ಪಹಲ್ಗಾಮ್ ದಾಳಿಗೆ ಬಾಲಿವುಡ್ ಗಣ್ಯರು ಖಂಡನೆ; ನಟಿ ಸಾರಾ ಅಲಿ ಖಾನ್ ಪ್ರತಿಕ್ರಿಯೆ ಇದು

ಮುಂಬೈ: ಹಲವಾರು ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಭೀಕರ ಪಹಲ್ಗಾಮ್ ದಾಳಿಯ ನಂತರ ನಟಿ ಸಾರಾ ಅಲಿ ಖಾನ್ ಕೂಡ ಎದೆಗುಂದಿದ್ದಾರೆ. ‘ಕೇದಾರನಾಥ್’ ನಟಿ ಈ ಅನಾಗರಿಕ ಕ್ರೌರ್ಯದಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. ಪಾದಯಾತ್ರೆಯ ನಡುವೆ ತನ್ನ ಫೋಟೋ ಹಂಚಿಕೊಂಡಿರುವ ಸಾರಾ, ಕಾಶ್ಮೀರವು ತುಂಬಾ ಶಾಂತ, ಶಾಂತಿಯುತ ಮತ್ತು ಸುಂದರವಾಗಿತ್ತು ಎಂದು ಹಳೆಯ ನೆನಪುಗಳನ್ನು ಹೊಂದಿರುವ ಪೋಸ್ಟ್ ಹಾಕಿದ್ದಾರೆ. “ಈ ಅನಾಗರಿಕ ಕ್ರೌರ್ಯದಿಂದ ಹೃದಯ ವಿದ್ರಾವಕ, ಆಘಾತಕಾರಿ ಮತ್ತು ದಿಗ್ಭ್ರಮೆಗೊಂಡ. ಭೂಮಿಯ ಮೇಲಿನ ನಮ್ಮ ಸ್ವರ್ಗ – ತುಂಬಾ ಶಾಂತ, ಶಾಂತಿಯುತ ಮತ್ತು ಸುಂದರವೆಂದು ಭಾವಿಸಿದ ಸ್ಥಳ. ಶಾಂತಿ ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ” ಎಂದು ಸಾರಾ ಬರೆದಿದ್ದಾರೆ. ಭೀಕರ ದಾಳಿಯಿಂದ ಇಡೀ ಚಲನಚಿತ್ರೋದ್ಯಮ ಆಘಾತಕ್ಕೊಳಗಾಗಿದೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಪ್ರಿಯಾಂಕಾ ಚೋಪ್ರಾ, ಹೃತಿಕ್ ರೋಷನ್, ಶಾಹಿದ್ ಕಪೂರ್, ಆಲಿಯಾ ಭಟ್, ಅನುಷ್ಕಾ ಶರ್ಮಾ, ಅಕ್ಷಯ್ ಕುಮಾರ್,…

ಪಾಕಿಸ್ತಾನ ವಿರುದ್ಧ ಭಾರತದಿಂದ ರಾಜತಾಂತ್ರಿಕ ಸಮರ ಘೋಷಣೆ

ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ಬಳಿ ಮಂಗಳವಾರ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಯುದ್ಧ ಘೋಷಿಸಿದೆ. ಪಹಲ್ಗಮ್ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಗೊತ್ತಾಗುತ್ತಿದ್ದಂತೆಯೇ ಮೋದಿ ಸರ್ಕಾರ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಸಂಬಂಧ ಪ್ರಧಾನಿ ಉಪಸ್ಥಿತಿಯಲ್ಲಿ ಬುಧವಾರ ಭದ್ರತೆ ಕುರಿತ ಸಂಪುಟ ಉಪಸಮಿತಿ ಸಭೆ ನಡೆಯಿತು. ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು. ಪ್ರಮುಖ ಘೋಷಣೆಗಳು: ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು. ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ರದ್ದು ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು. ಭಾರತ ತೊರೆಯಲು ಪಾಕಿಸ್ತಾನಿಯಾರಿಗೆ 48 ಗಂಟೆಗಳ ಗಡುವು. ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚುವುದು.

ಪಹಲ್ಗಾಮ್ ದಾಳಿ: ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಗುಂಡಿನ ದಾಳಿ ನಡೆಸಿರುವ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಪಹಲ್ಗಮ್ ಬಳಿ ಉಗ್ರರು ಹಿಂದೂಗಳನ್ನು ಗುರಿಯಾಗಿಸಿ ಪೈಶಾಚಿಕತೆ ಮೆರೆದಿದ್ದರು. 26 ಮಂದಿಯನ್ನು ಪತ್ನಿ-ಮಕ್ಕಳೆದುರೇ ಹತ್ಯೆ ಮಾಡಿದ್ದಾರೆ. ಮೂವರು ಶಾಸ್ತ್ರಧಾರಿ ಭಯೋತ್ಪಾದಕರ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದ್ದು ಅವರ ರೇಖಾ ಚಿತ್ರವನ್ನು ಸೇನಾ ಮೂಲಗಳು ಬಿಡುಗಡೆ ಮಾಡಿವೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂಬ ಹೆಸರಿನ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಸೇನಾ ಪದೇ ಭಯೋತ್ಪಾದಕರಿಗಾಗಿ ಬೇಟೆ ಕೈಗೊಂಡಿದೆ. ಅರಣ್ಯ ಪ್ರದೇಶ ಪ್ರವೇಶಿಸಿ ದಾಳಿಕೋರರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದ್ದು ಶೋಧಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಉಗ್ರರ ದಾಳಿ ವೇಳೆ ಬದುಕುಳಿದವರ ಮಾಹಿತಿ ಹಾಗೂ ಪ್ರಾಥಮಿಕ ವಿಧಿವಿಜ್ಞಾನ ವಿಶ್ಲೇಷಣೆ ಆಧರಿಸಿ ಶಂಕಿತರ ರೇಖಾ ಚಿತ್ರವನ್ನು…

ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು

ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. पहलगाम के आतंकी हमले में अपनों को खोने का दर्द हर भारतीय को है। इस दुःख को शब्दों में व्यक्त नहीं किया जा सकता। मैं अपने इन सभी परिवारों और पूरे देश को विश्वास दिलाता हूँ कि बेगुनाह मासूम लोगों को मारने वाले इन आतंकियों को बिल्कुल बख्शा नहीं जाएगा। pic.twitter.com/Dwkt6Hhj7P — Amit Shah (@AmitShah) April 23, 2025 ಭಯೋತ್ಪಾದಕರ ದಾಳಿ…

ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಈ ನಡುವೆ ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಿಗರಿಗೆ ಸರ್ಕಾರದ ವತಿಯಿಂದ ನೆರವಾಗಲು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ತೆರಳಿದೆ. ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಚರ್ಚಿಸಿರುವ ಸಚಿವ ಸಂತೋಷ್ ಲಾಡ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ. ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ…

ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿಯಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವಾಸಿಗರ ವಿವರಗಳನ್ನು ಸಹಾಯವಾಣಿ ಸಂಖ್ಯೆಗಳಾದ 080-43344334, 080-43344335, 080-43344336, 080-43344342 ಗೆ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ.

ಹಿಂದೂಗಳೇ ಟೆರರ್ ಟರ್ಗೆಟ್.. ಪುರುಷರನ್ನೇ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.

ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.

ಕೇಂದ್ರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಹೋರಾಟ; ಏ.28ರಿಂದ ‘ಸಂವಿಧಾನ ಉಳಿಸಿ’ ಅಭಿಯಾನ

ಜೈಪುರ: ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಅಭಿಯಾನಕ್ಕೆ ತಯಾರಿ ನಡೆಸಿದೆ. ಏಪ್ರಿಲ್ 28 ರಂದು ಜೈಪುರದಲ್ಲಿ ‘ಸಂವಿಧಾನ ಉಳಿಸಿ’ ಅಭಿಯಾನದ ಭಾಗವಾಗಿ ಬೃಹತ್ ರಾಜ್ಯ ಮಟ್ಟದ ರ್ಯಾಲಿ ಆರಂಭವಾಗಲಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಸಿಂಗ್ ದೋತಾಸ್ರಾ ಅವರು, ಮುಂಬರುವ ವಾರಗಳಲ್ಲಿ ಈ ಅಭಿಯಾನ ರಾಜ್ಯ ಮಟ್ಟದಿಂದ ಬೂತ್ ಮಟ್ಟದವರೆಗೆ ನಡೆಯಲಿದೆ ಎಂದು ಹೇಳಿದರು. ಜೈಪುರದಲ್ಲಿ ನಡೆಯುವ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸುಮಾರು 2,200 ವಿಭಾಗೀಯ ಅಧ್ಯಕ್ಷರ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ವ್ಯವಸ್ಥೆಗಳನ್ನು ಸುಗಮಗೊಳಿಸಲು ಏಪ್ರಿಲ್ 24 ರಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ದೋತಾಸ್ರಾ ಹೇಳಿದರು. ‘ಸಂವಿಧಾನ ಉಳಿಸಿ’ ಅಭಿಯಾನವು ಕೇಂದ್ರ ಸರ್ಕಾರವು…

‘ಹಸು ಕಳ್ಳ ಸಾಗಾಟ ಮಾಡುವ ಕುಖ್ಯಾತರಿಗೆ ಜಾಮೀನು ನೀಡುವುದು ಸರಿಯಲ್ಲ’ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಹಸು ಕಳ್ಳಸಾಗಾಟ ಮಾಡುವ ಕುಖ್ಯಾತರಿಗೆ (habitual cow smuggler) ಜಾಮೀನು ಮಂಜೂರು ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಈ ಅಭಿಪ್ರಾಯ ಆಧರಿಸಿ ಸುಪ್ರೀಂ ಕೋರ್ಟ್ ಗೋ ಕಳ್ಳಸಾಗಣೆ ಆರೋಪಿ ನಜೀಮ್ ಖಾನ್‌ ಎಂಬಾತನ ಜಾಮೀನು ಆದೇಶವನ್ನು ಸೋಮವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿ, ಖಾನ್ ಪರವಾಗಿ ಈ ಹಿಂದೆ ನೀಡಲಾಗಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿತು. ಸುಮಾರು ಆರು ತಿಂಗಳ ಹಿಂದೆ, ಸುಪ್ರೀಂ ಕೋರ್ಟ್ ಖಾನ್‌ಗೆ ಜಾಮೀನು ನೀಡಿತ್ತು. ಆದಾಗ್ಯೂ, ರಾಜಸ್ಥಾನ ಸರ್ಕಾರವು ನಂತರ ಆರೋಪಿಯು ನಿಯಮಿತ ಅಪರಾಧಿ ಎಂದು ಉಲ್ಲೇಖಿಸಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ. ಅಧಿಕೃತ ದಾಖಲೆಗಳ ಪ್ರಕಾರ, ಉತ್ತರ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ ಎಂಟು ಪ್ರಕರಣಗಳು – ಗೋಹತ್ಯೆ ಕಾಯ್ದೆ, ಗ್ಯಾಂಗ್‌ಸ್ಟರ್…