ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ. ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು. ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z — Siddaramaiah (@siddaramaiah) September 2,…
Category: ವಿದೇಶ
ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ…
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರಂಭಿಸಿದ ಸಹಿ ಅಭಿಯಾನವನ್ನು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು “ಅನುಚಿತ, ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಂಸದೀಯ ವ್ಯವಸ್ಥೆ” ಎಂಬ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಸಹಿ ಅಭಿಯಾನವು ಸಂಪೂರ್ಣವಾಗಿ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರ ನಡೆ ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ರಿಜಿಜು ಅಭಿಪ್ರಾಯಪಟ್ಟರು. “ಅವರು ಹುದ್ದೆಯಲ್ಲಿ ಇದ್ದಾಗಲೂ ಸೈದ್ಧಾಂತಿಕವಾಗಿ ಪಕ್ಷಪಾತ ಹೊಂದಿದ್ದಿರಬಹುದು” ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದನ್ನು ಖಂಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ…
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಆಯೋಜಿಸಿದ ಡೆಂಟಿಸ್ಟ್ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು. ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ.…
ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. 1993ರ ಬ್ಯಾಚ್ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ
ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್ ಬಂಡೆಯಂತೆ ಆಗುತ್ತಿದ್ದಾರೆ. ಇವರು…
ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ…
ಮಾತೃಭೂಮಿ ಬಗ್ಗೆ ಗುಣಗಾನ ಮಹಾಪಾಪವೆ? ಕಾಂಗ್ರೆಸ್’ಗೆ ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ’ ಎಂದು ತೋರಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ. ‘ನಮಸ್ತೇ ಸದಾ ವತ್ಸಲೇ ಮಾತೃಭೂಮಿ…’ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ ಎಂದು ವಿಜಯೇಂದ್ರ ಹೇಳಿದ್ದಾರೆ. ನಮ್ಮನ್ನು ಹೆರುವ ತಾಯಿಗೆ ಮಡಿಲ ಆಸರೆ ನೀಡುವವಳು ಭೂಮಿತಾಯಿ. ಈ ಹಿನ್ನಲೆಯಲ್ಲಿಯೇ ‘ಮಾತೃ ಭೂಮಿ’ ಎಂದು ಜನ್ಮದಾತೆಯಷ್ಟೇ ಜನ್ಮಭೂಮಿಯನ್ನು ಆರಾಧಿಸುತ್ತೇವೆ, ತಾಯ್ನೆಲಕ್ಕಾಗಿ ನಮ್ಮನ್ನೇ ಸಮರ್ಪಿಸಿಕೊಳ್ಳುವಷ್ಟು ಭಾವುಕರಾಗುತ್ತೇವೆ. ಜನನಿ, ಜನ್ಮ ಭೂಮಿ ಮಹತ್ವ ತಿಳಿಸಿಕೊಟ್ಟು ರಾಷ್ಟ್ರ ಭಕ್ತಿ ಪಡಿಮೂಡಿಸುವ RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲೂ ಅಸಹನೆ ಏಕೆಂದರೆ ಗುಲಾಮಿ ಚೌಕಟ್ಟಿನಲ್ಲಿ…
ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ; ರಾಜ್ಯದ ಬೊಕ್ಕಸ ಬರಿದು?
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು ವಿಶ್ಲೇಷಿಸಿದೆ. ತೆಲಂಗಾಣದಲ್ಲೂ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಈಗ ಸಂಪೂರ್ಣ ದಿವಾಳಿಯಾಗಿ ಬಿಟ್ಟಿದೆ ಏನು ಜೆಡಿಎಸ್ ಪಕ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿಹೊಡೆದು, ಆ ದುಡ್ಡಲ್ಲಿ ಸರ್ಕಾರ ರಚಿಸಿದ್ದ ತೆಲಂಗಾಣ ಕಾಂಗ್ರೆಸ್ ಇಂದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ನಯಾಪೈಸೆ ಇಲ್ಲವಾಗಿದೆ. ಭಿಕ್ಷೆ ಬೇಡಿದರೂ ಒಂದು ರೂ. ಸಿಗುತ್ತಿಲ್ಲ. ಸರ್ಕಾರದ ಬೊಕ್ಕಸವೂ ಬತ್ತಿಹೋಗಿದೆ. ಅಡಮಾನವಿಟ್ಟು ಹಣ ಪಡೆಯಲು 1 ಇಂಚು ಜಾಗವೂ ಸಹ ಸರ್ಕಾರದ ಬಳಿ ಇಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಮ್ಮ…
4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು. 5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l — Ballari Tweetz (@TweetzBallari) August 25, 2025 ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು. ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿಯನ್ನು…
