ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…

ನಾಡಿನ ಅಧಿದೇವತೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ

ಬೆಂಗಳೂರು: ನಾಡಿನ ಅಧಿದೇವರೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ ನೀಡಲಾಗುತ್ತೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಏನೇ ಕಾರ್ಯಕ್ರಮ ನಡೆಯುವುದಿದ್ದರೂ ಆರಂಭದಲ್ಲಿ ದೇವರಿಗೆ ಹರಕೆ ಸಮರ್ಪಣೆಯು ಅನಾದಿ ಕಾಲದಿಂದಲೂ ಆಸ್ತಿಕರು ಅನುಸರಿಸಿಕೊಂಡು ಬಂದಿರುವ ಸಂಪ್ರದಾಯ. ಅದರಂತೆ, ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆ ಸುಸೂತ್ರ ಜಾರಿಯ ಸಂಬಂಧ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಹರಿಕೆ ಸಲ್ಲಿಸುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರೂ ಆದ ಶಾಸಕ  ದಿನೇಶ್ ಗೂಳಿಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮುನ್ನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಎರಡು ಸಾವಿರ ರೂಪಾಯಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

ಅರ್ಚಕರು ನಿಧನರಾದರೆ/ ತೀವ್ರ ಅಸ್ವಸ್ಥರಾದರೆ/ ಅಶಕ್ತರಾದರೆ ಅನುವಂಶಿಕ ಹಕ್ಕು ವರ್ಗಾವಣೆ ಸುಲಭ.. ಸಚಿವ ರಾಮಲಿಂಗ ರೆಡ್ಡಿ ಚಾರಿತ್ರಿಕ ಕ್ರಮ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಚಾರಿತ್ರಿಕ ಆದೇಶ ಪ್ರಕಟಿಸಿದೆ. ಈ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿದೆ. ರಾಜ್ಯದ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ/ ಗಂಭೀರವಾಗಿ ಅಸ್ವಸ್ಥರಾದಲ್ಲಿ / ಅಶಕ್ತರಾದಲ್ಲಿ ಅನುವಂಶಿಕ ಹಕ್ಕನ್ನು ವರ್ಗಾಯಿಸುವ ಸರಳ ಕ್ರಮ ಕೈಗೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಸ್ತು ಎಂದಿದ್ದಾರೆ. ಈ ಸಂಬಂಧ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಸಚಿವರ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಈ ಕುರಿತು ಆದೇಶ ಹೊರಡಿಸಿದ್ದು ಅರ್ಚಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 31 ಮುಸೇವಿ 2021 ದಿನಾಂಕ 21.08.2021ರಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ,…

ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ..

ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ ಪ್ರಮುಖರ ಶ್ಲಾಘನೆ.. ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಸಂಭ್ರಮ ಸಡಗರದ ನಡುವೆ ಧಾರ್ಮಿಕ ಮಂದಿರಗಳಲ್ಲಿ, ಪುಣ್ಯ ಕ್ಷೇತ್ರಗಳಲ್ಲೂ ವಿವಿಧ ಕೈಕರ್ಯಗಳು ನೆರವೇರಿದವು. ಬೆಂಗಳೂರಿನ ಪೇಜಾವರ ಮಠದಲ್ಲಿ ಬೆಳಕಿನ ಹಬ್ಬ ಸಂದರ್ಭದ ಕೈಂಕರ್ಯ ಆಸ್ತಿಕವಲಯದ ಕೇಂದ್ರಬಿಂದುವಾಯಿತು. ಸಾರಿಗೆ ಸಚಿವ ರಾಮಲಿ೦ಗಾರೆಡ್ಡಿ ಸಹಿತ ಗಣ್ಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು. ಮುಜರಾಯಿ ಖಾತೆಯನ್ನೂ ಹೊಂದಿರುವ ರಾಮಲಿಂಗಾರೆಡ್ಡಿಯವರು ಬೆ೦ಗಳೂರಿನ ಬಸವನಗುಡಿ ಸಮೀಪದ ವಿದ್ಯಾಪೀಠ ಸರ್ಕಲ್ ಬಳಿಯ ಪೇಜಾವರ ಮಠಕ್ಕೆ ಭೇಟಿ ನೀಡಿ ಗೋಪೂಜೆ ಮತ್ತು ಗೋವಿನ ಬೆಳ್ಳಿ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಂತ್ರಿ ರಾಮಲಿಂಗಾರೆಡ್ಡಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೌರವಿಸಿದ ಸನ್ನಿವೇಶವೂ ಗಮನಸೆಳೆಯಿತು. ರಾಜ್ಯದ ದೇಗುಲಗಳ ಅಭಿವೃದ್ಧಿ ವಿಚಾರದಲ್ಲಿ ಅಪೂರ್ವ ಸುಧಾರಣಾ…

ತುಳುನಾಡಿನ ‘ಸರೋವರ ಕ್ಷೇತ್ರ’ದಲ್ಲಿ ಮತ್ತೊಂದು ಪವಾಡ..! ಅನಂತಪುರ ಕ್ಷೇತ್ರದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ

ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿತ್ತು. ದೇವಾಲಯದ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ‘ಬಬಿಯಾ’ ಸಾವಿನ ನಂತರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ಬೇಸರ ಕಂಡುಬರುತ್ತಿತ್ತು. ಇದೀಗ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದೆ. ಈ ಹೊಸ ಮೊಸಳೆ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಸುಮಾರು ಒಂದು ವಾರದ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಭಕ್ತರೊಬ್ಬರು ಕಲ್ಯಾಣಿಯಲ್ಲಿ ‘ಮೊಸಳೆ ಕಂಡಂತೆ ಆಯಿತು’ ಎಂದು ಹೇಳಿಕೊಂಡಿದ್ದರು. ಆದರೆ ಯಾರೂ ಇದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಮೊಸಳೆ ಇರುವುದನ್ನು ದೇಗುಲದ ಆಡಳಿತ ಮಂಡಳಿಯೇ ಖಚಿತಪಡಿಸಿದೆ. ದೇವರ ಪ್ರತಿಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ಈ ಕುರಿತು ಸಂತಸ ಹಂಚಿಕೊಂಡಿರುವ ಮಾಜಿ ಸಚಿವ ಸಿ.ಟಿ.ರವಿ, ‘ಸರೋವರ…

‘ಕನಸಿನ ಕಥೆ’ಗೆ ಜೀವ ತುಂಬಿದ ಮುಸ್ಲಿಂ ವ್ಯಕ್ತಿ; ದೇಗುಲ ನಿರ್ಮಿಸಲು ಜಮೀನನ್ನೇ ಬಿಟ್ಟುಕೊಟ್ಟ ಈ ಬಾವ ಯಾರು ಗೊತ್ತಾ?

ಬೆಂಗ್ಳೂರು ವ್ಯಕ್ತಿಯ ಕನಸಿನಲ್ಲಿ ದೇವಾಲಯ ಪತ್ತೆ.. ಕನಸಿಗೆ ಜೀವ ತುಂಬಿದ ಮುಸ್ಲಿಂ ಅಸ್ತಿಕ.. ‘ಸ್ವಪ್ನದ ಕಥೆ’ ಕೇಳಿ ಧಾವಿಸಿದ ಜ್ಯೋತಿಷಿಗಳು.. ಭೂಮಿ ಅಗೆದಾಗ ಸಿಕ್ತು ದೇವರ ವಿಗ್ರಹ.. ಮಂಗಳೂರು: ಸದಾ ಒಂದಿಲ್ಲೊಂದು ದೈವಪವಾಡಕ್ಕೆ ಸಾಕ್ಷಿಯಾಗುತ್ತಿರುವ ತುಳುನಾಡು ಇದೀಗ ಮತ್ತೊಂದು ಅಚ್ಚರಿಯ ಕೇಂದ್ರ ಬಿಂದುವಾಗಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ‘ಕನಸಿನ ಕಥೆ’ಯಿಂದ ಬೆರಗಾಗಿ ಎಲ್ಲರ ಗಮನಸೆಳೆದಿದ್ದಾರೆ. ಬೆಂಗಳೂರು ಮೂಲದ ಲಕ್ಷ್ಮಣ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಜಮೀನು ಖರೀದಿಸಿದ್ದರು. ಇತ್ತೀಚಿಗೆ ಇವರಿಗೆ ರಾತ್ರಿ ಮಲಗಿದ್ದಾಗ ಕನಸು ಬಿದ್ದಿದ್ದು, ತಾನು ಖರೀದಿಸಿದ ಜಮೀನಿನ ಪಕ್ಕದಲ್ಲಿರುವ ಮುಸ್ಲಿಂ ವ್ಯಕ್ತಿ ಅಹಮದ್ ​​ ಬಾವ ಎಂಬವರ ಜಮೀನಿನಲ್ಲಿ ದೇವಾಲಯ ಇದೆ’ ಎಂಬ ಕನಸು ಅದಾಗಿತ್ತಂತೆ. ತೆಕ್ಕಾರು ಗ್ರಾಮದ ಬಟ್ರಬೈಲಿನ ಮುಸ್ಲಿಂ ವ್ಯಕ್ತಿ ಅಹಮದ್ ಬಾವ ಎಂಬವರು ನೆರೆಮನೆಯವರ ಕನಸಿನ ಕತೆಗೆ ನೀರೆರೆದಿದ್ದಾರೆ. ಕನಸಿನಲ್ಲಿ ದೇವಾಲಯದ ಚಿತ್ರಣ ಸಿಕ್ಕಿದ…

‘ರಾಮರಾಜ್ಯದ ಅರುಣೋದಯವನ್ನು ಉದ್ಘಾಟಿಸುತ್ತೇವೆ’: ಯೋಗಿ ಆದಿತ್ಯನಾಥ್ ಸಂಕಲ್ಪ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಿಂದಾಗಿ ‘ಅಯೋಧ್ಯಾಧಾಮ’ದಲ್ಲಿ ಭಗವಾನ್ ರಾಮನ ಭವ್ಯ ಮಂದಿರವು ಪೂರ್ಣಗೊಳ್ಳುವ ಹಂತದಲ್ಲಿದ್ದು, 500 ವರ್ಷಗಳ ಬಹುನಿರೀಕ್ಷಿತ ಕನಸನ್ನು ಈ ಸಂದರ್ಭವು ನನಸಾಗಿಸಿದೆ. ಇನ್ನು ಮುಂದೆ ರಾಮರಾಜ್ಯ ಸ್ಥಾಪನೆಗೆ ಮುನ್ನುಡಿ ಬರೆಯುತ್ತೇವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಕಲ್ಪ ಮಾಡಿದ್ದಾರೆ. ಮಂಗಳವಾರ ಸಂಜೆ ಮಾನಸ ಸರೋವರ ರಾಮಲೀಲಾ ಮೈದಾನದಲ್ಲಿ ನಡೆದ ಭಗವಾನ್ ಶ್ರೀರಾಮನ ಪಟ್ಟಾಭಿಷೇಕ ಸಮಾರಂಭದಲ್ಲಿ ಮಹತ್ವದ ಭಾಷಣ ಮಾಡಿದ ಯೋಗಿ ಆದಿತ್ಯನಾಥ್ ಅವರು ರಾಮರಾಜ್ಯ ಸ್ಥಾಪನೆಯ ಘೋಷಣೆ ಮಾಡಿದರು. ಯೋಗಿ ಆದಿತ್ಯನಾಥ್ ಅವರು, ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಸರ್ಕಾರವು ಲಕ್ಷಾಂತರ ಬಡ ನಾಗರಿಕರಿಗೆ ಭಗವಾನ್ ರಾಮನ ಸಾಮ್ರಾಜ್ಯದ ತತ್ವಗಳನ್ನು ನಿಜವಾಗಿಸಲು ಹೇಗೆ ಪ್ರಯತ್ನಿಸಿದೆ ಎಂಬುದನ್ನು ಬೊಟ್ಟು ಮಾಡಿದರು. ಮನೆಗಳು, ನೈರ್ಮಲ್ಯ ಸೌಲಭ್ಯಗಳು, ಪೋಷಣೆ, ಆರೋಗ್ಯ ಮತ್ತು ಇತರ ಅಗತ್ಯ ಸೇವೆಗಳನ್ನು ಒದಗಿಸುವ ಮೂಲಕ ಇದನ್ನು ಸಾಧಿಸಲಾಗಿದೆ, ಈ ಸಾರ್ವಜನಿಕ ಕಲ್ಯಾಣ ಯೋಜನೆಗಳು…

ಜಗದ್ವಿಖ್ಯಾತ ಮೈಸೂರು ದಸರಾ; ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿದ ಜನಸ್ತೋಮ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಅದ್ದೂರಿಯಾಗಿ ನೆರವೇರಿದೆ. ವಿಜಯದಶಮಿ ದಿನವಾದ ಇಂದು ಮೈಸೂರು ಅರಮನೆ ಮುಂಬಾಗ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ,ಶಿವಕುಮಾರ್ ಸೇರಿದಂತೆ ಸಚಿವರು ಅಧಿಕಾರಿಗಳು, ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗಿದ ಸನ್ನಿವೇಶ ಗಮನಸೆಳೆಯಿತು. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದವು. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗಿದ ಜಂಬೂಸವಾರಿ ಮೆರವಣಿಗೆಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ವಿಶೇಷ ಆಕರ್ಷಣೆಗೆ ಪಾತ್ರವಾದವು. ಸುಮಾರು 5ರಿಂದ 7 ಕಿಲೋ ಮೀಟರ್ ವರೆಗೆ ಜಂಬೂ ಸವಾರಿ ಸಾಗಿದ್ದು ರಾಜರಸ್ತೆಯ ಇಕ್ಕೆಲೆಗಳಲ್ಲಿ ಜನಸ್ತೋಮ ಈ ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿತು. ಶತಮಾನಗಳ‌‌ ಇತಿಹಾಸ ಹೊಂದಿರುವ ಮೈಸೂರು ದಸರಾ ಕರ್ನಾಟಕದ ಕೀರ್ತಿಯ ಕಳಶ. ಅಂಬಾರಿಯಲ್ಲಿ ವೀರಾಜಮಾನಳಾಗಿರುವ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿಗಳೊಂದಿಗೆ ಪುಷ್ಪಾರ್ಚನೆ…

ಮಂಗಳೂರು ಶಾರದೋತ್ಸವ ಶತಮಾನೋತ್ಸವ.. ಕಣ್ಮನ ಸೆಳೆದ ವಿಗ್ರಹ

ಮಂಗಳೂರು : ಬಂದರು ನಗರಿಯಲ್ಲಿ ನವರಾತ್ರಿ ಉತ್ಸವದ ರಂಗು ಆವರಿಸಿದೆ. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ, ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 101ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ಗಮನಸೆಳೆದಿದೆ. ಶ್ರೀ ಗೋಕರ್ಣ ಪರ್ತಗಾಳಿ ಮಠದ ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಭೇಟಿನೀಡಿದ್ದು ಶಾರದಾ ಮಾತೆಗೆ ಪೂಜೆ ಸಲ್ಲಿಸಿ ನೆರೆದ ಭಜಕರಿಗೆ ಆಶೀರ್ವದಿಸಿದರು. ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಬಳಿಕ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಂಡ ಸ್ಥಳಕ್ಕೆ ಶ್ರೀಗಳವರು ಆಗಮಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ, ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು.

ಮೈಸೂರು ದಸರಾ: ಜಗದ್ವಿಖ್ಯಾತ ಮಹೋತ್ಸವಕ್ಕೆ ಚಾಲನೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು. ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ,…