ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಭರಿಸಬೇಕಾದ ಯಾವುದೇ ವೆಚ್ಚವನ್ನು ಕೇಂದ್ರ ಸರ್ಕಾರವು ನಿರ್ದೇಶಿಸಿದ ಕ್ರಮಗಳ ಪ್ರಕಾರ ರಾಜ್ಯಗಳೇ ಹೊರಬೇಕು ಎಂದು ಹೇಳುತ್ತದೆ. ಇದು ಕೇಂದ್ರವು ನಿಗದಿಪಡಿಸಿದ ಮಿತಿಯನ್ನು ಮೀರಿದ ಬೇಡಿಕೆಗೆ 100% ಜವಾಬ್ದಾರಿಯನ್ನು ರಾಜ್ಯಗಳು ಹೊರುವಂತೆ ಮಾಡಬಹುದು. ರಾಜ್ಯವು ನಿಗದಿತ ಅಥವಾ ಅದನ್ನು ಮೀರಿದ ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದರೆ, ಜನರ ಅರ್ಹ ಕೂಲಿ ಅವಧಿಯ ಹಕ್ಕನ್ನು ಜಾರಿಗೊಳಿಸಲು ಸಾಧ್ಯವಿಲ್ಲ, ಇದು ಬೇಡಿಕೆ ಇರುವ ಕಡೆಗಳಲ್ಲಿ ಅನುದಾನ ನೀಡಲೇಬೇಕು ಎಂಬ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕಾಯ್ದೆಯು ಬಿತ್ತನೆ ಮತ್ತು ಕೊಯ್ಲು ಹೆಚ್ಚಾಗಿ ನಡೆಯುವ ಸಮಯದಲ್ಲಿ ಒಟ್ಟು 60 ದಿನಗಳ ಅವಧಿ ಕಾಮಗಾರಿಗಳನ್ನು ನಡೆಸದಿರುವ ಬಗ್ಗೆ ಮುಂಚಿತವಾಗಿ ಅಧಿಸೂಚಿಸಬೇಕು…
Category: ದೇಶ-ವಿದೇಶ
2025 ಭಾರತಕ್ಕೆ ಹೆಚ್ಚಿದ ಆತ್ಮವಿಶ್ವಾಸ ನೀಡಿದ ವರ್ಷ’ ಎಂದ ಪ್ರಧಾನಿ
ನವದೆಹಲಿ: 2025ರಲ್ಲಿ ದೇಶದಲ್ಲಿ ನಡೆದ ಪ್ರಮುಖ ಹಾಗೂ ಐತಿಹಾಸಿಕ ಘಟನೆಗಳನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈ ವರ್ಷ ಭಾರತಕ್ಕೆ “ಇನ್ನಷ್ಟು ಹೆಚ್ಚಿದ ಆತ್ಮವಿಶ್ವಾಸ” ನೀಡಿದೆ ಎಂದು ಭಾನುವಾರ ಹೇಳಿದರು. ಹೊಸ ಭರವಸೆಗಳು ಹಾಗೂ ಸಂಕಲ್ಪಗಳೊಂದಿಗೆ ದೇಶವು 2026ರತ್ತ ಹೆಜ್ಜೆ ಇಡಲು ಸಜ್ಜಾಗಿದೆ ಎಂದು ಅಭಿಪ್ರಾಯಪಟ್ಟರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, “ಇನ್ನು ಕೆಲವೇ ದಿನಗಳಲ್ಲಿ 2026 ವರ್ಷ ನಮ್ಮ ಮನೆಬಾಗಿಲು ತಟ್ಟಲಿದೆ. ಈ ಸಂದರ್ಭದಲ್ಲಿ ಇಡೀ ವರ್ಷದ ನೆನಪುಗಳು ಮನಸ್ಸಿನಲ್ಲಿ ಓಡಾಡುತ್ತಿವೆ. ದೇಶವನ್ನು ಒಂದಾಗಿ ಕಟ್ಟಿದ ಅನೇಕ ಕ್ಷಣಗಳು, ಚರ್ಚೆಗಳು ಮತ್ತು ಸಾಧನೆಗಳು 2025ನ್ನು ಸ್ಮರಣೀಯವಾಗಿಸಿವೆ. ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣಗಳನ್ನು ಈ ವರ್ಷ ನೀಡಿದೆ” ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯಿಂದ ಹಿಡಿದು ಕ್ರೀಡಾ ಸಾಧನೆಗಳವರೆಗೆ, ವಿಜ್ಞಾನ ಪ್ರಯೋಗಾಲಯಗಳಿಂದ ಜಾಗತಿಕ ವೇದಿಕೆಗಳವರೆಗೆ ಎಲ್ಲೆಡೆ ಭಾರತದ ಮುದ್ರೆ ಮೂಡಿದೆ ಎಂದು…
RSSನ್ನು, ಮೋದಿಯನ್ನು ಹಾಡಿ ಹೊಗಳಿದರೇ ದಿಗ್ವಿಜಯ್; X ಪೋಸ್ಟ್ ಸೃಷ್ಟಿಸಿದ ಕುತೂಹಲ
ನವದೆಹಲಿ: ಆರೆಸ್ಸೆಸ್ ಸಂಘಟನೆ ಬಗ್ಗೆ ಕಿಡಿ ಕಾರುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚಿನ ದಿನಗಳಲ್ಲಿ ಸಂಘವನ್ನು ಹಾಡಿ ಹೊಗಳಿದ ಸನ್ನಿವೇಶ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದವು. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರದ್ದು. ದಿಗ್ವಿಜಯ ಸಿಂಗ್ ಅವರದ್ದು ಎನ್ನಲಾದ X ಖಾತೆಯಲ್ಲಿ ಆರೆಸ್ಸೆಸ್ ಸಂಘಟನೆಯನ್ನು ಪ್ರಶಂಸಿಸಿ ಕೆಲವು ಸಾಲುಗಳನ್ನು ಬರೆಯಲಾಗಿದೆ. ಬಿಜೆಪಿ ಹಿರಿಯ ನಾಯಕರುಳ್ಳ ಹಳೆಯ ಫೋಟೋವನ್ನು ಟ್ಯಾಗ್ ಮಾಡಲಾಗಿರುವ ಈ ಪೋಸ್ಟನ್ನು ಉಲ್ಲೇಖಿಸಿ ಸುದ್ಧಿ ಸಂಸ್ಥೆಗಳು ವರದಿ ಮಾಡಿ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಚರ್ಚೆಗೆ ಮುನ್ನುಡಿ ಬರೆದಿವೆ. “ಈ ಚಿತ್ರವನ್ನು ನಾನು Quora ಸೈಟ್ನಲ್ಲಿ ಕಂಡುಕೊಂಡೆ. ಇದು ತುಂಬಾ ಪ್ರಭಾವ ಬೀರುವಂತಿದೆ. RSSನ ತಳಮಟ್ಟದ ಸ್ವಯಂಸೇವಕ ಮತ್ತು ಜನಸಂಘ, ಬಿಜೆಪಿ ಕಾರ್ಯಕರ್ತ, ತಮ್ಮ ಸಂಘಟನೆಯ ನಾಯಕರ ಎದುರಲ್ಲಿ ಕೆಳಗೆ ಕುಳಿತು ರಾಜ್ಯದ ಮುಖ್ಯಮಂತ್ರಿ ಮತ್ತು ದೇಶದ ಪ್ರಧಾನ ಮಂತ್ರಿಯಾದರು. ಇದು ಸಂಘಟನೆಯ…
ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ
ನವದೆಹಲಿ: ಕ್ರಿಸ್ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್ಮಸ್ ಬೆಳಗಿನ ವಿಶೇಷ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದರು. ದೆಹಲಿ ಮತ್ತು ಉತ್ತರ ಭಾರತದ ಕ್ರೈಸ್ತ ಸಮುದಾಯದ ಭಾರಿ ಪ್ರಾರ್ಥನಾ ಕೂಟದಲ್ಲಿ ಪ್ರಧಾನಮಂತ್ರಿ ಉಪಸ್ಥಿತರಿದ್ದರು. #WATCH | Prime Minister Narendra Modi attended the Christmas morning service at The Cathedral Church of the Redemption in Delhi along with a large congregation of Christians of Delhi and North India on the occassion of #Christmas2025 today. The service included prayers,… pic.twitter.com/wVuQe6GYKQ — ANI (@ANI) December 25, 2025 ಈ ಸಂದರ್ಭದಲ್ಲಿ ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್…
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100…
ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು
ಇಸ್ಲಾಮಾಬಾದ್: ತೋಷಖಾನಾ–2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ತಲಾ 17 ವರ್ಷಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಮೇ 2021ರಲ್ಲಿ ಸೌದಿ ಅರೇಬಿಯಾದ ಕಿರೀಟ ರಾಜಕುಮಾರರಿಂದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಉಡುಗೊರೆಯಾಗಿ ದೊರೆತ ದುಬಾರಿ ಆಭರಣ ಸೆಟ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಿದ ಆರೋಪ ಈ ಪ್ರಕರಣಕ್ಕೆ ಕಾರಣವಾಗಿದೆ. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆಯುತ್ತಿರುವ ವಿಚಾರಣೆಯ ವೇಳೆ ಫೆಡರಲ್ ತನಿಖಾ ಸಂಸ್ಥೆ (ಎಫ್ಐಎ)ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರುಖ್ ಅರ್ಜುಮಂದ್ ತೀರ್ಪು ಪ್ರಕಟಿಸಿದರು. ತೀರ್ಪಿನಂತೆ, ಪಾಕಿಸ್ತಾನ ದಂಡ ಸಂಹಿತೆಯ ವಿವಿಧ ವಿಧಿಗಳ ಅಡಿಯಲ್ಲಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಳು…
ರಾಜಧಾನಿ ಎಕ್ಸ್ಪ್ರೆಸ್ ಡಿಕ್ಕಿ: ಏಳು ಆನೆಗಳ ಸಾವು
ನವದೆಹಲಿ/ಗುವಾಹಟಿ: ಶನಿವಾರ ಬೆಳಗಿನ ಜಾವ ಅಸ್ಸಾಂನ ಹೊಜೈ ಸಮೀಪ ಸೈರಾಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಆನೆಗಳು ಸಾವನ್ನಪ್ಪಿದ್ದು, ಒಂದು ಮರಿ ಗಾಯಗೊಂಡಿದೆ. ಅಪಘಾತದಿಂದ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು, ಈಶಾನ್ಯ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ಬೆಳಿಗ್ಗೆ 2.17ರ ಸುಮಾರಿಗೆ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಆನೆಗಳ ಸಾವನ್ನು ದೃಢಪಡಿಸಿದ್ದು, ಗಾಯಗೊಂಡ ಮರಿಯನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಡಿಕ್ಕಿಯ ಪರಿಣಾಮ ರೈಲಿನ ಕೆಲ ಬೋಗಿಗಳು ಹಳಿ ತಪ್ಪಿದ್ದರೂ, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಮಿಜೋರಾಂನ ಐಜ್ವಾಲ್ ಸಮೀಪದ ಸೈರಾಂಗ್ನಿಂದ ದೆಹಲಿಯ ಆನಂದ್ ವಿಹಾರ್…
ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭ ಏನು? ಕಾಂಗ್ರೆಸ್ ಪ್ರಶ್ನೆ
ಬೆಳಗಾವಿ: “ಪಾಕಿಸ್ತಾನದ ಪ್ರಧಾನಿ ಎಂದಿಗೂ ಡೊನಾಲ್ಡ್ ಟ್ರಂಪ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿಲ್ಲ. ಆದರೆ ನಮ್ಮ ಪ್ರಧಾನಿ ಡೊನಾಲ್ಡ್ ಟ್ರಂಪ್ ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೂ ಆ ಸ್ನೇಹಿತ ಭಾರತಕ್ಕೆ ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಿದರೆ, ಹೆಚ್ಚಿನ ಸುಂಕಗಳನ್ನು ವಿಧಿಸುವುದೇ ಆಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮೆರಿಕ ಪಾಕಿಸ್ತಾನಕ್ಕೆ ಐಎಂಎಫ್ ಮತ್ತು ವಿಶ್ವಬ್ಯಾಂಕ್ನಿಂದ ಸಾಲ ಪಡೆಯಲು ಸಂಪೂರ್ಣ ಸಹಾಯ ಮಾಡುತ್ತಿದೆ. ಅವರೊಂದಿಗೆ ಒಟ್ಟಿಗೆ ಊಟ–ಸಭೆಗಳನ್ನು ನಡೆಸುತ್ತಿದೆ. ಆದರೆ ಅಮೆರಿಕದಿಂದ ಭಾರತಕ್ಕೆ ಏನು ಸಿಗುತ್ತಿದೆ? ಏನೂ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು. “ಬದಲಾಗಿ ನಮಗೆ ಹೆಚ್ಚಿನ ಸುಂಕಗಳು ಬರುತ್ತಿವೆ. ವಿವಿಧ ವ್ಯಾಪಾರ ಒಪ್ಪಂದಗಳಿಂದ ಭಾರತವನ್ನು ಹೊರಗಿಡಲಾಗುತ್ತಿದೆ. ನ್ಯಾಯಯುತ ವ್ಯಾಪಾರ ಒಪ್ಪಂದಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ನಮ್ಮ ಪ್ರಧಾನಿ ಅಮೆರಿಕದ ಅಧ್ಯಕ್ಷರೊಂದಿಗೆ ಉತ್ತಮ ಸ್ನೇಹವಿದೆ ಎಂದು…
‘ಶ್ರೀಮತಿ ದೇಶಪಾಂಡೆ’ ಯಾಗಿ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್
ಮುಂಬೈ: ಬಾಲಿವುಡ್ನ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಚಿತ್ರಗಳು ಮತ್ತು ಸರಣಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುಕಾಲದ ಬಳಿಕ ಅವರು ಬಹು ನಿರೀಕ್ಷಿತ ಥ್ರಿಲ್ಲರ್ ಚಿತ್ರ ‘ಶ್ರೀಮತಿ ದೇಶಪಾಂಡೆ’ ಮೂಲಕ ತೆರೆಗೆ ಮರಳುತ್ತಿದ್ದಾರೆ. ಐಎಎನ್ಎಸ್ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮಾಧುರಿ, ತಾನು ಯಾವುದೇ ಯೋಜನೆಯನ್ನು ಆಯ್ಕೆ ಮಾಡುವಲ್ಲಿ ಬಹಳ ಆಯ್ಕೆಶೀಲವಾಗಿದ್ದೇನೆ ಎಂದು ಹೇಳಿದ್ದಾರೆ. “ನನಗೆ ನಿಜವಾಗಿಯೂ ಉತ್ಸಾಹ ಹುಟ್ಟಿಸುವ ಪಾತ್ರಗಳನ್ನು ಮಾತ್ರ ಮಾಡಲು ಇಚ್ಛಿಸುತ್ತೇನೆ. ಪ್ರತಿದಿನ ಬೆಳಿಗ್ಗೆ ಎದ್ದು ‘ಈ ಚಿತ್ರ ಅಥವಾ ಸರಣಿಯಲ್ಲಿ ಕೆಲಸ ಮಾಡಲು ಹೋಗುತ್ತಿದ್ದೇನೆ’ ಎಂದು ಖುಷಿಪಡುವಂತಹ ಪಾತ್ರಗಳೇ ನನಗೆ ಬೇಕು,” ಎಂದು ಅವರು ಹೇಳಿದರು. Watch: In an exclusive interview, renowned Bollywood actress Madhuri Dixit reflects on her nearly 40 year journey in the film industry.…
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್
ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ.…
