ಬಿಜೆಪಿಗೆ ಹೋಗಿ ಅವಕಾಶಕ್ಕಾಗಿ ಕಾಯಬೇಡಿ; ಕಾಂಗ್ರೆಸ್‌ನಲ್ಲಿ ತಡವಾದರೂ ಸ್ಥಾನಮಾನ ಸಿಗಲಿದೆ: ಹರಿಪ್ರಸಾದ್

ಬೆಂಗಳೂರು: ಅಧಿಕಾರ ಮತ್ತು ಸ್ಥಾನಮಾನದ ಆಸೆಯಿಂದ ಬಿಜೆಪಿ ಸೇರುವ ಬದಲು ಭವಿಷ್ಯ ಹಾಗೂ ಮುಂದಿನ ಪೀಳಿಗೆಯ ಬಗ್ಗೆ ಆಲೋಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕರೆ ನೀಡಿದರು. ಭಾರತ ಜೋಡೋ ಸಭಾಂಗಣದಲ್ಲಿ ಭಾನುವಾರ ನಡೆದ ಮಾಜಿ ಶಾಸಕ ನರೇಂದ್ರಬಾಬು ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನಲ್ಲಿ ತಡವಾದರೂ ಸೂಕ್ತ ಸ್ಥಾನಮಾನ ಸಿಗುತ್ತದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಲು 53 ವರ್ಷ ಕಾಯಬೇಕಾಯಿತು” ಎಂದು ಹೇಳಿದರು. 2001ರ ಪಾಲಿಕೆ ಚುನಾವಣೆಯಲ್ಲಿ ರಾಜಾಜಿನಗರದ 10 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 9ರಲ್ಲಿ ಗೆದ್ದಿತ್ತು. ನರೇಂದ್ರಬಾಬು ಪಕ್ಷೇತರರಾಗಿ ಗೆದ್ದಿದ್ದರು. ಆಗ ತಾವು ಎಸ್.ಎಂ. ಕೃಷ್ಣ ಅವರೊಂದಿಗೆ ಮಾತನಾಡಿ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಟಿಕೆಟ್ ಕೊಡಿಸಿದ್ದಾಗಿ ಹರಿಪ್ರಸಾದ್ ನೆನಪಿಸಿಕೊಂಡರು. ಬಳಿಕ ನರೇಂದ್ರಬಾಬು ಶಾಸಕರಾದರು ಎಂದರು. ಬಿಜೆಪಿಯಲ್ಲಿ ಹಿಂದುಳಿದವರು, ದಲಿತರು ಹಾಗೂ ಇತರ ಸಮುದಾಯಗಳ ಜನರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ನಲ್ಲಿ…

ಕರಾವಳಿ ಅಭಿವೃದ್ಧಿಗೆ ಸಮಗ್ರ ಯೋಜನೆ: ಸರ್ಕಾರಕ್ಕೆ ಡಾ. ರೊನಾಲ್ಡ್ ಕೊಲಾಸೊ ಪ್ರಸ್ತಾವನೆ

ಬೆಂಗಳೂರು: ಕರ್ನಾಟಕದ ಕರಾವಳಿ ಪ್ರದೇಶವನ್ನು ಪ್ರವಾಸೋದ್ಯಮ, ವಾಣಿಜ್ಯ, ಹೂಡಿಕೆ ಮತ್ತು ಉದ್ಯೋಗದ ಪ್ರಮುಖ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಖ್ಯಾತ ಸಮಾಜ ಸೇವಕ, ಪರೋಪಕಾರಿ ಹಾಗೂ ಎನ್‌ಆರ್‌ಐ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರು ರಾಜ್ಯ ಸರ್ಕಾರಕ್ಕೆ ಸಮಗ್ರ ಅಭಿವೃದ್ಧಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಕೊಲಾಸೊ ಅವರು ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಅವರ ಸಮ್ಮುಖದಲ್ಲಿ ಪ್ರಸ್ತಾವನೆಯ ಪ್ರಮುಖ ಅಂಶಗಳನ್ನು ಮಂಡಿಸಿದರು. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಕರ್ನಾಟಕವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ಹಾಗೂ ಹೂಡಿಕೆ ತಾಣವಾಗಿ ರೂಪಿಸುವುದು ಪ್ರಸ್ತಾವನೆಯ ಪ್ರಮುಖ ಉದ್ದೇಶವಾಗಿದೆ. 20–25 ವರ್ಷಗಳ ಮಾಸ್ಟರ್‌ಪ್ಲಾನ್: ಕರಾವಳಿ ಅಭಿವೃದ್ಧಿಗೆ ತಜ್ಞರು, ಅಧಿಕಾರಿಗಳು, ಪ್ರವಾಸೋದ್ಯಮ ಪರಿಣಿತರು, ನಗರ ಯೋಜಕರು, ಉದ್ಯಮಿಗಳು, ಬಂದರು ಮತ್ತು…

ಗಣೇಶ ಮೆರವಣಿಗೆ: ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕಾನೂನು ರೀತ್ಯ ಉತ್ತರ ಕೊಡುತ್ತೇನೆ: ಯತ್ನಾಳ್

ಬೆಂಗಳೂರು: ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರಿಗೆ ಕಾನೂನು ರೀತ್ಯ ಉತ್ತರ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎನ್ನಲಾದ ಎಚ್ಚರಿಕೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯತ್ನಾಳ್ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಟಿ. ನರಸೀಪುರದಲ್ಲಿ ಗಣೇಶ ಪ್ರತಿಷ್ಠಾಪಿಸುವ ಯುವಕ ಸಂಘಗಳಿಗೆ ಮಸೀದಿ ಸಮೀಪದ ರಸ್ತೆಯಲ್ಲಿ ಮೆರವಣಿಗೆ ನಡೆಸಬಾರದು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಹೇಳಿದ್ದಾರೆ ಎನ್ನುವುದನ್ನು ಖಂಡಿಸುವುದಾಗಿ ಯತ್ನಾಳ್ ತಿಳಿಸಿದ್ದಾರೆ. ಬಹುಸಂಖ್ಯಾತ ಹಿಂದೂ ದೇಶದಲ್ಲಿ ಗಣೇಶ ಮೆರವಣಿಗೆ ನಡೆಸಲು ಪೊಲೀಸ್ ಅನುಮತಿ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಹಾಸ್ಯಾಸ್ಪದ ಎಂದು ಅವರು ಟೀಕಿಸಿದ್ದಾರೆ. ‘ಪೊಲೀಸರ ಕೆಲಸ ಕಾನೂನು ಸುವ್ಯವಸ್ಥೆ ಕಾಪಾಡುವುದು’ ವಿನಾಯಕ ಚೌತಿ ರಾಷ್ಟ್ರೀಯ ಹಬ್ಬವಾಗಿದ್ದು, ಹಿಂದೂಗಳ…

‘ಪೊಲೀಸ್ ಠಾಣೆಗೆ ನುಗ್ಗಿದವರನ್ನು ಜೈಲಿಗೆ ಸೇರಿಸುತ್ತೇವೆ’: ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎನ್ನಲಾದ ಎಚ್ಚರಿಕೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮಸೀದಿ ಮುಂಭಾಗದಲ್ಲಿ ಗಣೇಶ ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದು ಹಾಗೂ ಡಿಜೆ ಮಾದರಿಯ ಧ್ವನಿವರ್ಧಕ ಬಳಕೆ ಕುರಿತು ಇನ್‌ಸ್ಪೆಕ್ಟರ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಮೆರವಣಿಗೆ ನಡೆಸುವ ಮಾರ್ಗವನ್ನು ಮುಂಚಿತವಾಗಿ ತಿಳಿಸಬೇಕು ಹಾಗೂ ನಿಗದಿತ ಮಾರ್ಗದಲ್ಲೇ ಮೆರವಣಿಗೆ ನಡೆಸಬೇಕು ಎಂದು ಅವರು ಸೂಚಿಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ ಎಂದು ವರದಿಯಾಗಿದೆ. ಮಸೀದಿ ಪ್ರದೇಶದಲ್ಲಿ ಭದ್ರತೆ ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ತಿಳಿದುಬಂದಿದೆ. ಆದರೆ, ಅವರ ಮಾತಿನ ಶೈಲಿ ಹಿಂದೂ ಯುವಕರನ್ನು ಬೆದರಿಸುವಂತಿದೆ ಎಂಬ ಆರೋಪವೂ ಕೇಳಿಬಂದಿದೆ. ವಿಡಿಯೊ ವೈರಲ್ ಬಳಿಕ ಮಾಜಿ ಸಂಸದ ಪ್ರತಾಪ್ ಸಿಂಹ ಇನ್‌ಸ್ಪೆಕ್ಟರ್ ವಿರುದ್ಧ…

ಗಣೇಶ ಮೆರವಣಿಗೆ ಕುರಿತ ಹೇಳಿಕೆ ವೈರಲ್; ಟಿ.ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧ ಕ್ರಮಕ್ಕೆ ಪ್ರತಾಪ್ ಸಿಂಹ, ಜೋಶಿ ಆಗ್ರಹ

ಮೈಸೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎನ್ನಲಾದ ಎಚ್ಚರಿಕೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮಸೀದಿ ಮುಂಭಾಗದಲ್ಲಿ ಗಣೇಶ ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದು ಹಾಗೂ ಡಿಜೆ ಮಾದರಿಯ ಧ್ವನಿವರ್ಧಕ ಬಳಕೆ ಕುರಿತು ಇನ್‌ಸ್ಪೆಕ್ಟರ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಮೆರವಣಿಗೆ ನಡೆಸುವ ಮಾರ್ಗವನ್ನು ಮುಂಚಿತವಾಗಿ ತಿಳಿಸಬೇಕು ಹಾಗೂ ನಿಗದಿತ ಮಾರ್ಗದಲ್ಲೇ ಮೆರವಣಿಗೆ ನಡೆಸಬೇಕು ಎಂದು ಅವರು ಸೂಚಿಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ ಎಂದು ವರದಿಯಾಗಿದೆ. ಮಸೀದಿ ಪ್ರದೇಶದಲ್ಲಿ ಭದ್ರತೆ ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ತಿಳಿದುಬಂದಿದೆ. ಆದರೆ, ಅವರ ಮಾತಿನ ಶೈಲಿ ಹಿಂದೂ ಯುವಕರನ್ನು ಬೆದರಿಸುವಂತಿದೆ ಎಂಬ ಆರೋಪವೂ ಕೇಳಿಬಂದಿದೆ. ವಿಡಿಯೊ ವೈರಲ್ ಬಳಿಕ ಮಾಜಿ ಸಂಸದ ಪ್ರತಾಪ್ ಸಿಂಹ ಇನ್‌ಸ್ಪೆಕ್ಟರ್ ವಿರುದ್ಧ…

ಅನುಮತಿ ಇಲ್ಲದೆ ಪ್ರಯೋಗಾಲಯ ಕಾರ್ಯಾಚರಣೆ: ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಹಿರಿಯ ಅಧಿಕಾರಿಗಳೊಂದಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನ ಅನಾಲಿಟಿಕ್ಸ್ ಅಂಡ್ ರಿಸರ್ಚ್ ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಪ್ರಯೋಗಾಲಯದ ಕಾರ್ಯನಿರ್ವಹಣೆ ಹಾಗೂ ದಾಖಲೆಗಳಿಗೆ ಸಂಬಂಧಿಸಿದ ಹಲವು ಲೋಪಗಳು ಕಂಡುಬಂದಿವೆ ಎಂದು ಸಚಿವರು ತಿಳಿಸಿದ್ದಾರೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF&CC) ಪೂರ್ವಾನುಮತಿ ಪಡೆಯುವ ಸಂದರ್ಭದಲ್ಲಿ ಮೂವರು ವಿಶ್ಲೇಷಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಸಂಸ್ಥೆ ಮಾಹಿತಿ ನೀಡಿತ್ತು. ಆದರೆ ಪರಿಶೀಲನೆ ವೇಳೆ ಒಬ್ಬ ವಿಶ್ಲೇಷಕ ಮಾತ್ರ ಹಾಜರಿದ್ದು, ಉಳಿದ ಇಬ್ಬರು ಕಳೆದ ಐದು ತಿಂಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದಿದ್ದ ‘Consent for Establishment’ (CFE) ಅನುಮತಿಯ ಅವಧಿ 2025ರಲ್ಲೇ ಮುಕ್ತಾಯಗೊಂಡಿದ್ದರೂ,…

ಗೋನೂರು ತಲುಪಿದ ಭದ್ರಾ ನೀರು: ಸೆ.24ರಂದು ಸಿಎಂ ಗಂಗಾಪೂಜೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೋನೂರು ಕೆರೆಗೆ ತಲುಪಿರುವ ಹಿನ್ನೆಲೆಯಲ್ಲಿ ಸೆ.24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೋನೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಚಿತ್ರದುರ್ಗ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಿಳಿಸಿದರು. ಹಿರಿಯೂರು ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಹಾಲಿ ಮತ್ತು ಮಾಜಿ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು. ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸಲಾಗಿದ್ದು, ವೈ-ಜಂಕ್ಷನ್‌ನಿಂದ 114 ಕಿ.ಮೀ ಉದ್ದದ ಕಾಲುವೆಗೆ 3 ಟಿಎಂಸಿ ನೀರು ಹರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಇದೀಗ ನೀರು ಗೋನೂರು ಕೆರೆಗೆ ತಲುಪಿದೆ ಎಂದು ಹೇಳಿದರು. ಯೋಜನೆಯಡಿ ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ…

ಬಿಜೆಪಿ ಸರ್ಕಾರದ ಅವಧಿಯಲ್ಲೇ ₹1,281 ಕೋಟಿ ನೀರಾವರಿ ಯೋಜನೆ ಮಂಜೂರು: ಸಿ.ಟಿ. ರವಿ

ಚಿಕ್ಕಮಗಳೂರು: ಭದ್ರಾ ಉಪಜಲಾನಯನ ಪ್ರದೇಶದಿಂದ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕುಗಳ 245 ಕೆರೆಗಳಿಗೆ ನೀರು ತುಂಬಿಸುವ ₹1,281 ಕೋಟಿ ವೆಚ್ಚದ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಹೇಳಿದ್ದಾರೆ. ಬೆಳವಾಡಿ ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ನಮಗೆ ಉಪಕಾರ ಮಾಡುವ ಪ್ರತಿಯೊಂದಕ್ಕೂ ಕೃತಜ್ಞತೆ ಸಲ್ಲಿಸುವ ಪರಂಪರೆ ಇದೆ. ಜೀವಜಲದ ಪ್ರತೀಕವಾಗಿರುವ ಗಂಗಾಮಾತೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಬಾಗಿನ ಅರ್ಪಿಸಲಾಗಿದೆ ಎಂದರು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ರಾಜಕೀಯ ಮಾತನಾಡುವುದಿಲ್ಲ. ಆದರೆ ಸತ್ಯ ಮೌನವಾಗಿದ್ದಾಗ ಸುಳ್ಳು ವಿಜೃಂಭಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅಂತಿಮವಾಗಿ ಗೆಲ್ಲುವುದು ಸತ್ಯವೇ. ಸರಿಯಾದ ಸಮಯದಲ್ಲಿ ಸತ್ಯ ಹೊರಬಂದು ತನ್ನ ಸ್ಥಾನ ಪಡೆದುಕೊಳ್ಳುತ್ತದೆ ಎಂದು ಹೇಳಿದರು. 245 ಕೆರೆಗಳಿಗೆ ನೀರು ನೀರಾವರಿ ವಿಚಾರದಲ್ಲಿ ಹಿಂದೆ ಗುರುತ್ವಾಕರ್ಷಣೆಯ ಆಧಾರದ ಮೇಲೆ ಕರಗಡ…

ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್‌ಗೆ ಮಂಜುನಾಥ್ ಭಂಡಾರಿ ಮನವಿ

ಬೆಂಗಳೂರು: ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸುದೀರ್ಘ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ₹5,000 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ. ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪತ್ರದಲ್ಲಿನ ಪ್ರಮುಖ ಅಂಶಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಸಂಪುಟ ಅಜೆಂಡಾದಲ್ಲಿ ಸೇರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಕರಾವಳಿ ಭಾಗದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸುಧಾರಿತ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ರೈತರು ಹಾಗೂ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಅಗತ್ಯ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ…

ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯ ಶುದ್ಧೀಕರಣ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಣಿ ಸತೀಶ್, ವಿಧಾನಪರಿಷತ್ ಮಾಜಿ ಸದಸ್ಯೆ ಜಲಜಾ ನಾಯಕ್, ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಮುನೀರ್, ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ., ಪಶ್ಚಿಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಕ್ಷಿಣ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಹೆಚ್.ಡಿ.ಮಲ್ಲೇಶ್ ಸೇರಿದಂತೆ ಪ್ರಚಾರ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಬಿಜೆಪಿ ಕೇಂದ್ರ…