವಾಗಿ ಕೊಲ್ಲಬಾರದು,” ಎಂದು ಅಭಿಪ್ರಾಯಪಟ್ಟರು. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಮತ್ತು ಇತರ ಭಾರತೀಯರ ಸುರಕ್ಷತೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಮನವಿಯಾಗಿದೆ. Bengaluru | On Israel-Iran Conflict, Karnataka Dy CM DK Shivakumar…