KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಬಂಧಿಸಿ ತನ್ನ ವಶಕ್ಕೆ ಪಡೆದಿದೆ. ಇಬ್ಬರೂ ಈಗಾಗಲೇ ಸಿಐಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದರು. ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ಆರ್ಥಿಕ ವಹಿವಾಟುಗಳ ಕುರಿತು ಹೆಚ್ಚಿನ ತನಿಖೆಗಾಗಿ ಶುಕ್ರವಾರ ರಾತ್ರಿ ED ಇಬ್ಬರನ್ನೂ ಔಪಚಾರಿಕವಾಗಿ ಬಂಧಿಸಿ ಕಸ್ಟಡಿಗೆ ಪಡೆದಿದೆ ಎಂದು ವರದಿಯಾಗಿದೆ. KPSCಯ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ OMR ಉತ್ತರ ಪತ್ರಿಕೆಗಳ ಅಕ್ರಮ ತಿದ್ದುಪಡಿ ಸೇರಿದಂತೆ ಹಲವು ಆರೋಪಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ಅಭ್ಯರ್ಥಿಗಳಿಂದ ₹12 ಕೋಟಿಗೂ ಅಧಿಕ ಹಣ ಸಂಗ್ರಹವಾಗಿರುವ ಶಂಕೆ…

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಸಿಡಿಸಿಸಿ) 2025–26ನೇ ಸಾಲಿನಲ್ಲಿ ₹6.87 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ.98.5ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆದ ಬ್ಯಾಂಕಿನ ಆರ್ಥಿಕ ಪ್ರಗತಿ ಹಾಗೂ ಸಾಧನೆಗಳ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 21 ಡಿಸಿಸಿ ಬ್ಯಾಂಕ್‌ಗಳ ಪೈಕಿ ಚಿಕ್ಕಮಗಳೂರು ಬ್ಯಾಂಕ್ 7ನೇ ಸ್ಥಾನದಲ್ಲಿದೆ. ನಬಾರ್ಡ್‌ನ ಲೆಕ್ಕಪರಿಶೋಧನೆ ಹಾಗೂ ಮೌಲ್ಯಮಾಪನದಲ್ಲಿ ‘ಎ’ ಗ್ರೇಡ್ ಪಡೆದಿದೆ ಎಂದರು. 2025–26ರ ಅಂತ್ಯಕ್ಕೆ ಬ್ಯಾಂಕ್ ₹65.99 ಕೋಟಿ ಷೇರು ಬಂಡವಾಳ ಹೊಂದಿದ್ದು, 2.24 ಲಕ್ಷಕ್ಕೂ ಹೆಚ್ಚು ಠೇವಣಿದಾರರಿಂದ ₹1,568.53 ಕೋಟಿ ಠೇವಣಿ ಸಂಗ್ರಹಿಸಿದೆ. ವಾರ್ಷಿಕ ವಹಿವಾಟು ಸುಮಾರು ₹3,000 ಕೋಟಿ ಇದೆ ಎಂದು ತಿಳಿಸಿದರು. ಕಳೆದ ಸಾಲಿನಲ್ಲಿ 54,992 ರೈತರಿಗೆ ₹843.84 ಕೋಟಿ ಶೂನ್ಯ ಬಡ್ಡಿದರದ ಬೆಳೆ…

ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ವಿಚಾರಧಾರೆ ಹಾಗೂ ಕೊಡುಗೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಅಗತ್ಯವಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ದಲಿತರು, ಕೆಳಜಾತಿ ಹಾಗೂ ಮೀಸಲಾತಿಗೆ ಸೀಮಿತಗೊಳಿಸಿ ನೋಡುವ ಮನೋಭಾವವಿದೆ. ಅವರ ಬಹುಮುಖ ಚಿಂತನೆ, ಶಿಕ್ಷಣ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಹೆಚ್ಚಿನ ಅರಿವು ಮೂಡಬೇಕು ಎಂದರು. ವಿದ್ಯಾರ್ಥಿಗಳು ಅಂಬೇಡ್ಕರ್ ಕುರಿತು ಓದಬೇಕು ಅಂಬೇಡ್ಕರ್ ಅವರು ಹೇಗೆ ಶಿಕ್ಷಣ ಪಡೆದರು, ಉನ್ನತ ಶಿಕ್ಷಣವನ್ನು ಹೇಗೆ ಮುಂದುವರಿಸಿದರು ಹಾಗೂ ವಿವಿಧ ಹುದ್ದೆಗಳಲ್ಲಿ ನಿರ್ವಹಿಸಿದ ಜವಾಬ್ದಾರಿಗಳ ಅನುಭವಗಳು ಎಲ್ಲರಿಗೂ ಪ್ರೇರಣಾದಾಯಕವಾಗಿವೆ. ಭಾರತೀಯರಾದ ನಾವು ಅವರ ಬದುಕು ಮತ್ತು ಚಿಂತನೆಗಳನ್ನು…

‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಹಾಗೂ ತುಳು ಭಾಷೆಯ ಮಾನ್ಯತೆಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಧಾರಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಜನರ ಭಾವನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದಕ್ಕಿಂತ ಅವರ ಬದುಕು ಸುಧಾರಿಸುವ ನೈಜ ಅಭಿವೃದ್ಧಿಗೆ ಆದ್ಯತೆ ನೀಡಬೇಕಿತ್ತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸಭೆಯ ನಿರ್ಧಾರಗಳು ಕರಾವಳಿ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ತುಳು ಭಾಷೆಗೆ ಗೌರವ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವುದು ಕರಾವಳಿಯ ಜನರಿಗೆ ಹೆಮ್ಮೆಯ ಸಂಗತಿ. ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ, ಯಕ್ಷಗಾನ ಹಾಗೂ ಜಾನಪದ ಪರಂಪರೆ ಹೊಂದಿರುವ ತುಳು ಭಾಷೆಗೆ ದೊರೆತ ಗೌರವವು ತುಳುನಾಡಿನ ಹಿರಿಯರ…

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

ಮಂಗಳೂರು: ಕರಾವಳಿ ಕರ್ನಾಟಕದ ಜನರಿಗೆ ನ್ಯಾಯದ ಲಭ್ಯತೆ ಸುಲಭವಾಗುವಂತೆ ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲಿ ಮಂಗಳೂರಿನಲ್ಲೂ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕು ಎಂದು ಮಂಗಳೂರಿನ ವಕೀಲರ ನಿಯೋಗ ಆಗ್ರಹಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯ ಸಂದರ್ಭದಲ್ಲಿ (ಶುಕ್ರವಾರ) ವಕೀಲರ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿತು. ಪೀಠ ಸ್ಥಾಪನೆಗೆ ಸಂಪುಟದ ಅನುಮೋದನೆ ಅಗತ್ಯ: ಮಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷರೂ ಆದ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ನೇತೃತ್ವದ ನಿಯೋಗ, ಹಲವು ವರ್ಷಗಳಿಂದ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಲಾಗುತ್ತಿದ್ದರೂ ಈವರೆಗೆ ಸರ್ಕಾರಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ…

ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

ಮಂಗಳೂರು: ಜಿಲ್ಲಾ ಕಾರಾಗೃಹದ ಮೊಬೈಲ್ ಸಿಗ್ನಲ್ ಜಾಮ್ಮರ್‌ಗಳಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೇವೆಗೆ ಅಡಚಣೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸಮಸ್ಯೆ ಪರಿಹಾರಕ್ಕೆ ತಾಂತ್ರಿಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾರಾಗೃಹದ ಜಾಮ್ಮರ್ ಕಾರ್ಯಾಚರಣೆಯಿಂದ ಸುತ್ತಮುತ್ತಲ ಪ್ರದೇಶಗಳ ನಾಗರಿಕರಿಗೆ ಮೊಬೈಲ್ ಸಂಪರ್ಕದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಂಟಿ ತಾಂತ್ರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯ ಆಧಾರದ ಮೇಲೆ ಸಂಬಂಧಪಟ್ಟ ಸಂಸ್ಥೆಯು ಆಂಟೆನಾ ವಿನ್ಯಾಸ ಮತ್ತು ಜಾಮ್ಮರ್‌ನ ಸಾಮರ್ಥ್ಯವನ್ನು ಸೂಕ್ತವಾಗಿ ಹೊಂದಿಸುವ (ಆಪ್ಟಿಮೈಸೇಶನ್) ಕಾರ್ಯ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. ಕಾರಾಗೃಹದೊಳಗಿನ ಭದ್ರತಾ ಉದ್ದೇಶಕ್ಕೆ ಜಾಮ್ಮರ್‌ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದರ ಜತೆಗೆ, ಹೊರಭಾಗದಲ್ಲಿ ಮೊಬೈಲ್ ಸಂಪರ್ಕಕ್ಕೆ ಉಂಟಾಗುವ ಅನಗತ್ಯ ಅಡಚಣೆಯನ್ನು ಕನಿಷ್ಠಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಟೆಲಿಕಾಂ ಸೇವಾ…

SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಹಲವು ಲೋಪಗಳು ಕಂಡುಬಂದಿವೆ ಎಂದು ಆರೋಪಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC), ಈ ಕುರಿತು ತಕ್ಷಣ ರಾಜ್ಯಾದ್ಯಂತ ಸಮಗ್ರ ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. KPCC ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು, ಗಣತಿ ನಮೂನೆಗಳು, ಮತದಾರರ ಮ್ಯಾಪಿಂಗ್ ಹಾಗೂ ಮತದಾರರನ್ನು ‘ಸ್ಥಳಾಂತರಗೊಂಡವರು’ ಅಥವಾ ‘ಮೃತರು’ ಎಂದು ವರ್ಗೀಕರಿಸುವ ಪ್ರಕ್ರಿಯೆ ಕುರಿತು ಹಲವು ಸಮಸ್ಯೆಗಳು ವರದಿಯಾಗುತ್ತಿವೆ ಎಂದು ಗಮನ ಸೆಳೆದಿದ್ದಾರೆ. ಒಂದೇ ಮತಗಟ್ಟೆಯಲ್ಲಿ ಶೇ.62 ಮತದಾರರ ಸ್ಥಿತಿ ಪ್ರಶ್ನೆ ವಿಧಾನಸಭಾ ಕ್ಷೇತ್ರ ಸಂಖ್ಯೆ 153ರ ಭಾಗ ಸಂಖ್ಯೆ 512ರ ಅಂಕಿಅಂಶಗಳನ್ನು ಉದಾಹರಣೆಯಾಗಿ ನೀಡಿರುವ ಅವರು, ಇಲ್ಲಿ ಒಟ್ಟು 1,016 ಮತದಾರರಿದ್ದು, 654 ಗಣತಿ ನಮೂನೆಗಳು…

ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

ಹಾಸನ: ಬಯಲುಸೀಮೆ ಜಿಲ್ಲೆಗಳ ದಶಕಗಳ ಕನಸಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ನೀರು ಹರಿಸುವ ಗುರಿಯೊಂದಿಗೆ ಜಲಸಂಪನ್ಮೂಲ ಸಚಿವರು ಗುರುವಾರ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಟ್ಟು 24.01 ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಹಾಗೂ ಮುಂದಿನ ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿಯನ್ನು ಅಧಿಕಾರಿಗಳಿಗೆ ಸಚಿವರು ನೆನಪಿಸಿದರು. ಅರಸೀಕೆರೆ ತಾಲೂಕಿನ ತೊಳಲುತೊರೆ ಪ್ಯಾಕೇಜ್-8ರ ಗುರುತ್ವ ಕಾಲುವೆ ಕಾಮಗಾರಿ ಪರಿಶೀಲಿಸಿದ ಸಚಿವರು, ಮೈನಿಂಗ್ ಮತ್ತು ಲೈನಿಂಗ್ ಕಾಮಗಾರಿಯಲ್ಲಿ ವಿಳಂಬ ಮಾಡುತ್ತಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಕಾಲಹರಣ ಸಹಿಸುವುದಿಲ್ಲ ಎಂದು ಎಚ್ಚರಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಟ್ರಯಲ್ ರನ್‌ಗೆ ಸಿದ್ಧತೆ ಮಾಡುವಂತೆ ಸೂಚಿಸಿದರು. ರಂಗನಾಥ ಸ್ವಾಮಿ ದೇಗುಲದಲ್ಲಿ ಪೂಜೆ…

ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣವನ್ನು ಅಂದಾಜು ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಸೇವಾ ದಿವಸ’ ಕಾರ್ಯಕ್ರಮದಲ್ಲಿ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯನ್ನು ಸನ್ಮಾನಿಸಿ ಅವರು ಮಾತನಾಡಿದರು. ರೈಲ್ವೆ ಸೇವೆಯಲ್ಲಿ ಸಮರ್ಪಣೆ ಹಾಗೂ ಬದ್ಧತೆ ಪ್ರದರ್ಶಿಸಿದ ಸಿಬ್ಬಂದಿಯನ್ನು ಸಚಿವರು ಗೌರವಿಸಿದರು. ಬಳಿಕ ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್ ಅವರೊಂದಿಗೆ ‘ಆಶೀರ್ವಾದದ ದೀಪ’ ಬೆಳಗಿಸಿದರು. ವಂದೇ ಭಾರತ್ ರೈಲುಗಳ ನಿರ್ವಹಣಾ ಸಿಬ್ಬಂದಿ ಸೇರಿದಂತೆ ಸುಮಾರು 250 ರೈಲ್ವೆ ಸಿಬ್ಬಂದಿ ದೀಪ ಬೆಳಗಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಅವರ ರಾಷ್ಟ್ರಸೇವೆಯನ್ನು ಸ್ಮರಿಸುವ ಉದ್ದೇಶದಿಂದ…

ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

ಬೆಂಗಳೂರು: ಕೃತಕ ಬುದ್ಧಿಮತ್ತೆಯಿಂದ ಎದುರಾಗುತ್ತಿರುವ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ ನೀಡುವ ಶಕ್ತಿ ಇದೆ. ಈ ಸವಾಲುಗಳಿಗೆ ಭಾರತೀಯ ಪರಿಹಾರಗಳನ್ನು ಜಗತ್ತಿಗೆ ಅರ್ಥವಾಗುವ ಭಾಷೆಯಲ್ಲಿ ತಲುಪಿಸುವ ಅಗತ್ಯವಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ ಸಿ.ಆರ್. ಪ್ರತಿಪಾದಿಸಿದ್ದಾರೆ  ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಿದ್ದ ‘ಗುರುವಂದನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಶತಮಾನದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳಾದರೂ ಗುರುವಿನ ಸ್ಥಾನಮಾನ ಮುಂದುವರಿದಿತ್ತು. ಆದರೆ ಹಣ, ತಂತ್ರಜ್ಞಾನ ಸೇರಿದಂತೆ ಬದಲಾಗುತ್ತಿರುವ ಸಾಮಾಜಿಕ ವಾತಾವರಣದಲ್ಲಿ ಗುರುವಿನ ಸ್ಥಾನ ಹಲವು ಕಾರಣಗಳಿಂದ ಕುಗ್ಗುತ್ತಿದೆ ಎಂದರು. ‘ಜ್ಞಾನಪರಂಪರೆಯನ್ನು ವರ್ತಮಾನಕ್ಕೆ ತಲುಪಿಸಬೇಕು’ ಜಾಗತಿಕ ಶಿಕ್ಷಣ ವ್ಯವಸ್ಥೆಯಲ್ಲಿ ಸಂವಹನದ ಬದಲಾವಣೆಗಳನ್ನು ಗಮನಿಸಬೇಕು. ಅಗಾಧ ಭಾರತೀಯ ಜ್ಞಾನಪರಂಪರೆಯನ್ನು ವರ್ತಮಾನಕ್ಕೆ ಹೇಗೆ ತಲುಪಿಸಬೇಕು ಎಂಬ ಬಗ್ಗೆ ಚಿಂತನೆ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಹಲವು ಗುರುಗಳು ನಮ್ಮ ನಡುವೆ…