ಮಂಗಳೂರು : ಗೌಡ ಸಾರಸ್ವತ ಸಮಾಜದ ಪರಮ ಪೂಜ್ಯ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ಸೆಪ್ಟೆಂಬರ್ 2ರಂದು ಸಮಾಪನಗೊಳ್ಳಲಿದೆ. ಈ ಪ್ರಯುಕ್ತ ಶ್ರೀಗಳವರ ಚಾತುರ್ಮಾಸ ವ್ರತದ ಸೀಮೋಲಂಘನ ಕಾರ್ಯಕ್ರಮ ಜರುಗಲಿದೆ. ಸಂಜೆ 5:30 ಕ್ಕೆ ಶ್ರೀ ವೆಂಕರಮಣ ದೇವಳಕ್ಕೆ ಭೇಟಿ ನೀಡಿ ವೀರ ವೆಂಕಟೇಶ ದೇವರ ದರ್ಶನ ಪಡೆಯಲಿದ್ದು ಬಳಿಕ ಸಮಸ್ತ ಸಮಾಜ ದ ಪರವಾಗಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ಶ್ರೀಗಳವರ ಪಾದ ಪೂಜೆ ನೆರವೇರಲಿದೆ. ಬಳಿಕ ದೇವಳದಲ್ಲಿ ಆಶೀರ್ವಚನ ಕಾರ್ಯಕ್ರಮ ನೆರವೇರಲಿದೆ. ಕೊರೋನಾ ಮಹಾಮಾರಿಯನ್ನು ತಡೆಗಟ್ಟು ವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಹಾಗೂ ನಿಯಮ ಪ್ರಕಾರ ದೇವಳದ ಒಳಗಡೆ 50 ಜನರಿಗಿಂತ ಹೆಚ್ಚು ಜನರು ಪಾಲ್ಗೊಳ್ಳುವ ಅವಕಾಶ ಇಲ್ಲ. ಹಾಗಾಗಿ ದೇವಳದ ಆಡಳಿತ ಮಂಡಳಿ ಮತ್ತು ಅರ್ಚಕರಿಗೆ ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ದೇವಳದ ಒಳಗಡೆ ಪ್ರವೇಶಿಸುವ…
Category: ಆದ್ಯಾತ್ಮ
ರಾಮಮಂದಿರ ಶಿಲಾನ್ಯಾಸ; ಶ್ರೀ ಕ್ಷೇತ್ರ ಪೊಳಲಿಯಲ್ಲಿ ಕೈಂಕರ್ಯ
ಮಂಗಳೂರು: ಬಹುತೇಕ ಹಿಂದೂ ಸಂಘಟನೆಗಳ ಪ್ರಮುಖರೂ ಕೊರೋನಾ ಸಂಕಟದಿಂದಾಗಿ ಅಯೋಧ್ಯೆಯ ಸಮಾರಂಭದಲ್ಲಿ ಭಾಗಿಯಾಗಿಲ್ಲ. ಬದಲಾಗಿ ತಮ್ಮ ಊರುಗಳಲ್ಲೇ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಕೈಂಕರ್ಯ ನೆರವೇರಿಸಲಾಯಿತು. ಪೊಳಲಿ ಕ್ಷೇತ್ರದಲ್ಲಿ ಅಮ್ಮನವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರಾರ್ಥನೆ ನೆರವೇರಿತು. ಬಿಜೆಪಿ ನಾಯಕರಾದ ದೇವಪ್ಪ ಪೂಜಾರಿ, ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ, ಯುವ ಮೋರ್ಚಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಅಶ್ವಥ್, ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ, ಲೋಕೇಶ್ ಭರಣಿ, ನಂದರಾಮ್ ರೈ, ಸುಕೇಶ್ ಚೌಟ, ವಾಮನ ಆಚಾರ್ಯ ಮೊದಲಾದವರು ಈ ಕೈಂಕರ್ಯದಲ್ಲಿ ಭಾಗವಹಿಸಿದ್ದರು. ಇನ್ನೊಂದೆಡೆ, ಮಂಗಳೂರಿನ ಬೆಳ್ಳೂರಿನಲ್ಲಿ ಹಿಂದೂ ಕಾರ್ಯಕರ್ತರು ವೆಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿ ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ…
ಕಾಶೀ ಮಠದಲ್ಲಿ ಋಗುಪಾಕರ್ಮ; ಸಂಯಮಿಂದ್ರ ತೀರ್ಥರಿಂದ ವಿಶೇಷ ಕೈಂಕರ್ಯ
ಮಂಗಳೂರು : ಬಂದರು ನಗರಿಯ ಕೊಂಚಾಡಿಯಲ್ಲಿರುವ ಕಾಶೀ ಮಠದಲ್ಲಿ ಇದೀಗ ವಿಶೇಷ ಉತ್ಸವ ಕಾಲ. ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರು ಈ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಆಚರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು ಆಯೋಜಿತವಾಗಿವೆ. ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಮಂಗಳವಾರ ನೂಲ ಹುಣ್ಣಿಮೆ- ಋಗುಪಾಕರ್ಮ ಪ್ರಯುಕ್ತ ವಿಶೇಷ ಕೈಂಕರ್ಯ ನೆರವೇರಿತು. ಚಾತುರ್ಮಾಸ ನಿರತ ಶ್ರೀಗಳವರು ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರಿಗೆ ವೈದಿಕ ವಿಧಿ ವಿಧಾನದೊಂದಿಗೆ ಪೂಜಿಸಲ್ಪಟ್ಟ ಪವಿತ್ರ ನೂಲನ್ನು ತೊಡಿಸಿದರು. ಬಳಿಕ ನೆರೆದ ಸಮಾಜ ಬಾಂಧವರಿಗೆ ಯಜ್ನೋಪವೀತಧಾರಣೆ ಶ್ರೀಗಳವರ ಸಾರಥ್ಯದಲ್ಲಿ ನೆರವೇರಿತು. ಶ್ರಾವಣ ಶುದ್ಧ ಪೌರ್ಣಮಿ (ನೂಲ ಹುಣ್ಣಿಮೆಯ)ಯಂದು ಆಚರಿಸಲಾಗುವ ಯಜ್ಞೋಪವೀತ ಧಾರಣೆ ನಗರದ ಸೇರಿದಂತೆ ತಾಲೂಕಿನ ಹಲವು ಭಾಗಗಳಲ್ಲಿ ಭಾನುವಾರ…
ಕೊಂಚಾಡಿ ಕಾಶೀ ಮಠದಲ್ಲಿ 9 ದಿನಗಳ ಮಹಾ ವೈಭವ
ಮಂಗಳೂರು : ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಲೋಕ ಕಲ್ಯಾಣಾರ್ಥ ವಿವಿಧ ಕಿಂಕರ್ಯಗಳು ಆರಂಭವಾಗಿವೆ. ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಪ್ರಾರಂಭಗೊಂಡಿದ್ದು ಈ ಸಂದರ್ಭದಲ್ಲಿ ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪಾರಾಯಣಗಳು ಆಯೋಜಿತವಾಗಿವೆ. ಈ ಪುಣ್ಯಪ್ರದ ಶ್ರಾವಣ ಮಾಸದ ಪ್ರಾರಂಭದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರ ಲೀಲೆ – ವೈಭವ , ದೇವರ ಚರಿತ್ರೆ ” ಶ್ರೀ ರಾಮಾಯಣ ಪಾರಾಯಣ ಹಾಗೂ ಪ್ರವಚನ 9 ದಿನಗಳ ಕಾಲ ಜರುಗಲಿರುವುದು. ಆಗಸ್ಟ್ 4ರಂದು ಖುಗೋಪಾಕರ್ಮ, ಆಗಸ್ಟ್ 11ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಇದಲ್ಲದೇ ಆಗಸ್ಟ್ 22-26ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ 1ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ಇದನ್ನೂ…
‘ನಾಗರ ಪಂಚಮಿ’: ಕುಕ್ಕೆ, ಮಂಜೇಶ್ವರದಲ್ಲಿ ಕೈಂಕರ್ಯ ಹೇಗಿತ್ತು ಗೊತ್ತಾ?
ಬೆಂಗಳೂರು: ಆಷಾಢ ನಂತರದ ಮೊದಲ ಹಬ್ಬ ‘ನಾಗರ ಪಂಚಮಿ’ಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ನಾಡಿನ ದೇವಾಲಯಗಳಲ್ಲಿ ಎಂದಿನಂತೆ ಆಚರಣಾ ವೈಭವ ಕಂಡುಬಂದಿಲ್ಲ. ಕೊರೋನಾ ವೈರಾಣು ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ದೇವಾಲಯಗಳ ಅರ್ಚಕರಷ್ಟೇ ಪೂಜಾ ಸಾಂಪ್ರದಾಯಿಕ ವಿಧಾನಗಳನ್ನು ನೆರವೇರಿಸಿದ್ದಾರೆ. ದಕ್ಷಿಣ ಭಾರತದ ಪ್ರಮುಖ ನಾಗ ದೇವತಾ ಕ್ಷೇತ್ರ ಎನ್ನಲಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಯಾವುದೇ ಜಾತ್ರಾ ವೈಭವ ಇರಲಿಲ್ಲ. ಅರ್ಚಕ ವೃಂದ ಸಂಪ್ರಾದಾಯಿಕ ಕೈಂಕರ್ಯವನ್ನಷ್ಟೇ ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ನಂತರ ನಾಗರ ಪಂಚಮಿ ವೈಭವಕ್ಕೆ ಸಾಕ್ಷಿಯಾಗುತ್ತಿದ್ದ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲೂ ನಾಗರ ಪಂಚಮಿ ಅಂಗವಾಗಿ ಸರಳ ರೀತಿಯಲ್ಲಿ ಆಚರಣೆ ನೆರವೇರಿತು. ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗ ದೇವರ ಬಿಂಬಗಳಿಗೆ ಪಂಚಾಮೃತ, ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು. ಮನೆ ಮನೆಗಳಲ್ಲಿ ಕುಟುಂಬ ಸದಸ್ಯರಿಗಷ್ಟೇ ಈ ಬಾರಿಯ…
ಅಮರನಾಥ ಯಾತ್ರೆ; ಪರಮೇಶ್ವರನ ಪ್ರತಿಬಿಂಬ ಈಗ ಹೇಗಿದೆ ಗೊತ್ತಾ?
ದೆಹಲಿ: ಭಾರತ ಚೀನಾ ಗಡಿ ಭಾಗದಲ್ಲಿ ಡ್ರಾಗನ್ ಸೈನಿಕರ ರಗಳೆ ಹೆಚ್ಚಿದ ಹಿನ್ನೆಲೆಯಲ್ಲಿ ಗಡಿ ಕಾಯುವ ಯೋಧರನ್ನು ಭೇಟಿ ಮಾಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ಸೈನಿಕರ ಯೋಗಕ್ಷೇಮ ಆಲಿಸಿ ಅವರನ್ನು ಹುರುರಿದುಂಬಿಸಿದ್ದರು. ಅನಂತರ ಬಿಹಾರ ರೆಜಿಮೆಂಟ್’ನ ಯೋಧರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು ಸೇನಾಧಿಕಾರಿಗಳ ಜೊತೆ ಅಮನಾಥ ಕ್ಷೇತ್ರಕ್ಕೂ ತೆರಳಿ ಪರಮೇಶ್ವರನ ದರ್ಶನ ಪಡೆದರು. ಆ ಸಂದರ್ಭದ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. Raksha Mantri Shri @rajnathsingh met the soldiers from Bihar Regiment at Lukung during his visit to forward areas in Ladakh. He had a brief interaction with them. pic.twitter.com/81YS0T960a — रक्षा मंत्री कार्यालय/ RMO India (@DefenceMinIndia) July 19, 2020…
ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ವೀಡಿಯೋ ಕುತೂಹಲ
ಕುಡ್ಲದ ಕುವರಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅನೇಕ ದಿನಗಳ ನಂತರ ಮತ್ತೆ ಸುದ್ದಿಗೆ ಬಂದಿದ್ದಾರೆ. ಅವರು ಸಾನಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿರುವ ವಿಚಾರದಿಂದಾಗಿಯೇ ಅವರು ಸುದ್ದಿಯ ಮುನ್ನಲೆಗೆ ಬಂದಿರೋದು. ಅಂದ ಹಾಗೆ ಅವರು ಅಮ್ಮಂದಿರ ದಿನದ ಅಂಗವಾಗಿ ಹಂಚಿಕೊಂಡ ಸಂಗತಿ ಸಾಕಷ್ಟು ಮಂದಿಗೆ ಹಿತವೆನಿಸಿದಂತಿದೆ. ಹಾಗಾಗಿ ಬಹುಜನರು ಶಿಲ್ಪಾ ಶೆಟ್ಟಿ ಸಂದೇಶಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ತಾಯಂದಿರ ದಿನದಂದು ನಟಿ ಶಿಲ್ಪಾ ಶೆಟ್ಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೋ ತುಣುಕೊಂದನ್ನು ಪೋಸ್ಟ್ ಮಾಡಿದ್ದಾರೆ. ಮಗಳು ಸಮಿಷಾ ಜೊತೆಗಿರುವ ಹಾಗೂ ಮಗ ವಯಾನ್ ಬರೆದಿರುವ ಸಂದೇಶವನ್ನೊಳಗೊಂಡ ವೀಡಿಯೋ ತುಣುಕು ಇದಾಗಿದೆ. ಇದು ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ.. ಹಳ್ಳಿ ಶೈಲಿಯ ‘ಚಿಕನ್ ಚಾಪ್ಸ್’ಗೆ ಟೇಸ್ಟೀ ಟಚ್
ಕೊರೋನಾ ಓಡಿಸಲು ಅಂದು ‘ಚಪ್ಪಾಳೆ’, ಇದೀಗ ‘ನವದೀಪ’.. ಏನಿದು ವಿಶೇಷ ಗೊತ್ತಾ?
ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಜನರು ದೇವಾಲಯ, ಮಂದಿರಗಳಿಗೆ ಹೋಗುವಂತಿಲ್ಲ. ಇದೇ ಸಂದರ್ಭದಲ್ಲಿ ಹಿಂದೂ ಸಂಘಟನೆಗಳು ಹೊಸ ಅಭಿಯಾನಕ್ಕೆ ಮುನ್ನುಡಿ ಬರೆದಿವೆ. ಕೆಲ ದಿನಗಳ ಹಿಂದೆ ಕೊರೋನಾ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದರು. ಅಂದು ದಿನವಿಡೀ ಮನೆಯಲ್ಲೇ ಇದ್ದು, ಸಂಜೆ ಚಪ್ಪಾಳೆ ತಟ್ಟಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಸೇನಾನಿಗಳಿಗೆ ಧನ್ಯವಾದ ಹೇಳುವಂತೆ ಕರೆ ನೀಡಿದ್ದರು. ಅಂದು ದೇಶವ್ಯಾಪಿ ಚಪ್ಪಾಳೆಯ ಸದ್ದಷ್ಟೇ ಅಲ್ಲ, ಹಲವರು ಶಂಖನಾದ, ಘಂಟೆ-ಜಾಗಟೆಗಳನ್ನು ಭಾರಿಸಿ ಹೊಸದೊಂದು ತರಂಗ ಸೃಷ್ಟಿಸಿದ್ದರು. ಇದೀಗ ರಾಮನವಮಿ ಸರದಿ. ಈ ಬಾರಿಯ ರಾಮನವಮಿಯನ್ನು ಕೊರೋನಾ ಸಂಹಾರಕ್ಕೆ ಮೀಸಲಿಡಲು ಆಸ್ತಿಕ ಸಮುದಾಯ ಸಲಹೆ ಮಾಡಿದೆ. ಹಾಗಾಗಿ ಹಿಂದೂ ಸಂಘಟನೆಗಳು ರಾಮ ನವಮಿಯ ದಿನವಾದ ಗುರುವಾರ ಸಂಜೆ ‘ನವದೀಪ’ ಕೈಂಕರ್ಯ ನೆರವೇರಿಸುವಂತೆ ಕರೆ ನೀಡಿವೆ. ಇದನ್ನೂ ಓದಿ.. ಕೊರೋನಾ…
ರಾಮಚಂದ್ರಾಪುರ ಮಠದಲ್ಲಿ ಕುತೂಹಲದ ಕೇಂದ್ರಬಿಂದುವಾದ ಜಶೋದಾ ಬೆನ್ ಮೋದಿ
ಶಿವಮೊಗ್ಗ: ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ಅವರು ರಾಜ್ಯದ ಪ್ರಮುಖ ಮಠವಾಗಿರುವ ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿ ಎಲ್ಲರ ಕುತೂಹಲದ ಕೇಂದ್ರಬಿಂದುವಾದರು. ರಾಮಚಂದ್ರಾಪುರಮಠದ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಕೋಟಿ ವಿಷ್ಣು ಸಹಸ್ರನಾಮ ಪಠಣ ಸಮರ್ಪಣೆ ಕಾರ್ಯಕ್ರಮದಲ್ಲಿ ಜಶೋದಾ ಬೆನ್ ಭಾಗಿಯಾಗಿದ್ದರು. ಛತ್ರ ಸಮರ್ಪಣೆ, ಸೋಪಾನಮಾಲೆ ನಿರ್ಮಾಣಕ್ಕೆ ಶಿಲಾನ್ಯಾಸ, ಗೋ ಬಂಧಮುಕ್ತಿ, ಗೋಶಾಲೆ ಲೋಕಾರ್ಪಣೆ, ಗೋ ಆಸ್ಪತ್ರೆ ಉದ್ಘಾಟನೆ, ಗೋ ಮ್ಯೂಸಿಯಂ ಲೋಕಾರ್ಪಣೆಯ ಕೃಷ್ಣಾರ್ಪಣ್ ಧಾರ್ಮಿಕ ಸಭೆಯಲ್ಲೂ ಅವರು ಪಾಲ್ಗೊಂಡಿದ್ದರು. ಇದೇ ವೇಳೆ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ರಜತ ಛತ್ರ ಸಮರ್ಪಣೆ ಮೂಲಕ ತಮ್ಮ ವೈಯಕ್ತಿಕ ಹರಕೆಯನ್ನು ತೀರಿಸಿದರು. ಈ ವೇಳೆ ಮಾತನಾಡಿದ ಜಶೋದಾ ಬೆನ್, ಸಾವಿರಾರು ಭಕ್ತರ ನಡುವೆ ದೇವರ ಆರಾಧನೆ ಮಾಡುವ ಈ ಕ್ಷಣ ನನ್ನ ಪಾಲಿಗೆ ಧನ್ಯತೆಯ ಕ್ಷಣ ಎಂದರು.
ದೇಗುಲಗಳ ಮೂಲಕ ಗೋವುಗಳ ಪಾಲನೆ, ಆರಾಧನೆ; ಸಚಿವ ಪೂಜಾರಿ ಕೈಂಕರ್ಯಕ್ಕೆ ಪ್ರಶಂಶೆ
(ಜಯ ಪ್ರಕಾಶ್) ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಪೂಜೆ ಪುನಸ್ಕಾರ, ವೈದಿಕ ವಿಧಿ ವಿಧಾನಗಳಿಗಷ್ಟೇ ದೇವಾಲಯಗಳು ಸೀಮಿತವಾಗಿಲ್ಲ. ಹಿಂದೂ ಸಂಸ್ಕೃತಿ-ಪರಂಪರೆ ಉಳಿಸುವಲ್ಲೂ ಪ್ರಮುಖ ಪಾತ್ರ ವಹಿಸಲು ಈ ಧಾರ್ಮಿಕ ಕೇಂದ್ರ ಸಜ್ಜಾಗುತ್ತಿವೆ. ಸಾಮಾನ್ಯವಾಗಿ ದೇವಾಲಯ ಬೆರಳೆಣಿಕೆಯ ದೇವರ ಮೂರ್ತಿ ಪೂಜೆಗೆ ಸೀಮಿತವಾಗುವುದುಂಟು. ಇದೀಗ ಆ ದೇವಾಲಯಗಳು ಮುಕ್ಕೋಟಿ ದೇವರನ್ನು ಹೊತ್ತುಕೊಂಡಿರುವ ಗೋವುಗಳ ಆರಾಧನೆಯ ತಾಣವಾಗಲಿದೆ. ಇದಕ್ಕೆಂದು ವೇದಿಕೆ ಕಲ್ಪಿಸಿದ್ದಾರೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ. ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕ್ರಮ ಆರಂಭಿಸಿದ್ದಾರೆ. ಪ್ರಕೃತಿಯನ್ನು ಆರಾಧಿಸುವುದು ಹಿಂದೂ ಸಂಸ್ಕೃತಿಯ ಒಂದು ಭಾಗ. ಅದರಲ್ಲೂ ಹಾಲು ನೀಡುವ ಹಸುಗಳು ಹಿಂದೂಗಳ ಪಾಲಿಗೆ ಜೀವಂತ ದೈವ. ಆದರೆ ಇದೇ ಗೋವುಗಳು ಕಟುಕರ…