ರೈಲ್‌ಒನ್‌ಗೆ ಭರ್ಜರಿ ಸ್ಪಂದನೆ; ದಿನಕ್ಕೆ 10 ಲಕ್ಷ ಟಿಕೆಟ್ ಬುಕಿಂಗ್

ನವದೆಹಲಿ: ಭಾರತೀಯ ರೈಲ್ವೆಯ ಡಿಜಿಟಲ್ ಸೇವೆಗಳಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರೈಲ್‌ಒನ್ ಅಪ್ಲಿಕೇಶನ್‌ ಈಗ 4.76 ಕೋಟಿ ಡೌನ್‌ಲೋಡ್‌ಗಳನ್ನು ದಾಟಿದೆ. 2026ರ ಆಗಸ್ಟ್ 2ರ ವೇಳೆಗೆ ಆ್ಯಪ್ ಮೂಲಕ ಪ್ರತಿದಿನ ಸರಾಸರಿ 10 ಲಕ್ಷ ಟಿಕೆಟ್‌ಗಳು ಬುಕ್ ಆಗುತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ. 2025ರ ಜುಲೈ 1ರಂದು ಆರಂಭವಾದ ರೈಲ್‌ಒನ್, ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್‌ಗಳು, ಪ್ಲಾಟ್‌ಫಾರ್ಮ್ ಟಿಕೆಟ್, ರೈಲು ಮತ್ತು ಪಿಎನ್‌ಆರ್ ಮಾಹಿತಿ, ರೈಲ್‌ಮದಾದ್ ಸೇರಿದಂತೆ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುತ್ತದೆ. ಒಂದೇ ಸೈನ್-ಆನ್ ವ್ಯವಸ್ಥೆಯ ಮೂಲಕ ಪ್ರಯಾಣಿಕರು ವಿವಿಧ ಸೇವೆಗಳನ್ನು ಸುಲಭವಾಗಿ ಬಳಸಬಹುದಾಗಿದೆ. ಆಗಸ್ಟ್ 2ರ ವೇಳೆಗೆ ಪ್ರತಿದಿನ ಸರಾಸರಿ 2.79 ಲಕ್ಷ ಕಾಯ್ದಿರಿಸಿದ ಹಾಗೂ 7.24 ಲಕ್ಷ ಕಾಯ್ದಿರಿಸದ ಟಿಕೆಟ್‌ಗಳು ರೈಲ್‌ಒನ್ ಮೂಲಕ ಬುಕ್ ಆಗುತ್ತಿವೆ. ಡಿಜಿಟಲ್ ರೈಲು ಮಾಹಿತಿ ಸೇವೆಗೂ ಹೆಚ್ಚಿದ ಬೇಡಿಕೆ…

ಆಳ ಸಮುದ್ರ ಮೀನುಗಾರಿಕೆ; 9,650 ಉಚಿತ ಡಿಜಿಟಲ್ ಪಾಸ್ ವಿತರಣೆ, ಕರ್ನಾಟಕಕ್ಕೆ ಅತಿ ಹೆಚ್ಚು

ನವದೆಹಲಿ: ಭಾರತದ ವಿಶೇಷ ಆರ್ಥಿಕ ವಲಯದಲ್ಲಿ (EEZ) ಆಳ ಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 9,650 ಉಚಿತ ಡಿಜಿಟಲ್ ಪ್ರವೇಶ ಪಾಸ್‌ಗಳನ್ನು ವಿತರಿಸಿದೆ. ಈ ಪೈಕಿ ಕರ್ನಾಟಕವೇ ಅತಿ ಹೆಚ್ಚು ಪಾಸ್‌ಗಳನ್ನು ಪಡೆದ ರಾಜ್ಯವಾಗಿದ್ದು, ಸಾಂಪ್ರದಾಯಿಕ ಮೀನುಗಾರರು, ಸಹಕಾರಿ ಸಂಸ್ಥೆಗಳು ಹಾಗೂ ಮೀನು ರೈತ ಉತ್ಪಾದಕ ಸಂಸ್ಥೆಗಳಿಗೆ (FFPOs) ಹೊಸ ಅವಕಾಶಗಳು ದೊರೆಯಲಿವೆ. 2025ರ ನವೆಂಬರ್‌ನಲ್ಲಿ ಅಧಿಸೂಚನೆಗೊಂಡ EEZ ನಿಯಮಗಳು, 2025ರಡಿ ReALCRaft ಪೋರ್ಟಲ್ ಮೂಲಕ ಈ ಪಾಸ್‌ಗಳನ್ನು ನೀಡಲಾಗುತ್ತಿದೆ. 12 ನಾಟಿಕಲ್ ಮೈಲುಗಳಾಚೆ ಹಾಗೂ 200 ನಾಟಿಕಲ್ ಮೈಲುಗಳವರೆಗೆ ಮೀನುಗಾರಿಕೆ ನಡೆಸುವ ಯಾಂತ್ರಿಕೃತ ಮೀನುಗಾರಿಕಾ ಹಡಗುಗಳಿಗೆ ಹಾಗೂ 24 ಮೀಟರ್‌ಗಿಂತ ಉದ್ದದ ದೊಡ್ಡ ಯಾಂತ್ರಿಕೃತ ದೋಣಿಗಳಿಗೆ ಪ್ರವೇಶ ಪಾಸ್ ಕಡ್ಡಾಯವಾಗಿದೆ. ಸಾಂಪ್ರದಾಯಿಕ ಮೋಟಾರು ರಹಿತ ಹಾಗೂ ಸಣ್ಣ ದೋಣಿಗಳಿಗೆ ವಿನಾಯಿತಿ ನೀಡಲಾಗಿದೆ. ಆಳ ಸಮುದ್ರ ಮೀನುಗಾರಿಕೆಯನ್ನು ವಿಸ್ತರಿಸುವುದರ ಜೊತೆಗೆ ಮೀನು ಸಂಸ್ಕರಣೆ ಮತ್ತು…

ತೆಲಂಗಾಣದಲ್ಲಿ ಭೀಕರ ಅಪಘಾತ; ಆಟೋಗೆ ಟ್ಯಾಂಕರ್ ಡಿಕ್ಕಿ, 6 ಮಂದಿ ಸಾವು

ಸಂಗಾರೆಡ್ಡಿ: ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಬಳಿ ನಡೆದಿದೆ. ಆಟೋ ರಿಕ್ಷಾ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ವೇಳೆ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಮೃತರು ಹಾಗೂ ಗಾಯಾಳುಗಳು ಕರ್ನಾಟಕದ ಬೀದರ್ ಜಿಲ್ಲೆಯ ರಾಜ್‌ಗೇರಾ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ರೇಖಾ, ಶ್ರೀದೇವಿ, ಕವಿತಾ, ರೇಷ್ಮಾ, ನಿಖಿತಾ ಹಾಗೂ ಆಟೋ ಚಾಲಕ ದೇವದಾಸ್ ಮೃತಪಟ್ಟಿದ್ದಾರೆ. ನಿರ್ಮಲಾ, ತುಳಜಮ್ಮ, ಚಂದ್ರಕಲಾ, ರಾಧಿಕಾ, ಶಿಲ್ಪಾ ಮತ್ತು ಶೋಭಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು…

ಉದ್ಯಮ 4.0 ಉತ್ತೇಜನ; ಮುಂದುವರಿದ ಉತ್ಪಾದನೆಯಲ್ಲಿ 33 ಸಾವಿರ ಮಂದಿಗೆ ತರಬೇತಿ

ನವದೆಹಲಿ: ಮುಂದುವರಿದ ಉತ್ಪಾದನಾ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರೀ ಕೈಗಾರಿಕಾ ಸಚಿವಾಲಯದ SAMARTH ಕೇಂದ್ರಗಳ ಮೂಲಕ ಸುಮಾರು 33,000 ಮಂದಿಗೆ ತರಬೇತಿ ನೀಡಲಾಗಿದೆ. ಭಾರತೀಯ ಬಂಡವಾಳ ಸರಕು ವಲಯದ ಸ್ಪರ್ಧಾತ್ಮಕತೆ ಹೆಚ್ಚಿಸುವ ಯೋಜನೆಯಡಿ ಸಚಿವಾಲಯವು ನಾಲ್ಕು ಸ್ಮಾರ್ಟ್ ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ ಆ್ಯಂಡ್ ರಾಪಿಡ್ ಟ್ರಾನ್ಸ್‌ಫರ್ಮೇಷನ್ ಹಬ್‌ (SAMARTH)ಗಳನ್ನು ಸ್ಥಾಪಿಸಿದೆ. ಮುಂದುವರಿದ ಉತ್ಪಾದನಾ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳುವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವುದು ಈ ಕೇಂದ್ರಗಳ ಪ್ರಮುಖ ಉದ್ದೇಶವಾಗಿದೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಬಿಎಚ್‌ಇಎಲ್‌ನ ವೆಲ್ಡಿಂಗ್ ಸಂಶೋಧನಾ ಸಂಸ್ಥೆಯ ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯ ಕೇಂದ್ರವೂ (CEFC) ಪ್ರಮುಖ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸುಧಾರಿತ ವೆಲ್ಡಿಂಗ್ ತಂತ್ರಜ್ಞಾನದಲ್ಲಿ ತರಬೇತಿ ನೀಡುತ್ತಿರುವ ಈ ಕೇಂದ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ 8,500ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದಿದ್ದಾರೆ. ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಆಟೋಮೋಟಿವ್ ಸ್ಕಿಲ್ಸ್ ಡೆವಲಪ್‌ಮೆಂಟ್ ಕೌನ್ಸಿಲ್ ಮತ್ತು ಕ್ಯಾಪಿಟಲ್ ಗೂಡ್ಸ್ ಸ್ಕಿಲ್ ಸೆಕ್ಟರ್…

ರಾಮನಾಥ್ ಕೋವಿಂದ್ ಆತ್ಮಚರಿತ್ರೆ ಬಿಡುಗಡೆ; ಯುವಜನತೆಗೆ ಸ್ಫೂರ್ತಿ ಎಂದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆತ್ಮಚರಿತ್ರೆ ‘ಟ್ರೈಯಂಫ್ ಆಫ್ ದಿ ಇಂಡಿಯನ್ ರಿಪಬ್ಲಿಕ್: ಮೈ ಲೈಫ್, ಮೈ ಸ್ಟ್ರಗಲ್ಸ್’ ಕೃತಿಯನ್ನು ಬಿಡುಗಡೆ ಮಾಡಿದರು. ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಈ ಪುಸ್ತಕ ಮಹತ್ವದ ಕೊಡುಗೆ ನೀಡಲಿದೆ ಎಂದು ಮೋದಿ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ರಾಮನಾಥ್ ಕೋವಿಂದ್ ಅವರ ಜೀವನ ಪಯಣ, ಹೋರಾಟ ಹಾಗೂ ಸಾರ್ವಜನಿಕ ಸೇವೆ ಯುವ ಪೀಳಿಗೆಗೆ ಹಲವು ಪ್ರಮುಖ ಪಾಠಗಳನ್ನು ನೀಡುತ್ತದೆ ಎಂದರು. ಆತ್ಮಚರಿತ್ರೆ ಕೋವಿಂದ್ ಅವರ ವೈಯಕ್ತಿಕ ಜೀವನದ ಏಳು-ಬೀಳುಗಳ ಜತೆಗೆ ಭಾರತದ ಗಣರಾಜ್ಯ ಮತ್ತು ಪ್ರಜಾಪ್ರಭುತ್ವದ ಬೆಳವಣಿಗೆಯನ್ನೂ ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಕಾನ್ಪುರ ದೇಹಾತ್‌ನ ಸಾಮಾನ್ಯ ಕುಟುಂಬದಲ್ಲಿ ಬೆಳೆದ ಕೋವಿಂದ್ ಅವರು ಬಾಲ್ಯದಲ್ಲೇ ಹಲವು ಕಷ್ಟಗಳನ್ನು ಎದುರಿಸಿದ್ದರು. ಮನೆಗೆ ಬೆಂಕಿ ಬಿದ್ದ ಸಂದರ್ಭದಲ್ಲಿ ತಾಯಿಯನ್ನು ಕಳೆದುಕೊಂಡ ದುಃಖದ ಘಟನೆ…

ವಂದೇ ಮಾತರಂ 150ನೇ ವರ್ಷಾಚರಣೆ; ದೆಹಲಿಯಲ್ಲಿ ಹರ್ ಘರ್ ತಿರಂಗ ಬೈಕ್ ರ್ಯಾಲಿ

ನವದೆಹಲಿ: ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ನ 150ನೇ ವರ್ಷಾಚರಣೆ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಬುಧವಾರ ನವದೆಹಲಿಯ ಭಾರತ್ ಮಂಟಪದಲ್ಲಿ ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಸಂಸತ್ ಸದಸ್ಯರು ಹಾಗೂ ವಿವಿಧ ಸಾರ್ವಜನಿಕ ಪ್ರತಿನಿಧಿಗಳು ಭಾಗವಹಿಸಿದ್ದ ರ್ಯಾಲಿ ಭಾರತ್ ಮಂಟಪದಿಂದ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದವರೆಗೆ ನಡೆಯಿತು. ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ರಾಧಾಕೃಷ್ಣನ್, ‘ವಂದೇ ಮಾತರಂ’ ಮಾತೃಭೂಮಿಯ ಮೇಲಿನ ಪ್ರೀತಿಯನ್ನು ರಾಷ್ಟ್ರೀಯ ಕರ್ತವ್ಯವಾಗಿ ಪರಿವರ್ತಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಪ್ರಬಲ ಶಕ್ತಿ ನೀಡಿತ್ತು ಎಂದರು. ಈ ಗೀತೆ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಧೈರ್ಯ, ತ್ಯಾಗ ಮತ್ತು ಭರವಸೆಯನ್ನು ಮೂಡಿಸಿತ್ತು ಎಂದು ಸ್ಮರಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಇತ್ತೀಚಿನ ಭೇಟಿ ವೇಳೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1943ರಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದ ಸ್ಥಳ ಹಾಗೂ ಸೆಲ್ಯುಲಾರ್ ಜೈಲಿನಲ್ಲಿ ಬಂಧಿತರಾಗಿದ್ದ ಸ್ವಾತಂತ್ರ್ಯ…

ತೈಲ ಟ್ಯಾಂಕರ್–ಆಟೋ ನಡುವೆ ಭೀಕರ ಅಪಘಾತ; 6 ಮಂದಿ ಸಾವು

ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೈಲ ಟ್ಯಾಂಕರ್‌ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕರ್ನಾಟಕದ ಬೀದರ್ ಜಿಲ್ಲೆಯ ರಾಜಗಿರಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಮೊಗ್ಡಂಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತಿಪಕ್ಷಗಳ ಗದ್ದಲ: ಸಂಸತ್‌ ಕಲಾಪಕ್ಕೆ ಅಡ್ಡಿ, ಎನ್‌ಡಿಎ ಸಂಸದರಿಂದಲೂ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದ ಮಂಗಳವಾರದ ಕಲಾಪವೂ ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಯಿತು. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್‌ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ಈ ವಿಚಾರದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಆಡಳಿತ ಪಕ್ಷ ತಿಳಿಸಿತು. ಆದರೆ, ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಹಾಗೂ ಘೋಷಣೆಗಳಿಂದಾಗಿ ಸದನದ ಕಲಾಪಕ್ಕೆ ಪದೇಪದೇ ಅಡ್ಡಿಯಾಯಿತು. ಗದ್ದಲದ ನಡುವೆಯೇ ಸರ್ಕಾರ ಕೇರಳ (ಹೆಸರು ಬದಲಾವಣೆ) ಮಸೂದೆ, 2026 ಹಾಗೂ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ತಿದ್ದುಪಡಿ) ಮಸೂದೆ, 2026 ಸೇರಿದಂತೆ ಪ್ರಮುಖ ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿತು. ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಮುಂದೂಡಲಾಯಿತು. ಇದೇ ವೇಳೆ, ಸಂಸತ್‌ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳ ಕ್ರಮವನ್ನು ಖಂಡಿಸಿ ಎನ್‌ಡಿಎ ಸಂಸದರು…

ನೀಟ್ ಬೆನ್ನಲ್ಲೇ ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ಪ್ರತಿಭಟನೆ ವೇಳೆ ಘರ್ಷಣೆ; ಬಂದ್‌ಗೆ ಕರೆ

ರಾಂಚಿ: ಜಾರ್ಖಂಡ್‌ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ಜಾರ್ಖಂಡ್ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ತೀವ್ರವಾಗಿ ಕುಸಿದಿದ್ದು, ಸದ್ಯ ರಾಂಚಿ ಸದರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧಿಕಾರಿ ನ್ಯಾನ್ಸಿ ಪ್ರಿಯಾ ತಿಳಿಸಿದ್ದಾರೆ.   ಇದೇ ವೇಳೆ ವಿಧಾನಸಭೆ ಬಳಿ ನಡೆದ ಪೊಲೀಸ್ ಲಾಠಿಚಾರ್ಜ್‌ನಲ್ಲಿ ಮಹ್ತೊ ಅವರ ಸಹಾಯಕ ಪಂಕಜ್ ಕುಮಾರ್ ಗಾಯಗೊಂಡಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ…

ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

ನವದೆಹಲಿ/ರಾಂಚಿ: ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಕ್ಕೆ ತೀವ್ರ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಜಾರ್ಖಂಡ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದನ್ನು ಖಂಡಿಸಬೇಕು. ವಿದ್ಯಾರ್ಥಿಗಳಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಇಂತಹ ಸಮಸ್ಯೆಗಳನ್ನು…