ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕ್ರೂಸರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಒಂದೇ ಕುಟುಂಬದ ಐವರು ಒಂದೇ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಇಂಗಳಗಿ ಗ್ರಾಮದಲ್ಲಿ ಶೋಕ ಮಡುಗಟ್ಟುವಂತೆ…

ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ 21 ದಿನಗಳ ‘ಕಾರ್ಯಕರ್ತ ವಿಕಾಸ ವರ್ಗ ಪ್ರಥಮ (ಸಾಮಾನ್ಯ)’ ಶಿಬಿರದ ಸಮಾರೋಪ ಸಮಾರಂಭವು ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿ ಬಿ.ಎಸ್. ರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಸಮಾರೋಪ ಭಾಷಣ ಮಾಡಿದರು. ಶಿಬಿರದ ವರ್ಗಾಧಿಕಾರಿ ಗಿರೀಶ್ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ‘ಕಾರ್ಯಕರ್ತ ವಿಕಾಸ ವರ್ಗ ಪ್ರಥಮ’ವು ಸಂಘದ ಕಾರ್ಯಕರ್ತರಿಗೆ ನೀಡಲಾಗುವ ಮೂಲಭೂತ ಹಾಗೂ ಪ್ರಮುಖ ತರಬೇತಿ ಶಿಬಿರವಾಗಿದೆ. ಸ್ವಯಂಸೇವಕರಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ, ಬೌದ್ಧಿಕ ಜಾಗೃತಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಈ ತರಬೇತಿ ನಡೆಸಲಾಗುತ್ತದೆ. ಸಾಮಾನ್ಯವಾಗಿ 21 ದಿನಗಳ ಕಾಲ ನಡೆಯುವ ಈ ವಸತಿ ಶಿಬಿರದಲ್ಲಿ ದೈಹಿಕ ವ್ಯಾಯಾಮ, ಯೋಗ, ದಂಡ ತರಬೇತಿ,…

ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಎನ್‌ಜಿಇಎಫ್ (ಹುಬ್ಬಳ್ಳಿ) ಸಂಸ್ಥೆಗೆ ನೀಡಲಾಗಿದ್ದ 2 ಕೋಟಿ ರೂ. ದುಡಿಯುವ ಬಂಡವಾಳ ಸಾಲ ಹಾಗೂ ಅದರ ಮೇಲಿನ 4 ಕೋಟಿ ರೂ. ಬಡ್ಡಿ ಸೇರಿ ಒಟ್ಟು 6 ಕೋಟಿ ರೂ. ಮತ್ತು 10 ಕೋಟಿ ರೂ. ಬಡ್ಡಿರಹಿತ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ತಾಯಿ-ಮಗು ಆರೈಕೆ (MCH) ಆಸ್ಪತ್ರೆ ನಿರ್ಮಾಣಕ್ಕೆ ಒಟ್ಟು 38 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ನಗರ ಪ್ರಾಥಮಿಕ…

ಅಡಿಕೆ ಬೆಲೆ ಭಾರೀ ಏರಿಕೆ; ಶಿವಮೊಗ್ಗದಲ್ಲಿ 94 ಸಾವಿರ ಗಡಿ ದಾಟಿದ ಸರಕು ಅಡಿಕೆ

ಶಿವಮೊಗ್ಗ: ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಬುಧವಾರ ಅಡಿಕೆ ಧಾರಣೆಯಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ವಿಶೇಷವಾಗಿ ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆಯ ಗರಿಷ್ಠ ಬೆಲೆ 94 ಸಾವಿರ ರೂ. ಗಡಿ ದಾಟಿರುವುದು ವ್ಯಾಪಾರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆಯ ಗರಿಷ್ಠ ದರ 94,000 ರೂ. ದಾಖಲಾಗಿದ್ದು, ಮಾದರಿ ಬೆಲೆ 83,000 ರೂ. ಆಗಿದೆ. ಬೆಟ್ಟೆ ಅಡಿಕೆ 65,300 ರೂ., ರಾಶಿ ಅಡಿಕೆ 54,309 ರೂ. ಹಾಗೂ ಗೊರಬಲು 43,111 ರೂ. ದರ ಕಂಡಿದೆ. ಇವುಗಳ ಮಾದರಿ ಬೆಲೆಗಳು ಕ್ರಮವಾಗಿ 63,600 ರೂ., 52,500 ರೂ. ಮತ್ತು 39,300 ರೂ. ಆಗಿವೆ. ಇನ್ನೊಂದೆಡೆ, ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲೂ ಉತ್ತಮ ವಹಿವಾಟು ಕಂಡುಬಂದಿದೆ. ಇಲ್ಲಿ ರಾಶಿ ಅಡಿಕೆಯ ಗರಿಷ್ಠ ದರ 53,099 ರೂ. ಆಗಿದ್ದು, ಮಾದರಿ ಬೆಲೆ 48,599 ರೂ. ದಾಖಲಾಗಿದೆ.…

‘ಹೊಸ ಪೀಠ ಸ್ಥಾಪನೆ ಉದ್ದೇಶ ಇಲ್ಲ’; ಹರಿಹರ ಪೀಠ ವಿವಾದಕ್ಕೆ ಪರಿಹಾರ ದಿಕ್ಕಿನಲ್ಲಿ ಹೆಜ್ಜೆ: ಯತ್ನಾಳ್

ಹುಬ್ಬಳ್ಳಿ: ಯಾವುದೇ ಹೊಸ ಪೀಠ ಸ್ಥಾಪನೆ ಅಥವಾ ಮರುಸ್ಥಾಪನೆಯ ಉದ್ದೇಶ ಇಲ್ಲ. ಈಗಿರುವ ಮಠಗಳನ್ನು ಸುಧಾರಿಸುವುದೇ ನಮ್ಮ ಗುರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಹರಿಹರ ಪೀಠದ ವಿವಾದ ಬಗೆಹರಿಸಲು ಎರಡೂ ಕಡೆಯವರನ್ನು ಸೇರಿಸಿ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದು, ಸಮಾಜಕ್ಕೆ ಧಕ್ಕೆ ಉಂಟುಮಾಡುವ ಘಟನೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಎರಡೂ ಪಾಳಯಗಳ ನಡುವೆ ಸಮನ್ವಯ ಸಾಧಿಸಿ ಸಮಸ್ಯೆ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. “ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ. ಹರಿಹರ ಪೀಠದ ಜೊತೆಗೆ ಕೂಡಲಸಂಗಮ ಪೀಠದ ವಿವಾದವನ್ನೂ ಬಗೆಹರಿಸಲಾಗುವುದು” ಎಂದು ಯತ್ನಾಳ್ ಹೇಳಿದರು. ಸಭೆಯ ಬಳಿಕ ಮಾತನಾಡಿದ ಅವರು, ಎರಡೂ ಕಡೆಯವರ ಮನಸ್ತಾಪ ನಿವಾರಿಸಲು ಪ್ರಯತ್ನ ಮುಂದುವರಿದಿದೆ. ಸಮಾಜದಲ್ಲಿ ಉಂಟಾಗಿರುವ…

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್

ತುಮಕೂರು: ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ . ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳ ಮೂಲಕ ಕೋಟ್ಯಾಂತರ ಕುಟುಂಬಗಳ ಬದುಕಿಗೆ ಆಶಾಕಿರಣವಾಗಿದ್ದೇವೆ. ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ ಎಂದು ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದ್ದಾರೆ. ತುಮಕೂರಿನಲ್ಲಿ ಹಮ್ಮಿಕೊಂಡಿದ್ದ “3 ವರ್ಷಗಳ ಸಾಧನೆಯ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು, “ಸರ್ವ ಜನಾಂಗದ ಅಭಿವೃದ್ಧಿಯ ಸರ್ಕಾರ ಕಾಂಗ್ರೆಸ್ ಸರ್ಕಾರ” ಎಂದು ಅವರು ಹೇಳಿದರು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಉದ್ಯೋಗ ಸೃಷ್ಟಿ ಕ್ಷೇತ್ರಗಳಲ್ಲಿಯೂ ರಾಜ್ಯ…

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ತುಮಕೂರು: 2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ “ಸಾರ್ಥಕ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಮಾತನಾಡಿದ ಅವರು, 136 ಶಾಸಕರನ್ನು ಗೆಲ್ಲಿಸುವ ಮೂಲಕ ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ತೋರಿದ್ದು, ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. “2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು. ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳನ್ನು ಪ್ರಸ್ತಾಪಿಸಿದ ಶಿವಕುಮಾರ್, ಕಾಂಗ್ರೆಸ್ ಜಾರಿಗೆ ತಂದಿರುವ ಕಲ್ಯಾಣ ಮಾದರಿಯನ್ನು ಈಗ ಇತರೆ ರಾಜ್ಯಗಳಲ್ಲೂ ಅನುಸರಿಸಲಾಗುತ್ತಿದೆ ಎಂದು ಹೇಳಿದರು. “ಮೊದಲಿಗೆ ಖಾತರಿ ಯೋಜನೆಗಳನ್ನು ಟೀಕಿಸಿದವರು, ಇಂದು ಅದನ್ನೇ ನಕಲು ಮಾಡುತ್ತಿದ್ದಾರೆ. ನಮ್ಮ ಯೋಜನೆಗಳು ಇಡೀ ದೇಶಕ್ಕೆ…

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ. ರೈಲಿನಲ್ಲಿ ಒಟ್ಟು 17 ಕೋಚ್‌ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.…

ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

ಬೆಂಗಳೂರು, ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇಲ್ಲ ಎಂದು ಯಾರಾದರೂ ಸವಾಲು ಹಾಕಿದರೆ ನಾನೇ ಅವರನ್ನು ಕರೆದುಕೊಂಡು ಹೋಗಿ ತೋರಿಸುತ್ತೇನೆ. ಇತ್ತೀಚೆಗೆ ಪೊಲೀಸ್‌ ಆಯುಕ್ತರು 65 ಲಕ್ಷ ರೂ. ಖರ್ಚು ಮಾಡಿ 250 ಬಾಂಗ್ಲಾ ದೇಶದವರನ್ನು ವಿಮಾನದಲ್ಲಿ ಕಳುಹಿಸಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್‌ಗಳಲ್ಲಿ ಸಾವಿರಾರು ಬಾಂಗ್ಲಾ ದೇಶೀಯರಿದ್ದಾರೆ. ಇದಕ್ಕೆ ಎಸ್‌ಐಆರ್‌ ಅಂತ್ಯ ಹಾಡಲಿದೆ. ಗುರುತಿನ ಚೀಟಿ ಇರುವವರು ಭಯ ಪಡಬೇಕಿಲ್ಲ. ಪ್ರತಿ ಬೂತ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್ ಏಜೆಂಟ್ ಇರುವಾಗ ಅರ್ಹ, ನಿಜವಾದ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದು ಗಮನಸೆಳೆದರು. ಬಾಂಗ್ಲಾ ದೇಶದ ಮುಸ್ಲಿಮರ ಮತಗಳಿಂದ ಗೆಲ್ಲುತ್ತೇವೆಂದು…

ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್‌ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ ಸ್ಥಗಿತಗೊಂಡಿದ್ದು, ಕಳೆದ ಮೂರು ವರ್ಷದಿಂದ ಸರ್ಕಾರ ಇವರನ್ನು ಶೋಷಣೆ ಮಾಡುತ್ತಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ., ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ…