ಕಠ್ಮಂಡು: ನೇಪಾಳದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನವಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೇಲಿನ ನಿಷೇಧ ಖಂಡಿಸಿ ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಪ್ರತಿಭಟನೆ ಹಿಂಸಾರೂಪ ತಳೆದಿದೆ. ಪ್ರತಿಭಟನೆಗೆ ಬೆಚ್ಚಿದ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಈ ನಡುವೆ ನೇಪಾಳದ ಪ್ರಧಾನಿಯ ಬಂಗಲೆಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಈ ವೇಳೆ, ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಸಜೀವ ದಹನವಾಗಿದ್ದಾರೆ. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.
Category: Others
ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್
ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. ‘ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ…
ಡೌನ್ ಸಿಂಡ್ರೋಮ್ ಇರುವ ಮಹಿಳೆಯರಿಗೆ Alzheimer ಹೆಚ್ಚು ಅಪಾಯ
ನವದೆಹಲಿ: ಡೌನ್ ಸಿಂಡ್ರೋಮ್ ಹೊಂದಿರುವ ಮಹಿಳೆಯರು, ಪುರುಷರಿಗಿಂತ ಆಲ್ಝೈಮರ್ (Alzheimer) ಕಾಯಿಲೆಯ ಮುಂದುವರಿದ ಹಂತಕ್ಕೆ ತಲುಪುವ ಅಪಾಯ ಹೆಚ್ಚಿದೆ ಎಂಬುದನ್ನು ಹೊಸ ಸಂಶೋಧನೆ ಬಹಿರಂಗಪಡಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ (ಇರ್ವಿನ್) ನಡೆಸಿದ ಅಧ್ಯಯನದ ಪ್ರಕಾರ, ಮಹಿಳೆಯರ ಮೆದುಳಿನಲ್ಲಿ ಬೀಟಾ ಅಮಿಲಾಯ್ಡ್ ಮತ್ತು ಫಾಸ್ಫೊರಿಲೇಟೆಡ್ ಟೌ ಎಂಬ ಆಲ್ಝೈಮರ್ನ ಪ್ರಮುಖ ಪ್ರೋಟೀನ್ಗಳು ಹೆಚ್ಚು ಸಂಗ್ರಹವಾಗಿರುವುದು ಪತ್ತೆಯಾಗಿದೆ. ಈ ವ್ಯತ್ಯಾಸವು ವಿಶೇಷವಾಗಿ ಆಕ್ಸಿಪಿಟಲ್ ಲೋಬ್ ಭಾಗದಲ್ಲಿ ಹೆಚ್ಚು ಕಂಡುಬಂದಿದೆ. ಡೌನ್ ಸಿಂಡ್ರೋಮ್ನ ರೋಗನಿರ್ಣಯದ ಸರಾಸರಿ ವಯಸ್ಸು ಪುರುಷ–ಮಹಿಳೆಯರಿಬ್ಬರಿಗೂ ಒಂದೇ ಆಗಿದ್ದರೂ, ಮಹಿಳೆಯರಲ್ಲಿ ರೋಗದ ಪ್ರಗತಿ ವೇಗವಾಗಿ ನಡೆದಿದೆ ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ. “ಮಹಿಳೆಯರು ಮತ್ತು ಪುರುಷರಲ್ಲಿ ಮೆದುಳಿನ ಬದಲಾವಣೆಗಳು ಹೇಗೆ ಭಿನ್ನವಾಗಿವೆ ಎಂಬುದನ್ನು ತಿಳಿಯುವುದು ಚಿಕಿತ್ಸೆ ಯಶಸ್ಸು ಸಾಧಿಸಲು ಮಹತ್ವದ್ದಾಗಿದೆ. ಲಿಂಗ-ನಿರ್ದಿಷ್ಟ ಅಪಾಯ ಅಂಶಗಳನ್ನು ಲೆಕ್ಕಿಸುವುದು ಮುಂದಿನ ಹಂತ,” ಎಂದು ಮುಖ್ಯ ಸಂಶೋಧಕಿ ಎಲಿಜಬೆತ್ ಆಂಡ್ರ್ಯೂಸ್ ಹೇಳಿದರು. ಡೌನ್ ಸಿಂಡ್ರೋಮ್ ಹೊಂದಿರುವವರಲ್ಲಿ…
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರರೇ ವಿರೋಧಿಸಿದ್ದರು: ಆರ್.ಅಶೋಕ*
ಬೆಂಗಳೂರು: ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್ ಚೇರ್ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್ನವರು ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್.ಎಲ್.ಧರ್ಮೇಗೌಡ…
KSRTC ಬಳಗದಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’: ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು. ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ…
ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ
ಭಾರತ ಸರ್ಕಾರವು ‘PAN 2.0’ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ ‘PAN 2.0’, ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. ‘PAN 2.0’ ಯೋಜನೆ ಎಂದರೇನು? ‘PAN 2.0’ ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು…
ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮಾಸಿಕ 10 ಸಾವಿರ ರೂ.ಗೌರವಧನ: ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. <h4><strong>ಪೋರ್ಟಲ್ ಸುಧಾರಣೆಗೆ ಸೂಚನೆ:</strong></h4> ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. <h4><strong>ಗೌರವಧನ ನಿಲ್ಲಿಸದೆ ರಜೆ:</strong></h4> ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ…
‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆ
ಶ್ರೀನಗರ ಕಿಟ್ಟಿ, ರಚಿತಾರಾಮ್ ನಟಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಂಜು ವೆಡ್ಸ್ ಗೀತಾ ಸಿನಿಮಾ ಹಿಟ್ ಆದ ನಂತರದಲ್ಲಿ ಇದೀಗ ‘ಸಂಜು ವೆಡ್ಸ್ ಗೀತಾ 2’ ತೆರೆಗೆ ಬರಲು ಸಜ್ಜಾಗಿದೆ. ರಮ್ಯಾ ಅವರ ಸ್ಥಾನದಲ್ಲಿ ರಚಿತಾರಾಮ್ ಗಮನಸೆಳೆಯಲಿದ್ದು, ಈ ಸಿನಿಮಾ ಸ್ವಿಟ್ಜರ್ಲೆಂಡ್ನ ಸುಂದರವಾದ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ. ಚಲಪತಿ ಕುಮಾರ್, ನಾಗಶೇಖರ್ ಮೂವೀಸ್, ಪವಿತ್ರಾ ಇಂಟರ್ನ್ಯಾಷನಲ್ ಮೂವೀಸ್ ಮತ್ತು ಮಹಾನಂದಿ ಕ್ರಿಯೇಷನ್ಸ್ ಸಹಯೋಗದೊಂದಿಗೆ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ನಿರ್ಮಾಣಗೊಂಡಿದೆ. ಸಾಧು ಕೋಕಿಲ ಮತ್ತು ರಂಗಾಯಣ ರಘು ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ
ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ. ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ…
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಆತುರದಲ್ಲಿ ತಾನೇ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಚಂದಾನಗರದಲ್ಲಿ ಈ ಘಟನೆ ನಡೆದಿದ್ದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಏರೆ ಬಗ್ಗೆ ಪ್ರಕರಣ ದಾಖಲಿಸಿರುವ ಚಂದಾನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.