ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. ‘ಚೆಂಡು ಉತ್ಸವದ ನಾಡು’ ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದೆ. ಇದು ನಿಜಕ್ಕೂ ಅಪೂರ್ವ ಹಾಗೂ ಅನನ್ಯ ಕೈಂಕರ್ಯ. ಸುಮಾರು 105 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಇಂತಹಾ ಚಂಡಿಕಾ ಯಾಗ ನಡೆದಿತ್ತು. ಲೋಕ ಕಲ್ಯಾಣಾರ್ಥವಾಗಿ ನೆರವೇರುತ್ತಿರುವ ಈ ಶತಚಂಡಿಕಾ ಯಾಗದಲ್ಲಿ ದೇಶದ ವಿವಿಧೆಡೆಯ ಯತಿಗಳು ಭಾಗಿಯಾಗುತ್ತಿದ್ದಾರೆ. ಚೆಂಡು ಉತ್ಸವ ಸಂದರ್ಭದ ಜನೋತ್ಸವಕ್ಕೆ ಈ ಶತಚಂಡಿಕಾ ಯಾಗದ ಸಡಗರ ಸಾಕ್ಷಿಯಾಗುತ್ತಿರುವುದು ವಿಶೇಷ. ಮಾರ್ಚ್ 1 ರಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವೈಧಿಕ ,ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ವಿವಿಧ ಕೈಂಕರ್ಯಗಳು ನೆರವೇರುತ್ತಿದ್ದು, ಮಾರ್ಚ್ 5 ರಂದು ಬುಧವಾರ ಶತಚಂಡಿಕಾಯಾಗ ಪರಿಪೂರ್ಣವಾಗಿ ನೆರವೇರಲಿದೆ. ಲೋಕಕಲ್ಯಾಣಾರ್ಥದ ಜೊತೆಯಲ್ಲೇ ಸಾನಿಧ್ಯ ಅಭಿವೃದ್ದಿಗಾಗಿ ಸುಮಾರು 105 ವರ್ಷಗಳ ಬಳಿಕ…
Category: ಆದ್ಯಾತ್ಮ
‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ : 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ
ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ ಪೂರ್ಣಗೊಳಿಸುವಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವೇ ಕಾರಣ ಎಂದಿರುವ ಅವರು ಈ ಭವ್ಯ ಧಾರ್ಮಿಕ ಸಭೆಯನ್ನು “ಏಕತೆ, ಸಮಾನತೆ ಮತ್ತು ಸಾಮರಸ್ಯದ ಮಹಾಯಜ್ಞ” ಎಂದು ಕರೆದಿದ್ದಾರೆ. ಪ್ರಧಾನಿ ಮೋದಿಯವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಸಿಎಂ ಯೋಗಿ, ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಯಶಸ್ವಿ ಮಾರ್ಗದರ್ಶನದ ಪರಿಣಾಮವಾಗಿ ‘ಏಕತೆ, ಸಮಾನತೆ, ಸಾಮರಸ್ಯದ ಮಹಾಯಜ್ಞ’ – ಮಹಾ ಕುಂಭ 2025, ಪ್ರಯಾಗರಾಜ್ ಮುಕ್ತಾಯಗೊಂಡಿದೆ, ಭವ್ಯತೆ ಮತ್ತು ದೈವತ್ವದ ಜೊತೆಗೆ ಭದ್ರತೆ, ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 45 ಪವಿತ್ರ ದಿನಗಳಲ್ಲಿ, ಪೂಜ್ಯ ಸಂತರು ಮತ್ತು ಋಷಿಗಳು ಸೇರಿದಂತೆ 66 ಕೋಟಿಗೂ…
ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’
ಕೊಯಮತ್ತೂರು: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. ಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು. ಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.
ಪ್ರಯಾಗರಾಜ್ ಮಹಾ ಕುಂಭದಲ್ಲಿ ಕತ್ರಿನಾ ಕೈಫ್, ರವೀನಾ ಟಂಡನ್
ಮುಂಬೈ,: ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಭಾಗವಹಿಸುತ್ತಿರುವ ಸೆಲೆಬ್ರಿಟಿಗಳ ಸಾಲಿಗೆ ಕತ್ರಿನಾ ಕೈಫ್ ಮತ್ತು ರವೀನಾ ಟಂಡನ್ ಸೇರಿಕೊಂಡರು. ಧಾರ್ಮಿಕ ಭೇಟಿಯ ಸಮಯದಲ್ಲಿ ಈ ಇಬ್ಬರು ‘ಗಂಗಾ ಆರತಿ’ಯಲ್ಲಿ ಭಾಗವಹಿಸಿ ಗಮನಸೆಳೆದಿದ್ದಾರೆ. ಪರಮಾರ್ಥ ನಿಕೇತನ ಆಶ್ರಮದ ಅಧ್ಯಕ್ಷ ಸ್ವಾಮಿ ಚಿದಾನಂದ್ ಸರಸ್ವತಿ ಮತ್ತು ಸಾಧ್ವಿ ಭಗವತಿ ಸರಸ್ವತಿ, ನಟ ಅಭಿಷೇಕ್ ಬ್ಯಾನರ್ಜಿ ಮತ್ತು ರವೀನಾ ಟಂಡನ್ ಅವರ ಪುತ್ರಿ ರಾಶಾ ಥಡಾನಿ ‘ಗಂಗಾ ಆರತಿ’ಯಲ್ಲಿ ಸೋಮವಾರ ಭಾಗಿಯಾದರು. ಕತ್ರಿನಾ ಕೈಫ್ ತನ್ನ ಅತ್ತೆ ವೀಣಾ ಕೌಶಲ್ ಅವರೊಂದಿಗೆ ಮಹಾ ಕುಂಭಕ್ಕೆ ಭೇಟಿ ನೀಡಿದರು. ದಿವಾ ಪೌಡರ್ ಪಿಂಕ್ ಜನಾಂಗೀಯ ಉಡುಪನ್ನು ಧರಿಸಿದ್ದರು. ಸ್ವಾಮಿ ಚಿದಾನಂದ್ ಸರಸ್ವತಿ ಮತ್ತು ಸಾಧ್ವಿ ಭಗವತಿ ಸರಸ್ವತಿ ಅವರ ಮಾರ್ಗದರ್ಶನ ಪಡೆದಿದ್ದಾರೆ.
ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ
ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ ಸುಮಾರು 60 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಂತೆ ಶನಿವಾರ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದುತಿಳಿಸಿದೆ. ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿ ವರೆಗೂ ನಡೆಯಲಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಲು ಪ್ರಯಾಗರಾಜ್ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಇದೇ ರೀತಿಯ ಸ್ಥಿತಿ ಇದ್ದರೆ ಅಂತಿಮ ‘ಅಮೃತ ಸ್ನಾನ’ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ…
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ
ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ. 85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.
ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 26 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಈಗಾಗಲೇ ದೇಶಾದ್ಯಂತ ಮತ್ತು ಅದರಾಚೆಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ.ಈ ಇಬ್ಬರೂ ನಾಯಕರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ಭವ್ಯವಾದ ಆಧ್ಯಾತ್ಮಿಕ ಸಭೆಗಾಗಿ ಮಾಡಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು. ತಮ್ಮ ಈ ಅಪೂರ್ವ ಕ್ಷಣ ಬಗ್ಗೆ ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್, ‘ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ. ಇಲ್ಲಿ ನೆರೆದಿರುವ ಕೋಟ್ಯಂತರ ಭಕ್ತರಿಗೆ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಸಂಘಟಕರು ಅದ್ಭುತ ಕೆಲಸ ಮಾಡಿದ್ದಾರೆ. ನನ್ನ ಕುಟುಂಬ ಮತ್ತು ನಾನು ಪವಿತ್ರ ಸ್ನಾನ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ’…