CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟಕರು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಡ್ಡಾ, ಸಿಜೆಪಿ ನಿಯೋಗವು ಪರೀಕ್ಷೆ ಮತ್ತು ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಐದು ಅಂಶಗಳ ಲಿಖಿತ ಪ್ರಸ್ತಾವನೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರದ ಮುಂದಿಟ್ಟಿದೆ ಎಂದು ಹೇಳಿದ್ದಾರೆ. ಮಾತುಕತೆ ವೇಳೆ ಸರ್ಕಾರ, ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳನ್ನೂ ದಾಖಲಿಸಲಾಗುವುದಿಲ್ಲ ಎಂದು ಭರವಸೆ ನೀಡಿದೆ ಎಂದು ನಡ್ಡಾ ತಿಳಿಸಿದ್ದಾರೆ. ಪ್ರತಿಭಟನೆ ವೇಳೆ ಪ್ರಾಣ…

ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅವರಿಂದ ತೆರವಾದ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಈ ಆದೇಶ ಹೊರಡಿಸಿದ್ದು, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿ ನಿರ್ವಹಿಸಲಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಆಗಿರುವ ಪ್ರಲ್ಹಾದ್ ಜೋಶಿ, ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದರ ಜೊತೆಗೆ ಅವರು ಅಂತರರಾಷ್ಟ್ರೀಯ ಸೌರ ಒಕ್ಕೂಟ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಅವರು ತಮ್ಮ ಈಗಿನ ಸಚಿವಾಲಯಗಳ ಜೊತೆಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ರಾಷ್ಟ್ರಪತಿ ಭವನದಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ,…

ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು “ವಿದ್ಯಾರ್ಥಿಗಳ ಗೆಲುವು” ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಬಳಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಇದು ಭಾರತದ ವಿದ್ಯಾರ್ಥಿಗಳ ಜಯ. ಅವರು ದೇಶದ ಭವಿಷ್ಯ. ಶಿಕ್ಷಣ ವ್ಯವಸ್ಥೆ ಹಲವು ವರ್ಷಗಳಿಂದ ದಾಳಿಗೆ ಒಳಗಾಗಿದ್ದು, ಅದನ್ನು ವಶಪಡಿಸಿಕೊಳ್ಳುವ ಹಾಗೂ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. “ಒಂದು ಕಾಲದಲ್ಲಿ ಭಾರತದ ಶಿಕ್ಷಣ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿತ್ತು. ಆದರೆ ಇಂದು ಅದು ಭ್ರಷ್ಟಾಚಾರ, ಅಸಮರ್ಥತೆ ಮತ್ತು ತಪ್ಪು ನೀತಿಗಳಿಂದ ಹದಗೆಟ್ಟಿದೆ. ಧರ್ಮೇಂದ್ರ ಪ್ರಧಾನ್ ಈ ಹದಗೆಟ್ಟ ವ್ಯವಸ್ಥೆಯ ಸಂಕೇತವಾಗಿದ್ದರು. ಅವರ ರಾಜೀನಾಮೆ ಶಿಕ್ಷಣ ವ್ಯವಸ್ಥೆಯನ್ನು ಪುನರ್‌ನಿರ್ಮಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ” ಎಂದು ಹೇಳಿದರು.…

ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆ ಕುರಿತು ಎಐ (AI) ತಂತ್ರಜ್ಞಾನ ಬಳಸಿ ಸುಳ್ಳು ಮಾಹಿತಿ ಹರಡಲು ಸಂಘಟಿತ ಅಪಪ್ರಚಾರ ನಡೆಸಲಾಗಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ 400ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ ಬ್ಲಾಕ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸರು, ಪ್ರತಿಭಟನೆಗೆ ಸಂಬಂಧಿಸಿದಂತೆ ಎಐ ನಿರ್ಮಿತ ವಿಡಿಯೋಗಳು, ಡೀಪ್‌ಫೇಕ್‌ಗಳು, ಸಂಪಾದಿತ ಚಿತ್ರಗಳು ಹಾಗೂ ನಕಲಿ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಪ್ರತಿಭಟನೆ ಕುರಿತ ಪೋಸ್ಟ್‌ಗಳು, ವಿಡಿಯೋಗಳು ಅಥವಾ ಛಾಯಾಚಿತ್ರಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಕಳೆದ ಕೆಲವು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ, ಪ್ರತಿಭಟನೆಗೆ ಸಂಬಂಧಿಸಿದ ಅನೇಕ ಪೋಸ್ಟ್‌ಗಳು ವೈರಲ್…

ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳ ಬಳಿಕ ರಾಜೀನಾಮೆಗೆ ಒತ್ತಾಯ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಹಾಗೂ ವಿದ್ಯಾರ್ಥಿಗಳು ಕಾನೂನು ಹೋರಾಟಗಳಲ್ಲಿ ಸಿಲುಕದೆ ತಮ್ಮ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಎರಡು ಪುಟಗಳ ಪತ್ರದಲ್ಲಿ ಅವರು, ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ಹೊತ್ತಿದ್ದಾಗಿ ಹೇಳಿದ್ದಾರೆ. ಮೇ 3ರಂದು ನಡೆದ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ತಕ್ಷಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಪರೀಕ್ಷೆಯನ್ನು ರದ್ದುಪಡಿಸಿ ಜೂನ್…

ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕವೂ ತಮ್ಮ ಹೋರಾಟ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಧ್ಯಕ್ಷ ಅಭಿಜಿತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು “ವಿದ್ಯಾರ್ಥಿ ಶಕ್ತಿಯ ಗೆಲುವು” ಎಂದು ಬಣ್ಣಿಸಿದ ಅವರು, ಸರ್ಕಾರದ ಮುಂದೆ ಇನ್ನೆರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ದೀಪ್ಕೆ, ಶಾಂತಿಯುತ ಹೋರಾಟ ಮತ್ತು ಸಾರ್ವಜನಿಕ ಒತ್ತಡದ ಮೂಲಕ ಸರ್ಕಾರವನ್ನು ಹೊಣೆಗಾರಿಕೆಗೆ ಒಳಪಡಿಸಬಹುದು ಎಂಬುದನ್ನು ಈ ಚಳವಳಿ ಸಾಬೀತುಪಡಿಸಿದೆ ಎಂದು ಹೇಳಿದರು. “ನಾವು ಸಾಧಿಸಿದ್ದೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಮುಂದೆ ತಲೆಬಾಗದಿದ್ದರೆ ಯಾರಿಂದ ಬೇಕಾದರೂ ರಾಜೀನಾಮೆ ಪಡೆಯಬಹುದು ಎಂಬುದನ್ನು ಈ ಹೋರಾಟ ತೋರಿಸಿದೆ” ಎಂದು ಅವರು ಹೇಳಿದರು. ಆದರೆ, ರಾಜೀನಾಮೆ ಮಾತ್ರ ಸಾಕಾಗುವುದಿಲ್ಲ ಎಂದು ಹೇಳಿದ ದೀಪ್ಕೆ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ…

ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ಚರ್ಚೆ ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಈ ವೇಳೆ ತಮ್ಮ ಹಿಂದಿನ ವಿಡಿಯೋಗೆ ವ್ಯಕ್ತವಾದ ಪ್ರತಿಕ್ರಿಯೆಗೆ ಯುವಕರಿಗೆ ಧನ್ಯವಾದ ತಿಳಿಸಿದ್ದಾರೆ. ಗುರುವಾರ ರಾತ್ರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅದರ ಬೆನ್ನಲ್ಲೇ ಕೇವಲ ಒಂದೇ ರಾತ್ರಿಯಲ್ಲಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಗೆ ಸುಮಾರು 11 ಲಕ್ಷ ಹೊಸ ಅನುಯಾಯಿಗಳು ಸೇರ್ಪಡೆಯಾಗಿದ್ದಾರೆ. ವಿಡಿಯೋ ಪ್ರಕಟಿಸುವ ಮೊದಲು ಪ್ರಧಾನಿ ಮೋದಿ ಅವರ ಇನ್‌ಸ್ಟಾಗ್ರಾಮ್ ಖಾತೆಗೆ ಸುಮಾರು 101 ಮಿಲಿಯನ್ ಅನುಯಾಯಿಗಳಿದ್ದರೆ, ವಿಡಿಯೋ ವೈರಲ್ ಆದ ಬಳಿಕ ಆ ಸಂಖ್ಯೆ 102 ಮಿಲಿಯನ್‌ಗಿಂತ ಹೆಚ್ಚಾಗಿದೆ. ಈ…

2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

ನವದೆಹಲಿ: ದೇಶಾದ್ಯಂತ ಮಕ್ಕಳ ಪೌಷ್ಠಿಕತೆ, ಆರಂಭಿಕ ಶಿಕ್ಷಣ ಹಾಗೂ ತಾಯಿ–ಮಕ್ಕಳ ಆರೈಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಿಷನ್ ಸಾಕ್ಷಮ್ ಅಂಗನವಾಡಿ ಮತ್ತು ಪೋಷಣ್ 2.0 ಯೋಜನೆಯಡಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ‘ಸಕ್ಷಮ್ ಅಂಗನವಾಡಿ’ಗಳಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್, ಅಂಗನವಾಡಿ ಸೇವೆಗಳು, ಪೋಷಣ್ ಅಭಿಯಾನ ಹಾಗೂ ಹದಿಹರೆಯದ ಬಾಲಕಿಯರ ಯೋಜನೆಗಳನ್ನು ಏಕೀಕೃತಗೊಳಿಸಿ ಅಪೌಷ್ಟಿಕತೆಯನ್ನು ತಡೆಗಟ್ಟುವ ಹಾಗೂ ಮಕ್ಕಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮೇಲ್ದರ್ಜೆಗೊಳ್ಳುವ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಇಡಿ ಪರದೆಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪೋಷಣ್ ವಾಟಿಕಾ (ಪೌಷ್ಟಿಕ ಉದ್ಯಾನ), ಆರಂಭಿಕ ಬಾಲ್ಯ ಶಿಕ್ಷಣಕ್ಕೆ ಅಗತ್ಯ ಕಲಿಕಾ ಸಾಮಗ್ರಿಗಳು ಹಾಗೂ ಮಕ್ಕಳ ಸ್ನೇಹಿ ಕಲಿಕಾ ವಾತಾವರಣ ಕಲ್ಪಿಸಲಾಗುತ್ತದೆ.…

UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ಎಂಜಿನಿಯರಿಂಗ್ ಸೇವೆಗಳ (ಮುಖ್ಯ) ಪರೀಕ್ಷೆ–2026ರ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಮುಂದಿನ ಹಂತವಾದ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ)ಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಎಲ್ಲ ಅಭ್ಯರ್ಥಿಗಳ ಅರ್ಹತೆ ತಾತ್ಕಾಲಿಕವಾಗಿದ್ದು, ವಯಸ್ಸು, ಶೈಕ್ಷಣಿಕ ಅರ್ಹತೆ, ಮೀಸಲಾತಿ ವರ್ಗ ಹಾಗೂ ಅಂಗವೈಕಲ್ಯ ಪ್ರಮಾಣಪತ್ರ ಸೇರಿದಂತೆ ಎಲ್ಲಾ ದಾಖಲೆಗಳ ಪರಿಶೀಲನೆಯ ನಂತರವೇ ಅಂತಿಮವಾಗಿ ಮಾನ್ಯವಾಗಲಿದೆ ಎಂದು UPSC ಸ್ಪಷ್ಟಪಡಿಸಿದೆ. ಸಂದರ್ಶನದ ವೇಳೆ ಎಲ್ಲಾ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಮ್ಮ ಅರ್ಜಿ ವಿವರಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ನವೀಕರಿಸಲು 15 ದಿನಗಳ ಆನ್‌ಲೈನ್ ಅವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಅಗತ್ಯ ವಿದ್ಯಾರ್ಹತೆ ಪೂರೈಸಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡುವುದರ ಜೊತೆಗೆ, ಪತ್ರವ್ಯವಹಾರದ ವಿಳಾಸ, ಉನ್ನತ ವಿದ್ಯಾರ್ಹತೆ, ಉದ್ಯೋಗ ಅನುಭವ ಹಾಗೂ ಸೇವಾ ಆದ್ಯತೆಗಳ ಮಾಹಿತಿಯನ್ನು ನವೀಕರಿಸಬೇಕಾಗಿದೆ. ಇದೇ…

PM Modi posts another video amid NEET row, thanks youth for response

New Delhi: Prime Minister Narendra Modi on Friday night released another video message, thanking young people and supporters for their response to his earlier video posted amid the ongoing NEET examination controversy. In the brief message shared on his social media platforms, the Prime Minister expressed gratitude for the feedback and encouragement he had received following his previous video. “I had the opportunity to meet you yesterday. Thank you to everyone who responded to my video. Your positive suggestions and your love will further enhance our potential. My heartfelt thanks…