ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ನ ವೈಫಲ್ಯಗಳನ್ನು ಜನರಿಗೆ ಎತ್ತಿತೋರಿಸಿ ಬಿಜೆಪಿ ವಿಶ್ವಾಸಾರ್ಹ ಪಕ್ಷ ಎಂಬುದನ್ನು ಮನವರಿಕೆ ಮಾಡಿಕೊಡಲು ಎಲ್ಲರೂ ಸಂಘಟನಾತ್ಮಕವಾಗಿ ಶ್ರಮಿಸಬೇಕು. ಪಕ್ಷಕ್ಕಾಗಿ ಕಟಿಬದ್ಧರಾಗಿ ದುಡಿಯಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ಸಲಹೆ ನೀಡಿದರು ಎಂದು ವಿವರ ನೀಡಿದರು. ನಿತಿನ್ ನವೀನ್ ಅವರು ಅಧ್ಯಕ್ಷರಾದ ನಂತರ ಕರ್ನಾಟಕಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಪಕ್ಷದ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರ ಮಟ್ಟದ ಮೇಲಿನವರೊಂದಿಗೆ ಸಂವಾದ ನಡೆಸಿದರು. ಪಕ್ಷದ ಪರಿಶ್ರಮದಿಂದಾಗಿ ಇಂದು 22ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 400…
Category: ದೇಶ
ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ
ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಳಗ್ಗೆ ತಟ್ಟೆಹಕ್ಕಲು ನದಿಗೆ ತೆರಳಿದ್ದ ಕುಟುಂಬದ ಸದಸ್ಯರು ಕಪ್ಪೆಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ ಎನ್ನಲಾಗಿದೆ. ನೀರಿನ ರಭಸಕ್ಕೆ ಹಲವು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ. ಮೃತರೆಲ್ಲರೂ ಭಟ್ಕಳದ ಶಿರಾಲಿ ಭಾಗದ ಪಡುಶಿರಾಲಿ ಶಾರದಹೊಳೆ ನಿವಾಸಿಗಳಾಗಿದ್ದು, ಮೃತಪಟ್ಟವರಲ್ಲಿ ಒಬ್ಬ ಪುರುಷ ಹಾಗೂ ಏಳು ಮಹಿಳೆಯರು ಸೇರಿದ್ದಾರೆ. ಮೃತರನ್ನು ಲಕ್ಷ್ಮೀ ಅಣ್ಣಪ್ಪ ನಾಯ್ಕ (44), ಮಾಸ್ತಮ್ಮ ಮಂಜುನಾಥ ನಾಯ್ಕ (43), ಲಕ್ಷ್ಮೀ ಶಿವರಾಮ ನಾಯ್ಕ (39), ಉಮೇಶ್ ಮಂಜುನಾಥ ನಾಯ್ಕ (42), ಲಕ್ಷ್ಮೀ ಮಾದೇವ ನಾಯ್ಕ (38), ಮಾಲತಿ ಜಟ್ಟಪ್ಪ ನಾಯ್ಕ (38), ಲಕ್ಷ್ಮೀ ನಾಯ್ಕ…
ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್ ರಾಜಕೀಯ?
ಬೆಂಗಳೂರು: ಆನೇಕಲ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಪರಿಸರವಾದಿಗಳ ವಿರೋಧದ ನಡುವೆಯೂ ಸರ್ಕಾರ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದನ್ನು ಪ್ರಶ್ನಿಸಿದರು. “ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಸ್ಟೇಡಿಯಂ (M. Chinnaswamy Stadium) ವರ್ಷಕ್ಕೆ ಕೇವಲ ನಾಲ್ಕೈದು ಬಾರಿ ಮಾತ್ರ ಬಳಕೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದ ಅಗತ್ಯವೇನು?” ಎಂದು ಅಶೋಕ್ ಪ್ರಶ್ನಿಸಿದರು. ಕ್ರೀಡಾಂಗಣದ ಸುತ್ತಮುತ್ತ ಜಮೀನಿನ ಬೆಲೆ ಹೆಚ್ಚಿಸಿ ಮಾರಾಟ ಮಾಡುವ ಉದ್ದೇಶದಿಂದಲೇ ಈ ಯೋಜನೆ ರೂಪಿಸಲಾಗಿದೆ. ಆನೇಕಲ್ನ ಯಾವುದೇ ಕ್ರೀಡಾಪಟು ಸರ್ಕಾರದ ಬಳಿ ಮನವಿ ಮಾಡಿಲ್ಲ. ಏಕಾಏಕಿ ಯೋಜನೆ ಘೋಷಿಸಿರುವುದು ಹಣ ಸಂಪಾದನೆಗಾಗಿ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.…
ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !
ನವದೆಹಲಿ, (ANU): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಮುನ್ನಡೆಸುತ್ತಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊದಲ ಸ್ಥಾನ ಪಡೆದಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (B. Y. Vijayendra) ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಪ್ರಲ್ಹಾದ್ ಜೋಶಿ ಅವರ ನಾಯಕತ್ವದಲ್ಲಿ ಸಚಿವಾಲಯವು ಸಾರ್ವಜನಿಕ ಕುಂದುಕೊರತೆಗಳ ತ್ವರಿತ ಪರಿಹಾರ, ಫೈಲ್ ವಿಲೇವಾರಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಉತ್ತಮ ಆಡಳಿತ” ದೃಷ್ಟಿಕೋನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸಚಿವಾಲಯ ಯಶಸ್ವಿಯಾಗಿದೆ. ಇದು ಪ್ರಲ್ಹಾದ್ ಜೋಶಿ ಅವರ ಸಮರ್ಪಿತ ಆಡಳಿತ, ಪರಿಣಿತಿ…
ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ
ನವದೆಹಲಿ: ಎಬೋಲಾ ವೈರಸ್ ಸೋಂಕು ಕುರಿತು ವಿಶ್ವ ಆರೋಗ್ಯ ಸಂಸ್ಥೆ (World Health Organization) ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಹಿನ್ನೆಲೆ, ಆಫ್ರಿಕಾದ ಕೆಲವು ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ತಪ್ಪಿಸುವಂತೆ ಭಾರತ ಸರ್ಕಾರ ನಾಗರಿಕರಿಗೆ ಸಲಹೆ ನೀಡಿದೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (Democratic Republic of the Congo, Uganda) ಹಾಗೂ ದಕ್ಷಿಣ ಸುಡಾನ್ (South Sudan) ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಮಾಡಬಾರದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಮೇ 17ರಂದು WHO, ಅಂತರರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳಡಿ (IHR) ಎಬೋಲಾ ಸೋಂಕಿನ ಏಕಾಏಕಿ ಪರಿಸ್ಥಿತಿಯನ್ನು “ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ” (PHEIC) ಎಂದು ಘೋಷಿಸಿತ್ತು. ಇದರ ಬೆನ್ನಲ್ಲೇ ಆಫ್ರಿಕಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೂಡ ಕಾಂಗೋ ಮತ್ತು ಉಗಾಂಡಾದಲ್ಲಿ ಹರಡುತ್ತಿರುವ ಬುಂಡಿಬುಗ್ಯೊ ತಳಿ ಎಬೋಲಾ ವೈರಸ್ ಸ್ಫೋಟವನ್ನು ಭೂಖಂಡದ…
ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ
ಚೆನ್ನೈ: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ತಮಿಳುನಾಡು (Tamil Nadu) ಸರ್ಕಾರ ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳು ಹಾಗೂ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಣ್ಗಾವಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ಆದರೂ ಆರೋಗ್ಯ ಇಲಾಖೆ ಹೆಚ್ಚಿನ ಸನ್ನದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಪ್ರಿವೆಂಟಿವ್ ಮೆಡಿಸಿನ್ ನಿರ್ದೇಶನಾಲಯವು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದ್ದು, ಎಬೋಲಾ ಸೋಂಕು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲು ಆದೇಶಿಸಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಬಲಪಡಿಸಲಾಗಿದ್ದು, ಪೀಡಿತ ರಾಷ್ಟ್ರಗಳಿಗೆ ಭೇಟಿ ನೀಡಿದವರ ಪ್ರಯಾಣ ಇತಿಹಾಸ ಪರಿಶೀಲಿಸಲಾಗುತ್ತಿದೆ. ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳು ಹಾಗೂ ಕ್ಷಿಪ್ರ ಪ್ರತಿಕ್ರಿಯಾ ತಂಡಗಳನ್ನು ಸಿದ್ಧವಾಗಿಡಲಾಗಿದೆ. ವೈದ್ಯಕೀಯ…
ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ
ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for Promotion of Industry and Internal Trade) ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಯೋಜನೆಯಡಿ 2026-27ರಿಂದ 2031-32ರವರೆಗೆ ಸುಮಾರು ₹33,660 ಕೋಟಿ ವೆಚ್ಚದಲ್ಲಿ ದೇಶಾದ್ಯಂತ 100 ವಿಶ್ವದರ್ಜೆಯ ಕೈಗಾರಿಕಾ ಉದ್ಯಾನವನಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಮೂಲಕ 50 ಉದ್ಯಾನವನಗಳನ್ನು ಆಯ್ಕೆ ಮಾಡಲಾಗುತ್ತದೆ. BHAVYA ಯೋಜನೆ Make in India ಹಾಗೂ PM Gati Shakti ಯೋಜನೆಗಳೊಂದಿಗೆ ಸಂಯೋಜಿತವಾಗಿದ್ದು, ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ. ಮಾರ್ಗಸೂಚಿಗಳ ಪ್ರಕಾರ, ಉದ್ಯಾನವನಗಳಲ್ಲಿ ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಸಂಪರ್ಕ, ಡಿಜಿಟಲ್ ಆಡಳಿತ ವ್ಯವಸ್ಥೆ, ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳು ಹಾಗೂ…
ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು
ಲೇಹ್: ಲಡಾಖ್ನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಘಟನೆ ಮೇ 20ರಂದು ನಡೆದಿದ್ದು, ಘಟನೆಯಲ್ಲಿ ಮೂವರು ಹಿರಿಯ ಸೇನಾ ಅಧಿಕಾರಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸೇನಾ ಮೂಲಗಳ ಪ್ರಕಾರ, ಏಕ ಎಂಜಿನ್ ಹೊಂದಿದ್ದ ‘ಚೀತಾ’ ಹೆಲಿಕಾಪ್ಟರ್ನಲ್ಲಿ ಲೆಫ್ಟಿನೆಂಟ್ ಕರ್ನಲ್, ಇಬ್ಬರು ಮೇಜರ್ ಹುದ್ದೆಯ ಅಧಿಕಾರಿಗಳು ಹಾಗೂ 3 ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ ಮೇಜರ್ ಜನರಲ್ ಸಚಿನ್ ಮೆಹ್ತಾ ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ವೇಳೆ ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಮೇಜರ್ ನಿರ್ವಹಿಸುತ್ತಿದ್ದರು. ಘಟನೆ ಬಳಿಕ ಮೂವರು ಅಧಿಕಾರಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿ ಬದುಕುಳಿದಿರುವುದನ್ನು ಸೇನಾ ಅಧಿಕಾರಿಗಳು ದೃಢಪಡಿಸಿದ್ದಾರೆ. 3 army officers had a narrow escape after their Cheetah helicopter crashed in the mountainous Tangste region near…
IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್ಗಳಲ್ಲಿ 255 ರನ್ ಕಲೆಹಾಕಿತು. ಬೃಹತ್ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ, ಸನ್ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ದಾಖಲಿಸಿತು. ಈ ಪಂದ್ಯದಲ್ಲಿ 255 ರನ್ ಸಿಡಿಸಿದ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ಧ ಎರಡು ಬಾರಿ 250ಕ್ಕೂ ಅಧಿಕ ಮೊತ್ತ ಪೇರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದೆ. ಇನ್ನೊಂದೆಡೆ, ಈ ಸೋಲಿನೊಂದಿಗೆ ಆರ್ಸಿಬಿ ತಂಡ ಹೀನಾಯ ದಾಖಲೆಯೊಂದನ್ನು ತನ್ನ ಹೆಸರಿಗೆ ಸೇರಿಸಿಕೊಂಡಿದೆ. ಆದರೂ ಅಂಕಪಟ್ಟಿಯಲ್ಲಿ…
ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ
ಹೈದರಾಬಾದ್: ನಿರ್ದೇಶಕ ಅಜಯ್ ನಾಗ್ ವಿ ಅವರ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ‘ಸಮವರ್ತಿ’ ಎಂದು ಶೀರ್ಷಿಕೆ ಇಡಲಾಗಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ನಟ ಸತ್ಯದೇವ್ ಕಾಂಚರಣ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದ್ದಾರೆ. ಪೋಸ್ಟರ್ ಹಂಚಿಕೊಂಡಿರುವ ಸತ್ಯದೇವ್, “ಈ ಬಾರಿ ಭರವಸೆಯನ್ನು ತಲುಪಿಸಲಾಗುವುದು. ಅಜಯ್ ನಾಗ್ ವಿ ಅವರೊಂದಿಗೆ ಕೆಲಸ ಮಾಡುವುದು ವಿಶೇಷ ಅನುಭವ” ಎಂದು ಬರೆದುಕೊಂಡಿದ್ದಾರೆ. This time the promise will be DELIVERED !!#Samavarthi @AjayNagV Love you for everything. Watching him direct is poetry in motion. A tiger hug to my beloved producers @JakkidiShivaIYC @Shashidhar1909@Rudra_Pictures @PanchabhutaOffl pic.twitter.com/LsUCZc9ZIQ — Satya Dev (@ActorSatyaDev) May 22, 2026 ‘ಸಮವರ್ತಿ’…
