‘ಗ್ಯಾರೆಂಟಿ’ ಪರಿಪೂರ್ಣ ; ಸಿದ್ದು ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಗೊಳಿಸಲೇಬೇಕೆಂಬ ಸವಾಲೊಂಡ್ಡಿರುವ ಬಿಜೆಪಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ ‌. ಹೋರಾಟ ಕುರಿತಂತೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾಹಿತಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು. ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ…

ಯತ್ನಾಳ್-ರೇಣುಕಾಚಾರ್ಯ ವಾಕ್ಸಮರ; ಬಿಜೆಪಿ‌ ನಾಯಕರಿಗೆ ನೊಟೀಸ್..

ಬೆಂಗಳೂರು: ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಅದರಲ್ಲೂ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ನಡುವಿನ ವಾಕ್ಸಮರ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ. ನಾಯಕರ ವಾಕ್ಸಮರ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಹಿತ ಕೆಲವರಿಗೆ ನೋಟಿಸ್ ನೀಡಿದೆ. ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿರುವ ವರಿಷ್ಠರು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿದ್ದಾರೆ ಎನ್ನಲಾಗಿದೆ.

ಯೂರಿಯಾ ಸಬ್ಬಿಡಿ; ಖುಷಿ ತಂದ ಕೇಂದ್ರದ ನಿರ್ಧಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್‍ಆರ್‍ಪಿ ದರವನ್ನು ಪ್ರತಿ ಟನ್ ಗೆ 100 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಸರ್ಕಾರ 2014-15ನೇ ಸಾಲಿನಲ್ಲಿ ಪ್ರತಿ ಟನ್ ಗೆ 2100 ರೂ. ಇದ್ದ ಎಫ್‍ಆರ್‍ಪಿ ದರವನ್ನು ಇಂದು 2023-24ನೇ ಸಾಲಿನಲ್ಲಿ ಟನ್ ಗೆ 3150 ರೂ.ಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 5 ಕೋಟಿ ಕಬ್ಬು ಬೆಳೆಗಾರರಿಗೆ ಮತ್ತು 5 ಲಕ್ಷ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಗೊಬ್ಬರದ ಬೆಲೆಗಳು ಪ್ರತಿ ವರ್ಷ ಜಾಗತಿಕವಾಗಿ ಬಹುಪಟ್ಟು ಹೆಚ್ಚಾಗುತ್ತಿವೆ. ಆದರೆ ಕೇಂದ್ರ…

ಭ್ರಷ್ಟರಿಂದ HSRP ಕಬ್ಜ? ಸಣ್ಣ ವ್ಯಾಪಾರಿಗಳ ಮೇಲೆ ತೂಗುಗತ್ತಿ

ಬೆಂಗಳೂರು: ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ಹಳಿತಪ್ಪಿದೆ. ಈ ವರೆಗೂ ಒಂದಿಲ್ಲೊಂದು ಹಗರಣಗಳಿಗೆ ಸಾಕ್ಷಿಯಾಗುತ್ತಿರುವ ಸಾಕ್ಷಿಯಾಗಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಹುಕೋಟಿ ಅಕ್ರಮದ ಹಾದಿಯಲ್ಲಿದೆ. ಅತೀ ಸುರಕ್ಷಾ ನೋಂದಣಿ ಫಲಕ (HSRP) ಯೋಜನೆಯು ಜಾರಿಗೆ ಮುನ್ನವೇ ಅವ್ಯವಹಾರಕ್ಕೆ ನಾಂದಿ ಹಾಡಿರುವ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಭ್ರಷ್ಟಾಚಾರ ವಿರುದ್ಧ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲೆಂಬಂತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವ್ವಿದ್ಯಾರ್ಥಿಗಳ ಒಕ್ಕೂಟ ನೀಡಿರುವ ಈ ದೂರು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಏನಿದು ಕರ್ಮಕಾಂಡ? ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ಕೃತ್ಯಗಳನ್ನು ನಡೆಸುವುದನ್ನು ತಡೆಯಲು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ ಆಧುನಿಕ ವ್ಯವಸ್ಥೆಯಾಗಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ…

ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಬೆಂಗಳೂರು: ದೇಶದ ಐದು ಕಡೆಗಳಲ್ಲಿ ನಮ್ಮೆಲ್ಲರ ಕನಸಿನ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ಜನರು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ಬೆಂಗಳೂರು ತಲುಪಲು ಅನುಕೂಲವಾಗಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನತೆಗೆ ಈ ಸೌಲಭ್ಯ ಒದಗಿಸಿಕೊಟ್ಟ ನಮ್ಮ ನೆಚ್ಚಿನ ಪ್ರಧಾನಮಂತ್ರಿ ‌ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ನಮ್ಮವರೇ ಆದ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. .…

ಲೋಕಸಭಾ ಚುನಾವಣೆ ಹೊತ್ತಿಗೆ ರಾಜ್ಯ ಬಿಜೆಪಿ ಮತ್ತಷ್ಟು ಹೀನಾಯ ಸ್ಥಿತಿಗೆ; ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯವರ ಹಣೆ ಬರಹಕ್ಕೆ ಎಂದಿಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಅವರ ಸ್ಥಿತಿಯನ್ನು ನೋಡಿದರೆ ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೋಚರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ನಡೆ ಬಗ್ಗೆ ಶೆಟ್ಟರ್ ಆಕ್ರೋಶ ಹೊರಹಾಕಿದರು. ಬಿಜೆಪಿಯ ಆಂತರಿಕ ಸಮಸ್ಯೆಗಳನ್ನು ಗಮನಿಸಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ಇನ್ನಷ್ಟು ದಯನೀಯ ಸ್ಥಿತಿಗೆ ತಲುಪಲಿದೆ ಎಂದು ವಿಶ್ಲೇಷಿಸಿದರು. ಬಿಜೆಪಿಯವರು ತಮ್ಮ ವಿರುದ್ಧ ಸಣ್ಣ ಮಟ್ಟದ ಟೀಕೆಗೆ ಮುಂದಾಗಿರುವುದಕ್ಕೆ ಅಸನಾಧಾನ ಹೊರಹಾಕಿದ ಅವರು, ನಾನು ಅಷ್ಟು ಸಣ್ಣ ಮಟ್ಟಕ್ಕೆ ಇಳಿದು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿಯವರು ಮುಂದಿನ ದಿನಗಳಲ್ಲಿ ಇನ್ನೇನು ಆಗಲಿದ್ದಾರೆ ನೋಡುತ್ತಾ ಇರಿ ಎಂದರು. ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳನ್ನು…

ಸರ್ಕಾರಿ ವೈದ್ಯರ ಶಿಸ್ತು ಬಗ್ಗೆ ನಿಗಾ.. ಆಯೋಗದ ಶಿಫಾರಸು..

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣ ಆಯೋಗ-2 ಸಲಹೆ ಮಾಡಿದೆ. ಸರ್ಕಾರ ವೈದ್ಯರು ಖಾಸಗಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಅಂಕುಶ ಹಾಕಬೇಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಸೂತ್ರ ನಿರ್ವಹಣೆಗಾಗಿ ವ್ಯವಸ್ಥಾಪಕರನ್ನು ನೇಮಿಸಬೇಕೆಂದೂ ಆಯೋಗ ಶಿಫಾರಸು ಮಾಡಿದೆ. ಈ ವರದಿ ಸರ್ಕಾರಕ್ಕೆ ಗುರುವಾರ ಸಲ್ಲಿಕೆಯಾಗಿದೆ. ವರದಿಯಲ್ಲಿನ ಪ್ರಮುಖ ಅಂಶಗಳು ಹೀಗಿವೆ:   ಆರೋಗ್ಯ ಇಲಾಖೆಯಲ್ಲಿ ನರ್ಸರಿಂಗ್‌ ನಿರ್ದೇಶನಾಲಯ ಸ್ಥಾಪಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಜೆ ಒಪಿಡಿಗಳನ್ನು ಪ್ರಾರಂಭಿಸಬೇಕು. ಒಳರೋಗಿಗಳ ಮತ್ತು ಹೆರಿಗೆಗಳ ಸಂಖ್ಯೆಯನ್ನು ಆಧರಿಸಿ ತಾಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ 50 ಹೊಸ ಸಾಮಾನ್ಯ ಹಾಸಿಗೆಗಳನ್ನು ಮಂಜೂರು ಮಾಡಬೇಕು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ತ್ರೀರೋಗ ತಜ್ಞರು, ಮಕ್ಕಳ ವೈದ್ಯರು, ಅರಿವಳಿಕೆ ತಜ್ಞರು, ದಂತ ಶಸ್ತ್ರಚಿಕಿತ್ಸಕರು ವಾರಕ್ಕೊಮ್ಮೆ ಗಂಟೆಯ ಆಧಾರದಲ್ಲಿ ಸೇವೆ ನೀಡುವಂತಾಗಬೇಕು. ಮೂಳೆಚಿಕಿತ್ಸಕ, ಮನೋವೈದ್ಯರು, ಫಿಸಿಯೋಥೆರಪಿಸ್ಟ್‌ ತಿಂಗಳಿಗೊಮ್ಮೆ ಗಂಟೆಯ ಆಧಾರದಲ್ಲಿ ತಜ್ಞರ ಸೇವೆಗಳನ್ನು ಪಡೆಯಲು…

ಅಕ್ಕಿ ಜಟಾಪಟಿ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…

ಅನ್ನಭಾಗ್ಯಕ್ಕಾಗಿ ಅಕ್ಕಿ ಹುಡುಕಾಟ; ಛತ್ತೀಸ್‌ಗಡದಲ್ಲಿ1.5 ಲಕ್ಷ ಮೆ.ಟನ್ ಲಭ್ಯ 

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ‌ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ, ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.