ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ.…
Category: ರಾಜ್ಯ
ಬ್ರಿಟಿಷ್ ಸಂಸತ್ ಬಳಿ ಬಸವೇಶ್ವರರ 891ನೇ ಜಯಂತ್ಯುತ್ಸವ: ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂಗೆ ಆಹ್ವಾನ
ಲಂಡನ್: ಲಂಡನ್ ಥೇಮ್ಸ್ ನದಿ ತೀರದಲ್ಲಿರುವ ಲ್ಯಾಂಬೆತ್ ಬಸವೇಶ್ವರ ಪ್ರತಿಮೆ ಬಳಿ ಈ ಬಾರಿ ಬಸವೇಶ್ವರರ 891 ನೇ ಜಯಂತಿಯನ್ನು ವಿಶೇಷ ಕೈಂಕರ್ಯವಾಗಿ ಆಚರಿಸಲು ತಯಾರಿ ನಡೆದಿದೆ. ಏಪ್ರಿಲ್ 30ರಂದು ಬೆಳಿಗ್ಗೆ 11:30 ಕ್ಕೆ ಬ್ರಿಟಿಷ್ ಸಂಸತ್ ಬಳಿ ಭವ್ಯ ಸಮಾರಂಭ ನಡೆಯಲಿದ್ದು, ಈ ಸಮಾರಂಭಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದು ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷರೂ ಆದ ಲಂಡನ್ ಬರೋ ಆಫ್ ಲ್ಯಾಂಬೆತ್ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ತಿಳಿಸಿದ್ದಾರೆ. ಏಪ್ರಿಲ್ 30ರಂದು ನಡೆಯುವ ಸಮಾರಂಭದಲ್ಲಿ ಯುಕೆಯ ಪ್ರಧಾನಿ ಸರ್ ಕಿಯರ್ ಸ್ಟಾರ್ಮರ್ ಸಂಪುಟದ ಸಚಿವರು ಹಾಗೂ ಲಂಡನಿನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಲಂಡನ್ನಿನ ಕಾರ್ಮಿಕ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರೂ ಆದ ಡಾ.ನೀರಜ್ ಪಾಟೀಲ್ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸಲು ಕನ್ನಡಿಗರಾದ…
ವಿನಯ್ ಸಾವಿನ ಪ್ರಕರಣ? ಬಿಜೆಪಿಗೆ ಪ್ರತಿಭಟನೆ ಮೂಲಕವೇ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ
ಬೆಂಗಳೂರು: ವಿನಯ್ ಸೋಮಯ್ಯ ಸಾವಿನ ಪ್ರಕರಣ ಕುರಿತಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಧನಂಜಯ್ ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದರು. ತನ್ನೇರಾ ಮೈನಾ ಅವರು ಮಡಿಕೇರಿ ಸರ್ಕಲ್ ಠಾಣೆಯಲ್ಲಿ ಮಾರ್ಚ್ 5 ರಂದು ಕೊಡಗಿನ ಸಮಸ್ಯೆಗಳು ಹಾಗೂ ಸೂಚನೆಗಳು ಎನ್ನುವ ವಾಟ್ಸಪ್ ಗುಂಪಿನಲ್ಲಿ ಬರುವ ಸಂದೇಶವನ್ನು ಗಮನಿಸಿದ ತನ್ನೇರಾ ಮೈನಾ ಅವರು ರಾಜೇಂದ್ರ, ವಿಷ್ಣು ನಾಚಪ್ಪ, ವಿನಯ್ ಸೋಮಯ್ಯ ಅವರ ವಿರುದ್ದ ದೂರು ಸಲ್ಲಿಸುತ್ತಾರೆ. ವಿನಯ್ ಸೋಮಯ್ಯ ಅವರ ಕೊನೆಯ ವಾಟ್ಸಪ್ ಸಂದೇಶದ ಕೊನೆಯ ಪ್ಯಾರದಲ್ಲಿ ‘ನನ್ನ ವಿರುದ್ದ ಎಫ್ ಐಆರ್ ದಾಖಲಾದಾಗ ಬೆಂಬಲಕ್ಕೆ ನಿಂತ ಪ್ರತಾಪ್ ಸಿಂಹ, ಕೆಜೆ.ಬೋಪಯ್ಯ, ಅಪ್ಪಚ್ಚು ರಂಜನ್, ಎಂಪಿ ಚರಣ್, ವಕೀಲ ರಾಕೇಶ್ ದೇವಯ್ಯ, ನಿಶಾಂತ್,ಮೋಹನ್ ಅವರಿಗೆ ಧನ್ಯವಾದಗಳು…
ಮಹಿಳೆಯರಿಗೆ ‘ರುಮಟಾಯ್ಡ್ ಸಂಧಿವಾತ’ ಸವಾಲು
ನವದೆಹಲಿ: ರಕ್ತದಲ್ಲಿನ ಕೊಬ್ಬಿನ ಸಾಮಾನ್ಯ ವಿಧವಾದ ಟ್ರೈಗ್ಲಿಸರೈಡ್ಗಳು (Triglycerides) ಮಹಿಳೆಯರಲ್ಲಿ ರುಮಟಾಯ್ಡ್ ಸಂಧಿವಾತಕ್ಕೆ (rheumatoid arthritis) ಸಂಭಾವ್ಯ ಮಾರ್ಪಡಿಸಬಹುದಾದ ಅಪಾಯಕಾರಿ ಅಂಶವಾಗಿರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ರುಮಟಾಯ್ಡ್ ಸಂಧಿವಾತವು ಮಹಿಳೆಯರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುವ ದೀರ್ಘಕಾಲದ ಸ್ವಯಂ ನಿರೋಧಕ ಕಾಯಿಲೆಯಾಗಿದೆ. ಇದು ಕೀಲುಗಳ ಉರಿಯೂತ, ನೋವು ಮತ್ತು ಊತದಿಂದ ನಿರೂಪಿಸಲ್ಪಟ್ಟಿದೆ, ಇದು ತೀವ್ರತರವಾದ ಪ್ರಕರಣಗಳಲ್ಲಿ ಕೀಲು ವಿರೂಪಗಳು ಮತ್ತು ಕ್ರಿಯಾತ್ಮಕ ಅಂಗವೈಕಲ್ಯಗಳಿಗೆ ಕಾರಣವಾಗಬಹುದು. ಲಿಪಿಡ್ ಚಯಾಪಚಯ ಕ್ರಿಯೆಯ ಪ್ರಮುಖ ಸೂಚಕಗಳಾದ ಟ್ರೈಗ್ಲಿಸರೈಡ್ಗಳು ಉರಿಯೂತ ಮತ್ತು ಚಯಾಪಚಯ ಅಸ್ವಸ್ಥತೆಗಳಿಗೆ ಸಂಬಂಧಿಸಿವೆ, ಎರಡೂ ರುಮಟಾಯ್ಡ್ ಸಂಧಿವಾತದ ರೋಗಕಾರಕತೆಗೆ ಕೊಡುಗೆ ನೀಡುತ್ತವೆ. ಆದಾಗ್ಯೂ, ಟ್ರೈಗ್ಲಿಸರೈಡ್ ಮಟ್ಟಗಳು ಮತ್ತು ಮಹಿಳೆಯರಲ್ಲಿ ರುಮಟಾಯ್ಡ್ ಸಂಧಿವಾತದ ಹರಡುವಿಕೆಯ ನಡುವಿನ ಸಂಬಂಧವು ಸ್ಪಷ್ಟವಾಗಿಲ್ಲ. ತನಿಖೆ ನಡೆಸಲು, ಚೀನಾದ ಸಿಚುವಾನ್ನಲ್ಲಿರುವ ಸುಯಿನಿಂಗ್ ಮುನ್ಸಿಪಲ್ ಹಾಸ್ಪಿಟಲ್ ಆಫ್ ಟ್ರೆಡಿಷನಲ್ ಚೈನೀಸ್ ಮೆಡಿಸಿನ್ನ ಸಂಶೋಧಕರ ತಂಡವು 1999 ಮತ್ತು 2018 ರ…
ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ
ಮುಂಬೈ: ಇತರ ತಂಡಗಳ ಸೋಲು ಗೆಲುವು ಬೇರೊಂದು ತಂಡದ ಭವಿಷ್ಯ ನಿರ್ಧರಿಸಬಹುದು ಎಂಬುದಕ್ಕೆ ಶನಿವಾರ ನಡೆದ ಐಪಿಎಲ್ ಪಂದ್ಯ ಸಾಕ್ಷಿಯಾಗಿದೆ. ಶನಿವಾರ ನಡೆದ 2 ಪಂದ್ಯಗಳಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಮಂಡಿಯೂರಿದರೆ, ಡೆಲ್ಲಿ ವಿರುದ್ಧ ಚೆನ್ನೈ ಸೋಲು ಕಂಡಿದೆ. ಇದರ ಲಾಭ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ಗೆ ಸಿಕ್ಕಿದೆ. ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಸೋಲು ಕಂಡ ನಂತರ ಭಾರೀ ಬದಲಾವಣೆಯಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಅಗ್ರ ಸ್ಥಾನಕ್ಕೇರಿದರೆ, ಅಗ್ರಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಇದೀಗ 4ನೇ ಸ್ಥಾನಕ್ಕೆ ಜಾರಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನಕ್ಕೆ ಕುಸಿದಿದೆ. 4ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2ನೇ ಸ್ಥಾನಕ್ಕೆ ಜಿಗಿದಿದೆ. ಗುಜರಾತ್ ಟೈಟನ್ಸ್ 3ನೇ ಸ್ಥಾನದಲ್ಲಿದೆ. ಐಪಿಎಲ್ ಅಂಕ ಪಟ್ಟಿ…
‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?
ನವದೆಹಲಿ: ಸಂಭವನೀಯ ಅಪಾಯದ ಸರಿಯಾದ ಮೌಲ್ಯಮಾಪನವಿಲ್ಲದೆ ಯುವಜನರಿಗೆ ಹೆಚ್ಚಾಗಿ ಪ್ರತಿಜೀವಕಗಳನ್ನು ಶಿಫಾರಸು ಮಾಡಲಾಗುತ್ತಿದೆ. ಇದು ಪ್ರತಿರೋಧಕ್ಕೆ ಕಾರಣವಾಗಬಹುದು ಎಂದು ಅಧ್ಯಯನ ವರದಿಯೊಂದು ಎಚ್ಚರಿಸಿದೆ. ಲಂಡನಿನ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ನೇತೃತ್ವದ ಅಧ್ಯಯನವು, ವೈದ್ಯರು ಸೋಂಕು ಹೊಂದಿರುವ ಹತ್ತಾರು ಸಾವಿರ ರೋಗಿಗಳಿಗೆ ಪ್ರತಿಜೀವಕಗಳನ್ನು ಶಿಫಾರಸು ಮಾಡುತ್ತಿದ್ದಾರೆ ಎಂದು ತೋರಿಸಿದೆ. ಮುನ್ನರಿವು ಮತ್ತು ಸೋಂಕು ಹದಗೆಡುವ ಅಪಾಯವನ್ನು ಕಡಿಮೆ ಅಥವಾ ಪರಿಗಣಿಸದೆ ಈ ರೀತಿ ಶಿಫಾರಸು ಮಾಡುವ ನಡೆ ಸರಿಯಲ್ಲ ಎಂದಿದೆ. 15.7 ದಶಲಕ್ಷ ರೋಗಿಗಳ ದಾಖಲೆಗಳ ವಿಶ್ಲೇಷಣೆಯನ್ನು ಆಧರಿಸಿದ ಅಧ್ಯಯನವು, ಮಾದರಿಯಲ್ಲಿರುವ ಹೆಚ್ಚಿನ ವಯಸ್ಸಾದ ರೋಗಿಗಳು ಮೇಲ್ಭಾಗದ ಉಸಿರಾಟದ ಸೋಂಕುಗಳಿಗೆ ಪ್ರತಿಜೀವಕವನ್ನು ಪಡೆಯುವ ಕಿರಿಯ ರೋಗಿಗಳಿಗಿಂತ ಶೇಕಡಾ 31 ರಷ್ಟು ಕಡಿಮೆ ಎಂದು ಬಹಿರಂಗಪಡಿಸಿದೆ. ಇದರರ್ಥ “ಅನೇಕ ಕಿರಿಯ ಜನರಿಗೆ ಪ್ರತಿಜೀವಕಗಳನ್ನು ಶಿಫಾರಸು ಮಾಡಲಾಗುತ್ತಿದೆ, ಅವರು ಅವುಗಳಿಲ್ಲದೆ ಚೇತರಿಸಿಕೊಳ್ಳಲು ಸಾಕಷ್ಟು ಸದೃಢರಾಗಿದ್ದರೂ ಸಹ, ಇದು ಪ್ರತಿರೋಧಕ್ಕೆ ಕಾರಣವಾಗಬಹುದು”…
ವಿನಯ್ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದಿದೆ. ಈ ಸಂಬಂಧ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ನಮ್ಮ ಬಿಜೆಪಿ ಕಾರ್ಯಕರ್ತ ದಿ.ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣರಾಗಿರುವವರ ಸ್ಥಳೀಯ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಯಿತು. pic.twitter.com/j3ZMSLh1qF — N Ravi Kumar (@nrkbjp) April 5, 2025 ಇದೇ ವೇಳೆ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾಗಿರುವವರ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಗಮನಸೆಳೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.…
ಬಿಜೆಪಿ ನಾಯಕರಿಂದ ಮೃತದೇಹದ ಮೇಲೆ ರಾಜಕೀಯ; ಎ.ಎಸ್. ಪೊನ್ನಣ್ಣ ಆಕ್ರೋಶ
ಮಡಿಕೇರಿ: ಬಿಜೆಪಿ ನಾಯಕರು ಮೃತದೇಹದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ಬಗ್ಗೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿರುವ ಎ.ಎಸ್. ಪೊನ್ನಣ್ಣ, ಬಿಜೆಪಿ ನಾಯಕರು ಮೃತದೇಹದ ಮೇಲೆ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಅವರು ಇಂದು ಮಾಡಿದ್ದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಸೂಕ್ತ ತನಿಖೆಯ ಮೂಲಕ ಸತ್ಯ ಹೊರಬರುತ್ತದೆ. ಆದರೆ, ಬಿಜೆಪಿಗೆ ತನಿಖೆ ಮಾಡುವುದು ಬೇಕಿಲ್ಲ. ಅವರು ಈ ವಿಷಯದಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಿರಾಜಪೇಟೆ ಕಾಂಗ್ರೆಸ್ ಶಾಸಕರೂ ಆದ ಎ.ಎಸ್. ಪೊನ್ನಣ್ಣ ಪ್ರತಿಪಕ್ಷ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ ಸುಧಾಕರ್ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು ಎಂದವರು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು. pic.twitter.com/GwViMVwkaE — Dr Sudhakar K (@DrSudhakar_) April 5, 2025