ನವದೆಹಲಿ: ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಿಂದ ಯಾವುದೇ ರೀತಿಯ ಹಣಕಾಸು ನೆರವು ಅಥವಾ ಅನುದಾನ ಪಡೆಯದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026 ಅನ್ವಯಿಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ. ಶಿಕ್ಷಣ ಹಕ್ಕು ಕಾಯ್ದೆ (RTE Act), 2009ರ ಸೆಕ್ಷನ್ 21 ಅಡಿಯಲ್ಲಿ ಹೊಸ ಮಾರ್ಗಸೂಚಿಗಳ ಅನ್ವಯ ಕುರಿತಾಗಿ ವಿವಿಧ ವಲಯಗಳಿಂದ ವ್ಯಕ್ತವಾದ ಗೊಂದಲ ಮತ್ತು ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಸಚಿವಾಲಯ ಈ ಸ್ಪಷ್ಟೀಕರಣ ನೀಡಿದೆ. ಶಾಲಾ ಶಿಕ್ಷಣದಲ್ಲಿ ಸಮುದಾಯದ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯ ಮೇ 6ರಂದು ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026 ಅನ್ನು ಪ್ರಕಟಿಸಿತ್ತು. ಸಚಿವಾಲಯದ ಪ್ರಕಾರ, ಶಾಲೆಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುವುದು, ಸಮುದಾಯದ ಮಾಲೀಕತ್ವವನ್ನು ಖಚಿತಪಡಿಸುವುದು ಹಾಗೂ ಸಮಗ್ರ ಮತ್ತು ಬೆಂಬಲಿತ ಕಲಿಕಾ ವಾತಾವರಣ ನಿರ್ಮಿಸುವುದು ಈ ಮಾರ್ಗಸೂಚಿಗಳ…
Category: ದೇಶ-ವಿದೇಶ
ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್
ನವದೆಹಲಿ: ತಂತ್ರಜ್ಞಾನ, ರಕ್ಷಣೆ, ಡಿಜಿಟಲ್ ಮೂಲಸೌಕರ್ಯ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ವೈದ್ಯಕೀಯ ಸಾಧನಗಳಂತಹ ಕ್ಷೇತ್ರಗಳಲ್ಲಿ ಬಲವಾದ ಪೂರಕತೆ ಹಾಗೂ ಪರಸ್ಪರ ನಂಬಿಕೆಯ ಆಧಾರದ ಮೇಲೆ ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳು ನೈಸರ್ಗಿಕ ಪಾಲುದಾರರಾಗಿ ಹೊರಹೊಮ್ಮುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ನ ವಾರ್ಷಿಕ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳಲ್ಲಿ ಅಮೆರಿಕನ್ ಕಂಪನಿಗಳಿಂದ 60 ಶತಕೋಟಿ ಡಾಲರ್ಗಿಂತ ಹೆಚ್ಚಿನ ಹೂಡಿಕೆ ಬದ್ಧತೆಗಳು ವ್ಯಕ್ತವಾಗಿವೆ ಎಂದು ಹೇಳಿದರು. ಅಮೆಜಾನ್ ಮತ್ತು ಗೂಗಲ್ ಕಂಪನಿಗಳ ಡೇಟಾ ಸೆಂಟರ್ ಹೂಡಿಕೆಗಳನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು. ಭಾರತವು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ಗೌರವ ನೀಡುವ ಜೊತೆಗೆ ಗುಣಮಟ್ಟದ ಉತ್ಪಾದನೆ ಮತ್ತು ಸಮಯಪಾಲನೆ ಮೂಲಕ ವಿಶ್ವಾಸಾರ್ಹ ಜಾಗತಿಕ ಪಾಲುದಾರನಾಗಿ ಗುರುತಿಸಿಕೊಂಡಿದೆ ಎಂದು ಗೋಯಲ್ ಹೇಳಿದರು. ಭಾರತ…
ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ
ಮುಂಬೈ: ದೇಶದಲ್ಲಿ ಕಾರ್ಪೊರೇಟ್ ಆಡಳಿತ, ESG (ಪರಿಸರ, ಸಾಮಾಜಿಕ ಮತ್ತು ಆಡಳಿತಾತ್ಮಕ) ಅಭ್ಯಾಸಗಳು ಹಾಗೂ ಬಂಡವಾಳ ಮಾರುಕಟ್ಟೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸ್ಥಾಪಿತ ರಾಷ್ಟ್ರೀಯ ಸೆಕ್ಯುರಿಟೀಸ್ ಮಾರ್ಕೆಟ್ಸ್ ಸಂಸ್ಥೆ (NISM) ಮತ್ತು ಭಾರತೀಯ ಕಾರ್ಪೊರೇಟ್ ವ್ಯವಹಾರಗಳ ಸಂಸ್ಥೆ (IICA) ನಡುವೆ ಮಹತ್ವದ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲಾಗಿದೆ. ಮೇ 19 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ SEBI ಅಧ್ಯಕ್ಷ ತುಹಿನ್ ಕಾಂತ ಪಾಂಡೆ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಒಪ್ಪಂದದಡಿ SEBI ಅಧಿಕಾರಿಗಳು, ನಿಯಂತ್ರಕ ಸಂಸ್ಥೆಗಳು ಹಾಗೂ ಹಣಕಾಸು ವಲಯದ ಅಧಿಕಾರಿಗಳಿಗೆ ಜಂಟಿಯಾಗಿ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳು, ಪ್ರಮಾಣೀಕರಣ ಕೋರ್ಸ್ಗಳು, ಕಾರ್ಯನಿರ್ವಾಹಕ ಶಿಕ್ಷಣ ಮತ್ತು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಎರಡೂ ಸಂಸ್ಥೆಗಳು ಕೈಜೋಡಿಸಲಿವೆ. ಈ ಸಂದರ್ಭದಲ್ಲಿ ಮಾತನಾಡಿದ ತುಹಿನ್ ಕಾಂತ ಪಾಂಡೆ, ಕಾರ್ಯಕ್ಷಮತೆ…
ಅನುಮಾನಾಸ್ಪದ ಚಟುವಟಿಕೆ ಕಂಡರೆ 139ಕ್ಕೆ ಮಾಹಿತಿ ನೀಡಿ; ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ
ನವದೆಹಲಿ: ರೈಲು ಪ್ರಯಾಣದ ವೇಳೆ ಪ್ರಯಾಣಿಕರು ಹೆಚ್ಚು ಎಚ್ಚರಿಕೆಯಿಂದಿದ್ದು, ಯಾವುದೇ ಅನುಮಾನಾಸ್ಪದ ಅಥವಾ ಸಮಾಜ ವಿರೋಧಿ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ರೈಲ್ವೆ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ರೈಲ್ವೆ ಸಚಿವಾಲಯ ಮನವಿ ಮಾಡಿದೆ. ರೈಲ್ವೆ ಆಸ್ತಿ ಮತ್ತು ಸೇವೆಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆದ ಕೆಲವು ಘಟನೆಗಳ ಹಿನ್ನೆಲೆ ನವದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಬಳಿಕ ಈ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಮತ್ತು ರವನೀತ್ ಸಿಂಗ್ ಬಿಟ್ಟು, ರೈಲ್ವೆ ಮಂಡಳಿಯ ಅಧ್ಯಕ್ಷರು ಹಾಗೂ ವಿವಿಧ ವಲಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಪರಿಶೀಲನಾ ಸಭೆಯಲ್ಲಿ ಬೆಂಕಿ ಅವಘಡಗಳು ಸೇರಿದಂತೆ ಇತ್ತೀಚಿನ ಕೆಲವು ಘಟನೆಗಳ ಪ್ರಾಥಮಿಕ ತನಿಖೆಯಲ್ಲಿ ಸಮಾಜ ವಿರೋಧಿ ಶಕ್ತಿಗಳ ಕೈವಾಡ ಇರುವ ಸಾಧ್ಯತೆ ಕಂಡುಬಂದಿದೆ…
ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ
ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ 89 ರನ್ಗಳ ಸೋಲು ಕಂಡು ಪ್ಲೇಆಫ್ ಕನಸು ಭಗ್ನಗೊಂಡಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ಸಾಯಿ ಸುದರ್ಶನ್ (84), ಶುಭಮನ್ ಗಿಲ್ (64) ಹಾಗೂ ಜೋಸ್ ಬಟ್ಲರ್ (ಅಜೇಯ 57) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಕಲೆಹಾಕಿತು. ಬೃಹತ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರೆ, ಕಗಿಸೊ ರಬಾಡ ಮತ್ತು ರಶೀದ್ ಖಾನ್ ಮಿಂಚಿನ ಬೌಲಿಂಗ್ ಪ್ರದರ್ಶಿಸಿದರು. ಪರಿಣಾಮ, ಸಿಎಸ್ಕೆ ತಂಡ ಕೇವಲ 13.4…
ಭಾರತ್ ಇನ್ನೋವೇಟ್ಸ್ 2026ಕ್ಕೂ ಮುನ್ನ ಬೆಂಗಳೂರಿನಲ್ಲಿ ಹೂಡಿಕೆದಾರರ ಪ್ರದರ್ಶನ
ಬೆಂಗಳೂರು: ಫ್ರಾನ್ಸ್ನ ನೈಸ್ ನಗರದಲ್ಲಿ ಜೂನ್ 14ರಿಂದ 16ರವರೆಗೆ ನಡೆಯಲಿರುವ “ಭಾರತ್ ಇನ್ನೋವೇಟ್ಸ್ 2026” ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿಕ್ಷಣ ಸಚಿವಾಲಯವು ಇಂಡಿಯನ್ ವೆಂಚರ್ ಅಂಡ್ ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ಸಹಯೋಗದಲ್ಲಿ ಬೆಂಗಳೂರಿನಲ್ಲಿ “ಭಾರತ್ ಇನ್ನೋವೇಟ್ಸ್ ಹೂಡಿಕೆದಾರರ ಪ್ರದರ್ಶನ” ಆಯೋಜಿಸಿತು. ಈ ಪ್ರದರ್ಶನದಲ್ಲಿ ಆಯ್ಕೆಯಾದ 24 ಭಾರತೀಯ ಡೀಪ್-ಟೆಕ್ ಸ್ಟಾರ್ಟ್ಅಪ್ಗಳು ಹಾಗೂ ಭಾರತ ಮತ್ತು ವಿದೇಶಗಳ 90ಕ್ಕೂ ಹೆಚ್ಚು ಪ್ರಮುಖ ಹೂಡಿಕೆದಾರರು ಭಾಗವಹಿಸಿದ್ದರು. ಭಾಗವಹಿಸಿದ ಹೂಡಿಕೆ ಸಂಸ್ಥೆಗಳ ಒಟ್ಟು ಆಸ್ತಿ ಮೌಲ್ಯವು 85 ಬಿಲಿಯನ್ ಅಮೆರಿಕನ್ ಡಾಲರ್ಗಿಂತ ಅಧಿಕವಾಗಿದೆ ಎಂದು ತಿಳಿಸಲಾಗಿದೆ. ಪೀಕ್ XV ಪಾರ್ಟ್ನರ್ಸ್, ಆಕ್ಸೆಲ್, ಬೆಸ್ಸೆಮರ್ ವೆಂಚರ್ ಪಾರ್ಟ್ನರ್ಸ್, ಅವನಾ ಕ್ಯಾಪಿಟಲ್, ಬ್ಲೂಮ್ ವೆಂಚರ್ಸ್, ಕಲಾರಿ ಕ್ಯಾಪಿಟಲ್, ಚಿರಾಟೇ ವೆಂಚರ್ಸ್, ಅವೆಂಡಸ್ ಕ್ಯಾಪಿಟಲ್ ಮತ್ತು ಓಮ್ನಿವೋರ್ ಸೇರಿದಂತೆ ಪ್ರಮುಖ ಹೂಡಿಕೆ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಉನ್ನತ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಸೌಮ್ಯ ಗುಪ್ತಾ…
ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು
ನವದೆಹಲಿ: ‘ಹಣ್ಣುಗಳ ರಾಜ’ ಎಂದೇ ಖ್ಯಾತಿ ಪಡೆದಿರುವ ಮಾವಿನಹಣ್ಣು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಆತಂಕಕ್ಕೂ ಕಾರಣವಾಗುತ್ತಿದೆ. ಮಧುಮೇಹ, ತೂಕ ಹೆಚ್ಚಳ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆ ಭಯದಿಂದ ಅನೇಕರು ಮಾವು ತಿನ್ನುವುದನ್ನು ತಪ್ಪಿಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ, ಮಿತವಾಗಿ ಸೇವಿಸಿದರೆ ಮಾವು ಆರೋಗ್ಯಕ್ಕೆ ಹಾನಿಕಾರಕವಲ್ಲ. ನವಿ ಮುಂಬೈನ ಮೆಡಿಕವರ್ ಆಸ್ಪತ್ರೆಯ ಆಹಾರ ತಜ್ಞೆ ಐಶ್ವರ್ಯಾ ಮೋರ್ ಅವರ ಪ್ರಕಾರ, ಆಧುನಿಕ ಜೀವನಶೈಲಿ, ಕಡಿಮೆ ದೈಹಿಕ ಚಟುವಟಿಕೆ ಮತ್ತು ಸಂಸ್ಕರಿತ ಆಹಾರಗಳ ಹೆಚ್ಚಿದ ಬಳಕೆಯಿಂದ ಸಿಹಿ ಹಣ್ಣುಗಳ ಬಗ್ಗೆ ಜನರಲ್ಲಿ ಭಯ ಹೆಚ್ಚಾಗಿದೆ. “ಮಾವು ಸಮಸ್ಯೆಯಲ್ಲ, ಅತಿಯಾಗಿ ಸೇವಿಸುವುದೇ ಸಮಸ್ಯೆ” ಎಂದು ಅವರು ಹೇಳಿದ್ದಾರೆ. ಹಿಂದಿನ ಕಾಲದಲ್ಲಿ ಮಾವನ್ನು ಕಾಲಾನುಸಾರವಾಗಿ ಮತ್ತು ಸಕ್ರಿಯ ಜೀವನಶೈಲಿಯೊಂದಿಗೆ ಸೇವಿಸಲಾಗುತ್ತಿತ್ತು. ಆದರೆ ಈಗ ಜಡ ಜೀವನಶೈಲಿ ಹಾಗೂ ಅತಿಯಾದ ಆಹಾರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಆರೋಗ್ಯವಂತ…
ಎಲೆಕ್ಟ್ರಿಕ್ ಬಸ್, ಟ್ರಕ್ ಬಳಕೆ ಹೆಚ್ಚಿಸಲು ಕೇಂದ್ರದ ಚಿಂತನೆ
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ಬಸ್ಗಳು ಮತ್ತು ಎಲೆಕ್ಟ್ರಿಕ್ ಟ್ರಕ್ಗಳ ಬಳಕೆಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ವಲಯದಲ್ಲಿ ಇವಿ ವಾಣಿಜ್ಯ ವಾಹನಗಳ ಅಳವಡಿಕೆಗೆ ಹಣಕಾಸು ನೆರವು ಮತ್ತು ಹೊಸ ವ್ಯವಸ್ಥೆಗಳ ಕುರಿತು ಚರ್ಚಿಸಲು ಭಾರೀ ಕೈಗಾರಿಕಾ ಸಚಿವಾಲಯ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿತು. ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ ಹಾಗೂ ಎಸ್ಐಡಿಬಿಐ ಸೇರಿದಂತೆ ಹಲವು ಬ್ಯಾಂಕ್ಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು. ಸಾರಿಗೆ ಸಂಘಟನೆಗಳು ಮತ್ತು ಖಾಸಗಿ ಬಸ್, ಟ್ರಕ್ ನಿರ್ವಾಹಕರ ಪ್ರತಿನಿಧಿಗಳೂ ಉಪಸ್ಥಿತರಿದ್ದರು. ಎಲೆಕ್ಟ್ರಿಕ್ ವಾಣಿಜ್ಯ ವಾಹನ ಖರೀದಿಯಲ್ಲಿ ಎದುರಾಗುತ್ತಿರುವ ಹಣಕಾಸು ಸಮಸ್ಯೆಗಳು ಸಭೆಯ ಪ್ರಮುಖ ಚರ್ಚಾ ವಿಷಯವಾಗಿತ್ತು. ಸಾಲ ಮಂಜೂರಿಗೆ ಅನುಕೂಲವಾಗುವಂತೆ ಕ್ರೆಡಿಟ್…
ಐದು ರಾಷ್ಟ್ರಗಳ ಮೋದಿ ಪ್ರವಾಸದಿಂದ ಭಾರತಕ್ಕೆ ಹೆಚ್ಚಿದ ರಾಜತಾಂತ್ರಿಕ ಬಲ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಐದು ರಾಷ್ಟ್ರಗಳ ಪ್ರವಾಸವು ಜಾಗತಿಕ ಮಟ್ಟದಲ್ಲಿ ಭಾರತದ ಕಾರ್ಯತಂತ್ರ, ಆರ್ಥಿಕ ಹಾಗೂ ಭೌಗೋಳಿಕ ರಾಜಕೀಯ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ಪ್ರಧಾನಿ ಮೋದಿ ನಡೆಸಿದ ಭೇಟಿಗಳು ಭಾರತವನ್ನು ವಿಶ್ವಾಸಾರ್ಹ ಜಾಗತಿಕ ಶಕ್ತಿಯಾಗಿ ಪ್ರತಿಷ್ಠಾಪಿಸಿವೆ ಎಂದು ಹೇಳಿದ್ದಾರೆ. ಯುಎಇ ಭೇಟಿಯ ವೇಳೆ ಕಚ್ಚಾ ತೈಲ ಪೂರೈಕೆ, ಎಲ್ಎನ್ಜಿ ಹಾಗೂ ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪಗಳ ಕ್ಷೇತ್ರದಲ್ಲಿ ಮಹತ್ವದ ಸಹಕಾರ ವಿಸ್ತರಿಸಲಾಗಿದೆ. ಸ್ಥಳೀಯ ಕರೆನ್ಸಿ ವ್ಯಾಪಾರಕ್ಕೂ ಉತ್ತೇಜನ ದೊರೆತಿದೆ ಎಂದು ಮಾಳವೀಯ ಉಲ್ಲೇಖಿಸಿದ್ದಾರೆ. ಯುರೋಪಿಯನ್ ರಾಷ್ಟ್ರಗಳೊಂದಿಗೆ ನಡೆದ ಮಾತುಕತೆಯಲ್ಲಿ ಸೆಮಿಕಂಡಕ್ಟರ್, ಚಿಪ್ ಉತ್ಪಾದನೆ, ಸೈಬರ್ ಭದ್ರತೆ, ಕೃತಕ ಬುದ್ಧಿಮತ್ತೆ, 6G ಸಂಶೋಧನೆ ಮತ್ತು ಸುಧಾರಿತ ತಂತ್ರಜ್ಞಾನ ಕ್ಷೇತ್ರಗಳಲ್ಲಿ…
ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ: ಏರುತ್ತಿರುವ ಹಣದುಬ್ಬರ, ನಿರುದ್ಯೋಗ, ಇಂಧನ ದರ ಏರಿಕೆ ಮತ್ತು ಆರ್ಥಿಕ ಸಂಕಷ್ಟಗಳ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, “ಮೋದಿ ಸರ್ಕಾರದ ಲೂಟಿಯ ಸಂಕಷ್ಟದಲ್ಲಿದ್ದರೂ ಜನರು ಭಾಷಣಗಳ ಮಧುರವನ್ನು ಆನಂದಿಸಬೇಕು ಎಂದು ಪ್ರಧಾನಿ ಬಯಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ. ಕಳೆದ 11 ವರ್ಷಗಳಲ್ಲಿ ಪ್ರತಿಯೊಬ್ಬ ಭಾರತೀಯನ ಮೇಲಿನ ಸರಾಸರಿ ಸಾಲದ ಹೊರೆ ಗಣನೀಯವಾಗಿ ಹೆಚ್ಚಿದೆಯಾದರೆ, ಮತ್ತೊಂದೆಡೆ ಕೋಟ್ಯಾಧಿಪತಿಗಳ ಸಂಪತ್ತು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸಿದ ಖರ್ಗೆ, 2014ರಿಂದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಶೇ.121ರಷ್ಟು ಹಾಗೂ ವಾಣಿಜ್ಯ ಎಲ್ಪಿಜಿ ದರ ಶೇ.154ರಷ್ಟು ಹೆಚ್ಚಾಗಿದೆ ಎಂದು ಹೇಳಿದರು. ಸಿಎನ್ಜಿ, ಹಾಲು, ಬ್ರೆಡ್ ಮತ್ತು ಔಷಧಿಗಳ ಬೆಲೆಯೂ ಭಾರೀ…
