ಮುಂಬೈ: ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಹಾರರ್–ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಮೇ 15, 2026ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಈ ಚಿತ್ರದ ವಿಶೇಷತೆ ಎಂದರೆ, 14 ವರ್ಷಗಳ ನಂತರ ನಿರ್ದೇಶಕ ಪ್ರಿಯದರ್ಶನ್ ಮತ್ತು ನಟ ಅಕ್ಷಯ್ ಕುಮಾರ್ ಮತ್ತೆ ಒಂದಾಗಿರುವುದು. ಹಾರರ್–ಹಾಸ್ಯ ಪ್ರಕಾರದಲ್ಲಿ ತಮ್ಮದೇ ಶೈಲಿಯಿಂದ ಗುರುತಿಸಿಕೊಂಡಿರುವ ಈ ಜೋಡಿ, ಮತ್ತೊಮ್ಮೆ ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ ನೀಡಲು ಸಜ್ಜಾಗಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಿರ್ಮಾಪಕರು, “ಬಂಗಲೆ ಸೆ ಏಕ್ ಖಬರ್ ಆಯಿ ಹೈ! 2026 ಮೇ 15ರಂದು ಚಿತ್ರಮಂದಿರಗಳ ಬಾಗಿಲು ತೆರೆಯಲಿದೆ” ಎಂದು ಬರೆದು ಬಿಡುಗಡೆ ದಿನಾಂಕ ಘೋಷಿಸಿದರು. ಚಿತ್ರದಲ್ಲಿ ಟಬು, ಪರೇಶ್ ರಾವಲ್, ರಾಜ್ಪಾಲ್ ಯಾದವ್, ಜಿಶು ಸೇನ್ಗುಪ್ತಾ, ಅಸ್ರಾನಿ ಹಾಗೂ ವಾಮಿಕಾ ಗಬ್ಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ…
Category: ದೇಶ
ಜ.24 ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ; ದೆಹಲಿಯಲ್ಲಿ ಕಾರ್ಯತಂತ್ರ
ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ…
ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ
ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಮಂಗಳವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ವಾನೆಯಲ್ಲಿರುವ ಕಲ್ಮಾಡಿ ಹೌಸ್ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತ್ರಿಶೂರ್ ರೈಲು ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ: 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ
ತ್ರಿಶೂರ್: ತಮಿಳುನಾಡಿನ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಿಲ್ದಾಣದ ಸಮೀಪದ ನಿಗದಿತ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್ಫಾರ್ಮ್ ಬಳಿಯಿರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಬೆಳಗ್ಗೆ ಸುಮಾರು 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರತಿದಿನ ನೂರಾರು ಮೋಟಾರ್ಸೈಕಲ್ಗಳು ಮತ್ತು ಸ್ಕೂಟರ್ಗಳು ನಿಲ್ಲಿಸುವ ಈ ಪ್ರದೇಶದಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿ ಭಾರೀ ಹಾನಿ ಉಂಟಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ಇಂಧನ ಇರುವುದರಿಂದ ಬೆಂಕಿ ತ್ವರಿತವಾಗಿ ಹರಡಿದ್ದು, ಕೆಲವೇ ನಿಮಿಷಗಳಲ್ಲಿ ದೊಡ್ಡ ಪ್ರಮಾಣದ ವಾಹನಗಳು ಹೊತ್ತಿ ಉರಿದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹಲವಾರು ದಳಗಳನ್ನು ನಿಯೋಜಿಸಿ ಸುಮಾರು ಅರ್ಧ ಗಂಟೆಗಳ ಶ್ರಮದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. #Kerala: A…
ಒಡಿಶಾ ಕಲ್ಲು ಗಣಿಯಲ್ಲಿ ಭೂ ಕುಸಿತ: ಹಲವು ಕಾರ್ಮಿಕರ ಸಾವಿನ ಶಂಕೆ
ಭುವನೇಶ್ವರ: ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ವೇಳೆ ಭಾರಿ ಭೂ ಕುಸಿತ ಸಂಭವಿಸಿ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಶನಿವಾರ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ, ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ. ಘಟನೆ ಸಮಯದಲ್ಲಿ ಗಣಿಯಲ್ಲಿ ಹಲವರು ಕಾರ್ಯನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭೂ ಕುಸಿತದ ಮಾಹಿತಿ ದೊರಕಿದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಮುಂದುವರಿದಿದೆ. ಘಟನೆಯ ಸಂಪೂರ್ಣ ವಿವರಗಳು ಮತ್ತು ಸಾವಿನ ನಿಖರ ಸಂಖ್ಯೆಯನ್ನು ಅಧಿಕಾರಿಗಳು ಇನ್ನಷ್ಟೇ ದೃಢಪಡಿಸಬೇಕಿದೆ.
ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ: ಶಾಸಕ ಎಸ್. ಸುರೇಶ್ ಕುಮಾರ್ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ
ಬೆಂಗಳೂರು: ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ಕೈಗೊಂಡಿರುವ ಶಾಸಕ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಹಾಗೂ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಆರೋಗ್ಯ ಸಂಬಂಧಿತ ಹಿನ್ನಡೆಗಳನ್ನು ಮೀರಿಸಿ ಸುರೇಶ್ ಕುಮಾರ್ ಅವರು ಈ ಸಾಧನೆಯನ್ನು ಸಾಧಿಸಿರುವುದು ಅವರ ದೃಢ ಸಂಕಲ್ಪ ಮತ್ತು ಅಚಲ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಈ ಪ್ರಯತ್ನವು ಫಿಟ್ನೆಸ್ ಮತ್ತು ಆರೋಗ್ಯದ ಮಹತ್ವದ ಕುರಿತು ಮಹತ್ವದ ಸಂದೇಶವನ್ನು ನೀಡುತ್ತದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಮಂತ್ರಿ ಅವರು ದೂರವಾಣಿ ಮೂಲಕ ಶಾಸಕರೊಂದಿಗೆ ಮಾತನಾಡಿ, ಈ ವಿಶಿಷ್ಟ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ವರ್ಷ ಆಗಸ್ಟ್ 15ಕ್ಕೆ ದೇಶಕ್ಕೆ ಆಗಮಿಸಲಿದೆ ಮೊದಲ ಬುಲೆಟ್ ರೈಲು: ಅಶ್ವಿನಿ ವೈಷ್ಣವ್
ನವದೆಹಲಿ: 2027ರ ಆಗಸ್ಟ್ 15ರಂದು ಭಾರತಕ್ಕೆ ಮೊದಲ ಬುಲೆಟ್ ರೈಲು ಲಭ್ಯವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ಮಾತನಾಡಿದ ಅವರು, “ಮುಂದಿನ ವರ್ಷ ಬುಲೆಟ್ ರೈಲು ಹಳಿಗಳ ಮೇಲೆ ಓಡಲು ಆರಂಭವಾಗಲಿದೆ. 2027ರ ಸ್ವಾತಂತ್ರ್ಯ ದಿನದಂದು ದೇಶದ ಮೊದಲ ಬುಲೆಟ್ ರೈಲಿನಲ್ಲಿ ಪ್ರಯಾಣಿಸುವ ಅವಕಾಶ ನಾಗರಿಕರಿಗೆ ದೊರೆಯಲಿದೆ” ಎಂದು ಹೇಳಿದರು. ವಂದೇ ಭಾರತ್ ಎಕ್ಸ್ಪ್ರೆಸ್ ಚೇರ್ ಕಾರ್ ರೈಲುಗಳು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಜನರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿವೆ ಎಂದು ವೈಷ್ಣವ್ ಹೇಳಿದರು. “ವಂದೇ ಭಾರತ್ ರೈಲುಗಳನ್ನು ಓಡಿಸಲು ಈಗ ದೇಶದಾದ್ಯಂತ ಬೇಡಿಕೆ ಬರುತ್ತಿದೆ. ಬಹುತೇಕ ಎಲ್ಲಾ ಸಂಸದರೂ ತಮ್ಮ ಕ್ಷೇತ್ರಕ್ಕೆ ವಂದೇ ಭಾರತ್ ರೈಲು ಬಯಸುತ್ತಿದ್ದಾರೆ. ಇದೇ ಮಾನದಂಡ, ಸೌಕರ್ಯ ಮತ್ತು ಸುರಕ್ಷತೆಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲುಗಳ ಮೂಲಕ ರಾತ್ರಿ ಪ್ರಯಾಣಕ್ಕೂ ಶೀಘ್ರದಲ್ಲೇ ಚಾಲನೆ…
ಮನರೇಗಾ ಮೂಲ ಆಶಯಕ್ಕೆ ಹೊಸ ಕಾಯ್ದೆ ವಿರುದ್ಧ: ಪ್ರಧಾನಿ ಮೋದಿಗೆ ಸಿಎಂ ಪತ್ರ
ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಭರಿಸಬೇಕಾದ ಯಾವುದೇ ವೆಚ್ಚವನ್ನು ಕೇಂದ್ರ ಸರ್ಕಾರವು ನಿರ್ದೇಶಿಸಿದ ಕ್ರಮಗಳ ಪ್ರಕಾರ ರಾಜ್ಯಗಳೇ ಹೊರಬೇಕು ಎಂದು ಹೇಳುತ್ತದೆ. ಇದು ಕೇಂದ್ರವು ನಿಗದಿಪಡಿಸಿದ ಮಿತಿಯನ್ನು ಮೀರಿದ ಬೇಡಿಕೆಗೆ 100% ಜವಾಬ್ದಾರಿಯನ್ನು ರಾಜ್ಯಗಳು ಹೊರುವಂತೆ ಮಾಡಬಹುದು. ರಾಜ್ಯವು ನಿಗದಿತ ಅಥವಾ ಅದನ್ನು ಮೀರಿದ ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದರೆ, ಜನರ ಅರ್ಹ ಕೂಲಿ ಅವಧಿಯ ಹಕ್ಕನ್ನು ಜಾರಿಗೊಳಿಸಲು ಸಾಧ್ಯವಿಲ್ಲ, ಇದು ಬೇಡಿಕೆ ಇರುವ ಕಡೆಗಳಲ್ಲಿ ಅನುದಾನ ನೀಡಲೇಬೇಕು ಎಂಬ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕಾಯ್ದೆಯು ಬಿತ್ತನೆ ಮತ್ತು ಕೊಯ್ಲು ಹೆಚ್ಚಾಗಿ ನಡೆಯುವ ಸಮಯದಲ್ಲಿ ಒಟ್ಟು 60 ದಿನಗಳ ಅವಧಿ ಕಾಮಗಾರಿಗಳನ್ನು ನಡೆಸದಿರುವ ಬಗ್ಗೆ ಮುಂಚಿತವಾಗಿ ಅಧಿಸೂಚಿಸಬೇಕು…
2025 ಭಾರತಕ್ಕೆ ಹೆಚ್ಚಿದ ಆತ್ಮವಿಶ್ವಾಸ ನೀಡಿದ ವರ್ಷ’ ಎಂದ ಪ್ರಧಾನಿ
ನವದೆಹಲಿ: 2025ರಲ್ಲಿ ದೇಶದಲ್ಲಿ ನಡೆದ ಪ್ರಮುಖ ಹಾಗೂ ಐತಿಹಾಸಿಕ ಘಟನೆಗಳನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈ ವರ್ಷ ಭಾರತಕ್ಕೆ “ಇನ್ನಷ್ಟು ಹೆಚ್ಚಿದ ಆತ್ಮವಿಶ್ವಾಸ” ನೀಡಿದೆ ಎಂದು ಭಾನುವಾರ ಹೇಳಿದರು. ಹೊಸ ಭರವಸೆಗಳು ಹಾಗೂ ಸಂಕಲ್ಪಗಳೊಂದಿಗೆ ದೇಶವು 2026ರತ್ತ ಹೆಜ್ಜೆ ಇಡಲು ಸಜ್ಜಾಗಿದೆ ಎಂದು ಅಭಿಪ್ರಾಯಪಟ್ಟರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, “ಇನ್ನು ಕೆಲವೇ ದಿನಗಳಲ್ಲಿ 2026 ವರ್ಷ ನಮ್ಮ ಮನೆಬಾಗಿಲು ತಟ್ಟಲಿದೆ. ಈ ಸಂದರ್ಭದಲ್ಲಿ ಇಡೀ ವರ್ಷದ ನೆನಪುಗಳು ಮನಸ್ಸಿನಲ್ಲಿ ಓಡಾಡುತ್ತಿವೆ. ದೇಶವನ್ನು ಒಂದಾಗಿ ಕಟ್ಟಿದ ಅನೇಕ ಕ್ಷಣಗಳು, ಚರ್ಚೆಗಳು ಮತ್ತು ಸಾಧನೆಗಳು 2025ನ್ನು ಸ್ಮರಣೀಯವಾಗಿಸಿವೆ. ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣಗಳನ್ನು ಈ ವರ್ಷ ನೀಡಿದೆ” ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯಿಂದ ಹಿಡಿದು ಕ್ರೀಡಾ ಸಾಧನೆಗಳವರೆಗೆ, ವಿಜ್ಞಾನ ಪ್ರಯೋಗಾಲಯಗಳಿಂದ ಜಾಗತಿಕ ವೇದಿಕೆಗಳವರೆಗೆ ಎಲ್ಲೆಡೆ ಭಾರತದ ಮುದ್ರೆ ಮೂಡಿದೆ ಎಂದು…
RSSನ್ನು, ಮೋದಿಯನ್ನು ಹಾಡಿ ಹೊಗಳಿದರೇ ದಿಗ್ವಿಜಯ್; X ಪೋಸ್ಟ್ ಸೃಷ್ಟಿಸಿದ ಕುತೂಹಲ
ನವದೆಹಲಿ: ಆರೆಸ್ಸೆಸ್ ಸಂಘಟನೆ ಬಗ್ಗೆ ಕಿಡಿ ಕಾರುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚಿನ ದಿನಗಳಲ್ಲಿ ಸಂಘವನ್ನು ಹಾಡಿ ಹೊಗಳಿದ ಸನ್ನಿವೇಶ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದವು. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರದ್ದು. ದಿಗ್ವಿಜಯ ಸಿಂಗ್ ಅವರದ್ದು ಎನ್ನಲಾದ X ಖಾತೆಯಲ್ಲಿ ಆರೆಸ್ಸೆಸ್ ಸಂಘಟನೆಯನ್ನು ಪ್ರಶಂಸಿಸಿ ಕೆಲವು ಸಾಲುಗಳನ್ನು ಬರೆಯಲಾಗಿದೆ. ಬಿಜೆಪಿ ಹಿರಿಯ ನಾಯಕರುಳ್ಳ ಹಳೆಯ ಫೋಟೋವನ್ನು ಟ್ಯಾಗ್ ಮಾಡಲಾಗಿರುವ ಈ ಪೋಸ್ಟನ್ನು ಉಲ್ಲೇಖಿಸಿ ಸುದ್ಧಿ ಸಂಸ್ಥೆಗಳು ವರದಿ ಮಾಡಿ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಚರ್ಚೆಗೆ ಮುನ್ನುಡಿ ಬರೆದಿವೆ. “ಈ ಚಿತ್ರವನ್ನು ನಾನು Quora ಸೈಟ್ನಲ್ಲಿ ಕಂಡುಕೊಂಡೆ. ಇದು ತುಂಬಾ ಪ್ರಭಾವ ಬೀರುವಂತಿದೆ. RSSನ ತಳಮಟ್ಟದ ಸ್ವಯಂಸೇವಕ ಮತ್ತು ಜನಸಂಘ, ಬಿಜೆಪಿ ಕಾರ್ಯಕರ್ತ, ತಮ್ಮ ಸಂಘಟನೆಯ ನಾಯಕರ ಎದುರಲ್ಲಿ ಕೆಳಗೆ ಕುಳಿತು ರಾಜ್ಯದ ಮುಖ್ಯಮಂತ್ರಿ ಮತ್ತು ದೇಶದ ಪ್ರಧಾನ ಮಂತ್ರಿಯಾದರು. ಇದು ಸಂಘಟನೆಯ…
