ಕೆಎಸ್‌ಆರ್‌ಟಿಸಿ ಪ್ರತಿಷ್ಠಿತ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡಾ 5 ರಿಂದ 15ರವರೆಗೆ ರಿಯಾಯಿತಿ ಘೋಷಿಸಿದೆ. ಈ ರಿಯಾಯಿತಿ ಜನವರಿ 5, 2026ರಿಂದ ಜಾರಿಗೆ ಬರಲಿದೆ. ಬೆಂಗಳೂರು–ಮಂಗಳೂರು, ಬೆಂಗಳೂರು–ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಪುತ್ತೂರು, ಮಡಿಕೇರಿ/ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ/ಸಾಗರ ಸೇರಿದಂತೆ ಚೆನ್ನೈ, ಹೈದರಾಬಾದ್/ಸಿಕಂದರಾಬಾದ್, ತಿರುಪತಿ, ಮಂತ್ರಾಲಯ, ಪುಣೆ/ಮುಂಬೈ, ವಿಜಯವಾಡ, ಎರ್ನಾಕುಲಂ, ಮದುರೈ, ಕೋಯಿಮತ್ತೂರು, ತಿರುಶೂರು ಸೇರಿದಂತೆ ಆಯ್ದ ಮಾರ್ಗಗಳಲ್ಲಿ ಈ ರಿಯಾಯಿತಿ ಅನ್ವಯವಾಗಲಿದೆ. ರಾಜಹಂಸ, ನಾನ್‌ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್ ಹಾಗೂ ಮಲ್ಟಿ ಆಕ್ಸಲ್ ಎಸಿ ಸ್ಲೀಪರ್ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ನಿಗಮ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ನಿಗಮ ಮನವಿ ಮಾಡಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಬಳ್ಳಾರಿ ಗುಂಡಿನ ದಾಳಿ ‘ಪೂರ್ವಯೋಜಿತ’: ಜನಾರ್ದನ ರೆಡ್ಡಿ ಗುರಿಯಾಗಿಸಿ ದಾಳಿ ಆರೋಪ

ಬಳ್ಳಾರಿ: ನಗರದ ಬ್ಯಾನರ್ ಗಲಾಟೆ ಹಾಗೂ ಗುಂಡಿನ ದಾಳಿ ಪ್ರಕರಣ ರಾಜಕೀಯವಾಗಿ ತೀವ್ರ ತಿರುವು ಪಡೆದುಕೊಂಡಿದ್ದು, ಮಾಜಿ ಸಚಿವರಾದ ಬಿ. ಶ್ರೀರಾಮುಲು ಹಾಗೂ ಗಣಿಗಾರಿಕಾ ಉದ್ಯಮಿ ಜನಾರ್ದನ ರೆಡ್ಡಿ ಅವರು, ಈ ದಾಳಿ ಜನಾರ್ದನ ರೆಡ್ಡಿಯವರನ್ನೇ ಗುರಿಯಾಗಿಸಿಕೊಂಡು ನಡೆಸಿದ ‘ಪೂರ್ವಯೋಜಿತ ದಾಳಿ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಆಕಸ್ಮಿಕ ಘಟನೆ ಅಲ್ಲ. ಜನಾರ್ದನ ರೆಡ್ಡಿಯವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಸಂಪೂರ್ಣವಾಗಿ ಸುಟ್ಟುಹಾಕುವ ಉದ್ದೇಶದೊಂದಿಗೆ ದಾಳಿ ನಡೆಸಲಾಗಿದೆ,” ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧವೂ ಅವರು ಆರೋಪ ಹೊರಿಸಿದರು. “ಕಾಂಗ್ರೆಸ್ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಲು ಬಂದಿರಲಿಲ್ಲ. ಜನಾರ್ದನ ರೆಡ್ಡಿಯವರ ಮೇಲೆ ಗುಂಡು ಹಾರಿಸುವ ಹಾಗೂ ಮನೆಗೆ ಬೆಂಕಿ ಹಚ್ಚುವ ಉದ್ದೇಶದಿಂದಲೇ ಬಂದಿದ್ದರು. ಗುಂಡು ಗಾಳಿಗೆ ಹಾರಿಸಲ್ಪಟ್ಟಿಲ್ಲ, ಅದು ನೇರವಾಗಿ ಜನಾರ್ದನ…

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೈಸೂರು ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟ ಸಂಭವಿಸಿದೆ. ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಸ್ಥಳದಲ್ಲಿ, ಜನನಿಬಿಡ ಸ್ಥಳದಲ್ಲಿ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಯಗೊಂಡಿದ್ದು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. #WATCH | Karnataka | A helium cylinder explosion occurred in front of the Jayamarthanda gate of the Mysore Palace at around 8.30 pm. The balloon…

63% ಭ್ರಷ್ಟಾಚಾರ ಆರೋಪ; ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ,…

Indian Navy Day; ಭಾರತೀಯ ನೌಕಾಪಡೆ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್

ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ ಶೌರ್ಯ, ಸ್ವಾವಲಂಬನೆ ಮತ್ತು ಆಧುನೀಕರಣದ ಬದ್ಧತೆಯನ್ನು ಪ್ರಶಂಸಿಸಿದರು. ಡಿಸೆಂಬರ್ 4 ಅನ್ನು ಪ್ರತಿವರ್ಷ ನೌಕಾಪಡೆಯ ದಿನವಾಗಿ ಆಚರಿಸಲಾಗುತ್ತದೆ. 1971ರ ಯುದ್ಧದಲ್ಲಿ ‘ಆಪರೇಷನ್ ಟ್ರೈಡೆಂಟ್’ ಮೂಲಕ ಪಾಕಿಸ್ತಾನಿ ನೌಕಾಪಡೆಯ ಮೇಲೆ ಭಾರತ ಪಡೆದ ಐತಿಹಾಸಿಕ ಗೆಲುವಿಗೆ ಈ ದಿನಾಂಕ ಸ್ಮರಣಾರ್ಥವಾಗಿದೆ. Xನಲ್ಲಿ ಬರಹ ಹಂಚಿಕೊಂಡ ಪ್ರಧಾನಮಂತ್ರಿ’ “ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಹೆಸರಾಗಿದ್ದು, ದೇಶದ ತೀರಗಳನ್ನು ಕಾಪಾಡುತ್ತಾ ನಮ್ಮ ಕಡಲ ಹಿತಾಸಕ್ತಿಗಳನ್ನು ರಕ್ಷಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸ್ವಾವಲಂಬನೆ ಮತ್ತು ಆಧುನೀಕರಣದತ್ತ ಪಡೆ ತೆಗೆದುಕೊಂಡ ಹೆಜ್ಜೆಗಳು ದೇಶದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಿವೆ” ಎಂದಿದ್ದಾರೆ. ದೀಪಾವಳಿ ವೇಳೆ ಐಎನ್‌ಎಸ್ ವಿಕ್ರಾಂಟ್‌ನಲ್ಲಿ ನೌಕಾ ಸಿಬ್ಬಂದಿಯೊಂದಿಗೆ ಕಳೆದ ಕ್ಷಣಗಳನ್ನು ನೆನೆದು, ಅವು ಸದಾ…

‘ಕಲ್ಯಾಣ ಕರ್ನಾಟಕ ಕಷ್ಟಕರ ಕರ್ನಾಟಕ’; ಸಾರಿಗೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಗಮನಸೆಳೆದಿದೆ. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ “ಕಷ್ಟಕರ” ಕರ್ನಾಟಕವಾಗಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್… pic.twitter.com/RwlFwO33aa — BJP Karnataka (@BJP4Karnataka) November 27, 2025 ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲದೆ ಶಕ್ತಿ ಯೋಜನೆ…

ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ

ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1, 2025 ರವರೆಗೆ ನಡೆಯಲಿದೆ. ಸಂಘದ ದೃಷ್ಟಿಕೋನದಿಂದ, ಭಾರತದ 46 ಪ್ರಾಂತಗಳಿಂದ 407 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು 06 ಮಂದಿ ಸಹ-ಸರಕಾರ್ಯವಾಹರು ಸೇರಿದಂತೆ ಅಖಿಲ ಭಾರತೀಯ ಕಾರ್ಯಕಾರಿಣಿ ಸಹಿತ 11 ಕ್ಷೇತ್ರಗಳ ಹಾಗೂ 46 ಪ್ರಾಂತಗಳ ಸಂಘಚಾಲಕರು, ಕಾರ್ಯವಾಹರು ಮತ್ತು ಪ್ರಚಾರಕರು ಉಪಸ್ಥಿತರಿರುತ್ತಾರೆ. ಈ ಕುರಿತಂತೆ ಕಚ್ನಾರ್ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್, ದೇಶದ ವಿವಿಧೆಡೆಯಿಂದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಕ್ಟೋಬರ್ 2, 2025 ರಂದು…

‘ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ’; ಇಂಡಿಯಾ ಬ್ಲಾಕ್ ಪ್ರಣಾಳಿಕೆಯಲ್ಲಿ ಭರವಸೆಯ ಹೊಳೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ (ಮಹಾಘಟಬಂಧನ್) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಹಳೆಯ ಪಿಂಚಣಿ ಯೋಜನೆ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ಮಹತ್ವದ ಭರವಸೆಗಳಿವೆ. ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ರಾಜ್ಯದ ಪ್ರತೀ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿರುವುದಾಗಿ ಹೇಳಿದರು. “ನಾವು ಬಿಹಾರದಲ್ಲಿ ಕೇವಲ ಸರ್ಕಾರವನ್ನೇ ರಚಿಸುವುದಲ್ಲ, ಹೊಸ ಬಿಹಾರವನ್ನೂ ನಿರ್ಮಿಸಬೇಕೆಂದು ಬದ್ಧರಾಗಿದ್ದೇವೆ,” ಎಂದು ತೇಜಸ್ವಿ ಸ್ಪಷ್ಟಪಡಿಸಿದರು. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ, 20 ತಿಂಗಳೊಳಗೆ ಈ ಉದ್ಯೋಗ ಯೋಜನೆ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು…

ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ

ಕಠ್ಮಂಡು: ನೇಪಾಳದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನವಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೇಲಿನ ನಿಷೇಧ ಖಂಡಿಸಿ ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಪ್ರತಿಭಟನೆ ಹಿಂಸಾರೂಪ ತಳೆದಿದೆ. ಪ್ರತಿಭಟನೆಗೆ ಬೆಚ್ಚಿದ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಈ ನಡುವೆ ನೇಪಾಳದ ಪ್ರಧಾನಿಯ ಬಂಗಲೆಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಈ ವೇಳೆ, ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಸಜೀವ ದಹನವಾಗಿದ್ದಾರೆ. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.

ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. ‘ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ…