ವಾಷಿಂಗ್ಟನ್: ಇರಾನ್ನ ಪಿಕಾಕ್ಸ್ ಪರ್ವತದಲ್ಲಿರುವ ಪರಮಾಣು ತಾಣದ ಮೇಲೆ ಅಮೆರಿಕ ನಿರಂತರ ನಿಗಾ ವಹಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಅಮೆರಿಕದ ಬಾಹ್ಯಾಕಾಶ ಕಣ್ಗಾವಲು ವ್ಯವಸ್ಥೆಗಳು ಪಿಕಾಕ್ಸ್ ಸೇರಿದಂತೆ ಇರಾನ್ನ ಪ್ರಮುಖ ಪರಮಾಣು ತಾಣಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ ಎಂದು ಹೇಳಿದರು. ಸ್ವಲ್ಪ ಮಟ್ಟಿನ ಚಲನೆಯಾದರೂ ಕಂಡುಬಂದರೆ ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಕಣ್ಗಾವಲು ವ್ಯವಸ್ಥೆಗಳು ಅತ್ಯಂತ ಸುಧಾರಿತವಾಗಿವೆ ಎಂದು ಟ್ರಂಪ್ ಹೇಳಿದರು. ಪಿಕಾಕ್ಸ್ ತಾಣದಲ್ಲಿ ಪರಮಾಣು ಚಟುವಟಿಕೆ ನಡೆಯುತ್ತಿದೆಯೇ ಎಂಬುದು ಸ್ಪಷ್ಟವಾಗಿಲ್ಲವಾದರೂ, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಉಪಗ್ರಹ ಚಿತ್ರಗಳಲ್ಲಿ ಟ್ರಕ್ಗಳು, ಕ್ರೇನ್ಗಳು ಹಾಗೂ ಹೊಸದಾಗಿ ಕಾಂಕ್ರೀಟ್ ಸುರಿದಿರುವ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದ ಟ್ರಂಪ್, ಪ್ರವೇಶದ್ವಾರಗಳನ್ನು ಮುಚ್ಚಲು…
Category: ವಿದೇಶ
ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಅಮೆರಿಕದೊಂದಿಗೆ ಮಾಡಿಕೊಂಡಿದ್ದ ತಾತ್ಕಾಲಿಕ ಕದನ ವಿರಾಮ ಹಾಗೂ ತಿಳಿವಳಿಕೆ ಒಪ್ಪಂದದಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ಘೋಷಿಸಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಆರೋಪಿಸಿದೆ. ಇರಾನ್ ಉಪ ವಿದೇಶಾಂಗ ಸಚಿವ ಕಜೆಮ್ ಘರಿಬಬಾದಿ, ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ನಿಯಂತ್ರಣವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಇದರ ನಡುವೆ, ಅಮೆರಿಕ ಪಡೆಗಳು ಇರಾನ್ ಬಂದರುಗಳ ಬಳಿ ನೌಕಾ ದಿಗ್ಬಂಧನವನ್ನು ಬಲಪಡಿಸಿದ್ದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಎರಡೂ ದೇಶಗಳ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ವರದಿಗಳು ಹೊರಬಿದ್ದಿವೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಪ್ರಕಾರ, ಇರಾನ್ ಬಹ್ರೇನ್ ಹಾಗೂ ಕುವೈತ್ ಸೇರಿ ಗಲ್ಫ್ ಪ್ರದೇಶದತ್ತ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು…
ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ
ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 30 ಭಾರತೀಯ ನಾವಿಕರ ಪೈಕಿ ಒಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಎಂಟಿ ಅಲ್ ಬಹಿಯಾ ಹಡಗಿನಲ್ಲಿ 12 ಭಾರತೀಯರು ಇದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂಟಿ ಮೊಂಬಾಸಾ ಹಡಗಿನಲ್ಲಿ ಇದ್ದ 18 ಭಾರತೀಯರಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುತ್ತಿದೆ. ಈ ದಾಳಿಗೆ ಸಂಬಂಧಿಸಿ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಉಪ ಮುಖ್ಯಸ್ಥರನ್ನು ವಿದೇಶಾಂಗ ಸಚಿವಾಲಯ ಕರೆಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಹಾರ್ಮುಜ್ ಜಲಸಂಧಿಯಂತಹ ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಹಾಗೂ ಸುರಕ್ಷಿತ…
ಬ್ಯಾಂಕಾಕ್ ಪಬ್ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,
ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನ ಉತ್ತರ ಭಾಗದ ನಾ ಲಾಡ್ಪ್ರಾವೋ (Na Ladprao) ಪಬ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಬ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳ ನಡುವೆ ಸಿಲುಕಿದವರು ಆತಂಕದಿಂದ ಹೊರಬರಲು ಯತ್ನಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಥಾಯ್ಲೆಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಾಕುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವರ ಮೃತದೇಹಗಳು ಪಬ್ನ ಹಿಂಭಾಗದ ಶೌಚಾಲಯಗಳ ಬಳಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಗೀತಗಾರರೊಬ್ಬರ ಪ್ರಕಾರ, ವೇದಿಕೆ ಸಮೀಪದ ವಿದ್ಯುತ್ ಸರ್ಕ್ಯೂಟ್ ಬ್ರೇಕರ್ನಿಂದ ಮೊದಲು ಹೊಗೆ ಕಾಣಿಸಿಕೊಂಡು, ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡು ಭಾರೀ ಸ್ಫೋಟ…
ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾಯಾನ ಹಾಗೂ ಸಂಚಾರ ಸ್ವಾತಂತ್ರ್ಯ ಖಚಿತಪಡಿಸುವ ಕುರಿತು ತಾಂತ್ರಿಕ ಮತ್ತು ರಾಜಕೀಯ ಮಟ್ಟದ ಮಾತುಕತೆಗಳನ್ನು ಮುಂದುವರಿಸಲು ಇರಾನ್ ಮತ್ತು ಓಮನ್ ಒಪ್ಪಿಕೊಂಡಿವೆ ಎಂದು ಓಮನ್ ಸುದ್ದಿ ಸಂಸ್ಥೆ ತಿಳಿಸಿದೆ. ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಸ್ಕತ್ನಲ್ಲಿ ನಡೆದ ಸಭೆಯಲ್ಲಿ, ಅಂತರರಾಷ್ಟ್ರೀಯ ಕಾನೂನಿಗೆ ಅನುಗುಣವಾದ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಚರ್ಚೆ ಮುಂದುವರಿಸಲು ಎರಡೂ ದೇಶಗಳು ನಿರ್ಧರಿಸಿವೆ. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲೇ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ. ಫೆಬ್ರವರಿಯಲ್ಲಿ ಅಮೆರಿಕ-ಇಸ್ರೇಲ್ ದಾಳಿಗಳ ಬಳಿಕ ಇರಾನ್ ಜಲಸಂಧಿಯ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸಿತ್ತು. ಇದೇ ವೇಳೆ, ಮಿಲಿಟರಿ ದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಕದನ ವಿರಾಮ ಮುಕ್ತಾಯಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆ ಮುಂದುವರಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಅಧ್ಯಕ್ಷ ಡೊನಾಲ್ಡ್…
ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ
ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94 ತಾತ್ಕಾಲಿಕ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 18,000ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ದುರಂತದ ಪರಿಹಾರ ಕಾರ್ಯದಲ್ಲಿ ಸುಮಾರು 30,000 ಸ್ವಯಂಸೇವಕರು ಭಾಗಿಯಾಗಿದ್ದು, ಮನೆ ನಿರ್ಮಾಣ ಮತ್ತು ದುರಸ್ತಿ ಕಾರ್ಯದಲ್ಲೂ ಅವರನ್ನು ಬಳಸಿಕೊಳ್ಳಲು ಸರ್ಕಾರ ಯೋಜಿಸಿದೆ. ಭೂಕಂಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗಾಗಿ ಏಕೀಕೃತ ವಸತಿ ನೋಂದಣಿ ಆರಂಭಿಸಲಾಗಿದ್ದು, ಇದನ್ನು ಜನಗಣತಿ ಹಾಗೂ ಆರ್ಥಿಕ ನೆರವಿನ ಡೇಟಾಬೇಸ್ ಆಗಿ ಬಳಸಲಾಗುತ್ತದೆ ಎಂದು ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ.
ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ
ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಇರಾನ್ ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಗೆ ಪ್ರತಿಯಾಗಿ ಅಮೆರಿಕ ಇರಾನ್ನ ಪ್ರಮುಖ ಸೇನಾ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೈಪ್ರಸ್ ಧ್ವಜದಡಿ ಸಂಚರಿಸುತ್ತಿದ್ದ ‘ಎಂವಿ ಜಿಎಫ್ಎಸ್ ಗ್ಯಾಲಕ್ಸಿ’ ಸರಕು ಹಡಗನ್ನು ತಡೆದು ದಾಳಿ ನಡೆಸಿದೆ ಎಂದು ಅಮೆರಿಕ ಆರೋಪಿಸಿದೆ. ಘಟನೆಯಲ್ಲಿ ಹಡಗಿನ ಎಂಜಿನ್ ವಿಭಾಗಕ್ಕೆ ಹಾನಿಯಾಗಿದ್ದು, ಒಬ್ಬ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅಮೆರಿಕ ಮಧ್ಯಪ್ರವೇಶ ಮುಂದುವರಿದಿರುವವರೆಗೆ ಹೊರ್ಮುಜ್ ಜಲಸಂಧಿಯಲ್ಲಿ ಯಾವುದೇ ಹಡಗುಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಇರಾನ್ ಘೋಷಿಸಿದೆ. ಈ ಕ್ರಮದಿಂದ ಜಾಗತಿಕ ತೈಲ ಪೂರೈಕೆ ಮತ್ತು ಸಮುದ್ರ ವ್ಯಾಪಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಈ ವಾರ ಇರಾನ್ ವಿರುದ್ಧ…
15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ
ಹನೋಯ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸ್ಪೀಡ್ ಬೋಟ್ ಮಗುಚಿ 15 ಭಾರತೀಯ ಪ್ರವಾಸಿಗರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಲೆ ಮಿನ್ಹ್ ಹಂಗ್ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಸ್ಪೀಡ್ ಬೋಟ್ನಲ್ಲಿ 32 ಭಾರತೀಯ ಪ್ರವಾಸಿಗರು, ಮೂವರು ಸಿಬ್ಬಂದಿ ಹಾಗೂ ಒಬ್ಬ ವಿಯೆಟ್ನಾಂ ಪ್ರವಾಸಿ ಮಾರ್ಗದರ್ಶಿ ಸೇರಿ 36 ಮಂದಿ ಪ್ರಯಾಣಿಸುತ್ತಿದ್ದರು. ಮೇ ರುಟ್ ನ್ಗೋಯ್ ದ್ವೀಪದಿಂದ ಆನ್ ಥೋಯ್ ಬಂದರಿಗೆ ತೆರಳುತ್ತಿದ್ದ ವೇಳೆ ಬಲವಾದ ಗಾಳಿಯಿಂದ ತೀರದಿಂದ ಸುಮಾರು 400 ಮೀಟರ್ ದೂರದಲ್ಲಿ ಬೋಟ್ ಪಲ್ಟಿಯಾಯಿತು. ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಎಲ್ಲ 36 ಮಂದಿಯನ್ನು ರಕ್ಷಿಸಿದರು. ಅವರಲ್ಲಿ 21 ಮಂದಿ ಬದುಕುಳಿದರೆ, 15 ಭಾರತೀಯರು ಮೃತಪಟ್ಟಿದ್ದಾರೆ. ಪ್ರಧಾನಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು…
ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಕೊನೆಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಅಮೆರಿಕ ಒಪ್ಪಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಟ್ರುತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಮಾತುಕತೆ ಮುಂದುವರಿಸಲು ಮನವಿ ಮಾಡಿದ್ದು, ಅದಕ್ಕೆ ಅಮೆರಿಕ ಸಮ್ಮತಿಸಿದೆ. ಆದರೆ ಕದನ ವಿರಾಮ ಅಂತ್ಯಗೊಂಡಿರುವುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಘೋಷಿಸಿದ್ದ ಕದನ ವಿರಾಮದ ಬಳಿಕ ಇತ್ತೀಚಿನ ದಿನಗಳಲ್ಲಿ ಎರಡೂ ರಾಷ್ಟ್ರಗಳ ನಡುವೆ ಮತ್ತೆ ಭಾರೀ ಮಿಲಿಟರಿ ದಾಳಿಗಳು ನಡೆದಿವೆ. ವರದಿಗಳ ಪ್ರಕಾರ, ಅಮೆರಿಕ ಇರಾನ್ನ ವಾಯು ರಕ್ಷಣಾ ವ್ಯವಸ್ಥೆಗಳು, ಡ್ರೋನ್ ಹಾಗೂ ಕ್ಷಿಪಣಿ ಸಂಗ್ರಹಣಾ ಕೇಂದ್ರಗಳು ಸೇರಿದಂತೆ 170ಕ್ಕೂ ಹೆಚ್ಚು ಮಿಲಿಟರಿ ಗುರಿಗಳ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕತಾರ್, ಬಹ್ರೇನ್ ಮತ್ತು ಕುವೈತ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ…
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ
ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನದ ಕೆ2 ಏರ್ವೇಸ್ ಸರಕು ವಿಮಾನವು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ರಾಡಾರ್ ಸಂಪರ್ಕ ಕಳೆದುಕೊಂಡಿದ್ದು, ವಿಮಾನದಲ್ಲಿದ್ದ ಐವರು ಸಿಬ್ಬಂದಿಗಾಗಿ ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಹಿತಿ ಪ್ರಕಾರ, ಕಾರ್ಗೋ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿರುವುದಾಗಿ ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ಬಳಿಕ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ದರು. ರಾತ್ರಿ 9.18ಕ್ಕೆ ವಿಮಾನದೊಂದಿಗೆ ಕೊನೆಯ ಸಂಪರ್ಕ ದಾಖಲಾಗಿತ್ತು. ಆದರೆ, ಕೆಲವೇ ನಿಮಿಷಗಳಲ್ಲಿ ವಿಮಾನ ದಿಕ್ಕು ಬದಲಾಯಿಸಿ ವೇಗವಾಗಿ ಕೆಳಮುಖವಾಗಿ ಇಳಿಯುತ್ತಿರುವುದು ರಾಡಾರ್ನಲ್ಲಿ ಗೋಚರಿಸಿತು. ರಾತ್ರಿ 9.22ರ ಸುಮಾರಿಗೆ, ಕರಾಚಿಯಿಂದ ಸುಮಾರು 155 ನಾಟಿಕಲ್ ಮೈಲಿ ಪಶ್ಚಿಮಕ್ಕೆ ವಿಮಾನದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿತು. ವಿಮಾನವು ಅರಬ್ಬಿ…
