ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಬೆಂಗಳೂರಿನ ವೈಟ್ ಫೀಲ್ಡ್ ಉಪವಿಭಾಗದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ರೌಡಿ ಹಿನ್ನೆಲೆಯ 80ಕ್ಕೂ ಹೆಚ್ಚು ಮಂದಿಯನ್ನು ನಿದ್ದೆಯಿಂದ ಎಬ್ಬಿಸಿ ಕೊಟ್ಟ ಎಚ್ಚರಿಕೆ ಭೂಗತ ಲೋಕದಲ್ಲಿ ಸಂಚಲನ ಸೃಷ್ಟಿಸಿದೆ. ವೈಟ್ ಫೀಲ್ಡ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶುಕ್ರವಾರ (17.07.2026) ರಂದು ರಾತ್ರಿ 11-00 ಗಂಟೆಯಿಂದ ಬೆಳಗಿನ ಜಾವ 4-00 ಗಂಟೆಯ ವರೆಗೂ ಪೊಲೀಸ್ ಕಾರ್ಯಾಚರಣೆ ನಡೆದಿದೆ. ವೈಟ್ ಫೀಲ್ಡ್ ಉಪವಿಭಾಗದ ಅಧಿಕಾರಿ ಸಿಬ್ಬಂದಿ ಈ ವಿಶೇಷ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, 80 ರೌಡಿ ಆಸಾಮಿಗಳು, 25 ಜನ ಎಂಒಬಿ ಆಸಾಮಿಗಳು, 29 ಟ್ರಬಲ್ ಮಾಂಗರ್ಸ್ ಗಳ ಅಡ್ಡೆಯನ್ನು ಪತ್ತೆ ಮಾಡಿ ಪರಿಶೀಲನೆ…
Category: ರಾಜ್ಯ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದವರಾದ ಚೆನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ರೇವಣ್ಣ, ಬಾಲಕೃಷ್ಣ, ರಮೇಶ್ ಗೌಡ, ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ, ಅನಸೂಯಾ ಎಂಬ ಇಬ್ಬರು ಪುತ್ರಿಯರಿದ್ದಾರೆ. ದೇವೇಗೌಡರ ರಾಜಕೀಯ ಜೀವನದ ಉದ್ದಕ್ಕೂ ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಚೆನ್ನಮ್ಮ, ಆದರ್ಶ ಗೃಹಿಣಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2001ರಲ್ಲಿ ಹರದನಹಳ್ಳಿಯ ದೇವಸ್ಥಾನದಿಂದ ವಾಪಸಾಗುವ ವೇಳೆ ಅವರ ಮೇಲೆ ಆ್ಯಸಿಡ್…
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ಆತಂಕಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಾರದು, ಆತ್ಮಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಛಾತ್ರೋನ್ ಕಿ ಗೂಂಜ್ (ವಿದ್ಯಾರ್ಥಿಗಳ ಧ್ವನಿ) ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಅವರ ನೇತೃತ್ವದಲ್ಲಿ ಶನಿವಾರ ನಗರದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೇಶದ ವಿದ್ಯಾರ್ಥಿ ಸಮೂಹಕ್ಕೆ ನ್ಯಾಯ ದೊರಕುವವರೆಗೂ, ಸುಧಾರಿತ ಶಿಕ್ಷಣ ವ್ಯವಸ್ಥೆ ಸ್ಥಾಪನೆಯಾಗುವವರೆಗೂ ಹೋರಾಡುವುದಾಗಿ ನಿರ್ಣಯ ಕೈಗೊಳ್ಳುವ ಜೊತೆಗೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಅಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳಬಾರದೆಂದು ಜಾಗೃತಿ ಮೂಡಿಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ನೀಟ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ರಾಜ್ಯಗಳಿಗೆ…
ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
ತುಮಕೂರು: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಪಾವಗಡ-ಆಂಧ್ರ ಸಂಪರ್ಕಿಸುವ ಎಂಟು ಗಡಿ ಮಾರ್ಗಗಳಲ್ಲಿ ಆರೋಗ್ಯ ಇಲಾಖೆ ಕೋವಿಡ್ ತಪಾಸಣೆ ಆರಂಭಿಸಿದ್ದು, ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮಾತನಾಡಿ, ನೆರೆಯ ಅನಂತಪುರ ಜಿಲ್ಲೆಯಲ್ಲಿ ಕೋವಿಡ್ನಿಂದ ಸಾವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು. ಗಡಿ ಮೂಲಕ ಬರುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣ ಐಸೋಲೇಟ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ತುಮಕೂರು ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ಪ್ರಕರಣಗಳೂ ವರದಿಯಾಗಿರುವ ಹಿನ್ನೆಲೆಯಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹಲವು ವರ್ಷಗಳಿಂದ ಸ್ವಚ್ಛಗೊಳಿಸದ ನೀರಿನ ಟ್ಯಾಂಕ್ಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪಾವಗಡದ ನಾಗಲಮಡಿಕೆ,…
ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, ಜುಲೈ 18 ಮತ್ತು 19ರಂದು ಕರಾವಳಿ ಭಾಗದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ
ಬೆಂಗಳೂರು: ಭಾರತದ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆರಂಭವಾದ ಎರಡು ದಿನಗಳ ಬ್ರಿಕ್ಸ್ ರಾಷ್ಟ್ರೀಯ ಮಾನದಂಡ ಸಂಸ್ಥೆಗಳ (NSB) ಸಭೆಯಲ್ಲಿ, ಪ್ರಮಾಣೀಕರಣ ಕ್ಷೇತ್ರದಲ್ಲಿ ಸಹಕಾರ ವೃದ್ಧಿಗೆ ಸಂಬಂಧಿಸಿದ ತಿಳುವಳಿಕೆ ಒಪ್ಪಂದ (MoU) ಕುರಿತು ಸದಸ್ಯ ರಾಷ್ಟ್ರಗಳು ಒಮ್ಮತಕ್ಕೆ ಬಂದಿವೆ. ಭಾರತೀಯ ಮಾನದಂಡಗಳ ಬ್ಯೂರೋ (BIS) ಆಯೋಜಿಸಿರುವ ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಮಾನದಂಡ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದು, ವ್ಯಾಪಾರಕ್ಕೆ ತಾಂತ್ರಿಕ ಅಡೆತಡೆಗಳನ್ನು ಕಡಿಮೆ ಮಾಡುವುದು, ಗುಣಮಟ್ಟದ ಮೂಲಸೌಕರ್ಯ ಬಲಪಡಿಸುವುದು ಹಾಗೂ ಸಮನ್ವಯಿತ ಮಾನದಂಡಗಳನ್ನು ರೂಪಿಸುವ ಕುರಿತು ಚರ್ಚೆ ನಡೆಸಿದರು. ಸಭೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಭಿವೃದ್ಧಿಶೀಲ ರಾಷ್ಟ್ರಗಳ ಅಗತ್ಯಗಳನ್ನು ಪ್ರತಿಬಿಂಬಿಸುವ ಪಾರದರ್ಶಕ ಹಾಗೂ ಒಮ್ಮತದ ಆಧಾರಿತ ಜಾಗತಿಕ ಮಾನದಂಡಗಳಿಗೆ ಭಾರತ ಬದ್ಧವಾಗಿದೆ ಎಂದು ಹೇಳಿದರು. ಬ್ರಿಕ್ಸ್ ಅಧ್ಯಕ್ಷತೆಯ “ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆ” ಧ್ಯೇಯದಡಿ ನಡೆಯುತ್ತಿರುವ ಈ ಸಭೆಯಲ್ಲಿ, ಗುಣಮಟ್ಟದ ಮೂಲಸೌಕರ್ಯ ಬಲಪಡಿಸುವುದು, ಗ್ರಾಹಕರ ರಕ್ಷಣೆ…
ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ
ಬೆಂಗಳೂರು: ದೇಶದ ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಸುರಕ್ಷಿತಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಕಾಲ’ ಉಪಕ್ರಮದಡಿ ‘ವೈಟ್ ರ್ಯಾಬಿಟ್ ತಂತ್ರಜ್ಞಾನ’ ಆಧಾರಿತ ಭಾರತೀಯ ಪ್ರಮಾಣಿತ ಸಮಯ (IST) ವಿತರಣಾ ಪ್ರದರ್ಶನ ಜಾಲಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜಕ್ಕೂರಿನ ಪ್ರಾದೇಶಿಕ ಉಲ್ಲೇಖ ಮಾನದಂಡಗಳ ಪ್ರಯೋಗಾಲಯದಲ್ಲಿ ಚಾಲನೆ ನೀಡಿದರು. ಈ ಯೋಜನೆಯು ಜಿಪಿಎಸ್ ಸೇರಿದಂತೆ ವಿದೇಶಿ ಸಮಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ದೇಶಾದ್ಯಂತ ಏಕರೂಪದ, ನಿಖರ ಮತ್ತು ಸುರಕ್ಷಿತ ಸಮಯ ಸಿಂಕ್ರೊನೈಸೇಶನ್ ವ್ಯವಸ್ಥೆ ರೂಪಿಸುವ ಗುರಿ ಹೊಂದಿದೆ. ಈ ವ್ಯವಸ್ಥೆಯಿಂದ ಬ್ಯಾಂಕಿಂಗ್, ಷೇರುಪೇಟೆ, ಡಿಜಿಟಲ್ ಪಾವತಿ, ದೂರಸಂಪರ್ಕ, ರಕ್ಷಣಾ ವಲಯ ಹಾಗೂ ರಾಷ್ಟ್ರೀಯ ವಿದ್ಯುತ್ ಜಾಲಕ್ಕೆ ವಿಶ್ವಾಸಾರ್ಹ ಸಮಯ ಉಲ್ಲೇಖ ದೊರೆಯಲಿದ್ದು, ಸೈಬರ್ ದಾಳಿ ಹಾಗೂ ಡೇಟಾ ತಿರುಚುವಿಕೆ ಸೇರಿದಂತೆ ಭದ್ರತಾ ಅಪಾಯಗಳನ್ನು ತಡೆಯಲು ನೆರವಾಗಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಗ್ರಾಹಕ…
ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ
ನವದೆಹಲಿ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸಿದ ಸ್ವತಂತ್ರ ಮೊಬೈಲ್ ನೆಟ್ವರ್ಕ್ ಗುಣಮಟ್ಟ ಪರೀಕ್ಷೆಯ ವರದಿಯನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಪ್ರಕಟಿಸಿದ್ದು, ವಿವಿಧ ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಮೇ 18ರಿಂದ 21ರವರೆಗೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಭಟ್ಕಳ, ದಾಂಡೇಲಿ, ಹಳಿಯಾಳ, ಯಲ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಏರ್ಟೆಲ್, ಬಿಎಸ್ಎನ್ಎಲ್, ರಿಲಯನ್ಸ್ ಜಿಯೋ ಹಾಗೂ ವೊಡಾಫೋನ್ ಐಡಿಯಾ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಡೌನ್ಲೋಡ್ ವೇಗದಲ್ಲಿ ರಿಲಯನ್ಸ್ ಜಿಯೋ ಸರಾಸರಿ 229.12 Mbps ದಾಖಲಿಸಿ ಮೊದಲ ಸ್ಥಾನ ಪಡೆದಿದೆ. ಬಳಿಕ ಏರ್ಟೆಲ್ 109.02 Mbps, ವೊಡಾಫೋನ್ ಐಡಿಯಾ 25.04 Mbps ಹಾಗೂ ಬಿಎಸ್ಎನ್ಎಲ್ 5.73 Mbps ವೇಗ ದಾಖಲಿಸಿವೆ. ಅಪ್ಲೋಡ್ ವೇಗದಲ್ಲಿ ಏರ್ಟೆಲ್ 26.02 Mbps ದಾಖಲಿಸಿ ಅಗ್ರಸ್ಥಾನ ಪಡೆದಿದ್ದು, ಜಿಯೋ 18.19 Mbps, ವೊಡಾಫೋನ್ ಐಡಿಯಾ 10.78 Mbps ಹಾಗೂ…
ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ
ಮಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 5.20 ಕೋಟಿ ರೂ. ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಡ್ರಗ್ಸ್ ಪೆಡಲರುಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆ ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 25 ರಂದು ಅಣ್ಣಪ್ಪ ಸ್ವಾಮಿ ಎಂಬ ವ್ಯಕ್ತಿಯನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಆತನ ವಿಚಾರಣೆಯ ಸಮಯದಲ್ಲಿ, ಆತನಿಗೆ ಮಾದಕವಸ್ತು ಪೂರೈಕೆದಾರರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಮತ್ತೆ ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮುಹಮ್ಮದ್ ಅಲ್ಫಾಝ್ (28 ವರ್ಷ) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕನಂದ ನಗರದ ಮುಹಮ್ಮದ್ ಮುಸ್ತಫ (28 ವರ್ಷ) ಎಂಬಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು…
‘ಬಿಡದಿ ಟೌನ್ಶಿಪ್ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಕೈ ಬಿಡದ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ…
