Indian Navy Day; ಭಾರತೀಯ ನೌಕಾಪಡೆ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್

ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ ಶೌರ್ಯ, ಸ್ವಾವಲಂಬನೆ ಮತ್ತು ಆಧುನೀಕರಣದ ಬದ್ಧತೆಯನ್ನು ಪ್ರಶಂಸಿಸಿದರು. ಡಿಸೆಂಬರ್ 4 ಅನ್ನು ಪ್ರತಿವರ್ಷ ನೌಕಾಪಡೆಯ ದಿನವಾಗಿ ಆಚರಿಸಲಾಗುತ್ತದೆ. 1971ರ ಯುದ್ಧದಲ್ಲಿ ‘ಆಪರೇಷನ್ ಟ್ರೈಡೆಂಟ್’ ಮೂಲಕ ಪಾಕಿಸ್ತಾನಿ ನೌಕಾಪಡೆಯ ಮೇಲೆ ಭಾರತ ಪಡೆದ ಐತಿಹಾಸಿಕ ಗೆಲುವಿಗೆ ಈ ದಿನಾಂಕ ಸ್ಮರಣಾರ್ಥವಾಗಿದೆ. Xನಲ್ಲಿ ಬರಹ ಹಂಚಿಕೊಂಡ ಪ್ರಧಾನಮಂತ್ರಿ’ “ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಹೆಸರಾಗಿದ್ದು, ದೇಶದ ತೀರಗಳನ್ನು ಕಾಪಾಡುತ್ತಾ ನಮ್ಮ ಕಡಲ ಹಿತಾಸಕ್ತಿಗಳನ್ನು ರಕ್ಷಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸ್ವಾವಲಂಬನೆ ಮತ್ತು ಆಧುನೀಕರಣದತ್ತ ಪಡೆ ತೆಗೆದುಕೊಂಡ ಹೆಜ್ಜೆಗಳು ದೇಶದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಿವೆ” ಎಂದಿದ್ದಾರೆ. ದೀಪಾವಳಿ ವೇಳೆ ಐಎನ್‌ಎಸ್ ವಿಕ್ರಾಂಟ್‌ನಲ್ಲಿ ನೌಕಾ ಸಿಬ್ಬಂದಿಯೊಂದಿಗೆ ಕಳೆದ ಕ್ಷಣಗಳನ್ನು ನೆನೆದು, ಅವು ಸದಾ…

‘ಕಲ್ಯಾಣ ಕರ್ನಾಟಕ ಕಷ್ಟಕರ ಕರ್ನಾಟಕ’; ಸಾರಿಗೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಗಮನಸೆಳೆದಿದೆ. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್… pic.twitter.com/RwlFwO33aa — BJP Karnataka (@BJP4Karnataka) November 27, 2025 ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲದೆ ಶಕ್ತಿ ಯೋಜನೆ…

ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ

ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1, 2025 ರವರೆಗೆ ನಡೆಯಲಿದೆ. ಸಂಘದ ದೃಷ್ಟಿಕೋನದಿಂದ, ಭಾರತದ 46 ಪ್ರಾಂತಗಳಿಂದ 407 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು 06 ಮಂದಿ ಸಹ-ಸರಕಾರ್ಯವಾಹರು ಸೇರಿದಂತೆ ಅಖಿಲ ಭಾರತೀಯ ಕಾರ್ಯಕಾರಿಣಿ ಸಹಿತ 11 ಕ್ಷೇತ್ರಗಳ ಹಾಗೂ 46 ಪ್ರಾಂತಗಳ ಸಂಘಚಾಲಕರು, ಕಾರ್ಯವಾಹರು ಮತ್ತು ಪ್ರಚಾರಕರು ಉಪಸ್ಥಿತರಿರುತ್ತಾರೆ. ಈ ಕುರಿತಂತೆ ಕಚ್ನಾರ್ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್, ದೇಶದ ವಿವಿಧೆಡೆಯಿಂದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಕ್ಟೋಬರ್ 2, 2025 ರಂದು…

‘ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ’; ಇಂಡಿಯಾ ಬ್ಲಾಕ್ ಪ್ರಣಾಳಿಕೆಯಲ್ಲಿ ಭರವಸೆಯ ಹೊಳೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ (ಮಹಾಘಟಬಂಧನ್) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಹಳೆಯ ಪಿಂಚಣಿ ಯೋಜನೆ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ಮಹತ್ವದ ಭರವಸೆಗಳಿವೆ. ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ರಾಜ್ಯದ ಪ್ರತೀ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿರುವುದಾಗಿ ಹೇಳಿದರು. “ನಾವು ಬಿಹಾರದಲ್ಲಿ ಕೇವಲ ಸರ್ಕಾರವನ್ನೇ ರಚಿಸುವುದಲ್ಲ, ಹೊಸ ಬಿಹಾರವನ್ನೂ ನಿರ್ಮಿಸಬೇಕೆಂದು ಬದ್ಧರಾಗಿದ್ದೇವೆ,” ಎಂದು ತೇಜಸ್ವಿ ಸ್ಪಷ್ಟಪಡಿಸಿದರು. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ, 20 ತಿಂಗಳೊಳಗೆ ಈ ಉದ್ಯೋಗ ಯೋಜನೆ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು…

ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ

ಕಠ್ಮಂಡು: ನೇಪಾಳದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನವಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೇಲಿನ ನಿಷೇಧ ಖಂಡಿಸಿ ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಪ್ರತಿಭಟನೆ ಹಿಂಸಾರೂಪ ತಳೆದಿದೆ. ಪ್ರತಿಭಟನೆಗೆ ಬೆಚ್ಚಿದ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಈ ನಡುವೆ ನೇಪಾಳದ ಪ್ರಧಾನಿಯ ಬಂಗಲೆಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಈ ವೇಳೆ, ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಸಜೀವ ದಹನವಾಗಿದ್ದಾರೆ. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.

ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. ‘ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ…

ಡೌನ್‌ ಸಿಂಡ್ರೋಮ್ ಇರುವ ಮಹಿಳೆಯರಿಗೆ Alzheimer ಹೆಚ್ಚು ಅಪಾಯ

ನವದೆಹಲಿ: ಡೌನ್‌ ಸಿಂಡ್ರೋಮ್‌ ಹೊಂದಿರುವ ಮಹಿಳೆಯರು, ಪುರುಷರಿಗಿಂತ ಆಲ್ಝೈಮರ್‌ (Alzheimer) ಕಾಯಿಲೆಯ ಮುಂದುವರಿದ ಹಂತಕ್ಕೆ ತಲುಪುವ ಅಪಾಯ ಹೆಚ್ಚಿದೆ ಎಂಬುದನ್ನು ಹೊಸ ಸಂಶೋಧನೆ ಬಹಿರಂಗಪಡಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ (ಇರ್ವಿನ್) ನಡೆಸಿದ ಅಧ್ಯಯನದ ಪ್ರಕಾರ, ಮಹಿಳೆಯರ ಮೆದುಳಿನಲ್ಲಿ ಬೀಟಾ ಅಮಿಲಾಯ್ಡ್ ಮತ್ತು ಫಾಸ್ಫೊರಿಲೇಟೆಡ್ ಟೌ ಎಂಬ ಆಲ್ಝೈಮರ್‌ನ ಪ್ರಮುಖ ಪ್ರೋಟೀನ್‌ಗಳು ಹೆಚ್ಚು ಸಂಗ್ರಹವಾಗಿರುವುದು ಪತ್ತೆಯಾಗಿದೆ. ಈ ವ್ಯತ್ಯಾಸವು ವಿಶೇಷವಾಗಿ ಆಕ್ಸಿಪಿಟಲ್ ಲೋಬ್ ಭಾಗದಲ್ಲಿ ಹೆಚ್ಚು ಕಂಡುಬಂದಿದೆ. ಡೌನ್‌ ಸಿಂಡ್ರೋಮ್‌ನ ರೋಗನಿರ್ಣಯದ ಸರಾಸರಿ ವಯಸ್ಸು ಪುರುಷ–ಮಹಿಳೆಯರಿಬ್ಬರಿಗೂ ಒಂದೇ ಆಗಿದ್ದರೂ, ಮಹಿಳೆಯರಲ್ಲಿ ರೋಗದ ಪ್ರಗತಿ ವೇಗವಾಗಿ ನಡೆದಿದೆ ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ. “ಮಹಿಳೆಯರು ಮತ್ತು ಪುರುಷರಲ್ಲಿ ಮೆದುಳಿನ ಬದಲಾವಣೆಗಳು ಹೇಗೆ ಭಿನ್ನವಾಗಿವೆ ಎಂಬುದನ್ನು ತಿಳಿಯುವುದು ಚಿಕಿತ್ಸೆ ಯಶಸ್ಸು ಸಾಧಿಸಲು ಮಹತ್ವದ್ದಾಗಿದೆ. ಲಿಂಗ-ನಿರ್ದಿಷ್ಟ ಅಪಾಯ ಅಂಶಗಳನ್ನು ಲೆಕ್ಕಿಸುವುದು ಮುಂದಿನ ಹಂತ,” ಎಂದು ಮುಖ್ಯ ಸಂಶೋಧಕಿ ಎಲಿಜಬೆತ್ ಆಂಡ್ರ್ಯೂಸ್ ಹೇಳಿದರು. ಡೌನ್‌ ಸಿಂಡ್ರೋಮ್‌ ಹೊಂದಿರುವವರಲ್ಲಿ…

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

ಬೆಂಗಳೂರು: ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್‌.ಎಲ್‌.ಧರ್ಮೇಗೌಡ…

KSRTC ಬಳಗದಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’: ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು. ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ…

ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು ‘PAN 2.0’ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ ‘PAN 2.0’, ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್‌ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್‌ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. ‘PAN 2.0’ ಯೋಜನೆ ಎಂದರೇನು? ‘PAN 2.0’ ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು…