ಡಮಾಸ್ಕಸ್: ಸಿರಿಯಾ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ತಂಗಿದ್ದ ಡಮಾಸ್ಕಸ್ನ ಹೋಟೆಲ್ ಸಮೀಪ ಮಂಗಳವಾರ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಫ್ರಾನ್ಸ್ ಅಧ್ಯಕ್ಷೀಯ ಭವನ ಸ್ಪಷ್ಟಪಡಿಸಿದೆ. ಹೋಟೆಲ್ ಸಮೀಪ ಭಾರೀ ಸ್ಫೋಟದ ಶಬ್ದ ಕೇಳಿಬಂದ ತಕ್ಷಣ ಸಿರಿಯಾ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಹೋಟೆಲ್ ಸುತ್ತಮುತ್ತಲಿನ ಪ್ರದೇಶವನ್ನು ಭದ್ರತಾ ವಲಯವನ್ನಾಗಿ ಘೋಷಿಸಿ ರಸ್ತೆಗಳನ್ನು ಬಂದ್ ಮಾಡಿವೆ. ಫ್ರಾನ್ಸ್ ಅಧ್ಯಕ್ಷೀಯ ಭವನ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಂಪೂರ್ಣ ಸುರಕ್ಷಿತರಾಗಿದ್ದು, ಅವರ ಭದ್ರತೆಗೆ ಯಾವುದೇ ಧಕ್ಕೆಯಾಗಿಲ್ಲ” ಎಂದು ತಿಳಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬ ಕುರಿತು ತನಿಖೆ ಮುಂದುವರಿದಿದೆ. ಘಟನೆಯ ನಂತರ ಡಮಾಸ್ಕಸ್ನಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
Category: ವಿದೇಶ
ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’
ಜಕಾರ್ತಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡೋನೇಷ್ಯಾ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದೆ. ಜಕಾರ್ತಾದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇಂಡೋನೇಷ್ಯಾ ಗಣರಾಜ್ಯದ ಏಕತೆ, ನಿರಂತರತೆ ಹಾಗೂ ಸಮೃದ್ಧಿಗೆ ಅಸಾಧಾರಣ ಕೊಡುಗೆ ನೀಡಿದ ಜಾಗತಿಕ ನಾಯಕರಿಗೆ ಮಾತ್ರ ಈ ಗೌರವ ನೀಡಲಾಗುತ್ತದೆ. ಇಂಡೋನೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿರುವ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಇಂಡೋನೇಷ್ಯಾ ಇತಿಹಾಸ, ಸಂಸ್ಕೃತಿ ಹಾಗೂ ಪರಸ್ಪರ ವಿಶ್ವಾಸದ ಬಾಂಧವ್ಯವನ್ನು ಹೊಂದಿದ್ದು, ಭವಿಷ್ಯದಲ್ಲಿ ಸಮೃದ್ಧಿಯ ಪಯಣವನ್ನೂ ಒಟ್ಟಾಗಿ ಸಾಗಲಿವೆ ಎಂದು ಹೇಳಿದರು. ಜಾಗತಿಕ ಪ್ರಕ್ಷುಬ್ಧತೆಯ ಈ ಸಂದರ್ಭದಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯೇ ಶಾಂತಿಯ…
ತೈಲ ಟ್ಯಾಂಕರ್ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ
ಲಂಡನ್: ಹಾರ್ಮುಜ್ ಜಲಸಂಧಿ ಸಮೀಪದ ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ ತೈಲ ಟ್ಯಾಂಕರ್ಗೆ ಸೋಮವಾರ ಗುರುತು ಪತ್ತೆಯಾಗದ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಬ್ರಿಟನ್ನ ಸಮುದ್ರ ಭದ್ರತಾ ಸಂಸ್ಥೆ ಯುನೈಟೆಡ್ ಕಿಂಗ್ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ತಿಳಿಸಿದೆ. ಒಮಾನ್ನ ಲಿಮಾಹ್ ಪ್ರದೇಶದಿಂದ ಸುಮಾರು ಎಂಟು ನಾಟಿಕಲ್ ಮೈಲುಗಳ ಪೂರ್ವದಲ್ಲಿ ಈ ಘಟನೆ ನಡೆದಿದೆ. ದಕ್ಷಿಣದತ್ತ ಸಾಗುತ್ತಿದ್ದ ಟ್ಯಾಂಕರ್ನ ಎಡಭಾಗಕ್ಕೆ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಅಮೆರಿಕ–ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಮಧ್ಯಪ್ರಾಚ್ಯ ಸಂಘರ್ಷದ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ನಿರ್ಬಂಧ ಹಾಗೂ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳಿಂದ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗಿತ್ತು. ಬಳಿಕ ಅಮೆರಿಕ–ಇರಾನ್…
ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ
ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ. ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ…
ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
ದೋಹಾ (ಕತಾರ್): ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ…
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ
ನವದೆಹಲಿ: ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಇಂಧನ ಭದ್ರತೆ, ಕಾರ್ಯತಂತ್ರದ ಪೆಟ್ರೋಲಿಯಂ ಸಂಗ್ರಹ, ಪೂರೈಕೆ ಸರಪಳಿ ಮತ್ತು ಸಮುದ್ರ ಮಾರ್ಗದ ಇಂಧನ ಸಾಗಣೆಯನ್ನು ಬಲಪಡಿಸಲು ಭಾರತ ಮತ್ತು ಜಪಾನ್ ಸಹಕಾರ ವಿಸ್ತರಿಸಲು ಒಪ್ಪಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಸನೇ ತಕೈಚಿ ನಡುವಿನ ಮಾತುಕತೆ ಬಳಿಕ ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್ನ ಆರ್ಥಿಕ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯಗಳು ಸಹಕಾರದ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿವೆ. ಕಾರ್ಯತಂತ್ರದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹ ನಿರ್ವಹಣೆ, ತುರ್ತು ಪರಿಸ್ಥಿತಿ ನಿರ್ವಹಣೆ ಹಾಗೂ ಮಾರುಕಟ್ಟೆ ಸ್ಥಿರೀಕರಣಕ್ಕೆ ಸಂಬಂಧಿಸಿದ ಅನುಭವ ಮತ್ತು ಉತ್ತಮ ಪದ್ಧತಿಗಳನ್ನು ಪರಸ್ಪರ ಹಂಚಿಕೊಳ್ಳಲು ಉಭಯ ದೇಶಗಳು ನಿರ್ಧರಿಸಿವೆ. ಮೂರನೇ ರಾಷ್ಟ್ರಗಳಿಂದ ಇಂಧನ ಪೂರೈಕೆ ಮೂಲಗಳನ್ನು ಅನ್ವೇಷಿಸುವುದು, ಜಾಗತಿಕ…
ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ
ನವದೆಹಲಿ: ಆಪಲ್ನ ಮೊದಲ ಮಡಚಬಹುದಾದ (Foldable) ಐಫೋನ್ಗಾಗಿ ತಂತ್ರಜ್ಞಾನ ಪ್ರಿಯರು ಹಲವು ವರ್ಷಗಳಿಂದ ಕಾಯುತ್ತಿದ್ದು, ಇದೀಗ ಅದು ಶೀಘ್ರದಲ್ಲೇ ಅನಾವರಣಗೊಳ್ಳುವ ಸಾಧ್ಯತೆ ಇದೆ. ಕಂಪನಿಯು ಇನ್ನೂ ಅಧಿಕೃತ ಘೋಷಣೆ ಮಾಡದಿದ್ದರೂ, ಇತ್ತೀಚಿನ ಸೋರಿಕೆಗಳ ಪ್ರಕಾರ ‘ಐಫೋನ್ ಅಲ್ಟ್ರಾ’ ಅನ್ನು ಐಫೋನ್ 18 ಪ್ರೊ ಸರಣಿಯೊಂದಿಗೆ ಸೆಪ್ಟೆಂಬರ್ 9ರಂದು ಪರಿಚಯಿಸುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಐಫೋನ್ ಅಲ್ಟ್ರಾ 7.8 ಇಂಚಿನ ಒಳಭಾಗದ ಮಡಚಬಹುದಾದ OLED ಡಿಸ್ಪ್ಲೇ ಹಾಗೂ 5.5 ಇಂಚಿನ ಹೊರ ಡಿಸ್ಪ್ಲೇ ಹೊಂದಿರಲಿದೆ. ಹೊಸ A20 ಪ್ರೊ ಚಿಪ್ಸೆಟ್, 12GB LPDDR5X RAM ಮತ್ತು ಆಪಲ್ ಅಭಿವೃದ್ಧಿಪಡಿಸಿರುವ C2 ಮೋಡೆಮ್ ಇದರಲ್ಲಿ ಇರಬಹುದು ಎನ್ನಲಾಗಿದೆ. ಬ್ಯಾಟರಿ ಸಾಮರ್ಥ್ಯ 5,400mAh ರಿಂದ 5,800mAh ನಡುವಿರಬಹುದು ಎಂದು ವದಂತಿಗಳಿವೆ. ಕ್ಯಾಮೆರಾ ವಿಭಾಗದಲ್ಲಿ ಎರಡು 48 ಮೆಗಾಪಿಕ್ಸೆಲ್ ಹಿಂಬದಿ ಕ್ಯಾಮೆರಾಗಳು ಹಾಗೂ ಒಳ ಮತ್ತು ಹೊರ ಡಿಸ್ಪ್ಲೇಗಳಿಗೆ ಪ್ರತ್ಯೇಕ ಸೆಲ್ಫಿ…
ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ
ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರ (PoJK) ಮತ್ತೊಮ್ಮೆ ತೀವ್ರ ಅಶಾಂತಿಯ ಕೇಂದ್ರವಾಗಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರದೇಶದಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೂ ನಿರ್ಬಂಧ ಹೇರಲಾಗಿದೆ. ಈ ಅಶಾಂತಿಯ ಕೇಂದ್ರಬಿಂದುವಿನಲ್ಲಿ ಜಂಟಿ ಅವಾಮಿ ಆಕ್ಷನ್ ಕಮಿಟಿ (JAAC) ನಡೆಸುತ್ತಿರುವ ಹೋರಾಟವಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಜಮ್ಮು-ಕಾಶ್ಮೀರ ನಿರಾಶ್ರಿತರಿಗಾಗಿ ಮೀಸಲಿರುವ 53 ಸದಸ್ಯರ ವಿಧಾನಸಭೆಯ 12 ಸ್ಥಾನಗಳನ್ನು ರದ್ದುಪಡಿಸಬೇಕೆಂದು JAAC ಆಗ್ರಹಿಸುತ್ತಿದೆ. ಈ ಸ್ಥಾನಗಳ ಮೂಲಕ ಇಸ್ಲಾಮಾಬಾದ್ ಸ್ಥಳೀಯ ರಾಜಕೀಯದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಆದರೆ ಪಾಕ್ ಆಕ್ರಮಿತ ಕಾಶ್ಮೀರದ ಸುಪ್ರೀಂ ಕೋರ್ಟ್, ಈ 12 ಸ್ಥಾನಗಳು ಸಂವಿಧಾನಬದ್ಧವಾಗಿದ್ದು, ಸಂವಿಧಾನ ತಿದ್ದುಪಡಿ ಇಲ್ಲದೆ ಅವುಗಳನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ. ಈ…
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರಾಚಿಯಲ್ಲಿರುವ ಅರೆಸೈನಿಕ ರೇಂಜರ್ಗಳ ಪ್ರಾದೇಶಿಕ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಮೂವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕರಾಚಿ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ನ ಬೇರ್ಪಟ್ಟ ಬಣವಾದ ಜಮಾತ್-ಉಲ್-ಅಹ್ರಾರ್ ಹೊತ್ತುಕೊಂಡಿದೆ. ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ಪಕ್ತಿಕಾ, ಪಕ್ತಿಯಾ ಮತ್ತು ಕುನಾರ್ ಪ್ರಾಂತ್ಯಗಳಲ್ಲಿನ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರ ಅಡಗುತಾಣಗಳು ಮತ್ತು ಸುರಕ್ಷಿತ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು
ವಿಕ್ಟೋರಿಯಾ (ಸೀಶೆಲ್ಸ್): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಸೀಶೆಲ್ಸ್ನ 50ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾತನಾಡಿದ ಅವರು, ಸೀಶೆಲ್ಸ್ ಅನ್ನು ಭಾರತದ ಪ್ರಮುಖ ಸಮುದ್ರ ಪಾಲುದಾರ ಹಾಗೂ ವಿಶ್ವಾಸಾರ್ಹ ನೆರೆ ರಾಷ್ಟ್ರವೆಂದು ಬಣ್ಣಿಸಿದರು. ಭಾರತ–ಸೀಶೆಲ್ಸ್ ಸಂಬಂಧಗಳು ಶತಮಾನಗಳಷ್ಟು ಹಳೆಯದಾದ ಜನರ-ಜನರ ಬಾಂಧವ್ಯ ಮತ್ತು ಹಂಚಿಕೆಯ ಮೌಲ್ಯಗಳ ಮೇಲೆ ನಿರ್ಮಾಣವಾಗಿವೆ ಎಂದು ಮೋದಿ ಹೇಳಿದರು. ಸೀಶೆಲ್ಸ್ನ ಪ್ರಜಾಪ್ರಭುತ್ವ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ರಾಷ್ಟ್ರೀಯ ಏಕತೆಯನ್ನು ಅವರು ಶ್ಲಾಘಿಸಿದರು. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಉಭಯ ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ ಪ್ರಧಾನಿ, ರಕ್ಷಣಾ ಸಹಕಾರ, ಕರಾವಳಿ ಭದ್ರತೆ, ತರಬೇತಿ ಹಾಗೂ ಸಾಮರ್ಥ್ಯ ವೃದ್ಧಿ ಕ್ಷೇತ್ರಗಳಲ್ಲಿನ ಸಹಯೋಗವನ್ನು ಉಲ್ಲೇಖಿಸಿದರು. ನೀಲಿ ಆರ್ಥಿಕತೆ, ಮೀನುಗಾರಿಕೆ, ಸಮುದ್ರ ವಿಜ್ಞಾನ, ನವೀಕರಿಸಬಹುದಾದ…
