ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ನಡುವೆಯೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾರತೀಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. “ಈ ದೇಶದ ಎಲ್ಲಾ ಜನರಿಗೆ, ವಿಶೇಷವಾಗಿ ದಕ್ಷಿಣ ಭಾರತದವರಿಗೆ ನಾನು ಮನವಿ ಮಾಡುತ್ತೇನೆ. ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನಮ್ಮ ಜನರಿಗೆ ನಾವು ಧೈರ್ಯ ಮತ್ತು ಶಕ್ತಿ ನೀಡಲು ಪ್ರಯತ್ನಿಸಬೇಕು,” ಎಂದು ಅವರು ಹೇಳಿದ್ದಾರೆ. ವಿದೇಶಗಳಲ್ಲಿ ಇರುವ ಭಾರತೀಯರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಹೇಳಿದ ಅವರು, “ಭಾರತದ ಎಲ್ಲಾ ನಾಗರಿಕರನ್ನು ರಕ್ಷಿಸಬೇಕು. ಈ ಜಗತ್ತಿನಲ್ಲಿ ಯಾರನ್ನೂ, ವಿಶೇಷವಾಗಿ ಮಕ್ಕಳನ್ನು ಈ ರೀತಿ ನಿರ್ದಯವಾಗಿ ಕೊಲ್ಲಬಾರದು,” ಎಂದು ಅಭಿಪ್ರಾಯಪಟ್ಟರು. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಮತ್ತು ಇತರ ಭಾರತೀಯರ ಸುರಕ್ಷತೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಮನವಿಯಾಗಿದೆ. Bengaluru | On Israel-Iran Conflict, Karnataka Dy CM DK Shivakumar…
Category: ವಿದೇಶ
ಗರ್ಭಕಂಠ ಕ್ಯಾನ್ಸರ್ ತಡೆಗೆ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ
ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಕೇಂದ್ರ ಸರ್ಕಾರದ ಆಶಯದಂತೆ ರಾಜ್ಯದಲ್ಲಿಯೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೆಬ್ಕ್ಯಾಸ್ಟ್ ಮೂಲಕ ಕಾರ್ಯಕ್ರಮ ವೀಕ್ಷಿಸಲಾಯಿತು. ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈಧ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್ ವ್ಯವಸ್ಥಾಪಕ ನಿರ್ದೇಶಕರಾದ ಅವಿನಾಶ್ ಮೆನನ್, ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್, ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು. 14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಸರ್ಕಾರಿ…
ಅಧಿಕಾರದ ಹೋರಾಟದಲ್ಲಿ ಸಿಎಂ-ಡಿಸಿಎಂ ತೊಡಗಿದ್ದಾರೆ; ಯುವಕರ ಸಮಸ್ಯೆ ನಿರ್ಲಕ್ಷ್ಯ: ವಿಜಯೇಂದ್ರ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ಯುವಜನರ ಬದುಕಿನ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಬಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಯುವಕರು ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು. “ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರ ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಳಗಾವಿ ವಿಧಾನಸಭಾ ಅಧಿವೇಶನದ ವೇಳೆ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಲಾಠಿ ಪ್ರಹಾರ ನಡೆಸಲಾಯಿತು. ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಲು ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು,” ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅಧಿಕಾರಕ್ಕಾಗಿ ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ,…
‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ…
‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ
ನವದೆಹಲಿ: ಭಾರತೀಯ ರೈಲ್ವೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮ ಉಪಕ್ರಮವನ್ನು ಪರಿಚಯಿಸುವ “Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಈ ಪುಸ್ತಕವು ಕೇವಲ ರೈಲು ಸೇವೆಯ ದಾಖಲೆಯಲ್ಲ; ನಂಬಿಕೆ, ಸಂಸ್ಕೃತಿ, ಪರಂಪರೆ ಹಾಗೂ ಆಧುನಿಕ ರೈಲ್ವೆ ಮೂಲಸೌಕರ್ಯಗಳ ಸಮನ್ವಯದ ಹಿಂದೆ ಇರುವ ದೃಷ್ಟಿ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಚಿತ್ರಿಸುತ್ತದೆ. ಐಆರ್ಟಿಎಸ್ (ನಿವೃತ್ತ) ಡಾ. ಅನುಪ್ ದಯಾನಂದ ಅವರ ಪರಿಕಲ್ಪನೆಯಲ್ಲಿ ಪುಸ್ತಕ ಮೂಡಿ ಬಂದಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ರೈಲ್ವೆಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸಮಿತಿಯ ಸದಸ್ಯ ಹರಿಶಂಕರ್ ವರ್ಮಾ, ಎನ್ಎಚ್ಎಂ ಹೆಚ್ಚುವರಿ ಸದಸ್ಯ ಕೆ.ಎಸ್. ಜೈನ್, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ಸಿಎಂಡಿ ಎಸ್.ಕೆ. ಜೈನ್ ಹಾಗೂ ಪ್ರವಾಸೋದ್ಯಮ ನಿರ್ದೇಶಕ ರಾಹುಲ್ ಹಿಮಾಲಯನ್ ಉಪಸ್ಥಿತರಿದ್ದರು. ಭಾರತೀಯ ರೈಲ್ವೆ…
ಜೂನ್ ಮುನ್ನ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
ಕಾರವಾರ: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಇದ್ದು, ಚುನಾವಣೆಗಳ ಬಳಿಕ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದರಿಂದ ಪುನಃ ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದೂ ತಿಳಿಸಿದರು. ಈ ವೇಳೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಶಾಸಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು
ಬೆಂಗಳೂರು: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹಾಡುಗಳ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಚಿತ್ರತಂಡದಲ್ಲಿ ಸಂಭ್ರಮ ಮನೆ ಮಾಡಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಜೀ ಮ್ಯೂಸಿಕ್ ಕಂಪನಿ ₹42 ಕೋಟಿಗೆ ಖರೀದಿಸಿದೆ ಎಂದು ತಂಡ ಮಾಹಿತಿ ನೀಡಿದೆ. ಹೋಲಿಕೆಗೆ, ‘ಧುರಂಧರ್ 2’ ಚಿತ್ರದ ಹಾಡುಗಳ ಹಕ್ಕು ₹27 ಕೋಟಿಗೆ ಮಾರಾಟವಾಗಿತ್ತು. ಈ ಮೂಲಕ ‘ಟಾಕ್ಸಿಕ್’ ಚಿತ್ರಕ್ಕೆ ₹15 ಕೋಟಿ ಹೆಚ್ಚುವರಿ ಆದಾಯ ಲಭಿಸಿದೆ. ‘ಧುರಂಧರ್ 2’ ಚಿತ್ರದ ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆದ ಬಳಿಕವೂ ಕಡಿಮೆ ಮೊತ್ತಕ್ಕೆ ಹಕ್ಕು ಮಾರಾಟವಾಗಿದ್ದ ಹಿನ್ನೆಲೆ, ‘ಟಾಕ್ಸಿಕ್’ಗೆ ದೊರೆತ ಮೊತ್ತ ಗಮನ ಸೆಳೆದಿದೆ. ಸಂಗೀತದ ವಿಚಾರದಲ್ಲೂ ಚಿತ್ರ ವಿಶೇಷತೆ ಹೊಂದಿದೆ. ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಮತ್ತೊಂದು ಹಾಡಿಗೆ ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಹಾಗೂ…
‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ
ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು ಎಂದಿದ್ದಾರೆ. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದವರು ತಿಳಿಸಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ.… pic.twitter.com/9igAeHXMx3 — Siddaramaiah (@siddaramaiah) February…
ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್’ಗೆ ಸುನಿಲ್ ಜೋಶಿ ಹೆಸರು
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರ ಮೈದಾನದ ಪೆವಿಲಿಯನ್ ಬ್ಲಾಕ್ಗೆ ಇಡುವುದಾಗಿ ಪ್ರಕಟಿಸಿದೆ. ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿರುವ ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ನಾಮಕರಣ ಸಮಾರಂಭ ನಡೆಯಲಿದೆ. ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಕ್ರಿಕೆಟ್ ಪಯಣವನ್ನು ರೂಪಿಸಿಕೊಂಡಿದ್ದು, ರಾಜ್ಯದ ಪ್ರಮುಖ ಕ್ರಿಕೆಟ್ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಕೆಎಸ್ಸಿಎ ತಿಳಿಸಿದೆ. “ಪೆವಿಲಿಯನ್ಗೆ ಅವರ ಹೆಸರಿಡುವುದು ಅವರ ಸಾಧನೆಗಳಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಯುವಕರಿಗೆ ಸ್ಫೂರ್ತಿಯಾಗಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ…
CT, MRI ಸ್ಕ್ಯಾನಿಂಗ್ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. CT ಮತ್ತು MRI ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು ಆಗಸ್ಟ್ 30, 2024ರಂದು ಜಾರಿಗೆ ತಂದಿತು. ಇದರ ಪರಿಣಾಮವಾಗಿ 2024ರ ಏಪ್ರಿಲ್ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆದು, ಅದಕ್ಕೆ 15.24 ಕೋಟಿ…
