ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಿಂದಾಗಿ ‘ಅಯೋಧ್ಯಾಧಾಮ’ದಲ್ಲಿ ಭಗವಾನ್ ರಾಮನ ಭವ್ಯ ಮಂದಿರವು ಪೂರ್ಣಗೊಳ್ಳುವ ಹಂತದಲ್ಲಿದ್ದು, 500 ವರ್ಷಗಳ ಬಹುನಿರೀಕ್ಷಿತ ಕನಸನ್ನು ಈ ಸಂದರ್ಭವು ನನಸಾಗಿಸಿದೆ. ಇನ್ನು ಮುಂದೆ ರಾಮರಾಜ್ಯ ಸ್ಥಾಪನೆಗೆ ಮುನ್ನುಡಿ ಬರೆಯುತ್ತೇವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಕಲ್ಪ ಮಾಡಿದ್ದಾರೆ. ಮಂಗಳವಾರ ಸಂಜೆ ಮಾನಸ ಸರೋವರ ರಾಮಲೀಲಾ ಮೈದಾನದಲ್ಲಿ ನಡೆದ ಭಗವಾನ್ ಶ್ರೀರಾಮನ ಪಟ್ಟಾಭಿಷೇಕ ಸಮಾರಂಭದಲ್ಲಿ ಮಹತ್ವದ ಭಾಷಣ ಮಾಡಿದ ಯೋಗಿ ಆದಿತ್ಯನಾಥ್ ಅವರು ರಾಮರಾಜ್ಯ ಸ್ಥಾಪನೆಯ ಘೋಷಣೆ ಮಾಡಿದರು. ಯೋಗಿ ಆದಿತ್ಯನಾಥ್ ಅವರು, ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಸರ್ಕಾರವು ಲಕ್ಷಾಂತರ ಬಡ ನಾಗರಿಕರಿಗೆ ಭಗವಾನ್ ರಾಮನ ಸಾಮ್ರಾಜ್ಯದ ತತ್ವಗಳನ್ನು ನಿಜವಾಗಿಸಲು ಹೇಗೆ ಪ್ರಯತ್ನಿಸಿದೆ ಎಂಬುದನ್ನು ಬೊಟ್ಟು ಮಾಡಿದರು. ಮನೆಗಳು, ನೈರ್ಮಲ್ಯ ಸೌಲಭ್ಯಗಳು, ಪೋಷಣೆ, ಆರೋಗ್ಯ ಮತ್ತು ಇತರ ಅಗತ್ಯ ಸೇವೆಗಳನ್ನು ಒದಗಿಸುವ ಮೂಲಕ ಇದನ್ನು ಸಾಧಿಸಲಾಗಿದೆ, ಈ ಸಾರ್ವಜನಿಕ ಕಲ್ಯಾಣ ಯೋಜನೆಗಳು…
Category: ಆದ್ಯಾತ್ಮ
ಜಗದ್ವಿಖ್ಯಾತ ಮೈಸೂರು ದಸರಾ; ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿದ ಜನಸ್ತೋಮ
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಅದ್ದೂರಿಯಾಗಿ ನೆರವೇರಿದೆ. ವಿಜಯದಶಮಿ ದಿನವಾದ ಇಂದು ಮೈಸೂರು ಅರಮನೆ ಮುಂಬಾಗ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ,ಶಿವಕುಮಾರ್ ಸೇರಿದಂತೆ ಸಚಿವರು ಅಧಿಕಾರಿಗಳು, ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗಿದ ಸನ್ನಿವೇಶ ಗಮನಸೆಳೆಯಿತು. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದವು. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗಿದ ಜಂಬೂಸವಾರಿ ಮೆರವಣಿಗೆಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ವಿಶೇಷ ಆಕರ್ಷಣೆಗೆ ಪಾತ್ರವಾದವು. ಸುಮಾರು 5ರಿಂದ 7 ಕಿಲೋ ಮೀಟರ್ ವರೆಗೆ ಜಂಬೂ ಸವಾರಿ ಸಾಗಿದ್ದು ರಾಜರಸ್ತೆಯ ಇಕ್ಕೆಲೆಗಳಲ್ಲಿ ಜನಸ್ತೋಮ ಈ ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿತು. ಶತಮಾನಗಳ ಇತಿಹಾಸ ಹೊಂದಿರುವ ಮೈಸೂರು ದಸರಾ ಕರ್ನಾಟಕದ ಕೀರ್ತಿಯ ಕಳಶ. ಅಂಬಾರಿಯಲ್ಲಿ ವೀರಾಜಮಾನಳಾಗಿರುವ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿಗಳೊಂದಿಗೆ ಪುಷ್ಪಾರ್ಚನೆ…
ಮಂಗಳೂರು ಶಾರದೋತ್ಸವ ಶತಮಾನೋತ್ಸವ.. ಕಣ್ಮನ ಸೆಳೆದ ವಿಗ್ರಹ
ಮಂಗಳೂರು : ಬಂದರು ನಗರಿಯಲ್ಲಿ ನವರಾತ್ರಿ ಉತ್ಸವದ ರಂಗು ಆವರಿಸಿದೆ. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ, ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 101ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ಗಮನಸೆಳೆದಿದೆ. ಶ್ರೀ ಗೋಕರ್ಣ ಪರ್ತಗಾಳಿ ಮಠದ ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಭೇಟಿನೀಡಿದ್ದು ಶಾರದಾ ಮಾತೆಗೆ ಪೂಜೆ ಸಲ್ಲಿಸಿ ನೆರೆದ ಭಜಕರಿಗೆ ಆಶೀರ್ವದಿಸಿದರು. ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಬಳಿಕ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಂಡ ಸ್ಥಳಕ್ಕೆ ಶ್ರೀಗಳವರು ಆಗಮಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ, ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು.
ಮೈಸೂರು ದಸರಾ: ಜಗದ್ವಿಖ್ಯಾತ ಮಹೋತ್ಸವಕ್ಕೆ ಚಾಲನೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು. ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ,…
ಮುಜರಾಯಿ ದೇಗುಲ ಅರ್ಚಕರಿಗೆ, ನೌಕರರಿಗೆ ಬಂಪರ್..
ಬೆಂಗಳೂರು: ರಾಜಯದ ಮುಜರಾಯಿ ಇಲಾಖಾ ವ್ಯಾಪ್ತಿಯ ದೇಗುಲಗಳಲ್ಲಿ ಹಿರಿಯ ನಾಗರೀಕರಿಗೆ ದೇವತಾ ಕೈಕರ್ಯ ಸುಲಭವಾಗಲಿದೆ. ಮಹತ್ವದ ನಿರ್ಧಾರದಲ್ಲಿ, 65 ವರ್ಷ ಮೇಲ್ಟಟ್ಟ ಹಿರಿಯ ನಾಗರೀಕರಿಗೆ ದೇವಸ್ಥಾನಗಳಲ್ಲಿ ಸರತಿಯಲ್ಲಿ ನಿಲ್ಲದೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಹಿಂದೂ ಧಾರ್ಮಿಕ ದತ್ತಿ ಸಚಿವ ರಾಮಲಿಂಗ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಶುಕ್ರವಾರ (13.10.2023) 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಪ್ರಥಮ ಸಭೆಯಲ್ಲಿ ಹಲವು ಜನಪರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನಗಳಲ್ಲಿ ಮೊಬೈಲ್ ಪೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆಯೂ ಧಾರ್ಮಿಕ ಪರಿಷತ್ ಒಲವು ವ್ಯಕ್ತಪಡಿಸಿದೆ. ಇದೇ ವೇಳೆ, ಕಾಶಿ ಯಾತ್ರೆಯಲ್ಲಿ ಗಯಾ ವನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ರೂ.5,000/- ಇದ್ದ ಸಹಾಯ ಧನವನ್ನು ರೂ.7,500/-ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ ಊಟ ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಭೋಗಿಯನ್ನು ಕಲ್ಪಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿ…
ಸಂಘನಿಕೇತನ ಗಣೇಶೋತ್ಸವ.. ಕ್ರೈಸ್ತ ಸಮುದಾಯದ ಗಣ್ಯರಿಂದ ಕೈಂಕರ್ಯ
ಮಂಗಳೂರು: ಕಡಲತಡಿ ಮಂಗಳೂರಿನ ಸಂಘನಿಕೇತನದಲ್ಲಿ ಗಣೇಶೋತ್ಸವ ಸಂಭ್ರಮ ಗಮನಸೆಳೆದಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಕ್ತಿ ಕೇಂದ್ರ ಸಂಘನಿಕೇತನಕ್ಕೆ ಭೇಟಿ ನೀಡಿದ ಕ್ರೈಸ್ತ ಸಮುದಾಯದ ಗಣ್ಯರು ಈ ಉತ್ಸವ ಸಂಭ್ರಮದಲ್ಲಿ ಭಾಗಿಯಾಗಿ ಕುತೂಹಲದ ಕೇಂದ್ರಬಿಂದುವಾಗಿದೆ. ದಶಕಗಳ ಗಣೇಶೋತ್ಸವ ಆಚರಣೆಗೆ ಹೆಸರಾಗಿರುವ ಸಂಘನಿಕೇತನದಲ್ಲಿ ಭಾಗಿಯಾದ ಕ್ರೈಸ್ತ ಸಮುದಾಯದ ಗಣ್ಯರು, ವಿವಿಧ ಕೈಂಕರ್ಯ ನೆರವೇರಿಸಿದರು. ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವದಲ್ಲಿ ಕ್ರೈಸ್ತ ಸಮದಾಯದ ಗಣ್ಯರ ಭೇಟಿ ನೀಡಿದ್ದರು. ಈ ಗಣ್ಯರನ್ನು ಬರಮಾಡಿಕೊಂಡ ಆರೆಸ್ಸೆಸ್ ದಕ್ಷಿಣ ಪ್ರಾಂತ ಸರಸಂಘ ಚಾಲಕ ಡಾ ವಾಮನ್ ಶಣೈ ಅವರು ಪೂಜಾ ಮಹೋತ್ಸವದ ಮಹತ್ವ ವಿವರಿಸಿದರು. ಸಾಮರಸ್ಯ ಹಾಗೂ ಸೌಹಾರ್ದತೆಯ ಉದ್ದೇಶದಿಂದ ಗಣೇಶೋತ್ಸವದಲ್ಲಿ ಭಾಗಿಯಾದ ಕ್ರೈಸ್ತ ಸಮುದಾಯದ ಗಣ್ಯರು ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 76 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಇದಾಗಿದೆ. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ…
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೆ.ಎಲ್.ರಾಹುಲ್ ಭೇಟಿ; ದೇವರ ದರ್ಶನ ಪಡೆದ ಕ್ರಿಕೆಟಿಗ
ದೊಡ್ಡಬಳ್ಳಾಪುರ: ಖ್ಯಾತ ಕ್ರಿಕೆಟಿಗ, ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ .ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಸಧ್ಯ ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ಮಾದರಿಯ ಏಷ್ಯಾ ಕಪ್ಗೆ ಅಂತಿಮ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದರು, ಆದರೆ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದರಿಂದ ಮೊದಲೆರಡು ಪಂದ್ಯಗಳಿಂದ ದೂರ ಸುಳಿದಿದ್ದಾರೆ. ಶನಿವಾರ ಮಧ್ಯಾಹ್ನ 12.30 ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಭಕ್ತರು ಮುಗಿಬಿದ್ದರು. ಈಒ ಕ್ರಿಷ್ಣಪ್ಪ,ಸಿಬ್ಬಂದಿ ನಂಜಪ್ಪ, ವೆಂಕಟೇಶ್ ಅವರು ಪೂಜೆ, ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು.
ಮಾದಪ್ಪನ ಸನ್ನಿಧಿಗೆ ಭಕ್ತರ ಹೊಳೆ; ಹುಂಡಿಯಲ್ಲಿ ಬರೋಬ್ಬರಿ 2.38 ಕೋ.ರೂ. ಸಂಗ್ರಹ
ಚಾಮರಾಜನಗರ : ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಹನೂರುತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಭಕ್ತರಿಂದ ಕೊಟ್ಯಾನ್ತರ ರೂಪಾಯಿ ಕಾಣಿಕೆ ಹರಿದುಬರುತ್ತಿದೆ. ಶುಕ್ರವಾರ ಕ್ಷೇತ್ರದಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.38 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಮಾಡಲಾಯಿತು. ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು. ಕಳೆದ 36 ದಿನಗಳ ಅವಧಿಯಲ್ಲಿ 2 ಕೋಟಿ 38 ಲಕ್ಷದ 43 ಸಾವಿರದ 177 ರೂಪಾಯಿ ಹಣ, 63 ಗ್ರಾಂ ಚಿನ್ನ ಹಾಗೂ 3.173 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯದ ಅಧಿಕಾರಿಗಳು…
ಮಲೆ ಮಹದೇಶ್ವರ ಪಾದಯಾತ್ರಿಕರ ಸೇವೆಗಾಗಿ ಸದ್ಭಾವ ಸೇವಾ ಸಮಿತಿ ರಚನೆ
ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟದ ಪಾದಯಾತ್ರಿಕರ ಸೇವೆಗಾಗಿ ಸದ್ಭಾವ ಸೇವಾ ಸಮಿತಿ (ರಿ) ಯನ್ನು ಗೋಪಿಶೆಟ್ಟಿಯೂರು ಬಸವಣ್ಣ ಸ್ವಾಮೀಜಿಯವರು ಉದ್ಘಾಟಿಸಿದರು. ಮಹದೇಶ್ವರರ ಚಿತ್ರಕ್ಕೆ ಬಸವಣ್ಣ ಸ್ವಾಮೀಜಿ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಶಾಲಾ ಮಕ್ಕಳು ಪುಷ್ಪಾರ್ಚನೆ ನೇವೇರಿಸಿದರು. ಗೋಪಿಶೆಟ್ಟಿಯೂರು ಮಠದ ಬಸವಣ್ಣ ಸ್ವಾಮೀಜಿ ಮಾತನಾಡಿ, ಕಳೆದ 20 ವರ್ಷಗಳಿಂದ ಸತತವಾಗಿ ಹನೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಮಲೆ ಮಹದೇಶ್ವರನ ಸನ್ನಿಧಿಗೆ ಪಾದಯಾತ್ರೆ ಮಾಡುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಿದ್ದರು ಈ ಮಾರ್ಗ ಮಧ್ಯದಲ್ಲಿ ಪಾದಯಾತ್ರಿಕರಿಗೆ ಊಟ, ಮಜ್ಜಿಗೆ ,ಪಾನಕ, ನೀರಿನ ವ್ಯವಸ್ಥೆಗಳನ್ನು ಮಾಡಲಾಗುತ್ತಿತ್ತು. ಇದೀಗ ಮಹದೇಶ್ವರನ ಭಕ್ತರು ಸೇರಿ ಮಲೆ ಮಹದೇಶ್ವರನ ಭಕ್ತರಿಗೆ ಪಾದಯಾತ್ರೆ ಸಂದರ್ಭದಲ್ಲಿ ಅಳಿಲು ಸೇವೆ ಮಾಡಲು ಸದ್ಭಾವ ಸೇವಾ ಸಮಿತಿಯನ್ನು ರಚಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದ್ಭಾವ ಸೇವಾ ಸಮಿತಿಯ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಕಳೆದು 20…
ನವೆಂಬರ್ 2 ರಿಂದ 15 ರವರೆಗೆ ಹಾಸನಾನೆಂಬೆ ಜಾತ್ರೆ; ಮಹಾ ವೈಭವಕ್ಕೆ ತಯಾರಿ
ಹಾಸನ: ಪುರಾಣ ಪ್ರಸಿದ್ಧ ಹಾಸನಾಂಬೆ ಜಾತ್ರಗೆ ಮುಹೂರ್ತ ನಿಗದಿಯಾಗಿದ್ದು, ಈ ಬಾರಿ ನವೆಂಬರ್ 2 ರಿಂದ ನವೆಂಬರ್ 15ರವರೆಗೆ ವಿಶೇಷ ಮಹೋತ್ಸವ ನಡೆಯಲಿದೆ. ಹಾಸನಾಂಬೆ ಜಾತ್ರೆಯ ತಯಾರಿ ಸಂಬಂಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ರಾಜಣ್ಣ ಅವರ ನೇತೃತ್ವದಲ್ಲಿ ಹಾಸನ ಜಿಲ್ಲಾ ಪಂಚಾಯಿತಿಯ ಹೇಮಾವತಿ ಸಭಾಂಗಣದ ಸಭೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆಗಳಿರುವುದರಿಂದ ಸುಸೂತ್ರ ತಯಾರಿ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಜಾತ್ರೆಯಲ್ಲಿ ಈ ವರ್ಷ 14 ದಿನಗಳು 24 ಗಂಟೆ ದೇವಿಯ ದರ್ಶನ ಮಾಡಬಹುದಾಗಿದೆ.