ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ತಮ್ಮದಲ್ಲ ಎಂದು ಡಿ.ವಿ. ಸದಾನಂದಗೌಡ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. “ವೈರಲ್ ಆಗಿರುವ ಆಡಿಯೋ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಬಗ್ಗೆ ಸದಾನಂದಗೌಡ ಅವರೇ ಅದು ತಮ್ಮ ಧ್ವನಿಯಲ್ಲ ಎಂದು ಹೇಳಿದ್ದಾರೆ” ಎಂದು ವಿಜಯೇಂದ್ರ ತಿಳಿಸಿದರು. ಪಕ್ಷದ ಹಿರಿಯ ನಾಯಕರ ಹೆಸರಿನೊಂದಿಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು. ಇದೇ ವೇಳೆ, ವಿಧಾನ ಪರಿಷತ್ ಚುನಾವಣೆಯಲ್ಲಿ…
Category: ರಾಜ್ಯ
ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸಿ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ನಡೆಯುತ್ತಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಇದೇ ಕಾರಣಕ್ಕೆ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕ್ವಾರಿ ಮಾಲೀಕರು ಕೂಡ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ…
ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ
ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದೆ. ಮಂಗಳವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ. ಹಿಟಾಚಿ ಯಂತ್ರದ ಮೂಲಕ ಕಲ್ಲು ತೆಗೆಯುವ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕ್ವಾರಿಯಲ್ಲಿ ಬಿಹಾರ ಮೂಲದ 10ರಿಂದ 15 ಕಾರ್ಮಿಕರು ಹಾಗೂ 2ರಿಂದ 3 ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ರಾಮನಗರದ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ…
‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು ವಿರೋಧ ಪಕ್ಷವಾದ ಜೆಡಿಎಸ್ ತೀವ್ರವಾಗಿ ಟೀಕಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಉಚಿತ ವಿದ್ಯುತ್ ಯೋಜನೆಗೆ ಜಾತಿ ಪ್ರಮಾಣ ಪತ್ರ ಹಾಗೂ ಪ್ಯಾನ್ ಕಾರ್ಡ್ ಕೇಳುವುದರ ಹಿಂದಿನ ಉದ್ದೇಶವೇನು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. “ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಮನೆ-ಮನೆ ಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ” ಎಂದು ಜೆಡಿಎಸ್ ಆರೋಪಿಸಿದೆ. ಇದಲ್ಲದೆ, “ಉಚಿತ ವಿದ್ಯುತ್ ಪಡೆಯಲು ಪ್ಯಾನ್ ಕಾರ್ಡ್ ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂಬುದನ್ನು ದೃಢೀಕರಿಸಲು ಆಧಾರ್…
ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ
ಬೆಂಗಳೂರು: ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಹಣದ ವಿಚಾರದಲ್ಲಿ ಸಿಎಜಿ, ನಕಲಿ ಖಾತೆಗಳಿಗೆ ಹಣ ಹೋಗಿದೆ. ಒಂದೇ ಖಾತೆಗೆ ಹಣ ಹಾಕಿದ್ದಾರೆ, ಸತ್ತವರ ಹೆಸರಿಗೆ ಹಣ ಹೋಗಿದೆ ಎಂದು ತಿಳಿಸಿದೆ. ಇದರ ಕುರಿತು ಯಾಕೆ ಇನ್ನೂ ಎಫ್ಐಆರ್ ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರ ಹೆಸರಿನಲ್ಲಿ ಲೂಟಿಯನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುವುದೇ ಎಂದು ಪ್ರಶ್ನೆ ಹಾಕಿದರು. ಯಾಕೆ ಇವತ್ತಿನವರೆಗೂ ಎಸ್ಐಟಿ ರಚಿಸಿಲ್ಲ? ಎಂದರು. ಗೃಹಲಕ್ಷ್ಮಿ ಯೋಜನೆಯ 2 ತಿಂಗಳಿನ 5 ಸಾವಿರ ಕೋಟಿ ಹಣ ಖಾತೆಗೇ ಜಮೆ ಆಗಿಲ್ಲವೆಂದು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಆಗಿದೆ. ಅವತ್ತಿನ ಸಚಿವೆ ಆರಂಭದಲ್ಲಿ ಉಡಾಫೆ ಮಾತನಾಡಿದ್ದರು. ಮಹೇಶ್ ಟೆಂಗಿನಕಾಯಿಯವರು ದಾಖಲೆ ತಂದಿಟ್ಟರು. ಹೈದರಾಲಿ ಸೈನಿಕರ ಸಂಬಳ ಮುಂದೂಡಿ ಸಂಬಳ ಎಗರಿಸುತ್ತಿದ್ದ ವಿಚಾರವನ್ನು ಸುರೇಶ್…
ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ
ಬೆಂಗಳೂರು: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಸಂಬಂಧ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹೇಳುವ ರೀತಿ ಅಯೋಧ್ಯೆಯ ಟ್ರಸ್ಟ್’ನಲ್ಲಿ ಬಿಜೆಪಿಯವರು ಯಾರೂ ಇಲ್ಲ. ಆದರೂ ಬಿಜೆಪಿಯವರು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಆಗಿರುವುದರಿಂದ ನಮಗೂ ನೋವಾಗಿದೆ. ಅಯೋಧ್ಯೆ ಐದು ಶತಮಾನಗಳ ಹೋರಾಟ. ಲಕ್ಷಾಂತರ ಜನ ರಾಮಮಂದಿರ ಪುನರ್ ನಿರ್ಮಾಣಕ್ಕಾಗಿ ಜೀವ ತೆತ್ತಿದ್ದಾರೆ. ಕೋಟ್ಯಂತರ ಜನರ ಭಾವನೆ ಬೆರೆಸಿ ಮಂದಿರ ನಿರ್ಮಾಣ ಆಗಿದೆ ಎಂದರು. ರಾಮಮಂದಿರದ ನಿರ್ಮಾಣ ವಿರೋಧಿಗಳನ್ನು ಸೋಲಿಸಿ ಪರವಾಗಿದ್ದವರಿಗೆ ಮತ ಹಾಕಿ ಜನ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ಕೆಲವರು ಹಣ ದುರುಪಯೋಗ ಮಾಡಿದ್ದಾರೆ. ಆರೋಪ ಬಂದ ತಕ್ಷಣ ಸರ್ಕಾರ ಎಸ್ಐಟಿ ರಚಿಸಲಾಗಿದೆ. ಎಂಟಕ್ಕೂ ಹೆಚ್ಚು…
‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್
ಬೆಂಗಳೂರು: “ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಆದರೆ ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ನಾರಾಯಣಗುರು, ಕನಕದಾಸ ಹಾಗೂ ಬಸವಣ್ಣ ಅವರು ಬೋಧಿಸಿದ ಧರ್ಮವೇ ಹೊರತು, ಗೋಲ್ವಾಲ್ಕರ್, ಗೋಡ್ಸೆ ಮತ್ತು ಹೆಡಗೆವಾರ್ ಪ್ರತಿಪಾದಿಸಿದ ಹಿಂದೂ ಧರ್ಮವಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಬಿಜೆಪಿಯವರು ದೇಶವನ್ನು ಹಿಮ್ಮುಖ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ. ಜನರು ಅನಕ್ಷರಸ್ಥರಾಗಿದ್ದಷ್ಟು ಅಂಧಭಕ್ತರನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಜಾತಿ-ಧರ್ಮದ ಗಲಭೆಗಳಲ್ಲಿ ಜೈಲು ಸೇರುವವರು ದಲಿತರು ಮತ್ತು ಶೂದ್ರರೇ ಹೊರತು, ಲೂಟಿ ನಡೆಸುವವರು ಅಲ್ಲ” ಎಂದು ಆರೋಪಿಸಿದರು. ದೇವಾಲಯಗಳ ಲೂಟಿ ಕುರಿತು ಮಾತನಾಡಿದ ಅವರು, “ದೇವರ ಬಗ್ಗೆ…
‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ಪದೇಪದೇ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)ಕ್ಕೆ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ಆಗಾಗ್ಗೆ ತಾಂತ್ರಿಕ ದೋಷಗಳು ಕಾಣಿಸಿಕೊಂಡು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೇಂದ್ರದ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿರುವ ಮೆಟ್ರೋ ಸೇವೆಯ ವ್ಯತ್ಯಯಗಳ ಕುರಿತು ತನಿಖೆ ನಡೆಸಿ, ಕೈಗೊಂಡಿರುವ ಸರಿಪಡಿಸುವ ಕ್ರಮಗಳ ಸಮಗ್ರ ವರದಿ ಸಲ್ಲಿಸುವಂತೆ BMRCLಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ…
ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್
ಬೆಂಗಳೂರು: ಮೂರು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆಂಬ ಆಡಿಯೋ ಬಿಜೆಪಿ ಪಾಳ್ಯದಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾವು ಏನೂ ಹೇಳಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡರು ಹೇಳಿದ್ದಾರೆ. ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ಅದನ್ನು ವರಿಷ್ಠರು ಮಾತ್ರ ತೀರ್ಮಾನಿಸುತ್ತಾರೆ’ ಎಂದರು. ಎಲ್ಲರ ಮನೆಯಲ್ಲಿ ದೋಸೆ ತೂತಾದರೆ ಕಾಂಗ್ರೆಸ್ನವರದ್ದು ಹೆಚ್ಚು ತೂತಾಗಿರುವುದರಿಂದ ಅವರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್ ಕೆಂಪೇಗೌಡ ಜಯಂತಿ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಅಲ್ಲಿಗೆ ಮುಕ್ತಾಯ ಮಾಡಿದ್ದು, ಆ ರೀತಿ…
ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮಂಗಳೂರಿನ ಕಂಕನಾಡಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಆರಂಭವಾದ ಭಾರೀ ಮಳೆ ಬುಧವಾರವೂ ಮುಂದುವರಿದಿದ್ದು, ಇದೇ ವೇಳೆ ಕಂಕನಾಡಿಯಲ್ಲಿದ್ದ ಹಳೆಯ ಮನೆ ಏಕಾಏಕಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಹಾಗೂ ಗಾಯಾಳುಗಳು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…
