ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಬರ ತಾಲೂಕುಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿದೆ. ಈ ಕುರಿತು ಬಿಜೆಪಿ ತನ್ನ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್‌ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಲೇ ಬಂದಿದೆ ಎಂದು ಆರೋಪಿಸಿದೆ. ಇದೀಗ ಬರಪೀಡಿತ ತಾಲೂಕುಗಳ ಘೋಷಣೆಯಲ್ಲೂ ತಾರತಮ್ಯ ಎಸಗಲಾಗುತ್ತಿದೆ ಎಂದು ಪಕ್ಷ ವಾಗ್ದಾಳಿ ನಡೆಸಿದೆ. ‘190ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ’ ಮುದ್ದೇಬಿಹಾಳ ಕಾಂಗ್ರೆಸ್‌ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಸರ್ಕಾರದ ಬರ ಘೋಷಣೆ ಹಾಗೂ ಆರ್ಥಿಕ ಸ್ಥಿತಿಯ ಬಗ್ಗೆ ಸ್ವಪಕ್ಷದ ಶಾಸಕರೇ ಪ್ರಶ್ನೆ ಎತ್ತಿದ್ದಾರೆ ಎಂದು ಹೇಳಿದೆ. ಬರದಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕಾದ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ಬರಪೀಡಿತ…

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬರ ತಾಲೂಕುಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುದ್ದೇಬಿಹಾಳ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯವಾಗಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವುದು, ಬರ ನಿರ್ವಹಣೆ ಹಾಗೂ ರೈತರ ನೆರವಿನ ವಿಚಾರದಲ್ಲಿ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ವಿಜಯೇಂದ್ರ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಟೀಕಿಸಿದ್ದಾರೆ. ‘190ಕ್ಕೂ ಹೆಚ್ಚು ಬರ ತಾಲೂಕುಗಳಿದ್ದರೂ 101 ಮಾತ್ರ ಘೋಷಣೆ’ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಹೀಗಾಗಿ ಸರ್ಕಾರ ಎಲ್ಲ ವಿಚಾರಗಳಲ್ಲೂ ಪಾರದರ್ಶಕತೆಯನ್ನು ಗಾಳಿಗೆ ತೂರಿ, ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ರಾಜ್ಯದಲ್ಲಿ 190ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿದ್ದರೂ ಸರ್ಕಾರ ಕೇವಲ 101 ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಈ ಬಗ್ಗೆ…

ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ.. ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’. ಯಾಕೆಂದರೆ ಇವರದ್ದು ಅರ್ಥಪೂರ್ಣ ಅನುಭವ ಕಥನ. ಬೆಂಗಳೂರು: ಪೊಲೀಸ್ ಸಮವಸ್ತ್ರ ಕಂಡಾಗ ಸಾಮಾನ್ಯವಾಗಿ ನೆನಪಾಗುವುದು ಶಿಸ್ತು, ಕಾನೂನು ಮತ್ತು ಕಠಿಣ ಕ್ರಮ. ಆದರೆ ಅದೇ ಸಮವಸ್ತ್ರದೊಳಗೆ ಮಿಡಿಯುವ ಮಾನವೀಯ ಹೃದಯವೊಂದಿದೆ. ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ನಿಷ್ಠುರತೆ ತೋರುವ ಪೊಲೀಸ್ ಅಧಿಕಾರಿ, ಮತ್ತೊಂದೆಡೆ ಯುವಜನರ ಮುಂದೆ ನಿಂತು ಬದುಕಿನ ಪಾಠ ಹೇಳುವ ಆತ್ಮೀಯ ಶಿಕ್ಷಕಿಯಾಗಬಹುದು ಎಂಬುದಕ್ಕೆ ರೀನಾ ಸುವರ್ಣ ಅವರ ಸೇವಾ ಪಯಣ ಒಂದು ಉದಾಹರಣೆ. ಹಿರಿಯ KSPS ಅಧಿಕಾರಿ ರೀನಾ ಸುವರ್ಣ ಅವರು ಪೊಲೀಸ್ ಇಲಾಖೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಕಳ್ಳರ ಬೆನ್ನತ್ತುವುದರಿಂದ ಹಿಡಿದು ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು, ಮಾದಕ ವಸ್ತುಗಳ ಜಾಲವನ್ನು ಭೇದಿಸುವುದರಿಂದ ಹಿಡಿದು ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದ ತುರ್ತು ಸಂದರ್ಭಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವುದು—ಅವರ ಸೇವೆಯ ಹಲವು…

ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

ಬೆಂಗಳೂರು: ರಾಜಧಾನಿಯ ಎಲ್ಲಾ ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ತುರ್ತು ಆರೋಗ್ಯ ಸೇವೆಗಾಗಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಬಿಎಂಟಿಸಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ರಾಮಮೂರ್ತಿನಗರದಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಹಿರಿಯ ನಾಗರಿಕರೊಬ್ಬರು ಬಸ್‌ ನಿಲ್ದಾಣ ತಲುಪುತ್ತಿದ್ದಂತೆ ಅಪಸ್ಮಾರದಿಂದ ಕುಸಿದು ಬಿದ್ದಿದ್ದರು. ಆದರೆ, ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ ಅಥವಾ ತಕ್ಷಣದ ವೈದ್ಯಕೀಯ ನೆರವು ಲಭ್ಯವಿರಲಿಲ್ಲ. ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟಿದ್ದು, ಚಿಕಿತ್ಸೆ ದೊರೆಯಲು 30 ನಿಮಿಷಕ್ಕೂ ಹೆಚ್ಚು ಕಾಲ ವಿಳಂಬವಾಗಿದೆ ಎಂದು ವರದಿಯಾಗಿತ್ತು. ಸುದ್ದಿ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಅಕ್ಟೋಬರ್‌ 12ರೊಳಗೆ ವಿವರಣೆ ನೀಡುವಂತೆ ಬಿಎಂಟಿಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಂತಿನಗರ ಬಸ್‌…

ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

ಚಿತ್ರದುರ್ಗ: ಐದಾರು ದಶಕಗಳಿಂದ ಬಯಲುಸೀಮೆ ಜನರು ಕಂಡಿದ್ದ ಭದ್ರಾ ಮೇಲ್ದಂಡೆ ಯೋಜನೆಯ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಇಡಲಾಗಿದೆ. ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಅಣೆಕಟ್ಟಿನ ಇನ್‌ಟೇಕ್ ಪಾಯಿಂಟ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಪೂಜೆ ನೆರವೇರಿಸಿ ನೀರು ಹರಿವಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಭದ್ರಾ ಮೇಲ್ದಂಡೆ ಯೋಜನೆ ಬಯಲುಸೀಮೆಯ ಜನರ ದಶಕಗಳ ಕನಸಾಗಿದ್ದು, ಇಂದು ಇತಿಹಾಸದಲ್ಲಿ ನೆನಪಿಡಬೇಕಾದ ದಿನವಾಗಿದೆ ಎಂದರು. ಯೋಜನೆಗೆ ಮುನ್ನುಡಿ ಬರೆದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ, ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಸೇರಿದಂತೆ ಯೋಜನೆಗಾಗಿ ಹೋರಾಡಿದ ರೈತರು, ಸ್ವಾಮೀಜಿಗಳು, ಜನಪ್ರತಿನಿಧಿಗಳು ಹಾಗೂ ಎಲ್ಲರ ಕೊಡುಗೆಯನ್ನು ಸ್ಮರಿಸಿದರು. ಯೋಜನೆಯಡಿ ತುಂಗಾದಿಂದ 17.4 ಟಿಎಂಸಿ ಹಾಗೂ ಭದ್ರಾದಿಂದ…

ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

ನವದೆಹಲಿ: ಉದ್ಯಮಗಳ ಆರ್ಥಿಕ ಒತ್ತಡ ನಿವಾರಣೆ ಹಾಗೂ ಕಾರ್ಯನಿರತ ಬಂಡವಾಳದ ಲಭ್ಯತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ (ECLGS) 5.0 ಅಡಿಯಲ್ಲಿ ₹2.55 ಲಕ್ಷ ಕೋಟಿವರೆಗೆ ಹೆಚ್ಚುವರಿ ಸಾಲ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. 2026ರ ಮೇ 5ರಂದು ಅನುಮೋದನೆ ಪಡೆದಿರುವ ಈ ಯೋಜನೆಯನ್ನು ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟಿ ಕಂಪನಿ (NCGTC) ಅನುಷ್ಠಾನಗೊಳಿಸುತ್ತಿದೆ. ಅರ್ಹ ಉದ್ಯಮಗಳಿಗೆ ಹೆಚ್ಚುವರಿ ಸಾಲ ನೀಡಲು ಸದಸ್ಯ ಸಾಲದಾತ ಸಂಸ್ಥೆಗಳಿಗೆ ಸರ್ಕಾರದ ಬೆಂಬಲಿತ ಕ್ರೆಡಿಟ್ ಗ್ಯಾರಂಟಿ ಒದಗಿಸಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಉದ್ಯಮಗಳ ದ್ರವ್ಯತೆ ಸಮಸ್ಯೆ ನಿವಾರಣೆ, ವ್ಯವಹಾರ ನಿರಂತರತೆ, ಉದ್ಯೋಗ ರಕ್ಷಣೆ ಹಾಗೂ ದೇಶೀಯ ಪೂರೈಕೆ ಸರಪಳಿ ನಿರ್ವಹಣೆಗೆ ಈ ಯೋಜನೆ ನೆರವಾಗಲಿದೆ. MSMEಗಳಿಗೆ ಶೇ.100 ಗ್ಯಾರಂಟಿ; ₹100 ಕೋಟಿವರೆಗೆ ಹೆಚ್ಚುವರಿ ಸಾಲ ECLGS 5.0 ಅಡಿಯಲ್ಲಿ MSMEಗಳು,…

‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

ಬೆಂಗಳೂರು: ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ‘ಅಕ್ಕ ರಜತ ಮಹೋತ್ಸವದ ವಿಶ್ವ ಕನ್ನಡ ಸಮ್ಮೇಳನ’ವನ್ನು ಉದ್ದೇಶಿಸಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ರಾಜ್ಯವನ್ನಾಗಿ ರೂಪಿಸುವ ಕನಸನ್ನು ಹಂಚಿಕೊಂಡರು. ‘I have a dream for Karnataka’ ಎಂದು ತಮ್ಮ ಭಾಷಣ ಆರಂಭಿಸಿದ ಅವರು, ಕರ್ನಾಟಕವನ್ನು ಕೇವಲ ಭಾರತದ ಪ್ರಮುಖ ರಾಜ್ಯವನ್ನಾಗಿ ಮಾತ್ರವಲ್ಲದೆ, ಜಗತ್ತು ಗುರುತಿಸುವ, ಮೆಚ್ಚುವ ಹಾಗೂ ಜಾಗತಿಕ ಅವಕಾಶಗಳಿಗೆ ಕೇಂದ್ರವಾಗುವ ರಾಜ್ಯವನ್ನಾಗಿ ಕಟ್ಟಬೇಕು ಎಂಬುದು ತಮ್ಮ ಕನಸು ಎಂದು ಹೇಳಿದರು. ಬೆಂಗಳೂರು ಹಾಗೂ ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ಬೆಳೆಸುವುದು, ಹೊಸ ಅವಕಾಶಗಳನ್ನು ಸೃಷ್ಟಿಸುವುದು, ಯುವಕರ ಭವಿಷ್ಯವನ್ನು ಭದ್ರಗೊಳಿಸುವುದು ಮತ್ತು ಆಡಳಿತವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವುದು ತಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದು ತಿಳಿಸಿದರು. ಸೆಪ್ಟೆಂಬರ್ 10ಕ್ಕೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಳ್ಳಲಿವೆ ಎಂದರು. ‘ಕನ್ನಡಿಗ ಎಂದರೆ…

ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ (Teacher) ಎಂಬ ಗೌರವಸೂಚಕ ಪದವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದ ಅವರು, ‘Tr.’ ಎಂಬುದು ಶಿಕ್ಷಕರ ನಿಸ್ವಾರ್ಥ ಸೇವೆಗೆ ಸಲ್ಲಿಸುವ ಗೌರವದ ಸಂಕೇತ ಎಂದು ಹೇಳಿದರು. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ವ್ಯಕ್ತಿಯ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಇದೆ. ಕರ್ನಾಟಕದ ಸುಮಾರು 4.5 ಲಕ್ಷ ಶಿಕ್ಷಕರು ಸೇರಿದಂತೆ ದೇಶದ ಒಂದು ಕೋಟಿಗೂ ಅಧಿಕ ಶಿಕ್ಷಕರು ಪ್ರತಿನಿತ್ಯ ಮಕ್ಕಳ ಜ್ಞಾನ, ವ್ಯಕ್ತಿತ್ವ ಮತ್ತು ಭವಿಷ್ಯ ರೂಪಿಸುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ವೈದ್ಯರು, ಎಂಜಿನಿಯರ್‌ಗಳು, ರೈತರು, ಅಧಿಕಾರಿಗಳು, ಉದ್ಯಮಿಗಳು ಹಾಗೂ ಸಮಾಜವನ್ನು ಮುನ್ನಡೆಸುವ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು…

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ತಡೆಯಲು ಶಿಕ್ಷಕರು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಜ್ಞಾನ ನೀಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ, ಅವರ ಉಜ್ವಲ ಭವಿಷ್ಯ ರೂಪಿಸುವ ಮೂಲಕ ಸಮಾಜವನ್ನು ಸುಧಾರಿಸುವ ಮಹತ್ತರ ಹೊಣೆಗಾರಿಕೆಯೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಬಹುತ್ವದ ರಾಷ್ಟ್ರವಾಗಿದ್ದು, ವಿವಿಧ ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ನಡುವೆ ಸೌಹಾರ್ದತೆ ಕಾಪಾಡುವುದು ಎಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದ ವೇಳೆ ನಡೆದ ಮಾನವೀಯತೆಯ ಘಟನೆಯನ್ನು ಉಲ್ಲೇಖಿಸಿದ ಹರಿಪ್ರಸಾದ್, ನಡೆಯಲು ಸಾಧ್ಯವಾಗದೆ ಬಂದಿದ್ದ ಮಹಿಳೆಯೊಬ್ಬರಿಗೆ ಮತ್ತೊಬ್ಬ ಮಹಿಳೆ ಕುರ್ಚಿ ನೀಡಿದ ಪ್ರಸಂಗವನ್ನು ಶ್ಲಾಘಿಸಿದರು. ಇಂತಹ ಮಾನವೀಯ ಮೌಲ್ಯಗಳೇ ಸಮಾಜವನ್ನು ಬಲಪಡಿಸುತ್ತವೆ. ಧರ್ಮಾಂಧತೆ ಮತ್ತು ಅಂಧಭಕ್ತಿಯ ನಡುವೆ ಸೌಹಾರ್ದತೆ ಹಾಗೂ ಮಾತೃ ಹೃದಯ ಹೊಂದಿರುವ ಲಕ್ಷಾಂತರ ಜನರು…

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನವದೆಹಲಿ: ಲಡಾಖ್‌ನ ಪ್ರಮುಖ ಬೇಡಿಕೆಗಳ ಕುರಿತು ಸೆಪ್ಟೆಂಬರ್ 9ರಂದು ಕೇಂದ್ರ ಗೃಹ ಸಚಿವಾಲಯದ ಉಪಸಮಿತಿ ನಡೆಸಲಿರುವ ಸಭೆಯಲ್ಲಿ ಸ್ಪಷ್ಟ ಪ್ರಗತಿ ಕಂಡುಬರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಲಡಾಖ್ ಅಪೆಕ್ಸ್ ಬಾಡಿ (LAB) ಎಚ್ಚರಿಕೆ ನೀಡಿದೆ. 2019ರ ಆಗಸ್ಟ್‌ನಲ್ಲಿ ಲಡಾಖ್‌ ಕೇಂದ್ರಾಡಳಿತ ಪ್ರದೇಶವಾದ ಬಳಿಕದಿಂದ LAB ಹಾಗೂ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (KDA) ಹಲವು ರಾಜಕೀಯ ಮತ್ತು ಸಾಂವಿಧಾನಿಕ ಬೇಡಿಕೆಗಳಿಗಾಗಿ ಒತ್ತಾಯಿಸುತ್ತಿವೆ. ಲಡಾಖ್‌ಗೆ ಚುನಾಯಿತ ವಿಧಾನಸಭೆ ಹಾಗೂ ಕಾನೂನು ರೂಪಿಸುವ ಅಧಿಕಾರ ನೀಡಬೇಕು, ಸಂವಿಧಾನದ 371ನೇ ವಿಧಿಯಡಿ ವಿಶೇಷ ರಕ್ಷಣೆ ಕಲ್ಪಿಸಬೇಕು, ಹಿಂದಿನ ವರ್ಷದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು, ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ತನಿಖಾ ಆಯೋಗದ ವರದಿ ಬಹಿರಂಗಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ. ಸೆಪ್ಟೆಂಬರ್ 9ರ ಸಭೆಯನ್ನು ಸ್ವಾಗತಿಸಿರುವ LAB ಅಧ್ಯಕ್ಷ ತ್ಸೆರಿಂಗ್ ದೋರ್ಜೆ ಲಕ್ರೂಕ್, ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಹೋರಾಟದ ನಿರ್ಧಾರ…