ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಸಂಕಲ್ಪ’ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ.…
Category: ರಾಜ್ಯ
ಆಶಾ ಕಾರ್ಯಕರ್ತೆಯರ ಬೇಡಿಕೆ ವಿಚಾರದಲ್ಲಿ ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಲು ಆಗ್ರಹ
ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ…
‘ರಕ್ತದ ಹನಿ’ ವಯಸ್ಸನ್ನು ವಿವರಿಸಬಲ್ಲದು..!
ನವದೆಹಲಿ: ಜಪಾನ್ನ ಒಸಾಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ವ್ಯಕ್ತಿಯ ಜೈವಿಕ ವಯಸ್ಸನ್ನು ಅಂದಾಜು ಮಾಡಲು ಹೊಸ AI ಮಾದರಿಯನ್ನು ರೂಪಿಸಿದ್ದಾರೆ. ಇದು ಜನನದ ನಂತರದ ವರ್ಷಗಳನ್ನು ಎಣಿಸುವ ಬದಲು, ಅವರ ದೇಹವು ಎಷ್ಟು ವಯಸ್ಸಾಗಿದೆ ಎಂಬುದರ ಅಳತೆ ವಿಧಾನವಾಗಬಹುದು. ಕೇವಲ ಐದು ಹನಿ ರಕ್ತದ ಹನಿಗಳನ್ನು ಬಳಸಿಕೊಂಡು, ಈ ಹೊಸ ವಿಧಾನವು 22 ಪ್ರಮುಖ ಸ್ಟೀರಾಯ್ಡ್ಗಳು ಮತ್ತು ಅವುಗಳ ಪರಸ್ಪರ ಕ್ರಿಯೆಗಳನ್ನು ವಿಶ್ಲೇಷಿಸಿ ಹೆಚ್ಚು ನಿಖರವಾದ ಆರೋಗ್ಯ ಮೌಲ್ಯಮಾಪನವನ್ನು ಒದಗಿಸುತ್ತದೆ. ಸೈನ್ಸ್ ಅಡ್ವಾನ್ಸಸ್ನಲ್ಲಿ ಪ್ರಕಟವಾದ ತಂಡದ ಅದ್ಭುತ ಅಧ್ಯಯನವು ವೈಯಕ್ತಿಕಗೊಳಿಸಿದ ಆರೋಗ್ಯ ನಿರ್ವಹಣೆಯಲ್ಲಿ ಸಂಭಾವ್ಯ ಹೆಜ್ಜೆಯನ್ನು ನೀಡುತ್ತದೆ. ಇದು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಅಪಾಯಗಳು ಮತ್ತು ಸೂಕ್ತವಾದ ಮಧ್ಯಸ್ಥಿಕೆಗಳನ್ನು ಮೊದಲೇ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಎಂದು ಸಂಶೋಧಕರು ವಿವರಿಸಿದ್ದಾರೆ. “ನಮ್ಮ ದೇಹವು ಹೋಮಿಯೋಸ್ಟಾಸಿಸ್ ಅನ್ನು ಕಾಪಾಡಿಕೊಳ್ಳಲು ಹಾರ್ಮೋನುಗಳನ್ನು ಅವಲಂಬಿಸಿದೆ, ಆದ್ದರಿಂದ ನಾವು ಯೋಚಿಸಿದ್ದೇವೆ, ಇವುಗಳನ್ನು ವಯಸ್ಸಾದ ಪ್ರಮುಖ ಸೂಚಕಗಳಾಗಿ…
‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಗದಗ್ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಆದರ್ಶ ನಾಯಕರಾಗಿದ್ದ ಕೆ.ಹೆಚ್.ಪಾಟೀಲ್ ಅವರನ್ನು ಸ್ಮರಿಸಿದ ಡಿ.ಕೆ.ಶಿವಕುಮಾರ್, ಸಹಕಾರ ರಂಗದ ಭೀಷ್ಮ ಕೆ.ಹೆಚ್.ಪಾಟೀಲ್ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ದೃಢ ನಿರ್ಧಾರಗಳನ್ನು ಕೈಗೊಂಡು,…
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು…
ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ವಾಗ್ವಾದದ ಅಖಾಡಕ್ಕಿಳಿದ ವಿಜಯೇಂದ್ರ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ…
ಬಿಜೆಪಿಗೆ ಒಲಿದ ಬೆಳಗಾವಿ ಗದ್ದುಗೆ ; ಮೇಯರ್ ಆಗಿ ಮಂಗೇಶ ಪವಾರ, ಉಪ ಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಗಳು ಮೇಲುಗೈ ಸಾಧಿಸಿದ್ದಾರೆ. ಮೇಯರ್ ಆಗಿ ಬಿಜೆಪಿಯ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಒಟ್ಟು 65 ಮತದಾರ ಪೈಕಿ 60 ಮಂದಿ ಚುನಾವಣಾ ಸಂದರ್ಭದಲ್ಲಿ ಹಾಜರಿದ್ದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್ ಹಾಗೂ ಓರ್ವ ಪಾಲಿಕೆ ಸದಸ್ಯ ಗೈರಾಗಿದ್ದರು.
‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ
ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದಿದ್ದು ತಮ್ಮ ವಿರುದ್ದದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರನ್ಯಾರಾವ್, ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಈ ಪ್ರಕರಣದಲ್ಲಿ ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರನ್ಯಾ ರಾವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹೇಳಿದ್ದಾರೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ನಾಲ್ಕು ಪುಟಗಳ ಪತ್ರದಲ್ಲಿ ಬರೆದುಕೊಂಡಿದ್ದಾರೆ.…
ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ
ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ ‘ಶತ ಚಂಡಿಕಾಯಾಗ’ ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ ‘ಚೆಂಡಿನ ಉತ್ಸವ’ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ. ಪೊಳಲಿ ಸನ್ನಿಧಾನದಲ್ಲಿ ಮಾರ್ಚ್ 12ರಂದು ಬಿಡುಗಡೆಯಾಗಿರುವ ‘ಪುರಲ್ದ ಸಿರಿಯೇ..’ ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ. ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ ‘ಪುರಾಲ್’ ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು ‘ಪುರಲ್ದ ಉಳ್ಳಾಲ್ತಿ’ ಎಂದೇ ಆಸ್ತಿಕರು ಕರೆಯುತ್ತಾರೆ. ದುಃಖ ದುಮ್ಮಾನಗಳಿಗೆ ಸಾಂತ್ವಾನ…
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು
ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ ಜಾತ್ರೆ ಇದಾಗಿದ್ದು ದೇಶ-ವಿದೇಶಗಳಲ್ಲಿ ‘ಪೊಳಲಿ ಚೆಂಡು’ ಎಂದೇ ಇದು ಪ್ರತೀತಿ. ಈ ವರ್ಷ 28 ದಿನಗಳ ಜಾತ್ರೆ ನಡೆಯಲಿದ್ದು ಎಪಿಲ್ 9 ರಂದು ‘ಕಡೆ ಚೆಂಡು’ ನಿಗದಿಯಾಗಿದೆ. ಪೊಳಲಿ ಚೆಂಡು ಉತ್ಸವದ ಸಂಕ್ಷಿಪ್ತ ಕ್ಯಾಲೆಂಡರ್ ಹೀಗಿದೆ: ಈ ಬಾರಿ ಏಪ್ರಿಲ್ 4ರಂದು 20ನೇ ದಂಡಮಾಲೋತ್ಸವ, ಏಪ್ರಿಲ್ 5ರಂದು ಮೊದಲ ಚೆಂಡು, ಏಪ್ರಿಲ್ 9ರಂದು ಕಡೇ ಚೆಂಡು, ಏಪ್ರಿಲ್ 10ರಂದು ಬ್ರಹ್ಮ ರಥೋತ್ಸವ, ಏಪ್ರಿಲ್ 11ರಂದು ಆರಾಟ ಮಹೋತ್ಸವ ಜರುಗಲಿದೆ. ದಕ್ಷಿಣಕನ್ನಡದ ಪೊಳಲಿಯಲ್ಲಿರುವ ನಾಡಿನ ಅಧಿ ದೇವತೆ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಪ್ರತೀ ವರ್ಷ ಮಾರ್ಚ್ 14ರ ತಡರಾತ್ರಿ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಾಗುತ್ತದೆ. ಧ್ವಜಾರೋಹಣ ನಂತರವಷ್ಟೇ …