ವಿಕಾರಾಬಾದ್: ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಚೆವೆಲ್ಲಾ ಸಮೀಪದ ಮಿರ್ಜಗುಡದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ಒಂದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
Category: ದೇಶ-ವಿದೇಶ
ದಶಕಗಳ ಕನಸು ಕೊನೆಗೂ ನಿಜವಾಯಿತು; ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಚಾಂಪಿಯನ್
ನವಿಮುಂಬೈ: ದಶಕಗಳ ಕನಸು ಕೊನೆಗೂ ನಿಜವಾಯಿತು. ಆತಿಥೇಯ ಭಾರತ ಮಹಿಳಾ ಕ್ರಿಕೆಟ್ ತಂಡವು 2025ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್ಗಳಿಂದ ಸೋಲಿಸಿ, ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ. ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ಗಳ ಭರ್ಜರಿ ಮೊತ್ತವನ್ನು ಕಲೆಹಾಕಿತು. ಗೆಲುವಿಗಾಗಿ 299 ರನ್ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಈ ಜಯದೊಂದಿಗೆ ಭಾರತ ಮಹಿಳಾ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೆ ತಲುಪಿ ಕೊನೆಗೂ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 2005 ಮತ್ತು 2017ರ ಫೈನಲ್ಗಳಲ್ಲಿ ಕೈಚೆಲ್ಲಿದ್ದ ಭಾರತ, ಈ ಬಾರಿ ಅದೇ ಮೈದಾನದಲ್ಲಿ ತನ್ನ ಅಪೂರ್ಣ…
‘ಜೇನು ಕ್ರಾಂತಿ’: ವಿಶ್ವದ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಭಾರತ
ನವದೆಹಲಿ: ಭಾರತವು ಜೇನು ಉತ್ಪಾದನೆ ಮತ್ತು ರಫ್ತು ಕ್ಷೇತ್ರದಲ್ಲಿ ಮಹತ್ವದ ಮೆಟ್ಟಿಲೇರಿದೆ. 2023–24ರ ಹಣಕಾಸು ವರ್ಷದಲ್ಲಿ ಸುಮಾರು 1.07 ಲಕ್ಷ ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ವಿದೇಶಗಳಿಗೆ ಸಾಗಿಸುವ ಮೂಲಕ ಭಾರತವು ಜಾಗತಿಕವಾಗಿ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. 2020ರಲ್ಲಿ 9ನೇ ಸ್ಥಾನದಲ್ಲಿದ್ದ ಭಾರತವು ಕೇವಲ ನಾಲ್ಕು ವರ್ಷಗಳಲ್ಲಿ ಏಳು ಸ್ಥಾನಗಳ ಏರಿಕೆ ಕಂಡಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ಭಾನುವಾರ ತಿಳಿಸಿದೆ. ರಾಷ್ಟ್ರೀಯ ಜೇನುಸಾಕಣೆ ಮತ್ತು ಜೇನು ಮಿಷನ್ (NBHM) ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ವೈಜ್ಞಾನಿಕ ಜೇನುಸಾಕಣೆ, ಗುಣಮಟ್ಟದ ಜೇನುತುಪ್ಪ ಮತ್ತು ಇತರ ಜೇನುಗೂಡು ಉತ್ಪನ್ನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಈ ಯೋಜನೆ ರಾಷ್ಟ್ರೀಯ ಜೇನುಸಾಕಣೆ ಮಂಡಳಿ (NBB) ಮೂಲಕ ಜಾರಿಗೆ ತರಲಾಗುತ್ತಿದ್ದು, ‘ಆತ್ಮನಿರ್ಭರ ಭಾರತ’ ಅಭಿಯಾನದ ಭಾಗವಾಗಿ 2020–21 ರಿಂದ 2022–23ರ ವರೆಗೆ ₹500 ಕೋಟಿ ಬಜೆಟ್ನೊಂದಿಗೆ ಆರಂಭಿಸಲಾಯಿತು. ನಂತರ…
ಬಿಹಾರ ಚುನಾವಣೆ: 2ನೇ ಹಂತಕ್ಕೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತ ನವೆಂಬರ್ 11ರಂದು ನಡೆಯಲಿದ್ದು, ಅದರ ಹಿನ್ನೆಲೆ ಕಾಂಗ್ರೆಸ್ ಭಾನುವಾರ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಶ್ರೇಷ್ಟ ನಾಯಕತ್ವದ ಜೊತೆಗೆ ರಾಜ್ಯದ ಪ್ರಮುಖ ಮುಖಂಡರೂ ಸೇರಿದ್ದಾರೆ. ಇದರಿಂದ ಬಿಹಾರದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಲು ಕಾಂಗ್ರೆಸ್ ಸಂಪೂರ್ಣ ಶಕ್ತಿಯಿಂದ ಕಣಕ್ಕಿಳಿದಿದೆ ಎಂಬ ಸಂದೇಶ ಸಿಕ್ಕಿದೆ. ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಳಿಕ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ. ಇವರು ಪ್ರಮುಖ ಕ್ಷೇತ್ರಗಳಲ್ಲಿ ಬೃಹತ್ ರ್ಯಾಲಿಗಳು ಹಾಗೂ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅಶೋಕ್ ಗೆಹ್ಲೋಟ್, ಭೂಪೇಶ್ ಬಘೇಲ್, ದಿಗ್ವಿಜಯ ಸಿಂಗ್, ಅಧೀರ್ ರಂಜನ್ ಚೌಧರಿ, ಸಚಿನ್ ಪೈಲಟ್ ಮೊದಲಾದ ಹಿರಿಯ ನಾಯಕರು ವಿವಿಧ ಪ್ರದೇಶಗಳಲ್ಲಿ ಪ್ರಚಾರ ಅಭಿಯಾನ ಮುನ್ನಡೆಸಲಿದ್ದಾರೆ. ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ರಣದೀಪ್ ಸಿಂಗ್ ಸುರ್ಜೇವಾಲಾ, ಇಮ್ರಾನ್…
ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ನ ವೇಳಾಪಟ್ಟಿ ಬಿಡುಗಡೆ
Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. . ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.
ದೇಶದ ಹಿತಾಸಕ್ತಿ ಬಗ್ಗೆಯೇ RSS ಅಖಿಲ ಭಾರತ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚೆ
ಭೋಪಾಲ್: ಆರ್ಎಸ್ಎಸ್ ದೇಶದ ಏಕತೆ, ಭದ್ರತೆ, ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ ಎಂದು ಸಮಾಜವು ಸ್ವೀಕರಿಸಿದೆ. ಕೆಲ ರಾಜಕಾರಣಿಗಳ ಬಯಕೆಯಂತೆ ಸಂಘವನ್ನು ನಿಷೇಧಿಸುವುದು ಸಾಧ್ಯವಿಲ್ಲ,” ಎಂದು ಆರ್ಎಸ್ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ ನಿಷೇಧಿಸಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಹೊಸಬಾಳೆ, “ಸಂಘವನ್ನು ಸಮಾಜವೇ ರಾಷ್ಟ್ರದ ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯೆಂದು ಗುರುತಿಸಿದೆ. ಹಿಂದೆ ಮೂರು ಬಾರಿ ನಿಷೇಧಿಸಲಾಗಿತ್ತು, ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ರಾಜಕಾರಣಿಗಳು ಇತಿಹಾಸದಿಂದ ಪಾಠ ಕಲಿಯಬೇಕು,” ಎಂದರು. ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಮೂರು ದಿನಗಳ ಆರ್ಎಸ್ಎಸ್ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಸಭೆಯ ಸಮಾರೋಪದ ಸಂದರ್ಭದಲ್ಲಿ ಅವರು ಮಾತನಾಡಿದರು. 2014 ರ ನಂತರ ಆರ್ಎಸ್ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧದ ಚಲನಶೀಲತೆ ಕುರಿತು ತಮ್ಮದೇ ದಾಟಿಯಲ್ಲಿ ಅವರು…
ಮಾನಸಿಕ ಒತ್ತಡ ತಗ್ಗಿಸಲು ಚಾಕಲೇಟ್ ಕೂಡಾ ಔಷಧಿಯಾಗಬಹುದು
ಸ್ಮರಣಶಕ್ತಿ ಕುಗ್ಗುತ್ತಿರುವುದೇ ಅಥವಾ ಒತ್ತಡ ಹೆಚ್ಚಿದೆಯೇ? ಹಾಗಾದರೆ, ಸ್ವಲ್ಪ ಡಾರ್ಕ್ ಚಾಕೊಲೇಟ್ ಅಥವಾ ಕೆಲವು ಬೆರ್ರಿ ಹಣ್ಣುಗಳನ್ನು ಸೇವಿಸಿ ನೋಡಿ. ಇತ್ತೀಚಿನ ಪ್ರಾಣಿ ಅಧ್ಯಯನದ ಪ್ರಕಾರ, ಇವುಗಳಲ್ಲಿ ಇರುವ ವಿಶೇಷ ರಾಸಾಯನಿಕಗಳು ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸಿ, ಸ್ಮರಣಶಕ್ತಿಯನ್ನು ಹೆಚ್ಚಿಸುವುದಲ್ಲದೆ ಒತ್ತಡವನ್ನು ಸಹ ಕಡಿಮೆ ಮಾಡುತ್ತವೆ. ಜಪಾನ್ನ ಶಿಬೌರಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಜ್ಞಾನಿಗಳ ಅಧ್ಯಯನವು ಕೋಕೋ ಹಾಗೂ ಬೆರ್ರಿ ಹಣ್ಣುಗಳಲ್ಲಿ ದೊರೆಯುವ ಫ್ಲಾವನಾಲ್ಗಳು ಎಂಬ ಸಂಯೋಗಗಳು ಸ್ಮರಣಶಕ್ತಿ ಮತ್ತು ಅರಿವನ್ನು ಸುಧಾರಿಸುತ್ತವೆ ಎಂದು ತೋರಿಸಿದೆ. ‘ಕರಂಟ್ ರಿಸರ್ಚ್ ಇನ್ ಫುಡ್ ಸೈನ್ಸ್’ ಪತ್ರಿಕೆಯಲ್ಲಿ ಪ್ರಕಟವಾದ ಈ ಅಧ್ಯಯನ ಪ್ರಕಾರ, ಫ್ಲಾವನಾಲ್ಗಳ ಸೇವನೆಯು ವ್ಯಾಯಾಮದಂತೆಯೇ ಶಾರೀರಿಕ ಪ್ರತಿಕ್ರಿಯೆಗಳನ್ನು ಉಂಟುಮಾಡುತ್ತದೆ — ಕೇಂದ್ರ ನರಮಂಡಲವನ್ನು ಸಕ್ರಿಯಗೊಳಿಸಿ ಗಮನ, ಪ್ರೇರಣೆ ಮತ್ತು ಸ್ಮರಣೆಯನ್ನು ಹೆಚ್ಚಿಸುತ್ತದೆ. ಇವು ನರಕೋಶಗಳನ್ನು ಹಾನಿಯಿಂದ ಕೂಡ ರಕ್ಷಿಸುತ್ತವೆ. “ಫ್ಲಾವನಾಲ್ ಸೇವನೆಯಿಂದ ಉಂಟಾಗುವ ಒತ್ತಡ ಪ್ರತಿಕ್ರಿಯೆಗಳು ದೈಹಿಕ ವ್ಯಾಯಾಮದಿಂದ…
‘ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ; ಗಮನಸೆಳೆದ ಮೋದಿ ಭಾಷಣ
ರಾಯಪುರ: “ಛತ್ತೀಸ್ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ 25ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಶನಿವಾರ ಮಾತನಾಡಿದ ಅವರು, “ರಾಮರಾಜ್ಯದಿಂದ ರಾಷ್ಟ್ರ” ಎಂಬ ತತ್ವದ ಆಳವಾದ ನಿರೂಪಣೆಯನ್ನು ನೀಡಿದರು. ‘ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ – ಯಾರನ್ನೂ ಬಿಡದ ಸಮಗ್ರ ಅಭಿವೃದ್ಧಿ. ‘ರಾಮ್’ ಎಂದರೆ ಬಡತನ, ಅಸಮಾನತೆ, ಅನ್ಯಾಯದಿಂದ ಮುಕ್ತವಾದ ಸಮಾಜ. ಆರೋಗ್ಯ, ಸಂತೋಷ ಮತ್ತು ನ್ಯಾಯ ಮೌಲ್ಯಗಳಲ್ಲಿ ನಿಂತ ರಾಷ್ಟ್ರ. ‘ರಾಮ್’ ಎಂದರೆ ದುಷ್ಟ ಶಕ್ತಿಗಳ ನಾಶ – ನಕ್ಸಲಿಸಂ ವಿರುದ್ಧದ ಹೋರಾಟದಂತೆ ಎಂದು ಪ್ರಧಾನಿ ಹೇಳಿದರು. मुझे प्रसन्नता है कि जिस प्रकार हमारी नई संसद की गैलरियां भारत के…
ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು
ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. TRAGIC NEWS 9 people DIED and several others INJURED after a STAMPEDE at Venkateswara Swamy Mandir in Kasibugga, Srikakulam (Andhra Pradesh) during Ekadashi celebrations of devotees. — PRAYERS pic.twitter.com/6owZPIdOxd — Megh Updates ™ (@MeghUpdates) November 1, 2025 ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಇದಾಗಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ…
ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ ಅವರದೇ ಅಲ್ಲ, ಅದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಒತ್ತಡದ ಫಲ” ಎಂದು ಟೀಕಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರು ರಾಷ್ಟ್ರ ಮಟ್ಟದ ಹಿರಿಯ ರಾಜಕಾರಣಿ. ಆದರೆ ಅವರ ಪಕ್ಷದಲ್ಲಿ ಒಂದು ಕುಟುಂಬದ ಪ್ರಭಾವದಿಂದ ಅವರು ಸ್ವತಂತ್ರವಾಗಿ ಯೋಚಿಸಲು ಸಾಧ್ಯವಾಗುತ್ತಿಲ್ಲ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಅವರು ಆರ್ಎಸ್ಎಸ್ ವಿರುದ್ಧ ಒಂದೇ ಸಲವೂ ಮಾತನಾಡಿಲ್ಲ” ಎಂದು ಹೇಳಿದರು. “ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಯವರಿಂದಲೂ ಆರ್ಎಸ್ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ. ಹಾಗಿದ್ದಾಗ ನಿಮ್ಮಿಂದ ಅದು ಸಾಧ್ಯವೇ? ಏನು ಪ್ರಶ್ನಿಸಿದ ಶೋಭಾ, ಈ…
