ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ‌ 23ರಂದು ಲೋಕರ್ಪಣೆ

ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಮಾಧ್ಯಮಗೋಷ್ಟಿಯಲ್ಲಿ, ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಡಾ||ಹೆಚ್.ಎಂ.ಕೃಷ್ಣಮೂರ್ತಿ, ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷ ಕೆ.ಎಸ್.ಶ್ರೀಧರ್ , ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ ಎಂದರು. 21 ರಂದು ಸಂಜೆ ಗಣಪತಿಪೂಜೆ , ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು…

ಮಂಗಳೂರು ಶಾರದಾ ವೈಭವ; ಅದ್ಧೂರಿ ಮಹೋತ್ಸವ ಹೀಗಿದೆ

ಮಂಗಳೂರು: ಮಂಗಳೂರು ರಥಬೀದಿಯಲ್ಲಿ ಮತ್ತೊಮ್ಮೆ ಗತವೈಭವ ಮರುಕಳಿಸಿದಂತಿದೆ. ಅದ್ಧೂರಿ  ಶಾರದಾ ಮಹೋತ್ಸವ ಆರಂಭವಾಗಿದ್ದು, ಸಾಂಪ್ರದಾಯಿಕ ಕೈಂಕರ್ಯ ಮೂಲಕ ಚಾಲನೆ ದೊರೆತಿದೆ. ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ. 2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಆಕ್ಟೋಬರ್ 8ರಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ರಾಜಾಂಗಣದಿಂದ ಶ್ರೀ ಉಮಾಮಹೇಶ್ವರಿ ದೇವಳ ರಸ್ತೆ , ರಾಮಮಂದಿರ , ನಂದಾ ದೀಪ ರಸ್ತೆ, ಹೂಮಾರುಕಟ್ಟೆ ರಸ್ತೆ , ರಥಬೀದಿಯಾಗಿ ಉತ್ಸವಸ್ಥಾನಕ್ಕೆ ತರಲಾಯಿತು . ಅಕ್ಟೋಬರ್ 9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆಯು ವೈದಿಕ ವಿಧಿ…

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು. ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು. ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ‌ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ…

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. ಜಗದಾಂಬೆ ಶ್ರೀ ಕಟೀಲೇಶ್ವರಿಯು ಸ್ವಾತಂತ್ರ್ಯ ದಿನವಾದ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಕಳೆದ ವರ್ಷದಂತೆಯೇ ಈ ವರ್ಷವೂ ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹಕ್ಕೆ ರಾಷ್ಟ್ರಧ್ವಜವನ್ನು ಹೋಲುವ ಬಣ್ಣದ ವಸ್ತ್ರಾಲಂಕಾರ ಮಾಡಲಾಗಿದೆ. ಈ ಅಲಂಕಾರ ಭಕ್ತರ ಕುತೂಹಲದ ಕೇಂದ್ರಬಿಂದುವಾಗಿದೆ. ಕರಾವಳಿಯ ಪುಣ್ಯಕ್ಷೇತ್ರ ಕಟೀಲಿನಲ್ಲಿ ದೇಶಭಕ್ತಿಯ ಮಹಾ ಹಬ್ಬವನ್ನು ಆಚರಿಸಲಾಯಿತು. ಹಿಂದೂ ಧಾರ್ಮಿಕ ಹಬ್ಬಗಳಂದು ವಿಶೇಷ ಕೈಂಕರ್ಯಗಳಿಂದ ಭಕ್ತರನ್ನು ಕೈಬೀಸಿ ಕರೆಯುವ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಈ ರೀತಿಯ ಆಕರ್ಷಣೆ ಭಕ್ತ ಸಮೂಹದ ಮೆಚ್ಚುಗೆಗೂ ಪಾತ್ರವಾಗಿದೆ.

ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…

ನಾಡಿನ ಅಧಿದೇವತೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ

ಬೆಂಗಳೂರು: ನಾಡಿನ ಅಧಿದೇವರೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ ನೀಡಲಾಗುತ್ತೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಏನೇ ಕಾರ್ಯಕ್ರಮ ನಡೆಯುವುದಿದ್ದರೂ ಆರಂಭದಲ್ಲಿ ದೇವರಿಗೆ ಹರಕೆ ಸಮರ್ಪಣೆಯು ಅನಾದಿ ಕಾಲದಿಂದಲೂ ಆಸ್ತಿಕರು ಅನುಸರಿಸಿಕೊಂಡು ಬಂದಿರುವ ಸಂಪ್ರದಾಯ. ಅದರಂತೆ, ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆ ಸುಸೂತ್ರ ಜಾರಿಯ ಸಂಬಂಧ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಹರಿಕೆ ಸಲ್ಲಿಸುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರೂ ಆದ ಶಾಸಕ  ದಿನೇಶ್ ಗೂಳಿಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮುನ್ನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಎರಡು ಸಾವಿರ ರೂಪಾಯಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

ಅರ್ಚಕರು ನಿಧನರಾದರೆ/ ತೀವ್ರ ಅಸ್ವಸ್ಥರಾದರೆ/ ಅಶಕ್ತರಾದರೆ ಅನುವಂಶಿಕ ಹಕ್ಕು ವರ್ಗಾವಣೆ ಸುಲಭ.. ಸಚಿವ ರಾಮಲಿಂಗ ರೆಡ್ಡಿ ಚಾರಿತ್ರಿಕ ಕ್ರಮ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಚಾರಿತ್ರಿಕ ಆದೇಶ ಪ್ರಕಟಿಸಿದೆ. ಈ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿದೆ. ರಾಜ್ಯದ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ/ ಗಂಭೀರವಾಗಿ ಅಸ್ವಸ್ಥರಾದಲ್ಲಿ / ಅಶಕ್ತರಾದಲ್ಲಿ ಅನುವಂಶಿಕ ಹಕ್ಕನ್ನು ವರ್ಗಾಯಿಸುವ ಸರಳ ಕ್ರಮ ಕೈಗೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಸ್ತು ಎಂದಿದ್ದಾರೆ. ಈ ಸಂಬಂಧ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಸಚಿವರ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಈ ಕುರಿತು ಆದೇಶ ಹೊರಡಿಸಿದ್ದು ಅರ್ಚಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 31 ಮುಸೇವಿ 2021 ದಿನಾಂಕ 21.08.2021ರಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ,…

ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ..

ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ ಪ್ರಮುಖರ ಶ್ಲಾಘನೆ.. ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಸಂಭ್ರಮ ಸಡಗರದ ನಡುವೆ ಧಾರ್ಮಿಕ ಮಂದಿರಗಳಲ್ಲಿ, ಪುಣ್ಯ ಕ್ಷೇತ್ರಗಳಲ್ಲೂ ವಿವಿಧ ಕೈಕರ್ಯಗಳು ನೆರವೇರಿದವು. ಬೆಂಗಳೂರಿನ ಪೇಜಾವರ ಮಠದಲ್ಲಿ ಬೆಳಕಿನ ಹಬ್ಬ ಸಂದರ್ಭದ ಕೈಂಕರ್ಯ ಆಸ್ತಿಕವಲಯದ ಕೇಂದ್ರಬಿಂದುವಾಯಿತು. ಸಾರಿಗೆ ಸಚಿವ ರಾಮಲಿ೦ಗಾರೆಡ್ಡಿ ಸಹಿತ ಗಣ್ಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು. ಮುಜರಾಯಿ ಖಾತೆಯನ್ನೂ ಹೊಂದಿರುವ ರಾಮಲಿಂಗಾರೆಡ್ಡಿಯವರು ಬೆ೦ಗಳೂರಿನ ಬಸವನಗುಡಿ ಸಮೀಪದ ವಿದ್ಯಾಪೀಠ ಸರ್ಕಲ್ ಬಳಿಯ ಪೇಜಾವರ ಮಠಕ್ಕೆ ಭೇಟಿ ನೀಡಿ ಗೋಪೂಜೆ ಮತ್ತು ಗೋವಿನ ಬೆಳ್ಳಿ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಂತ್ರಿ ರಾಮಲಿಂಗಾರೆಡ್ಡಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೌರವಿಸಿದ ಸನ್ನಿವೇಶವೂ ಗಮನಸೆಳೆಯಿತು. ರಾಜ್ಯದ ದೇಗುಲಗಳ ಅಭಿವೃದ್ಧಿ ವಿಚಾರದಲ್ಲಿ ಅಪೂರ್ವ ಸುಧಾರಣಾ…

ತುಳುನಾಡಿನ ‘ಸರೋವರ ಕ್ಷೇತ್ರ’ದಲ್ಲಿ ಮತ್ತೊಂದು ಪವಾಡ..! ಅನಂತಪುರ ಕ್ಷೇತ್ರದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ

ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿತ್ತು. ದೇವಾಲಯದ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ‘ಬಬಿಯಾ’ ಸಾವಿನ ನಂತರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ಬೇಸರ ಕಂಡುಬರುತ್ತಿತ್ತು. ಇದೀಗ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದೆ. ಈ ಹೊಸ ಮೊಸಳೆ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಸುಮಾರು ಒಂದು ವಾರದ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಭಕ್ತರೊಬ್ಬರು ಕಲ್ಯಾಣಿಯಲ್ಲಿ ‘ಮೊಸಳೆ ಕಂಡಂತೆ ಆಯಿತು’ ಎಂದು ಹೇಳಿಕೊಂಡಿದ್ದರು. ಆದರೆ ಯಾರೂ ಇದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಮೊಸಳೆ ಇರುವುದನ್ನು ದೇಗುಲದ ಆಡಳಿತ ಮಂಡಳಿಯೇ ಖಚಿತಪಡಿಸಿದೆ. ದೇವರ ಪ್ರತಿಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ಈ ಕುರಿತು ಸಂತಸ ಹಂಚಿಕೊಂಡಿರುವ ಮಾಜಿ ಸಚಿವ ಸಿ.ಟಿ.ರವಿ, ‘ಸರೋವರ…