ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ

ಬೆಂಗಳೂರು: ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದವರು ಸಂತಾಪ ಸೂಚಿಸಿದ್ದಾರೆ. ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ…

ಲಕ್ಕುಂಡಿಯಲ್ಲಿ ಉತ್ಖನನ; ಸಾರ್ವಜನಿಕ ಪ್ರವೇಶ, ಫೋಟೋ–ವೀಡಿಯೋಗ್ರಫಿಗೆ ಸಂಪೂರ್ಣ ನಿಷೇಧ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಭಾರೀ ಮೌಲ್ಯದ ಚಿನ್ನಾಭರಣ ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿನ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ಕಾರ್ಯ ಆರಂಭಿಸಲಾಗಿದ್ದು, ಉತ್ಖನನ ನಡೆಯುತ್ತಿರುವ ಸ್ಥಳವನ್ನು ನಿರ್ಬಂಧಿತ ಪ್ರದೇಶವಾಗಿ ಘೋಷಿಸಲಾಗಿದೆ. ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಪ್ರದೇಶ ಅತ್ಯಂತ ಸೂಕ್ಷ್ಮವಾಗಿರುವ ಕಾರಣ ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರು ಜನವರಿ 16ರಂದು ನೀಡಿದ ಪತ್ರದ ಆಧಾರದಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಅಧಿಕೃತವಾಗಿ ನೇಮಕಗೊಂಡ ಸಿಬ್ಬಂದಿಯನ್ನು ಹೊರತುಪಡಿಸಿ, ಯಾವುದೇ ಸಾರ್ವಜನಿಕರು, ಪ್ರವಾಸಿಗರು ಅಥವಾ ಇತರ ವ್ಯಕ್ತಿಗಳು ಉತ್ಖನನ ಸ್ಥಳಕ್ಕೆ ಪ್ರವೇಶಿಸುವುದು, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ನಡೆಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ…

ಹಿರಿಯ ಕಾಂಗ್ರೆಸ್ ನಾಯಕ ಭೀಮಣ್ಣ ಖಂಡ್ರೆ ವಿಧಿವಶ

ಬೀದರ್: ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಬೀದರ್‌ನ ತಮ್ಮ ಸ್ವಗೃಹದಲ್ಲಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಲ್ಸಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಸೋಮವಾರ ಮನೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿ ಕೊನೆಯುಸಿರೆಳೆದಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಸ್ವಗೃಹದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 1949–50ರಲ್ಲಿ ಪ್ರಜಾ ಸಮಾಜವಾದಿ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಭೀಮಣ್ಣ ಖಂಡ್ರೆ, 1953ರಲ್ಲಿ ಭಾಲ್ಕಿ ಪುರಸಭೆಯ ಮೊದಲ ಚುನಾಯಿತ ಅಧ್ಯಕ್ಷರಾಗಿ ಜನಸೇವೆಗೆ ಪ್ರವೇಶಿಸಿದರು. ಅವರು 1962, 1967, 1978 ಮತ್ತು 1983ರಲ್ಲಿ ಭಾಲ್ಕಿ ಕ್ಷೇತ್ರದಿಂದ…

ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಚರ್ಚೆ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆ ಜೆಡಿಎಸ್ ಪಕ್ಷ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಶಕ್ಕೆ ಸವಾಲೊಡ್ಡಲು ಮೈತ್ರಪಕ್ಷಗಳು ಕಾರ್ಯತಂತ್ರದಲ್ಲಿ ತೊಡಗಿವೆ. ಈ ನಡುವೆ, ಜಾತ್ಯತೀತ ದಳ ನಾಯಕರೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವುದು ಸೂಕ್ತ ಎಂದು ಹೇಳಿದ್ದಾರೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ…

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಾಂಗ್ಲಾದೇಶಿಗಳಿಗೆ 1,500 ರೂ.ಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಗ್ಗೆ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, “ಅಕ್ರಮ ವಲಸಿಗರು ರಾಜ್ಯಕ್ಕೆ ಮಾರಕವಾಗಬಹುದು ಎಂಬುದನ್ನು ಕಾಂಗ್ರೆಸ್ ಅರಿಯದಿರುವುದು ದುರಾದೃಷ್ಟಕರ. ನಿಮ್ಮ ಓಟಿನ ಆಸೆಗಾಗಿ ದೇಶದ ಆಂತರಿಕ ಸುರಕ್ಷತೆಯೊಂದಿಗೆ ಆಟವಾಡಬೇಡಿ” ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ಮೊದಲು, ಬಾಂಗ್ಲಾದೇಶಿಗಳು ದೇಶವನ್ನು ಹೇಗೆ ಪ್ರವೇಶಿಸುತ್ತಿದ್ದಾರೆಂದು ಹೇಳಿ ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ. ಗಡಿ ಕಾಯುವುದು ಜಿ ಪರಮೇಶ್ವರ ಅವರ ಕೆಲಸವೇ? ಅಮಿತ್ ಶಾ ಕಡಲೆಕಾಯಿ ತಿನ್ನುತ್ತಾರೋ ಅಥವಾ ಏನು? ಅವರು ಬಿಜೆಪಿ ಆಡಳಿತದ ರಾಜ್ಯಗಳನ್ನು ದಾಟಿ ಕರ್ನಾಟಕವನ್ನು ಹೇಗೆ ತಲುಪುತ್ತಿದ್ದಾರೆ? ಎಂದು ಪ್ರಿಯಾಂಕ್ ಖರ್ಗೆಪ್ರಶ್ನಿಸಿದ್ದಾರೆ. “ಮಹದೇವಪುರದಲ್ಲಿ, ಬಿಜೆಪಿಯ ಮಾಜಿ ಶಾಸಕರೊಬ್ಬರು ಸಾರ್ವಜನಿಕ…

ಗಿಲೆನ್-ಬಾರಿ ಸಿಂಡ್ರೋಮ್ (GBS) ಕಾಯಿಲೆ ಕಂಡುಬಂದರೆ ಸೂಕ್ತ ಚಿಕಿತ್ಸಾ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಎಂದವರು ತಿಳಿಸಿದ್ದಾರೆ. ಉಚಿತ ಚಿಕಿತ್ಸೆ: ಈ ಮೊದಲು ಇದ್ದ ಮೂಲ ಚಿಕಿತ್ಸೆಯ ಜೊತೆಗೆ ಈಗ IVIG ಥೆರಪಿಯನ್ನೂ ‘ಹೆಚ್ಚುವರಿ ಪ್ಯಾಕೇಜ್’ ಆಗಿ ನೀಡಲಾಗುವುದು. ಚಿಕಿತ್ಸಾ ವೆಚ್ಚದ ಮಿತಿ: ಪ್ರತಿ ರೋಗಿಗೆ ಗರಿಷ್ಠ ₹2 ಲಕ್ಷದವರೆಗೆ ಈ ಚಿಕಿತ್ಸಾ ಸೌಲಭ್ಯ ಉಚಿತವಾಗಿ ದೊರೆಯಲಿದೆ. ಎಲ್ಲಾ…

ಜನವರಿ 22 ರಿಂದ 31ರ ವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು: ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ ಕುರಿತು ಚರ್ಚಿಸಲು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನವರಿ 22 ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಿ, ನೂತನ ಕಾಯ್ದೆಯ ಕುರಿತು ವಿಸ್ತೃತವಾಗಿ ಚರ್ಚಿಸಿ, ನಿರ್ಣಯ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದವರು ತಿಳಿಸಿದ್ದಾರೆ. ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆಯು ಸಮಾಜದ ಮೇಲೆ ಬೀರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜನವರಿ 22 ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಿ, ನೂತನ ಕಾಯ್ದೆಯ ಕುರಿತು ವಿಸ್ತೃತವಾಗಿ ಚರ್ಚಿಸಿ, ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಬಿಜೆಪಿ ಸಮರ; ಸಿಎಂ ತವರಿನಿಂದ ಅಭಿಯಾನ

ಬೆಂಗಳೂರು: ಯುವಜನತೆಯ ಭವಿಷ್ಯ ಹಾಳು ಮಾಡುತ್ತಿರುವ ಡ್ರಗ್ಸ್‌ ಮಾಫಿಯಾ ತಡೆಗಟ್ಟಲು ಬಿಜೆಪಿಯು ಬೃಹತ್ ಜಾಗೃತಿ ಹೋರಾಟವನ್ನು ಸಿಎಂ ತವರು ಜಿಲ್ಲೆ ಮೈಸೂರಿನಿಂದ ಆರಂಭಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ. ಗಂಧದ ನಾಡು ಎಂದು ಖ್ಯಾತಿ ಹೊಂದಿದ್ದ ಕರುನಾಡು ಕಾಂಗ್ರೆಸ್ ಆಡಳಿತದಲ್ಲಿ ಡ್ರಗ್ಸ್ ಬೀಡಾಗಿದೆ. ನೆರೆ ರಾಜ್ಯದ ಪೊಲೀಸರು ಕರ್ನಾಟಕ ರಾಜ್ಯಕ್ಕೆ ಬಂದು ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ಮಾಡುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ಡ್ರಗ್ಸ್ ಮಾಫಿಯಾ ಜೊತೆಗೆ ಸಚಿವರ ಆಪ್ತರ ನಂಟು ಬೆಳಕಿಗೆ ಬಂದಿದೆ ಎಂದವರು ಆರೋಪಿಸಿದ್ದಾರೆ. ಸಮಾಜಘಾತುಕರನ್ನು ಹಾಗೂ ಅಪರಾಧಿಗಳನ್ನು ಪೋಷಿಸುವ ಸಿದ್ದರಾಮಯ್ಯ ಸರ್ಕಾರದ ಆಡಳಿತ ವೈಖರಿಯಿಂದ ಇಂದು ರಾಜ್ಯದ ಮೂಲೆ ಮೂಲೆಗೂ ಡ್ರಗ್ಸ್ ಘಾಟು ಹಬ್ಬಿದೆ ಎಂದು ವಿಜಯೇಂದ್ರ ವ್ಯಾಖ್ಯಾನಿಸಿದ್ದಾರೆ. ಡ್ರಗ್ಸ್‌ ದಂಧೆಯನ್ನು ಮಟ್ಟ ಹಾಕಿ, ಯುವಜನತೆಯನ್ನು ಇವುಗಳಿಂದ ರಕ್ಷಿಸಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ, ಜವಾಬ್ದಾರಿಯುತ ಪ್ರತಿಪಕ್ಷವಾಗಿ, ರಾಜ್ಯದ ಜನತೆಯ ಧ್ವನಿಯಾಗಿ…

ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ ಧಮ್ಕಿ; ‘ಮೌನ’ ಸಮ್ಮತಿ ಇದೆಯೇ? ಎಂದು ಸಿಎಂಗೆ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ ಧಮ್ಕಿ ಹಾಕಿರುವ ಘಟನೆಯನ್ನು ವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಮುಖಂಡರುಗಳು ಇದಕ್ಕೆ ತಕ್ಕಂತೆ ಪುಡಿರೌಡಿಗಳಂತೆ ವರ್ತಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಿದೆ. ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ನಿಯಮಬಾಹಿರವಾಗಿ ಕೃತ್ಯ ಎಸಗಿರುವುದು ಮಾತ್ರವಲ್ಲದೆ ಒಬ್ಬ ಕರ್ತವ್ಯ ನಿರತ ಮಹಿಳಾ ಅಧಿಕಾರಿಯ ಮೇಲೆ ಹೀಗೆ ಅಸಭ್ಯ ಪುಂಡನಂತೆ ವರ್ತಿಸುತ್ತಿರುವುದು ಅಕ್ಷಮ್ಯ. ‘ಈ ಮುಖಂಡನ ಈ ‘ಗೂಂಡಾ ವರ್ತನೆ’ಗೂ ಕೂಡ ಬಳ್ಳಾರಿಯ ಪ್ರಕರಣದಲ್ಲಿ ವಹಿಸಿದಂತೆ ಇದಕ್ಕೂ ನಿಮ್ಮ ‘ಮೌನ’ ಸಮ್ಮತಿ ಇದೆಯೇ? ಅಥವಾ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸುತ್ತೀರಾ?’ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಅಧಿಕಾರ ಮದದಿಂದ ಜನಸಾಮಾನ್ಯರ, ಪ್ರಾಮಾಣಿಕ ಅಧಿಕಾರಿಗಳ ಮೇಲೆ…

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ ನೀಡಿದರು. ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ||ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದಾರೆ. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು. ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ ಎಂದರು. ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು…