ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

ನವದೆಹಲಿ: ಸುಧಾರಿತ ಕೋಶ (Cell) ಮತ್ತು ಜೀನ್ (Gene) ಚಿಕಿತ್ಸೆಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ಖಚಿತಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಔಷಧ ನಿಯಮಗಳು–1945ಕ್ಕೆ ತಿದ್ದುಪಡಿ ಮಾಡಿದ್ದು, ಈ ಚಿಕಿತ್ಸಾ ಉತ್ಪನ್ನಗಳನ್ನು ಕೇಂದ್ರೀಯ ಪರವಾನಗಿ ಅನುಮೋದನಾ ಪ್ರಾಧಿಕಾರ (CLAA) ವ್ಯಾಪ್ತಿಗೆ ತರಲು ನಿರ್ಧರಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಈ ಕ್ರಮದಿಂದ ಕೇಂದ್ರ ಹಾಗೂ ರಾಜ್ಯ ಔಷಧ ನಿಯಂತ್ರಣ ಸಂಸ್ಥೆಗಳ ಜಂಟಿ ಮೇಲ್ವಿಚಾರಣೆಯಲ್ಲಿ ದೇಶಾದ್ಯಂತ ಏಕರೂಪದ ನಿಯಂತ್ರಣ ವ್ಯವಸ್ಥೆ ಜಾರಿಯಾಗಲಿದೆ. ಹೊಸ ಚೌಕಟ್ಟಿನಡಿ ಕಾಂಡಕೋಶ ಆಧಾರಿತ ಪುನರುತ್ಪಾದಕ ಚಿಕಿತ್ಸೆಗಳು, ರಕ್ತ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ CAR-T ಕೋಶ ಚಿಕಿತ್ಸೆ, ಆನುವಂಶಿಕ ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಜೀನ್ ಬದಲಿ ಹಾಗೂ ಜೀನ್-ಸಂಪಾದನಾ ಚಿಕಿತ್ಸೆಗಳು, ಜೊತೆಗೆ ಪ್ರಾಣಿ ಅಂಗಾಂಶಗಳಿಂದ ತಯಾರಾಗುವ ಕ್ಸೆನೋಗ್ರಾಫ್ಟ್ ಉತ್ಪನ್ನಗಳೂ ಒಳಪಡಲಿವೆ. ಈ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನಗಳು ಸಂಕೀರ್ಣ ಸ್ವರೂಪದ್ದಾಗಿರುವುದರಿಂದ ಕಠಿಣ ನಿಯಂತ್ರಣ ಮತ್ತು ಗುಣಮಟ್ಟದ…

PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಹಾಗೂ ಇತರ ಕಲ್ಯಾಣ ಯೋಜನೆಗಳಡಿ ವಿತರಿಸುವ ಅಕ್ಕಿಯ ಗುಣಮಟ್ಟವನ್ನು ಸುಧಾರಿಸುವ ಮಹತ್ವದ ನಿರ್ಧಾರಕ್ಕೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಅನುಮೋದನೆ ನೀಡಿದೆ. ಈ ಕ್ರಮದಿಂದ ದೇಶದಾದ್ಯಂತ 80 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ಹೊಸ ಮಾನದಂಡಗಳ ಪ್ರಕಾರ, ಕಚ್ಚಾ ಅಕ್ಕಿಯಲ್ಲಿ ಮುರಿದ ಧಾನ್ಯಗಳ ಪ್ರಮಾಣವನ್ನು ಶೇ.25ರಿಂದ ಶೇ.10ಕ್ಕೆ ಇಳಿಸಲಾಗುತ್ತದೆ. ಬೇಯಿಸಿದ ಅಕ್ಕಿಯಲ್ಲಿ ಮುರಿದ ಧಾನ್ಯಗಳ ಪ್ರಮಾಣವನ್ನು ಈಗಿನ ಶೇ.16ರಿಂದ ಶೇ.5ಕ್ಕೆ ಇಳಿಸಲಾಗುತ್ತದೆ. ಈ ಹೊಸ ವ್ಯವಸ್ಥೆ 2027–28ರ ಖಾರಿಫ್ ಮಾರುಕಟ್ಟೆ ಋತುವಿನಿಂದ ಹಂತ ಹಂತವಾಗಿ ಜಾರಿಗೆ ಬರಲಿದೆ. ಫಲಾನುಭವಿಗಳ ಅರ್ಹತೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಅವರಿಗೆ ಉತ್ತಮ ಗುಣಮಟ್ಟದ ಅಕ್ಕಿ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಿಲ್ಲಿಂಗ್ ವೇಳೆ ಉತ್ಪತ್ತಿಯಾಗುವ ಮುರಿದ ಅಕ್ಕಿಯನ್ನು ಕೈಗಾರಿಕಾ ಹಾಗೂ ಇತರ ಉತ್ಪಾದಕ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತದೆ.…

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

ನವದೆಹಲಿ: ಡಿಜಿಟಲ್ ಇಂಡಿಯಾ ಕಾರ್ಯಕ್ರಮದ 11 ವರ್ಷಗಳ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿದ್ದು, ಡಿಜಿಟಲ್ ವೇದಿಕೆಗಳ ಮೂಲಕ ಶಾಲೆ ಮತ್ತು ಕಾಲೇಜು ವರ್ಗಾವಣೆ, ಪ್ರವೇಶ, ವಿದ್ಯಾರ್ಥಿವೇತನ ಪರಿಶೀಲನೆ ಹಾಗೂ ಶೈಕ್ಷಣಿಕ ದಾಖಲೆಗಳ ದೃಢೀಕರಣ ಮತ್ತಷ್ಟು ಸುಲಭವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರ್ಕಾರದ ಮಾಹಿತಿ ಪ್ರಕಾರ, ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ (ABC) ಹಾಗೂ ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿ (NAD) ಮೂಲಕ 110.65 ಕೋಟಿಗೂ ಹೆಚ್ಚು ಶೈಕ್ಷಣಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಆನ್‌ಲೈನ್‌ನಲ್ಲಿ ಪಡೆಯಲು ಹಾಗೂ ಹಂಚಿಕೊಳ್ಳಲು ಸಾಧ್ಯವಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಅಡಿಯಲ್ಲಿ ಜಾರಿಯಲ್ಲಿರುವ ABC ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ರೆಡಿಟ್‌ಗಳನ್ನು ಸಂಗ್ರಹಿಸಲು, ವರ್ಗಾಯಿಸಲು ಹಾಗೂ ಬಳಸಿಕೊಳ್ಳಲು ಅವಕಾಶ ನೀಡುತ್ತದೆ. ಇದು ಬಹು ಪ್ರವೇಶ–ಬಹು ನಿರ್ಗಮನ ವ್ಯವಸ್ಥೆಗೆ ಸಹಕಾರಿಯಾಗಿದೆ. ಈ ವ್ಯವಸ್ಥೆಯನ್ನು APAAR ಡಿಜಿಟಲ್…

ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

ನವದೆಹಲಿ: ಬಿಹಾರ, ಮಧ್ಯಪ್ರದೇಶ ಹಾಗೂ ಗುಜರಾತ್‌ನ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಉಪಚುನಾವಣೆ ಘೋಷಿಸಿದೆ. ಜುಲೈ 30ರಂದು ಮತದಾನ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಆಗಸ್ಟ್ 4ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬಿಹಾರದ ಬಂಕಿಪುರ, ಮಧ್ಯಪ್ರದೇಶದ ದಾಟಿಯಾ ಹಾಗೂ ಗುಜರಾತ್‌ನ ಮಂಜಲ್‌ಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಬಂಕಿಪುರ ಕ್ಷೇತ್ರವು ನಿತಿನ್ ನಬಿನ್ ಅವರ ರಾಜೀನಾಮೆಯಿಂದ, ದಾಟಿಯಾ ಕ್ಷೇತ್ರವು ರಾಜೇಂದ್ರ ಭಾರ್ತಿ ಅವರ ಅನರ್ಹತೆಯಿಂದ ಹಾಗೂ ಮಂಜಲ್‌ಪುರ ಕ್ಷೇತ್ರವು ಯೋಗೇಶ್‌ಭಾಯ್ ಪಟೇಲ್ ಅವರ ನಿಧನದಿಂದ ತೆರವಾಗಿವೆ. ಚುನಾವಣಾ ವೇಳಾಪಟ್ಟಿಯ ಪ್ರಕಾರ, ಜುಲೈ 6ರಂದು ಅಧಿಸೂಚನೆ ಪ್ರಕಟವಾಗಲಿದೆ. ಜುಲೈ 13ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಜುಲೈ 14ರಂದು ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 16 ಕೊನೆಯ ದಿನವಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದು ಚುನಾವಣಾ…

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (PMRBP)-2026ಕ್ಕೆ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. 5 ರಿಂದ 18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಾಮಾಜಿಕ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ್ದರೆ ಅಥವಾ ಪ್ರತಿಕೂಲ ಸಂದರ್ಭಗಳಲ್ಲಿ ಅಪರೂಪದ ಧೈರ್ಯ ಪ್ರದರ್ಶಿಸಿದ್ದರೆ ಈ ಪ್ರತಿಷ್ಠಿತ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೇ ನಾಗರಿಕ, ಶಾಲೆ, ಶಿಕ್ಷಣ ಸಂಸ್ಥೆ ಅಥವಾ ಸಂಘಟನೆಗಳು ಅರ್ಹ ಮಕ್ಕಳನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಮಕ್ಕಳು ಸ್ವಯಂ ನಾಮನಿರ್ದೇಶನದ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯೊಂದಿಗೆ ವೈಯಕ್ತಿಕ ವಿವರಗಳು, ಇತ್ತೀಚಿನ ಭಾವಚಿತ್ರ, ಅಗತ್ಯ ದಾಖಲೆಗಳು ಹಾಗೂ ಅಭ್ಯರ್ಥಿಯ ಸಾಧನೆ ಮತ್ತು ಅದರ ಪರಿಣಾಮವನ್ನು ವಿವರಿಸುವ…

ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಜೀವ ದಹನವಾಗಿದ್ದು, 24ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. ದೌಸಾ ಜಿಲ್ಲೆಯ ಕೊಲ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಧನವಾಡಾ ಸಮೀಪ ಈ ಅಪಘಾತ ನಡೆದಿದೆ. ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಟ್ರಕ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬಸ್‌ನೊಳಗಿದ್ದ ಪ್ರಯಾಣಿಕರಲ್ಲಿ ಆತಂಕ ಉಂಟಾಗಿ, ಹಲವರು ಪ್ರಾಣ ಉಳಿಸಿಕೊಳ್ಳಲು ವಾಹನದಿಂದ ಹೊರಗೆ ಜಿಗಿದಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 24ಕ್ಕೂ ಹೆಚ್ಚು ಮಂದಿಯನ್ನು…

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕೇಂದ್ರ ತೈಲ ಕಂಪನಿಗಳು 183.50 ರೂಪಾಯಿ ಕಡಿತ ಘೋಷಿಸಿವೆ. ಪರಿಷ್ಕೃತ ದರಗಳು ಜುಲೈ 1ರಿಂದಲೇ ಜಾರಿಗೆ ಬಂದಿದ್ದು, ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ಇದರಿಂದ ಆರ್ಥಿಕ ನಿರಾಳತೆ ದೊರೆಯಲಿದೆ. ಇತ್ತೀಚಿನ ಬೆಲೆ ಕಡಿತದ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವು 3,021 ರೂಪಾಯಿಯಿಂದ 2,930 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಜೂನ್ ತಿಂಗಳಲ್ಲಿ ಈ ಸಿಲಿಂಡರ್ ಬೆಲೆ 3,198 ರೂಪಾಯಿವರೆಗೆ ಏರಿಕೆಯಾಗಿತ್ತು. ಅಮೆರಿಕಾ–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿನ ಪೂರೈಕೆ ವ್ಯತ್ಯಯದಿಂದ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನಿರಂತರ ಏರಿಕೆ ಕಂಡುಬಂದಿತ್ತು. ತೈಲ ಕಂಪನಿಗಳು ಮಾರ್ಚ್‌ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ., ಮೇ ತಿಂಗಳಲ್ಲಿ 993…

ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

ನವದೆಹಲಿ: ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಇತರ ಚುನಾವಣಾ ವಿಷಯಗಳ ಕುರಿತು 23 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸಂಸದರು ಸಹಿ ಮಾಡಿದ ಜಂಟಿ ಪತ್ರವನ್ನು ಭಾರತದ ಮುಖ್ಯ ನ್ಯಾಯಮೂರ್ತಿಗೆ ಕಳುಹಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ X ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಜೂನ್ 8, 2026ರಂದು ನಡೆದ ಭಾರತ ಜನಬಂಧನ್ ಸಭೆಯಲ್ಲಿ 21 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸದಸ್ಯರು ಭಾಗವಹಿಸಿದ್ದು, ಚುನಾವಣಾ ಆಯೋಗದ SIR ಪ್ರಕ್ರಿಯೆ ಸೇರಿದಂತೆ ಹಲವು ಚುನಾವಣಾ ಸಂಬಂಧಿತ ವಿಷಯಗಳ ಕುರಿತು ಮುಖ್ಯ ನ್ಯಾಯಮೂರ್ತಿಗೆ ಜಂಟಿ ಪತ್ರ ಬರೆಯಲು ನಿರ್ಧರಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಆ ನಿರ್ಧಾರದಂತೆ, ಈಗ 23 ರಾಜಕೀಯ ಪಕ್ಷಗಳು ಹಾಗೂ ಒಬ್ಬ ಸ್ವತಂತ್ರ ಸದಸ್ಯರ ಸಹಿಯೊಂದಿಗೆ ಜಂಟಿ ಪತ್ರವನ್ನು…

PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

ನವದೆಹಲಿ: ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಮತ್ತು REC ಲಿಮಿಟೆಡ್ ನಿರ್ದೇಶಕರ ಮಂಡಳಿಗಳು ವಿಲೀನ ಯೋಜನೆಗೆ ಅನುಮೋದನೆ ನೀಡಿದ್ದು, REC ಅನ್ನು PFC ಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ವಿಲೀನ ಪೂರ್ಣಗೊಂಡ ಬಳಿಕ ಹೊಸ ಸಂಸ್ಥೆಯ ಒಟ್ಟು ಸಾಲ ಪುಸ್ತಕವು ₹11 ಲಕ್ಷ ಕೋಟಿಗೂ ಅಧಿಕವಾಗಲಿದ್ದು, ದೇಶದ ವಿದ್ಯುತ್ ವಲಯದಲ್ಲಿ ಅತಿದೊಡ್ಡ ಹಣಕಾಸು ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ. ಕಂಪನಿಗಳ ಕಾಯ್ದೆ-2013ರ ಸೆಕ್ಷನ್ 230ರಿಂದ 232ರ ಅಡಿಯಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯಲಿದ್ದು, ಷೇರುದಾರರು, ಸಾಲದಾರರು ಹಾಗೂ ಸಂಬಂಧಿತ ನಿಯಂತ್ರಕ ಮತ್ತು ಸರ್ಕಾರಿ ಸಂಸ್ಥೆಗಳ ಅನುಮೋದನೆ ಪಡೆಯಬೇಕಿದೆ. ಯೋಜನೆಯ ಪ್ರಕಾರ, REC ಷೇರುದಾರರು ಹೊಂದಿರುವ ಪ್ರತಿ 100 ಈಕ್ವಿಟಿ ಷೇರುಗಳಿಗೆ 88 PFC ಈಕ್ವಿಟಿ ಷೇರುಗಳನ್ನು ನೀಡಲಾಗುತ್ತದೆ. ದಾಖಲೆ ದಿನಾಂಕವನ್ನು ನಂತರ ಎರಡೂ ಸಂಸ್ಥೆಗಳ ಮಂಡಳಿಗಳು ನಿಗದಿಪಡಿಸಲಿವೆ. ವಿಲೀನದ ಬಳಿಕವೂ ಸಂಸ್ಥೆಯು ‘ಸರ್ಕಾರಿ ಕಂಪನಿ’ ಸ್ಥಾನಮಾನವನ್ನು ಉಳಿಸಿಕೊಳ್ಳಲಿದ್ದು,…

ಕಾನೂನು ಮಾಪನಶಾಸ್ತ್ರ ಕಾಯ್ದೆಯಡಿ ‘ಸುಧಾರಣಾ ಸೂಚನೆ’ ವ್ಯವಸ್ಥೆ ಜಾರಿ

ನವದೆಹಲಿ: ವ್ಯವಹಾರ ಸುಗಮಗೊಳಿಸುವಿಕೆ ಮತ್ತು ನಂಬಿಕೆ ಆಧಾರಿತ ಆಡಳಿತಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಕಾನೂನು ಮಾಪನಶಾಸ್ತ್ರ ಕಾಯ್ದೆ-2009ರಡಿ ‘ಸುಧಾರಣಾ ಸೂಚನೆ’ (Improvement Notice) ವ್ಯವಸ್ಥೆಯನ್ನು ಪರಿಚಯಿಸಿದೆ. ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಕಾಯ್ದೆ-2026ರ ಮೂಲಕ ಜಾರಿಗೊಂಡಿರುವ ಈ ವ್ಯವಸ್ಥೆಯಡಿ, ಮೊದಲ ಬಾರಿಗೆ ನಿಯಮ ಉಲ್ಲಂಘನೆ ಮಾಡುವ ವ್ಯವಹಾರ ಸಂಸ್ಥೆಗಳಿಗೆ ದಂಡಾತ್ಮಕ ಕ್ರಮ ಕೈಗೊಳ್ಳುವ ಮುನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ತಯಾರಕರು, ಆಮದುದಾರರು, ಪ್ಯಾಕರ್‌ಗಳು, ಡೀಲರ್‌ಗಳು, ರಿಪೇರಿ ಮಾಡುವವರು, ವ್ಯಾಪಾರಿಗಳು ಹಾಗೂ ಎಂಎಸ್‌ಎಂಇ ಸೇರಿದಂತೆ ವಿವಿಧ ಘಟಕಗಳಿಗೆ ಈ ವ್ಯವಸ್ಥೆ ಅನ್ವಯವಾಗಲಿದೆ. ಕಾನೂನು ಮಾಪನಶಾಸ್ತ್ರ ಅಧಿಕಾರಿಗಳು ಉಲ್ಲಂಘನೆ ಪತ್ತೆಯಾದಲ್ಲಿ ಸುಧಾರಣಾ ಸೂಚನೆ ನೀಡಲಿದ್ದು, ನಿಗದಿತ ಅವಧಿಯಲ್ಲಿ ದೋಷ ಸರಿಪಡಿಸಿದರೆ ದಂಡದ ಕ್ರಮಗಳಿಂದ ವಿನಾಯಿತಿ ಸಿಗಲಿದೆ. ನೋಂದಣಿ, ದಾಖಲೆ ನಿರ್ವಹಣೆ, ಮಾದರಿ ಅನುಮೋದನೆ, ತೂಕ ಮತ್ತು ಅಳತೆಗಳ ಉತ್ಪಾದನೆ ಹಾಗೂ ಮಾರಾಟ, ಆಮದು,…