ಭಾರತಕ್ಕೆ ಮೋದಿ ಭಗವಂತನ ವರಪ್ರಸಾದವಾಗಿ ಬಂದವರು: ಸಿ.ಟಿ. ರವಿ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭಗವಂತನ ವರಪ್ರಸಾದವಾಗಿ ಬಂದವರು. ಬಡವರ ಕಲ್ಯಾಣ, ದೇಶದ ಗೌರವ ಹಾಗೂ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಗ್ರಾಮಾಂತರ ಮಂಡಲದಿಂದ ಚಿಕ್ಕಗೌಜ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದ ಅವರು, ಮೋದಿ ಅವರು ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಮಂತ್ರಿಯಾಗಿ 25 ವರ್ಷಗಳ ಸಾರ್ವಜನಿಕ ಜೀವನ ಪೂರ್ಣಗೊಳಿಸಿದ್ದಾರೆ. ಅಧಿಕಾರವನ್ನು ಅನುಭವಿಸುವ ಬದಲು ತಮ್ಮನ್ನು ‘ಪ್ರಧಾನ ಸೇವಕ’ ಎಂದು ಕರೆದುಕೊಂಡು ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಬಡವರ ಕಲ್ಯಾಣಕ್ಕೆ ಯೋಜನೆಗಳು ಜನ್‌ಧನ್ ಖಾತೆಗಳ ಮೂಲಕ ಬಡವರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಸಂಪರ್ಕಿಸಲಾಗಿದೆ. ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದು ವಾರ್ಷಿಕ ₹6 ಸಾವಿರ ನೆರವು ನೀಡಲಾಗುತ್ತಿದೆ ಎಂದು ರವಿ ಹೇಳಿದರು. ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಅಡುಗೆ…

79ನೇ ಕಲ್ಯಾಣ ಕರ್ನಾಟಕ ಉತ್ಸವ: ಸರ್ವಾಂಗೀಣ ಅಭಿವೃದ್ಧಿಯೇ ಸರ್ಕಾರದ ಸಂಕಲ್ಪ.

ಬಳ್ಳಾರಿ,: ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನರ ಏಳಿಗೆಯೇ ಸರ್ಕಾರದ ಪ್ರಮುಖ ಸಂಕಲ್ಪವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಹೇಳಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಕಲ್ಯಾಣ ಕರ್ನಾಟಕ ವಿಮೋಚನೆಗೊಂಡ ಐತಿಹಾಸಿಕ ದಿನವನ್ನು ಸ್ಮರಿಸಿದ ಅವರು, ಈ ಭಾಗದ ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ-ಬಲಿದಾನ ಮಾಡಿದ ಎಲ್ಲ ಮಹನೀಯರನ್ನು ಗೌರವದಿಂದ ಸ್ಮರಿಸಬೇಕು ಎಂದರು. 371(ಜೆ)ಯಿಂದ ವಿಶೇಷ ಸ್ಥಾನಮಾನ ಸಂವಿಧಾನದ 371(ಜೆ) ತಿದ್ದುಪಡಿಯ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಇದರಿಂದ ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಾತಿ ಹಾಗೂ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಾಗಿದೆ ಎಂದು ರಘುಮೂರ್ತಿ ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)…

ಎತ್ತಿನಹೊಳೆ ಕಾಮಗಾರಿಗೆ ಅಕ್ಟೋಬರ್ ಗಡುವು ವಿಳಂಬವಾದರೆ ಕಠಿಣ ಕ್ರಮದ ಎಚ್ಚರಿಕೆ

ತುಮಕೂರು: ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಗುರುವಾರ ತಿಪಟೂರು ಸಮೀಪದ ಚೌಡ್ಲಪುರದ ಪ್ಯಾಕೇಜ್-18 ಹಾಗೂ ತಿಪಟೂರು ಬೈಪಾಸ್ ಬಳಿ ನಡೆಯುತ್ತಿರುವ ಎಲಿವೇಟೆಡ್ ಟ್ರಫ್ ಕಾಮಗಾರಿಗಳನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಅಕ್ಟೋಬರ್ ಅಂತ್ಯದ ಗಡುವು ನೀಡಿದ ಸಚಿವರು, ಯಾವುದೇ ಕಾರಣಕ್ಕೂ ನೆಪಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕಾಲುನೋವು ಲೆಕ್ಕಿಸದೆ ಪರಿಶೀಲನೆ ಕಾಮಗಾರಿಯ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿದ ಸಚಿವರು, ಗುಡ್ಡಗಾಡು ಹಾಗೂ ಕಡಿದಾದ ರಸ್ತೆಯಲ್ಲಿ ಇಲಾಖೆಯ ಬೊಲೆರೊ ಜೀಪ್‌ನಲ್ಲಿ ಸಂಚರಿಸಿದರು. ಬಳಿಕ ಕಾಲುನೋವಿನ ನಡುವೆಯೂ ಒಂದು ಕಿಲೋಮೀಟರ್‌ಗೂ ಹೆಚ್ಚು ದೂರ ಕಾಲ್ನಡಿಗೆಯಲ್ಲಿ ತೆರಳಿ, ಚೌಡ್ಲಪುರದ 127ರಿಂದ 137 ಕಿ.ಮೀ. ವ್ಯಾಪ್ತಿಯ ಕಾಮಗಾರಿಯ ವಿವಿಧ ಹಂತಗಳನ್ನು ಪರಿಶೀಲಿಸಿದರು. ಪ್ಯಾಕೇಜ್-18ಕ್ಕೆ ಶೇ.86ರಷ್ಟು ಪ್ರಗತಿ ಚೌಡ್ಲಪುರ ಭಾಗದಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆಗಳ ಕೊರತೆಯಿಂದ…

UPSC ಮಾದರಿಯಲ್ಲಿ KPSCಗೂ ಸೂಕ್ತ ಕಾಯಕಲ್ಪ ನೀಡುವಂತೆ ಸಿಎಂಗೆ ಕಾಂಗ್ರೆಸ್ ಮುಖಂಡರ ಮನವಿ

ಬೆಂಗಳೂರು: ಪಿ.ಸಿ. ಹೋಟಾ ಸಮಿತಿ ವರದಿ ಹಾಗೂ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ದ ನಿಯಮಾವಳಿ ಮತ್ತು ಪ್ರಕ್ರಿಯೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಅಳವಡಿಸುವ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳಿಂದ ಉದ್ಯೋಗಾಕಾಂಕ್ಷಿಗಳು ಹಾಗೂ ಸಾರ್ವಜನಿಕರಲ್ಲಿ ಆಯೋಗದ ಮೇಲಿನ ನಂಬಿಕೆ ಕುಸಿದಿದೆ. ಇದರಿಂದ ಸರ್ಕಾರದ ಆಡಳಿತದ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧದ ಆರೋಪಗಳ ಕುರಿತು ಸಂವಿಧಾನದ ಅನುಚ್ಛೇದ 317ರಡಿ ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕು. ತನಿಖೆ ನಡೆಯುವ ಅವಧಿಯಲ್ಲಿ ಆರೋಪಿತ…

ಹಿಂದುತ್ವ ದುರ್ಬಲವಾದರೆ ರಾಷ್ಟ್ರ ದುರ್ಬಲ; ಗಣೇಶೋತ್ಸವದಲ್ಲಿ ಜಾತೀಯತೆ, ಅಸ್ಪೃಶ್ಯತೆಗೆ ಅವಕಾಶ ಇರಬಾರದು: ಸಿ.ಟಿ.ರವಿ

ಮದ್ದೂರು: ಹಿಂದುತ್ವ ದುರ್ಬಲವಾದರೆ ರಾಷ್ಟ್ರವೂ ದುರ್ಬಲವಾಗುತ್ತದೆ. ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಹಿಂದೂ ಸಮಾಜದಲ್ಲಿ ಒಗ್ಗಟ್ಟು, ಸಾಮರಸ್ಯ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ವೇದಿಕೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತೀಯತೆ ಮತ್ತು ಅಸ್ಪೃಶ್ಯತೆಗೆ ಗಣೇಶೋತ್ಸವದಲ್ಲಿ ಯಾವುದೇ ಅವಕಾಶ ಇರಬಾರದು. ‘ನಾವೆಲ್ಲ ಹಿಂದೂ, ನಾವೆಲ್ಲ ಒಂದು’ ಎಂಬ ಭಾವನೆ ಸಮಾಜದಲ್ಲಿ ಬಲಗೊಳ್ಳಬೇಕು ಎಂದು ಹೇಳಿದರು. ಜಾತೀಯತೆ ಮತ್ತು ಅಸ್ಪೃಶ್ಯತೆ ಹಿಂದೂ ಸಮಾಜವನ್ನು ದುರ್ಬಲಗೊಳಿಸಿವೆ. ಈ ದುರ್ಬಲತೆಯನ್ನು ನಿವಾರಿಸಿ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ನಡೆಯಬೇಕು ಎಂದರು. ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದ ಉದ್ದೇಶ ಸಾಮಾಜಿಕ ಜಾಗೃತಿ ಮೂಡಿಸುವುದಾಗಿತ್ತು. ಮತಾಂತರ, ಅಸ್ಪೃಶ್ಯತೆ ಹಾಗೂ ಜಾತೀಯತೆ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಸಮಾಜವನ್ನು ಸಂಘಟಿಸುವುದು ಗಣೇಶೋತ್ಸವದ ಆಶಯವಾಗಬೇಕು…

ಪಣತೂರಿನಲ್ಲಿ 45 ಎಕರೆ ವಿಸ್ತೀರ್ಣದ ವೃಕ್ಷೋದ್ಯಾನ ಲೋಕಾರ್ಪಣೆ: ರಾಜಧಾನಿಯಲ್ಲಿ ಮತ್ತಷ್ಟು ಬೃಹತ್ ಉದ್ಯಾನವನ; ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಪಣತೂರು ಗ್ರಾಮದಲ್ಲಿ ಅರಣ್ಯ ಇಲಾಖೆಯ ನಗರವನ ಯೋಜನೆಯಡಿ 45 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಪಣತೂರು ಗ್ರಾಮದಲ್ಲಿ ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ಒಟ್ಟು 145 ಎಕರೆ ಪ್ರದೇಶದಲ್ಲಿ 45 ಎಕರೆ ಜಾಗವನ್ನು ಕ್ವಾಲ್ಕಾಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿ ಹಾಗೂ ‘ಸೇಟ್ರೀಸ್’ ಎನ್‌ಜಿಒ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿವಿಧ ಜಾತಿಯ ಮರಗಿಡಗಳು, ಪ್ರಾಣಿ ಹಾಗೂ ಪಕ್ಷಿ ಸಂಕುಲದಿಂದ ಕೂಡಿರುವ ಈ ಪ್ರದೇಶವನ್ನು ಸಾರ್ವಜನಿಕರಿಗೆ ಹಸಿರು ವಾತಾವರಣ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಉಳಿದಿರುವ 100 ಎಕರೆ ಪ್ರದೇಶವನ್ನೂ ಕ್ವಾಲ್ಕಾಮ್ ಸಂಸ್ಥೆ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು. ಅಗತ್ಯವಿರುವಲ್ಲಿ ಅರಣ್ಯ ಇಲಾಖೆಯಿಂದಲೂ ಅನುದಾನ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ₹4.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ವೃಕ್ಷೋದ್ಯಾನವನ್ನು ಸುಮಾರು ₹4.50 ಕೋಟಿ ಸಿಎಸ್‌ಆರ್…

ಕಾವೇರಿ ನೀರಾವರಿ ನಿಗಮ ಸಭೆ: ಮೇಕೆದಾಟು ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧೋಕಾರಿಗಳಿಗೆ ಸೂಚನೆ

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿರುವ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಎಸಿ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು ಫೀಲ್ಡ್‌ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಡ್ಯಾಂಗಳ ನಿರ್ವಹಣೆಗೆ ಆದ್ಯತೆ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ, ಡೆಡ್ ಸ್ಟೋರೇಜ್, ತಮಿಳುನಾಡಿಗೆ ಹರಿಸಿದ ನೀರು, ಬಿಳಿಗುಂಡ್ಲುವಿನಲ್ಲಿ ದಾಖಲಾಗಿರುವ ಪ್ರಮಾಣ ಹಾಗೂ ಅಚ್ಚುಕಟ್ಟು ಪ್ರದೇಶದ ಪರಿಸ್ಥಿತಿಯ ಸಂಪೂರ್ಣ ಮಾಹಿತಿಯನ್ನು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಗಮದ…

UPI ಶುಲ್ಕ: ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ; ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಬೇಸರ 

ಮಂಗಳೂರು: ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಹಿನ್ನಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಅವರು, ಆರಂಭದಲ್ಲಿ ಉಚಿತ ಹಾಗೂ ಸರಳ ಡಿಜಿಟಲ್ ವಹಿವಾಟಿನ ವ್ಯವಸ್ಥೆಯನ್ನು ಉತ್ತೇಜಿಸಿ ಜನರನ್ನು ಡಿಜಿಟಲ್ ವಹಿವಾಟಿನತ್ತ ಸೆಳೆದ ಬಳಿಕ, ಇದೀಗ ಶುಲ್ಕ ವಿಧಿಸಲು ಮುಂದಾಗಿರುವುದು ಸರ್ಕಾರದ ಅಸಂಬದ್ಧ ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಯುಪಿಐ ಶುಲ್ಕವನ್ನು ಗ್ರಾಹಕರ ಬದಲಿಗೆ ವ್ಯಾಪಾರಿಗಳ ಮೇಲೆ (MDR) ವಿಧಿಸಲಾಗುತ್ತದೆ ಎಂಬ ವಾದ ಸರಿಯಲ್ಲ. ಅಂತಿಮವಾಗಿ ವ್ಯಾಪಾರಿಗಳು ಈ ಹೆಚ್ಚುವರಿ ವೆಚ್ಚವನ್ನು ದಿನಸಿ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಗ್ರಾಹಕರ ಮೇಲೆಯೇ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ₹1 ಲಕ್ಷದವರೆಗಿನ ವಿನಾಯಿತಿ ಸೇರಿದಂತೆ ಜಿಎಸ್‌ಟಿ ಲೆಕ್ಕಾಚಾರಗಳಲ್ಲಿನ ಗೊಂದಲಗಳು ಸಣ್ಣ…

ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ, ವಕೀಲ ಮನೋರಾಜ್ ರಾಜೀವ ಪ್ರತಿಪಾದಿಸಿದ್ದಾರೆ . ಜೈಲು ಜಾಮಾರ್ ವ್ಯವಸ್ಥೆಯಿಂದ ಸಾರ್ವಜನಿಕರು ಪರದಾಡುವಂಟಾಗಿದ್ದಾರೆ, ಆ ವಿಚಾರವನ್ನು ಮುಂದಿಟ್ಟು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕಾನೂನು ತಜ್ಞರೂ ಆದ ಮನೋರಾಜ್ ರಾಜೀವ್ ಬೇಸರ ವ್ಯಕ್ತಪಡಿಸಿದ್ಧತೆ. ಈ ಕುರಿತಂತೆ ಅವರು ಮಂಗಳೂರಿನಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಾಗೃಹದ ಭದ್ರತೆ ಹಾಗೂ ಕಾರಾಗೃಹದೊಳಗೆ ಅನಧಿಕೃತ ಮೊಬೈಲ್ ಫೋನ್ ಬಳಕೆಯನ್ನು ತಡೆಯುವುದು ಅತ್ಯಗತ್ಯ. ಆದರೆ ಕಾರಾಗೃಹದ ಹೊರಭಾಗದಲ್ಲಿರುವ ನ್ಯಾಯಾಲಯಗಳು, ವಕೀಲರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಕಾನೂನುಬದ್ಧ…

ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಲೋಪದೋಷಗಳು ಹಾಗೂ ಕಳಪೆ ಕಾಮಗಾರಿಗಳು ನಡೆಯುತ್ತಿವೆ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಸೆ.12ರಂದು ಬರೆದಿರುವ ಪತ್ರದಲ್ಲಿ ಯೋಜನೆಯ ಅನುಷ್ಠಾನದಲ್ಲಿನ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿರುವ ಅವರು, ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿರುವ ಯೋಜನೆಯ ಪ್ರಯೋಜನ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 1,01,30,702 ಗ್ರಾಮೀಣ ಕುಟುಂಬಗಳಿದ್ದು, ಯೋಜನೆ ಆರಂಭಕ್ಕೂ ಮುನ್ನ 24,28,517 ಮನೆಗಳಿಗೆ ನಳ ಸಂಪರ್ಕವಿತ್ತು. ಯೋಜನೆಯಡಿ ಇದುವರೆಗೆ 63,74,100 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಒಟ್ಟು 88,02,617 ಗ್ರಾಮೀಣ ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗಿದೆ. ಇದಕ್ಕಾಗಿ ಸುಮಾರು ₹37,901.37 ಕೋಟಿ…