JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.

ಭೂಸ್ವಾಧೀನ ಲೋಪಗಳ ಬಗ್ಗೆ ತನಿಖೆ: ಸರ್ಕಾರದಿಂದ ಕಠಿಣ ಕ್ರಮದ ಸೂಚನೆ

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು. “ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ ವಿಶೇಷ ತನಿಖಾ…

“ಯಾವುದೇ ಆಪತ್ತು ಬಂದರೂ NDA ಮೈತ್ರಿ ಮುರಿಯದು”: ದೇವೇಗೌಡ

ಬೆಂಗಳೂರು: “ರಾಷ್ಟ್ರೀಯ ಜನತಾ ದಳ (ಎಸ್) ಪಕ್ಷ ಹಾಗೂ ಎನ್‌ಡಿಎ ಮೈತ್ರಿ ಅಟಲ್‌! ಯಾವುದೇ ಸಂದರ್ಭದಲ್ಲೂ ಮೈತ್ರಿಯನ್ನು ಮುರಿಯುವ ಪ್ರಶ್ನೆ ಬರುವುದಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ನಾಯಕತ್ವದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ನಮ್ಮ ಕಾರ್ಯಕರ್ತರು ಇದನ್ನು ಎಂದಿಗೂ ಮರೆಯಬಾರದು’ ಎಂದರು. ‘ಉತ್ತರದಲ್ಲಿ ಜೆಡಿ(ಯು), ದಕ್ಷಿಣದಲ್ಲಿ ಜೆಡಿ(ಎಸ್)’ ಎಂದು ಘೋಷಿಸಿದ ದೇವೇಗೌಡ, ‘ಅಲ್ಲಿ ನಿತೀಶ್‌ ಕುಮಾರ್ ಇದ್ದಾರೆ, ಇಲ್ಲಿ ಕುಮಾರಸ್ವಾಮಿ ಇದ್ದಾರೆ’ ಎಂದು ಪಕ್ಷದ ಬಲವನ್ನು ಹಿರಿಮೆಗೇರಿಸಿದರು. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಸಿದ್ದರಾಮಯ್ಯ ಅವರು “ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗಲಿಲ್ಲ” ಎಂಬ ಹೇಳಿಕೆಯನ್ನು ಕಟುವಾಗಿ ತಳ್ಳಿ ಹಾಕಿದ ಗೌಡರು, “ನಾನು ಸ್ವತಃ…

ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ; ಬಿಜೆಪಿ ಗರಂ

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ. ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ @siddaramaiah ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ… pic.twitter.com/HPsBKWbvFG — BJP Karnataka (@BJP4Karnataka) November 22, 2025 ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ…

ರಾಜ್ಯದ ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ: ಬಿಜೆಪಿ ಟೀಕೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.

‘ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಕುರಿತಾಗಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ‘ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವೇ ಇಲ್ಲ. ಎಲ್ಲವೂ ಸುಗಮವಾಗಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪಕ್ಷದೊಳಗೆ ಗೊಂದಲ ಇದ್ದಿದ್ದರೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದು. ಅಗತ್ಯವಿಲ್ಲದ ಕಾರಣ ಇದುವರೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿಲ್ಲ” ಎಂದರು. ಹಲವಾರು ಸಚಿವರು ಮತ್ತು ಶಾಸಕರು ದೆಹಲಿಗೆ ಭೇಟಿ ನೀಡಿ ನಡೆಸಿದ “ಭೋಜನ ಸಭೆ” ರಾಜಕೀಯ ಚರ್ಚೆಗೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೇ ದೆಹಲಿಗೆ ಹೋದರೂ ತಮ್ಮ ವೈಯಕ್ತಿಕ ಅಥವಾ ಆಡಳಿತಾತ್ಮಕ ಕೆಲಸಗಳಿಗಾಗಿ ಹೋಗಿದ್ದಾರೆ. ರಾಜಕೀಯ ಕಾರಣವೇನೂ ಇಲ್ಲ ಎಂಬುದನ್ನು ಅವರು ಈಗಾಗಲೇ ವಿವರಿಸಿದ್ದಾರೆ” ಎಂದರು. ದೆಹಲಿಯಲ್ಲಿ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವರದಿಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ದೆಹಲಿಗೆ ಹೋದಾಗ ಪಕ್ಷದ…

ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್‌ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು. ‘ಕಾಂಗ್ರೆಸ್…

ಪೊಲೀಸ್’ಗೂ ದರೋಡೆಗೂ ನಂಟು? ಪೇದೆ ಸೇರಿ ಇಬ್ಬರ ವಶ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ ವಿಶೇಷ ತಂಡಗಳು ದರೋಡೆ ಕೃತ್ಯಕ್ಕೆ ಸಂಬಂಧಿಸಿದ ಸುಳಿವುಗಳನ್ನು ಪತ್ತೆಹಚ್ಚಿ ಶಂಕಿತರನ್ನು ವಶಕ್ಕೆ ಪಡೆದಿವೆ. ನವೆಂಬರ್‌ 20ರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್‌ಸ್ಟೆಬಲ್‌ನ್ನು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿಯು ಕೇರಳ ಮೂಲದವನು ಎನ್ನಲಾಗಿದೆ. ಆತ ಇತ್ತೀಚೆಗೆ CMS ಇನ್‌ಫೋ ಸಿಸ್ಟಮ್ಸ್ ಲಿಮಿಟೆಡ್‌ ಸಂಸ್ಥೆಗೆ ರಾಜೀನಾಮೆ ನೀಡಿರುವ ಮಾಜಿ ಉದ್ಯೋಗಿ ಎಂಬುದು ತಿಳಿದು ಬಂದಿದೆ. ದರೋಡೆಗೆ ಗುರಿಯಾದ ವಾಹನ ಇದೇ ಕಂಪನಿಗೆ ಸೇರಿದ್ದೇ ಎಂಬ ಬಗ್ಗೆ ತನಿಖೆ ಬಿರುಸುಗೊಂಡಿದೆ. ಮೂಲಗಳ ಪ್ರಕಾರ, ಬಂಧಿತ ಇಬ್ಬರೂ ಕಳೆದ ಆರು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿದ್ದು, ದರೋಡೆ ಯೋಜನೆಯನ್ನು ಸೂಕ್ಷ್ಮವಾಗಿ ರೂಪಿಸಿದ್ದರು. ಘಟನೆಯ ಸುಮಾರು…