ನವದೆಹಲಿ: ಭಾರತ ಮತ್ತು ಲಾವೋಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ವ್ಯಾಪಾರ, ತಂತ್ರಜ್ಞಾನ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮತ್ತಷ್ಟು ಬಲಪಡಿಸಲು ಉಭಯ ದೇಶಗಳು ಬದ್ಧತೆ ವ್ಯಕ್ತಪಡಿಸಿವೆ. ಲಾವೋಸ್ ಉಪ ಪ್ರಧಾನ ಮಂತ್ರಿ ಹಾಗೂ ವಿದೇಶಾಂಗ ಸಚಿವ ಥೋಂಗ್ಸಾವನ್ ಫೋಮ್ವಿಹಾನೆ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಹಕಾರ ಕುರಿತಂತೆ ಚರ್ಚೆ ನಡೆಸಿದರು. ಲಾವೋಸ್ ಸಚಿವರ ಭಾರತದ ಮೊದಲ ಭೇಟಿಯನ್ನು ಸ್ವಾಗತಿಸಿದ ರಾಷ್ಟ್ರಪತಿ ಮುರ್ಮು, ಬೌದ್ಧ ಧರ್ಮ ಮತ್ತು ರಾಮಾಯಣ ಪರಂಪರೆಯ ಮೂಲಕ ಉಭಯ ದೇಶಗಳ ನಡುವೆ ಶತಮಾನಗಳ ಸಾಂಸ್ಕೃತಿಕ ಬಾಂಧವ್ಯವಿದೆ ಎಂದು ಹೇಳಿದರು. 2026ರಲ್ಲಿ ಭಾರತ–ಲಾವೋಸ್ ರಾಜತಾಂತ್ರಿಕ ಸಂಬಂಧಗಳ 70ನೇ ವರ್ಷಾಚರಣೆ ನಡೆಯಲಿರುವುದನ್ನು ಅವರು ಉಲ್ಲೇಖಿಸಿದರು. ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ನಿರಂತರವಾಗಿ ಬೆಳೆಯುತ್ತಿದ್ದು, ಹೂಡಿಕೆ ಮತ್ತು ಆರ್ಥಿಕ ಸಹಕಾರ ವಿಸ್ತರಣೆಗೆ ಇನ್ನೂ ಹೆಚ್ಚಿನ ಅವಕಾಶಗಳಿವೆ ಎಂದು ಮುರ್ಮು ಅಭಿಪ್ರಾಯಪಟ್ಟರು. ಮಾಹಿತಿ ತಂತ್ರಜ್ಞಾನ,…
Category: ವಿದೇಶ
ಟ್ರಂಪ್-ನೆತನ್ಯಾಹು ನಡುವೆ ಭಿನ್ನಾಭಿಪ್ರಾಯ? ಲೆಬನಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ಸಂಬಂಧಗಳ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ. ಲೆಬನಾನ್ನಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳ ಹಿನ್ನೆಲೆ ಉಭಯ ನಾಯಕರ ನಡುವೆ ನಡೆದ ದೂರವಾಣಿ ಮಾತುಕತೆ ವೇಳೆ ತೀವ್ರ ಭಿನ್ನಾಭಿಪ್ರಾಯ ವ್ಯಕ್ತವಾಗಿರುವುದಾಗಿ ಅಮೆರಿಕದ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಇತ್ತೀಚಿನ ವಾರಗಳಲ್ಲಿ ವಾಯುದಾಳಿ ಹಾಗೂ ಭೂ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದು, ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದೇ ವೇಳೆ ಇರಾನ್ ಜೊತೆ ಉದ್ವಿಗ್ನತೆ ಕಡಿಮೆ ಮಾಡುವ ಉದ್ದೇಶದಿಂದ ಅಮೆರಿಕಾ ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸುತ್ತಿರುವ ಕಾರಣ, ಇಸ್ರೇಲ್ನ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಬಹುದು ಎಂಬ ಕಳವಳ ವಾಷಿಂಗ್ಟನ್ನಲ್ಲಿ ವ್ಯಕ್ತವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಟ್ರಂಪ್ ದೂರವಾಣಿ ಸಂಭಾಷಣೆಯಲ್ಲಿ ಇಸ್ರೇಲ್ನ ಕೆಲವು ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…
1,000 ದಾಟಿದ ‘ಎಬೋಲಾ’: ಇನ್ನೊಂದೆಡೆ, ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ
ಮಾಸ್ಕೋ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ (DRC) ಹರಡುತ್ತಿರುವ ಎಬೋಲಾ ವೈರಸ್ನ ಬುಂಡಿಬುಗ್ಯೊ ತಳಿಗೆ ವಿರುದ್ಧವಾಗಿ ಹೊಸ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಘೋಷಿಸಿದೆ. ದಕ್ಷಿಣ ಆಫ್ರಿಕಾದಲ್ಲಿರುವ ರಷ್ಯಾ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಈ ಘೋಷಣೆ ಮಾಡಿದ್ದಾರೆ. ರಷ್ಯಾ ವಿಜ್ಞಾನಿಗಳ ಪ್ರಕಾರ, ಹೊಸ ಲಸಿಕೆ ಅಪರೂಪದ ಬುಂಡಿಬುಗ್ಯೊ ತಳಿಯ ವಿರುದ್ಧವೂ ರಕ್ಷಣೆ ನೀಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಇದೀಗ ಆಫ್ರಿಕಾದ ಪೀಡಿತ ಪ್ರದೇಶಗಳಲ್ಲಿ ಎಬೋಲಾ ಸೋಂಕಿನ ಭೀತಿ ಹೆಚ್ಚುತ್ತಿದ್ದು, ಸುಮಾರು 1,000 ಶಂಕಿತ ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಪೈಕಿ 101 ಪ್ರಕರಣಗಳು ಪಾಸಿಟಿವ್ ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಜ್ಞರ ಪ್ರಕಾರ, ಬುಂಡಿಬುಗ್ಯೊ ತಳಿ ಜೈರ್ ತಳಿಗಿಂತ ಕಡಿಮೆ ಮಾರಕವಾದರೂ ಸೋಂಕು ವೇಗವಾಗಿ ಹರಡುವ ಅಪಾಯವಿದೆ. ಈ ತಳಿಗೆ ಇನ್ನೂ ಜಾಗತಿಕ ಮಟ್ಟದಲ್ಲಿ ಅನುಮೋದಿತ ಲಸಿಕೆ ಅಥವಾ…
ಬೆಂಗಳೂರು-ಮುಂಬೈ ಹೊಸ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ. ರೈಲಿನಲ್ಲಿ ಒಟ್ಟು 17 ಕೋಚ್ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.…
ಕರ್ನಾಟಕದಲ್ಲಿ ಎಸ್ಐಆರ್ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ
ಬೆಂಗಳೂರು, ಕರ್ನಾಟಕದಲ್ಲಿ ಎಸ್ಐಆರ್ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇಲ್ಲ ಎಂದು ಯಾರಾದರೂ ಸವಾಲು ಹಾಕಿದರೆ ನಾನೇ ಅವರನ್ನು ಕರೆದುಕೊಂಡು ಹೋಗಿ ತೋರಿಸುತ್ತೇನೆ. ಇತ್ತೀಚೆಗೆ ಪೊಲೀಸ್ ಆಯುಕ್ತರು 65 ಲಕ್ಷ ರೂ. ಖರ್ಚು ಮಾಡಿ 250 ಬಾಂಗ್ಲಾ ದೇಶದವರನ್ನು ವಿಮಾನದಲ್ಲಿ ಕಳುಹಿಸಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್ಗಳಲ್ಲಿ ಸಾವಿರಾರು ಬಾಂಗ್ಲಾ ದೇಶೀಯರಿದ್ದಾರೆ. ಇದಕ್ಕೆ ಎಸ್ಐಆರ್ ಅಂತ್ಯ ಹಾಡಲಿದೆ. ಗುರುತಿನ ಚೀಟಿ ಇರುವವರು ಭಯ ಪಡಬೇಕಿಲ್ಲ. ಪ್ರತಿ ಬೂತ್ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏಜೆಂಟ್ ಇರುವಾಗ ಅರ್ಹ, ನಿಜವಾದ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದು ಗಮನಸೆಳೆದರು. ಬಾಂಗ್ಲಾ ದೇಶದ ಮುಸ್ಲಿಮರ ಮತಗಳಿಂದ ಗೆಲ್ಲುತ್ತೇವೆಂದು…
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ ಸ್ಥಗಿತಗೊಂಡಿದ್ದು, ಕಳೆದ ಮೂರು ವರ್ಷದಿಂದ ಸರ್ಕಾರ ಇವರನ್ನು ಶೋಷಣೆ ಮಾಡುತ್ತಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ., ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ…
ಹಿಜಾಬ್ ಅನುಮತಿ ಕುರಿತು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶಾಸಕ ಯಶ್ಪಾಲ್ ಸುವರ್ಣ ಮತ್ತು ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಸುದ್ದಿಗೋಷ್ಠಿ ನಡೆಸಿದ ಸಿ.ಟಿ.ರವಿ, ಹಿಜಾಬ್ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ ಒಂದು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ ಎಂದರು. ಬಿಜೆಪಿ, ಹಿಜಾಬ್ ವಿರೋಧಿಯಲ್ಲ; ನಾವು ಹಿಜಾಬ್ ವಿರೋಧಿಸಿಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಯಾವಾಗಿನಿಂದ ಯೂನಿಫಾರಂ (ವಸ್ತ್ರಸಂಹಿತೆ) ಆರಂಭವಾಗಿದೆ? ಯಾವ ಉದ್ದೇಶಕ್ಕೆ ಅದು ಪ್ರಾರಂಭವಾಗಿದೆ? ಎಂದು ಕೇಳಿದ ಅವರು, ಅಕ್ಷರ ಮತ್ತು ಜ್ಞಾನ ಹೆಚ್ಚಿಸಬೇಕಾದ ಶಿಕ್ಷಣ ಸಚಿವರಿಗೆ ಅದರ ಉದ್ದೇಶದ ಬಗ್ಗೆಯೂ ಸ್ಪಷ್ಟತೆ ಇಲ್ಲ. ಅದರ ಇತಿಹಾಸದ ಅರಿವೂ ಇಲ್ಲ. ಕೇವಲ ಮತೀಯ ಓಲೈಕೆಯ ರಾಜನೀತಿಯ ಭಾಗವಾಗಿ ಶಾಲೆಗಳಲ್ಲಿ ಮತೀಯ ಭಾವನೆಗಳಿಗೆ ಜಾತ್ಯತೀತತೆಯ ಹೆಸರಿನಲ್ಲಿ ಅನುಮತಿ ಕೊಟ್ಟಿದ್ದಾರೆ…
ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ
ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕವನ್ನು ಶೇ.5ರಿಂದ ಶೇ.2ಕ್ಕೆ ಇಳಿಸಿ 100 ದಿನಗಳ “ಸುವರ್ಣ ಅವಕಾಶ” ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ನಾಗರಿಕರಿಗೆ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಹೇಳಿದರು. “ಬಿ ಖಾತಾವನ್ನು ಎ ಖಾತಾಗೆ ಪರಿವರ್ತಿಸಲು ಸಾಮಾನ್ಯವಾಗಿ ಗೈಡ್ಲೈನ್ ಮೌಲ್ಯದ ಶೇ.5 ಶುಲ್ಕ ವಿಧಿಸಲಾಗುತ್ತದೆ. ಆದರೆ ಮುಂದಿನ 100 ದಿನಗಳ ಕಾಲ ಕೇವಲ ಶೇ.2 ಶುಲ್ಕ ಮಾತ್ರ ವಿಧಿಸಲಾಗುತ್ತದೆ. ಇದರಿಂದ ಜನರಿಗೆ ಶೇ.60 ರಷ್ಟು ರಿಯಾಯಿತಿ ಸಿಗಲಿದೆ,” ಎಂದು ತಿಳಿಸಿದರು. ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಸಾಮಾನ್ಯವಾಗಿ 5 ಲಕ್ಷ ರೂ. ಶುಲ್ಕ ಬರುತ್ತದೆ. ಹೊಸ ಯೋಜನೆಯಡಿ ಅದು 2 ಲಕ್ಷ ರೂ.ಗೆ ಇಳಿಕೆಯಾಗಲಿದೆ ಎಂದು…
ಇವಿ ಚಾರ್ಜಿಂಗ್ ಜಾಲ ನಿರ್ಮಾಣಕ್ಕೆ ಕೇಂದ್ರ ಬದ್ಧ: ಕುಮಾರಸ್ವಾಮಿ
ಬೆಂಗಳೂರು: ದೇಶದಲ್ಲಿ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸಲು ಆಧುನಿಕ ಹಾಗೂ ವಿಶ್ವಾಸಾರ್ಹ ಇವಿ ಚಾರ್ಜಿಂಗ್ ವ್ಯವಸ್ಥೆ ನಿರ್ಮಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ “ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರವ್ಯಾಪಿ ಇವಿ ಚಾರ್ಜಿಂಗ್ ಮೂಲಸೌಕರ್ಯ” ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪಿಎಂ ಇ-ಡ್ರೈವ್ ಯೋಜನೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವಾಹನ ಬಳಕೆಯನ್ನು ಸುಲಭ ಮತ್ತು ಕೈಗೆಟುಕುವಂತೆ ಮಾಡುವ ಸರ್ಕಾರದ ಸಂಕಲ್ಪದ ಭಾಗವಾಗಿದೆ ಎಂದರು. ಕರ್ನಾಟಕದಲ್ಲಿ ₹123.26 ಕೋಟಿ ವೆಚ್ಚದಲ್ಲಿ 1,243 ಇವಿ ಚಾರ್ಜರ್ಗಳನ್ನು ಸ್ಥಾಪಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಇಲ್ಲಿಯವರೆಗೆ ವಿವಿಧ ರಾಜ್ಯಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ 4,874 ಇವಿ ಚಾರ್ಜರ್ಗಳ ಸ್ಥಾಪನೆಗಾಗಿ ₹503.86 ಕೋಟಿ ಮೌಲ್ಯದ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ. ಕರ್ನಾಟಕ,…
KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು ₹72.80 ಕೋಟಿ ಹಾಗೂ ವರ್ಷಕ್ಕೆ ₹873.64 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಸುಮಾರು 1.05 ಲಕ್ಷ ಸಿಬ್ಬಂದಿಗೆ ಈ ವೇತನ ಪರಿಷ್ಕರಣೆಯ ಲಾಭ ದೊರೆಯಲಿದೆ. ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಗೆ ಸಂಬಂಧಿಸಿದ 26 ತಿಂಗಳ ಹಿಂಬಾಕಿ ಮೊತ್ತ ₹1271.92 ಕೋಟಿಗಳ ಪೈಕಿ ಮೊದಲ ಕಂತಿನ ₹450 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದಲ್ಲದೆ, 2025ರ…
