ನವದೆಹಲಿ: ಬಿಹಾರದಲ್ಲಿ ನಡೆದ ಚುನಾವಣಾ ಆಡಳಿತಾರೂಢ NDA ಹಾಗೂ ಪ್ರತಿಪಕ್ಷಗಳ ಒಕ್ಕೂಟ ಮಹಾಘಟಬಂಧನ್ ನಡುವೆ ನೇರ ಹಣಾಹಣಿ ನಡೆದಿದೆ. ಮತದಾನ ಮುಗಿದಿದ್ದು ಸೋಲು ಗೆಲುವಿನ ಲೆಕ್ಕಾಚಾರ ಸಾಗಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಆದರೆ ಅಷ್ಟರಲ್ಲೇ ಮತದಾನೋತ್ತರ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಂಸ್ಥೆಗಳ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ NDA ಭಾರೀ ಬಹುಮತದೊಂದಿಗೆ ಈ ಬಾರಿಯೂ ಸರ್ಕಾರ ರಚಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಆದರೆ, ಕೆಲವು ಸಂಸ್ಥೆಗಳು ಮಹಾಘಟಬಂಧನ್ ಮುನ್ನಡೆ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದೂ ಹೇಳಿವೆ. ಪೀಪಲ್ಸ್ ಪಲ್ಸ್, ಪೀಪಲ್ಸ್ ಇನ್ಸೈಟ್, ಮ್ಯಾಟ್ರಿಜ್, ಜೆವಿಸಿ, ಭಾಸ್ಕರ್ ಬಿಹಾರ, ಚಾಣಕ್ಯ ಸ್ಟ್ರಾಟಜೀಸ್ ಸಂಸ್ಥೆಗಳು NDA ಗೆಲುವಿನ ಸಾಧ್ಯತೆಗಳತ್ತ ಬೆಳಕುಚೆಲ್ಲಿವೆ. ಒಟ್ಟಾರೆ ಫಲಿತಾಂಶ ಹೀಗಿದೆ: ಪೀಪಲ್ಸ್ ಪಲ್ಸ್: NDA – 133-159 | ಮಹಾಘಟಬಂಧನ್ – 75-101 | ಜನ ಸುರಾಜ್ – 0-5…
Category: ದೇಶ-ವಿದೇಶ
ದೆಹಲಿ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆ; ನಾಗ್ಪುರದ ಆರ್ಎಸ್ಎಸ್ ಕಚೇರಿಗೆ ಬಿಗಿ ಭದ್ರತೆ
ನವದೆಹಲಿ: ದೇಶದ ಹೃದಯಭಾಗ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನೂ ಡಜನ್ಗಟ್ಟಲೆ ಮಂದಿ ಗಾಯಗೊಂಡಿದ್ದು, ಸಂತ್ರಸ್ತರನ್ನು ಸಮೀಪದ ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತೀವ್ರತೆಗೆ ರಾಷ್ಟ್ರ ರಾಜಧಾನಿಯ ಜೊತೆಗೆ ಯುಪಿ, ಮುಂಬೈ ಹಾಗೂ ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಚೇರಿಯಂತಹ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಾಗ್ಪುರದ ಆರ್ಎಸ್ಎಸ್ ಕಚೇರಿಯ ಸುತ್ತಮುತ್ತಲೂ ಬಿಗಿಯಾದ ಭದ್ರತಾ ವಲಯವನ್ನು ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿಕೊಂಡು ಪರಿಸ್ಥಿತಿಯ ವಿವರ ಪಡೆದಿದ್ದಾರೆ. ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಹಾಗೂ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಸ್ಫೋಟ…
ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ವಿಧಿವಶ ಎಂದು ಸುದ್ಧಿ
ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ (89) ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಬಗ್ಗೆ ಪುತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಇಹಲೋಕ ತ್ಯಜಿಸಿದರು ಎಂದು ವರದಿಯಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದ್ದರೂ, ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿಲ್ಲ. ಅರ್ಧ ಶತಮಾನಕ್ಕಿಂತ ಹೆಚ್ಚು ಕಾಲದ ತಮ್ಮ ಸಿನಿ ಜೀವನದಲ್ಲಿ ಧರ್ಮೇಂದ್ರ ಅವರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕ್ರಾಂತಿಕಾರಿ ನಾಯಕನಿಂದ ಪ್ರೇಮಪಾತ್ರದವರೆಗೆ, ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ ಧರ್ಮೇಂದ್ರ ಭಾರತೀಯ ಚಿತ್ರರಂಗಕ್ಕೆ ಅಳಿಸಲಾರದ ಛಾಪು ಬರೆದಿದ್ದಾರೆ. ಚಿತ್ರರಂಗದಲ್ಲಿ ಮಾತ್ರವಲ್ಲ, ರಾಜಕೀಯ ಕ್ಷೇತ್ರದಲ್ಲಿಯೂ ಅವರು ಗುರುತಾಗಿದ್ದರು. 2004ರಿಂದ 2009ರವರೆಗೆ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿದ್ದರು.
2 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ನಗರಗಳಲ್ಲಿ ಸಹಕಾರಿ ಬ್ಯಾಂಕು ಸ್ಥಾಪನೆ; ಅಮಿತ್ ಶಾ ಘೋಷಣೆ
ನವದೆಹಲಿ: ದೇಶದ ಆರ್ಥಿಕ ಸೇರ್ಪಡೆ ಮತ್ತು ಸಹಕಾರ ಚಳವಳಿಗೆ ಮತ್ತೊಂದು ಬಲ ತುಂಬುವ ಉದ್ದೇಶದಿಂದ, ಎರಡು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಎಲ್ಲಾ ನಗರಗಳಲ್ಲಿ ನಗರ ಸಹಕಾರಿ ಬ್ಯಾಂಕುಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಘೋಷಿಸಿದ್ದಾರೆ. ನಗರ ಸಹಕಾರಿ ಸಾಲ ವಲಯದ ಅಂತರರಾಷ್ಟ್ರೀಯ ಸಮ್ಮೇಳನ ‘ಸಹಕಾರಿ ಕುಂಭ 2025’ (Coop Kumbh 2025) ಉದ್ಘಾಟಿಸಿ ಮಾತನಾಡಿದ ಅವರು, “ಈ ದೇಶದ ಯುವಕರು ಮತ್ತು ಕೆಳವರ್ಗದ ಜನರ ಸಬಲೀಕರಣಕ್ಕಾಗಿ ನಗರ ಸಹಕಾರಿ ಬ್ಯಾಂಕುಗಳು ಪ್ರಮುಖ ಪಾತ್ರವಹಿಸಬೇಕು” ಎಂದು ತಿಳಿಸಿದ್ದಾರೆ. “ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಯ ಜೊತೆಗೆ ಸಹಕಾರದ ಬಲವರ್ಧನೆ ನಮ್ಮ ಗುರಿ,” ಎಂದು ಶಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಸಣ್ಣ ವ್ಯಾಪಾರಿಗಳು, ಮಧ್ಯಮ ವರ್ಗದವರು, ಸ್ಥಳೀಯ ಉದ್ಯಮಿಗಳು ಮತ್ತು ಸ್ವಯಂ ಉದ್ಯೋಗದತ್ತ ಮುಂದಾಗಿರುವ ಯುವಕರಿಗೆ ನೆರವು ನೀಡುವಂತೆ ನಗರ…
ಕೆಂಪು ಕೋಟೆ ಸ್ಫೋಟ: ಸಂತ್ರಸ್ತ ಕುಟುಂಬಗಳಿಗೆ ನಾಯಕರ ಸಂತಾಪ
ನವದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. “ಭದ್ರತಾ ಸಂಸ್ಥೆಗಳು ಸಂಪೂರ್ಣ ತನಿಖೆ ನಡೆಸುತ್ತಿವೆ” ಎಂದು ಅವರು ತಿಳಿಸಿದ್ದಾರೆ. “ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ಸುದ್ದಿಗಳು ಕೆಲವು ದೃಶ್ಯಗಳೊಂದಿಗೆ ನಮ್ಮ ಮುಂದೆ ಬರುತ್ತಿವೆ. ದುರದೃಷ್ಟವಶಾತ್, ಈ ಘಟನೆಯಲ್ಲಿ ಕೆಲವು ಜೀವ ಮತ್ತು ಆಸ್ತಿ ನಷ್ಟದ ವರದಿಗಳೂ ಇವೆ. ಅದರಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಯಾವುದೇ ರೀತಿಯ ವದಂತಿಗಳಿಗೆ ಗಮನ ಕೊಡಬೇಡಿ ಎಂದು ನಾನು ಸಮಾಜಕ್ಕೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ. “ಭದ್ರತಾ ಸಂಸ್ಥೆಗಳು ಸಂಪೂರ್ಣ ತನಿಖೆ ನಡೆಸುತ್ತಿವೆ ಮತ್ತು ಯಾವುದೇ ದೃಢಪಡಿಸಿದ ಮತ್ತು ಪರಿಶೀಲಿಸಿದ ಮಾಹಿತಿ ಬಂದ ತಕ್ಷಣ, ಅದನ್ನು ಮಾತ್ರ ಅವಲಂಬಿಸಿ. ವದಂತಿಗಳನ್ನು…
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. #WATCH | Delhi: Fire tenders, ambulances, and senior police officials at the spot after a call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damage Multiple casualties… pic.twitter.com/GaWKizw7MN — ANI (@ANI) November 10, 2025 ಸಂಜೆ ಸುಮಾರು 6.55ರ ಹೊತ್ತಿಗೆ ಕಾರು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶ…
ನಗರ ಸಾರಿಗೆಯಲ್ಲಿ ನವೀನತೆ ತೋರಿದ ಕೆಎಸ್ಆರ್ಟಿಸಿಗೆ ಕೇಂದ್ರದ ಪುರಸ್ಕಾರ; ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರ ಪ್ರಶಸ್ತಿ
ಗುರುಗ್ರಾಮ್ (ಹರಿಯಾಣ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ತನ್ನ ನವೀನ ಉಪಕ್ರಮಗಳಿಗಾಗಿ ಮತ್ತೊಮ್ಮೆ ರಾಷ್ಟ್ರ ಮಟ್ಟದ ಮಾನ್ಯತೆ ಗಳಿಸಿದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ವತಿಯಿಂದ ನೀಡಲಾಗುವ Award of Excellence in Urban Transport–2025 ಪ್ರಶಸ್ತಿಯನ್ನು ಕೆಎಸ್ಆರ್ಟಿಸಿ ಪಡೆದುಕೊಂಡಿದೆ. ಹಿಂದಿನ ವರ್ಷ ಅತ್ಯುತ್ತಮ ನಗರ ಸಾರಿಗೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ರಾಜ್ಯ ಸಂಸ್ಥೆಗಳ ಪೈಕಿ, ಮೈಸೂರಿನ ‘ಧ್ವನಿ ಸ್ಪಂದನ’ ಯೋಜನೆ ಈ ಗೌರವಕ್ಕೆ ಪಾತ್ರವಾಗಿದೆ. ಮೈಸೂರಿನ ನಗರ ಸಾರಿಗೆಯ 200ಕ್ಕೂ ಹೆಚ್ಚು ಬಸ್ಸುಗಳಲ್ಲಿ ‘ಧ್ವನಿ ಸ್ಪಂದನ – ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಎಂಬ ದೇಶದ ಮೊದಲ ಯೋಜನೆಯನ್ನು ಕೆಎಸ್ಆರ್ಟಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸುವ ಈ ಯೋಜನೆ, ಅವರ ಆತ್ಮವಿಶ್ವಾಸ ಮತ್ತು ಸಂಚಾರ ಸ್ವಾತಂತ್ರ್ಯದಲ್ಲಿ ಹೊಸ ಅಧ್ಯಾಯ ಬರೆದಿದೆ. ಈ ಪ್ರಶಸ್ತಿಯನ್ನು…
‘ಮತ ಚೋರಿ’ ಬಗ್ಗೆ ಶೀಘ್ರದಲ್ಲೇ ಸಾಕ್ಷ್ಯಗಳನ್ನು ಬಿಡುಗಡೆ; ರಾಹುಲ್ ಗಾಂಧಿ ಘೋಷಣೆ
ಭೋಪಾಲ್: “ಮತ ಚೋರಿ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ – ಇದು ಭಾರತ ಮಾತೆಯ ಮೇಲಿನ ದಾಳಿ,” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ನಡೆದ ‘ಸಂಘಥಾನ್ ಶ್ರೀಜನ್ ಅಭಿಯಾನ’ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ವ್ಯಾಪಕವಾದ ಮತ ಕಳ್ಳತನ ಪ್ರಕರಣಗಳನ್ನು ಮುಂದಿಟ್ಟರು. ಇದು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆತ್ಮದ ಮೇಲಿನ ಅವಮಾನವಾಗಿದೆ ಎಂದು ಅವರು ಕಿಡಿಕಾರಿದರು. “ಕೆಲವು ದಿನಗಳ ಹಿಂದೆ ಹರಿಯಾಣದ ಮಾದರಿಯನ್ನು ನಾನು ತೋರಿಸಿದ್ದೆ – ಅಲ್ಲಿ 25 ಲಕ್ಷ ಮತಗಳನ್ನು ಕದ್ದಿದ್ದಾರೆ, ಅಂದರೆ ಪ್ರತಿ ಎಂಟು ಮತಗಳಲ್ಲಿ ಒಂದನ್ನು. ಇದೇ ಅವರ ವ್ಯವಸ್ಥೆ,” ಎಂದು ರಾಹುಲ್ ಗಾಂಧಿ ಹೇಳಿದರು. “ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್ಗಢದಲ್ಲಿಯೂ ಇದೇ ರೀತಿಯ ಅಕ್ರಮಗಳು ನಡೆದಿವೆ. ಮುಖ್ಯ ವಿಷಯವೇ ‘ಮತ ಚೋರಿ’. ನಮ್ಮ ಬಳಿ ಸಾಕ್ಷ್ಯಗಳಿವೆ. ಅವನ್ನು ಒಂದೊಂದಾಗಿ ಬಹಿರಂಗಪಡಿಸುತ್ತೇವೆ,” ಎಂದು…
RSS ನೋಂದಣಿಯಾಗಿಲ್ಲ, ಟ್ಯಾಕ್ಸ್ ಕಟ್ಟುತ್ತಿಲ್ಲ ಯಾಕೆ ಎಂದು ಸರಸಂಘಚಾಲಕ್ ಸ್ಪಷ್ಟನೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ಸಂಘದ ಕಾನೂನು ದೃಢೀಕರಣ ಹಾಗೂ ನೋಂದಣಿ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡುತ್ತಾ — “ನೋಂದಣಿ ಇಲ್ಲದೆ ಅನೇಕ ವಿಷಯಗಳು ಅಸ್ತಿತ್ವದಲ್ಲಿವೆ. ಹಿಂದೂ ಧರ್ಮವೂ ಸಹ ನೋಂದಾಯಿಸಲ್ಪಟ್ಟಿಲ್ಲ” ಎಂದು ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ನಡೆದ ‘100 ವರ್ಷಗಳ ಸಂಘ ಪ್ರಯಾಣ: ಹೊಸ ದಿಗಂತಗಳು’ ಕಾರ್ಯಕ್ರಮದ ಎರಡನೇ ದಿನದ ಪ್ರಶ್ನೋತ್ತರ ಸತ್ರದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.“ಈ ಪ್ರಶ್ನೆಗೆ ಹಲವಾರು ಬಾರಿ ಉತ್ತರಿಸಲಾಗಿದೆ. ಕೇಳುವವರು ಪುನಃ ಪುನಃ ಅದನ್ನೇ ಕೇಳುತ್ತಾರೆ. ನಾವು ಪ್ರತೀ ಬಾರಿ ಉತ್ತರಿಸುತ್ತಲೇ ಇದ್ದೇವೆ. ಇದು ಹೊಸ ಪ್ರಶ್ನೆಯೇ ಅಲ್ಲ” ಎಂದು ಭಾಗವತ್ ಹೇಳಿದರು, “ಆರ್ಎಸ್ಎಸ್ 1925ರಲ್ಲಿ ಪ್ರಾರಂಭವಾಯಿತು. ನಮ್ಮ ಸರಸಂಘಚಾಲಕರೇ ಹೋರಾಡುತ್ತಿದ್ದ ಆ ಸರ್ಕಾರದೊಡನೆ ನಾವು ನೋಂದಾಯಿಸಿಕೊಂಡಿರುತ್ತೇವೇ? ಸ್ವಾತಂತ್ರ್ಯಾನಂತರ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಲಿಲ್ಲ. ನೋಂದಣಿಯಾಗದ ಸಂಸ್ಥೆಗೂ ಕಾನೂನು ಮಾನ್ಯತೆ ಇದೆ. ನಮ್ಮನ್ನೂ ಅಂತಹ…
ಬಿಹಾರ ಚುನಾವಣೆಯ ಕ್ಲೈಮಾಕ್ಸ್: ನ.11ರಂದು ಎರಡನೇ ಹಂತದ ಮತದಾನ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025 ನಿರ್ಣಾಯಕ ಹಂತಕ್ಕೆ ಕಾಲಿಟ್ಟಿದ್ದು, ಎರಡನೇ ಮತ್ತು ಅಂತಿಮ ಹಂತದ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ವಾರಗಳ ರಾಜಕೀಯ ಬಿಸಿಯಾಗಿರುವ ಬಳಿಕ, ಪಕ್ಷಗಳು ಈಗ ನವೆಂಬರ್ 11ರಂದು ನಡೆಯಲಿರುವ ಮತದಾನದತ್ತ ಗಮನ ಹರಿಸಿವೆ. ಈ ಹಂತದಲ್ಲಿ ರಾಜ್ಯದ 20 ಜಿಲ್ಲೆಗಳಾದ್ಯಂತ 122 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಿಹಾರದ ಮುಂದಿನ ಸರ್ಕಾರವನ್ನು ತೀರ್ಮಾನಿಸುವ ಮಹತ್ವದ ಹಂತವೆಂದು ಪರಿಗಣಿಸಲಾಗಿದೆ. ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಒಟ್ಟು 1,302 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ — ಇವರಲ್ಲಿ 1,165 ಮಂದಿ ಪುರುಷರು, 136 ಮಹಿಳೆಯರು ಹಾಗೂ ಒಬ್ಬ ತೃತೀಯ ಲಿಂಗದ ಅಭ್ಯರ್ಥಿ ಇದ್ದಾರೆ. ಈ ಹಂತದಲ್ಲಿ ಸುಮಾರು 3.7 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ; ಇವರಲ್ಲಿ 1.95 ಕೋಟಿ ಪುರುಷರು ಮತ್ತು 1.74 ಕೋಟಿ ಮಹಿಳೆಯರು ಸೇರಿದ್ದಾರೆ. ಮೊದಲ ಹಂತದ ಮತದಾನ ನವೆಂಬರ್ 6ರಂದು…
