ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ ನೀಡುತ್ತಾ, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು…

ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಳಗಾವಿ: ರಾಜ್ಯದ ರಾಜಕೀಯವಾಗಿ ಅತಿದೊಡ್ಡ ಜಿಲ್ಲೆ ಎನ್ನಲಾದ ಬೆಳಗಾವಿ ವಿಭಜನೆ ಪ್ರಶ್ನೆ ಮತ್ತೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳ ರಚನೆಗೆ ಒತ್ತಾಯಿಸಿ ನಿಯೋಗವೊಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರು ಹೊರತಾಗಿಯೇ ರಾಜ್ಯದ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಅವಶ್ಯಕತೆಯ ಕುರಿತ ಬೇಡಿಕೆ ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ. ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ದಿನ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯನ್ನು ಸಣ್ಣ ಬೆಳಗಾವಿ ಜಿಲ್ಲೆಯಾಗಿ ಉಳಿಸಬೇಕು ಹಾಗೂ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಪ್ರತ್ಯೇಕವಾಗಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ…ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿಯವರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ ಸಂಕಷ್ಟದಲ್ಲಿದ್ದ ಮೆಕ್ಕೆ ಜೋಳ ಬೆಳೆಯುವ ರೈತರ ಪರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ ರೂ. 2400 ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ…

ಕಿದ್ವಾಯಿ ಆಸ್ಪತ್ರೆಯಲ್ಲಿ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಯಿತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ತದನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು. ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್,…

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ ವಿಚಾರ ಚರ್ಚಿಸಿ; ವಿಜಯೇಂದ್ರ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು…

ಮಠಾಧೀಶರ ಕುರಿತ ಹೇಳಿಕೆ ಬಗ್ಗೆ ಒಕ್ಕಲಿಗ ಶ್ರೀಗಳ ಕ್ಷಮೆಯಾಚಿಸಿದ ಕುಮಾರಸ್ವಾಮಿ

ಮಂಡ್ಯ: ರಾಜಕೀಯ ವಿಚಾರಗಳಲ್ಲಿ ಮಠಾಧೀಶರು ಹಸ್ತಕ್ಷೇಪ ಮಾಡುತ್ತಾರೆ ಎಂಬ ತಮ್ಮ ಹೇಳಿಕೆ ಬಿರುಸಿನ ಚರ್ಚೆ ಹುಟ್ಟಿಸಿದ ಹಿನ್ನೆಲೆಯಲ್ಲಿ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿಯವರ ಮುಂದೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು. ಮಂಡ್ಯದ ವಿ.ಸಿ. ಫಾರ್ಮ್‌ನಲ್ಲಿ ನಡೆದ ಕೃಷಿ ಮೇಳದಲ್ಲಿ, ಸ್ವಾಮೀಜಿಯವರ ಸಮ್ಮುಖದಲ್ಲಿ ಕುಮಾರಸ್ವಾಮಿ ಕೈಮುಗಿದು ಕ್ಷಮೆಯಾಚಿದರು. ಸ್ವಾಮೀಜಿ ಮುಗುಳ್ನಗುತ್ತ ಪ್ರತಿಕ್ರಿಯಿಸಿದರೆ, ಜನಸ್ತೋಮವು ಚಪ್ಪಾಳೆ ಹೊಡೆದು ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿತು. “ನನ್ನ ಹಿಂದಿನ ಮಾತುಗಳಿಂದ ಪೂಜ್ಯ ಸ್ವಾಮೀಜಿಗೆ ಯಾವುದೇ ಅಗೌರವ ಉಂಟಾಗಿದ್ದರೆ, ನಾನು ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ನಮ್ಮ ನಿಷ್ಠೆ ನಮ್ಮೊಳಗೇ ಇದೆ; ಅದನ್ನು ತೋರಿಸಿಕೊಳ್ಳುವ ಅಗತ್ಯವಿಲ್ಲ. ಸ್ವಾಮೀಜಿಯ ಬಗ್ಗೆ ನಾನು ಯಾವ ತಪ್ಪನ್ನಾದರೂ ಮಾಡಿಕೊಂಡಿದ್ದರೆ, ಸರ್ವಜನಿಕವಾಗಿ ಕ್ಷಮಿಸಿ,” ಎಂದು ಕುಮಾರಸ್ವಾಮಿ ಹೇಳಿದರು. ಹೊಸ ವಿವಾದಕ್ಕೆ ಸ್ಪಷ್ಟನೆ ನೀಡಿದ ಅವರು, “ಸ್ವಾಮೀಜಿಗಳನ್ನು ಈ ರೀತಿಯ…

ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್‌ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚುಗಳಿಂದ ದಾಳಿ ನಡೆಸಿ ಗಣೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಣೇಶ್ ಗೌಡ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯ ಮುಖವಾಗಿದ್ದರು. ಘಟನೆಯ ವೇಳೆ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ಕಲ್ಮರಡಿ ಮಠದ ಸಮೀಪ ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.…

ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್‌ ಬಾಬು ಅವರು ತಮ್ಮ ಕ್ಷೇತ್ರದ ರೈಲು ಸಂಬಂಧಿತ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ಕೋಲಾರದ ಕೆ.ಜಿ.ಎಫ್, ಬಂಗಾರಪೇಟೆ ಮತ್ತು ಮಾಲೂರು ತಾಲ್ಲೂಕುಗಳಿಂದ ಪ್ರತಿದಿನ 25 ರಿಂದ 30 ಸಾವಿರ ಜನರು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಪ್ರಯಾಣಿಸುತ್ತಿರುವುದನ್ನು ಉಲ್ಲೇಖಿಸಿದ ಅವರು, ಈ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಸ್ತುತ 12 ಬೋಗಿಗಳಿರುವ ರೈಲುಗಳ ಸಂಖ್ಯೆಯನ್ನು 18ಕ್ಕೆ ಹೆಚ್ಚಿಸಲು ರೈಲ್ವೆ ಸಚಿವಾಲಯ ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಕೋಲಾರ–ವೈಟ್‌ಫೀಲ್ಡ್ ನಡುವೆ ನರಸಾಪುರ ಮತ್ತು ಹೊಸಕೋಟೆ ಮೂಲಕ 52.9 ಕಿಮೀ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ನಡೆದಿರುವ ಸಮೀಕ್ಷೆ ಪೂರ್ಣಗೊಂಡಿರುವುದನ್ನೂ ಅವರು ಗಮನಕ್ಕೆ ತಂದರು. ಸಾರ್ವಜನಿಕರಿಗೆ ಬಹಳ ಉಪಕಾರಿಯಾಗುವ ಈ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ ನೀಡಬೇಕೆಂದು ಸಂಸದರು ಕೇಂದ್ರ ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು. <blockquote class=”twitter-tweet” data-media-max-width=”560″><p lang=”kn” dir=”ltr”>ಸಂಸತ್ತಿನ ಚಳಿಗಾಲದ…

2025-26ರಲ್ಲಿ ರಾಜ್ಯದಲ್ಲಿ 1,20,000 ಕೋ.ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ. ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ…

ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

ಬೆಂಗಳೂರು: ಸರ್ಕಾರಿ ವ್ಯವಸ್ಥೆಯಲ್ಲಿ ಮಹಿಳಾ ನೌಕರರ ಮಹತ್ವದ ಪಾತ್ರವನ್ನು ಗೌರವಿಸಲು ಸೆಪ್ಟೆಂಬರ್ 13 ಅನ್ನು ‘ಮಹಿಳಾ ನೌಕರರ ದಿನ’ವಾಗಿ ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಗುರುವಾರ ಆಯೋಜಿಸಿದ್ದ ಮಹಿಳಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸರ್ಕಾರದ ನಿರ್ಧಾರವನ್ನು ಪುನರುಚ್ಚರಿಸಿದರು. ಸಂಘದ ಕಚೇರಿಗೆ ಮತ್ತು ಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ ಎಂದೂ ಹೇಳಿದರು. ಮಹಿಳೆಯರು ಪುರುಷರಷ್ಟೇ ಸರ್ಕಾರಕ್ಕೆ ಸೇವೆ ಮಾಡುತ್ತಿದ್ದು, ಆಡಳಿತದ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಲಿಂಗ ಅಸಮಾನತೆಯನ್ನು ನಿವಾರಿಸಿ ಸಮಾನತೆ ಸ್ಥಾಪಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಸ್ವಾತಂತ್ರ್ಯಕ್ಕೆ…